ಕೆರೆ-ಕಟ್ಟೆ ರಕ್ಷಣೆಯಲ್ಲಿ ನಿರ್ಲಕ್ಷ್ಯ


Team Udayavani, Oct 18, 2022, 4:30 PM IST

tdy-13

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿರುವ ಮಳೆ ಪ್ರಭಾವದಿಂದ ಬಹುತೇಕ ಕೆರೆ ಕುಂಟೆಗಳಿಗೆ ಕೋಡಿ ಹರಿಯುತ್ತಿದೆ ಭಾನುವಾರ ಜಿಲ್ಲೆಯ ಗೌರಿ ಬಿದನೂರು ತಾಲೂಕಿನಲ್ಲಿ ಸಣ್ಣ ನೀರಾವರಿ ಇಲಾಖೆಯ ಕೆರೆಯ ಕಟ್ಟೆ ಹೊಡೆದು ಹೋಗಿ ಸುಮಾರು ನೂರಾರು ಎಕರೆ ಬೆಳೆ ನಾಶವಾಗಿ ಮನೆಗಳಿಗೆ ಹಾನಿಯಾಗಿದೆ.

ಸಣ್ಣ ನೀರಾವರಿ ಅಧಿಕಾರಿಗಳ ನಿರ್ಲಕ್ಷ್ಯ ದಿಂದ ಕೆರೆಯ ನೀರು ಹೊರಹರಿದಿದೆ. ಜಿಲ್ಲೆಯಲ್ಲಿ ಸಣ್ಣ ನೀರಾವರಿ ಇಲಾಖೆ ಯ 201 ಕೆರೆಗಳು ಮತ್ತು ಜಿಪಂನ 1300ಕ್ಕೂ ಅಧಿಕ ಕೆರೆಗಳಿದ್ದು ಇತ್ತೀಚೆಗೆ ಸುರಿಯುತ್ತಿರುವ ಮಳೆ ಯಿಂದಾಗಿ ಕೆರೆ ಗಳು ಭರ್ತಿಯಾಗಿ ಸೂಕ್ತ ರೀತಿಯಲ್ಲಿ ನಿರ್ವಹಣೆ ಇಲ್ಲದೆ ತನ್ನ ಅಸ್ತಿತ್ವ ಕಳೆದು ಕೊಳ್ಳುವ ಅಪಾಯ ತಲೆದೋರಿದೆ. ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿದ್ದು, ಕೆರೆಗಳು ಅಭದ್ರತೆಯಲ್ಲಿವೆ. ಸಣ್ಣ ನೀರಾ ವರಿ ಮತ್ತು ಜಿಪಂ ಅಧಿಕಾರಿಗಳು ಕೆರೆಗಳನ್ನು ಭದ್ರಗೊಳಿಸಿ ಅಭಿವೃದ್ಧಿ ಗೊಳಿಸಲು ನಿರ್ಲಕ್ಷ್ಯವಹಿಸಿದ್ದಾರೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಎಂ.ಎನ್‌ ನಾಗರಾಜ್‌ ಅವರು ಸೆಪ್ಟೆಂಬರ್‌ನಲ್ಲಿ ನಡೆಸಿದ ಕೆರೆಗಳನ್ನು ಸಂರಕ್ಷಣೆ ಮಾಡುವ ಕಾರ್ಯಪಡೆಯ ಸಭೆಯಲ್ಲಿ ಜಿಲ್ಲೆಯಲ್ಲಿರುವ ಕೆರೆ-ಕುಂಟೆಗಳು ಸ್ಥಿತಿಗಳು ಖುದ್ದು ಪರಿ ಶೀಲನೆ ನಡೆಸಿ ಯಾವುದಾದರೂ ಕೆರೆ ಶಿಥಿಲ ವ್ಯವಸ್ಥೆಯಲ್ಲಿ ಇದ್ದರೆ ಮಾಹಿತಿ ಯನ್ನು ನೀಡಬೇಕು ಎಂದು ಸೂಚಿಸಿದ್ದರು. ಆದರೆ ಸಭೆಯಲ್ಲಿ ಹಾಜರಿದ್ದ ಅಧಿಕಾರಿ ಗಳು ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆ ವ್ಯಾಪಕವಾಗಿರುವ ಕಾರಣ ಕೆರೆಗಳು ಭದ್ರವಾಗಿವೆ ಎಂದಿದ್ದರು. ಇತ್ತೀಚೆಗೆ ಜಿಲ್ಲೆಯ ಗೌರಿಬಿದನೂರು ಕೆರೆ ಒಡೆದಿದ್ದು, ಸುತ್ತಮುತ್ತಲ ಬೆಳೆ ನಷ್ಟವಾಗಿದೆ.

ಹಿರಿಯ ಅಧಿಕಾರಿಗಳ ಭೇಟಿ: ಸಣ್ಣ ನೀರಾವರಿ ಇಲಾಖೆಯ ಚೀಫ್‌ ಇಂಜಿನಿಯರ್‌ ರಾಘವನ್‌ ಅವರು ವಿಷಯ ತಿಳಿದ ಕೂಡಲೇ ತಾತ್ಕಾಲಿಕವಾಗಿ ಕೆರೆ ಯನ್ನು ಭದ್ರಗೊಳಿಸಲು ಕ್ರಮವಹಿಸಿ ಸಣ್ಣ ನೀರಾವರಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಶ್ರೀನಿವಾಸ್‌ರೆಡ್ಡಿಗೆ ಸೂಚನೆ ನೀಡಿದ್ದರು. ನಿರೀಕ್ಷೆಗಿಂತ ಹೆಚ್ಚು ಮಳೆ ಪರಿಣಾಮ ಅಧಿಕಾರಿಗಳು ವಹಿಸಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.

ಸಿಎಂ ಬಸವರಾಜ ಬೊಮ್ಮಾಯಿ, ಅಂದಿನ ಜಿಲ್ಲಾ ಉಸ್ತುವಾರಿ ಸಚಿವ ಸುಧಾಕರ್‌ ಅವರು ಭೇಟಿ ನೀಡಿ ಹೋದರೂ ಇದು ವರೆಗೂ ಕೆರೆಯನ್ನು ಅಭಿವೃದ್ಧಿಗೊಳಿಸಲು ಸಾಧ್ಯವಾಗಿಲ್ಲ ಜೊತೆಗೆ ರೈತರಿಗೆ ಪರಿ ಹಾರವೂ ಸಿಗಲಿಲ್ಲ ಎನ್ನುತ್ತಾರೆ ರೈತ ವಿಜಯಬಾವ ರೆಡ್ಡಿ.

ಜಿಲ್ಲೆಯ ಗೌರಿಬಿದನೂರು ತಾಲೂಕಿನಲ್ಲಿ ಕೆರೆಕಟ್ಟೆ ಒಡೆದುಗೋಗಿ ಬೆಳೆ ನಾಶವಾಗಿರುವ ಅಧಿಕಾರಿಗಳಿಗೆ ಮಾಹಿತಿ ಪಡೆದುಕೊಳ್ಳಲಾಗಿದೆ. ಈಗಾಗಲೇ ಸುಮಾರು 128 ಎಕರೆ ಪ್ರದೇಶದಲ್ಲಿ ಬೆಳೆ ನಾಶವಾಗಿ ಸುಮಾರು 20 ಮನೆಗಳಿಗೆ ಜಖಂಗೊಂಡಿದೆ. ಕೂಡಲೇ ಪರಿಹಾರವನ್ನು ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. – ಎನ್‌.ಎಂ.ನಾಗರಾಜ್‌ ಜಿಲ್ಲಾಧಿಕಾರಿ ಚಿಕ್ಕಬಳ್ಳಾಪುರ

ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆ ಬೀಳುತ್ತಿದೆ ಆದರೆ ಜಲ ಮೂಲಗಳಾದ ಕೆರೆ-ಕುಂಟೆಗಳನ್ನುಭದ್ರಗೊಳಿಸಿ ಅಭಿವೃಧಿœಗೊಳಿಸುವುದರಲ್ಲಿ ಸರ್ಕಾರ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ವಿಫಲರಾಗಿದ್ದಾರೆ ಅದರ ಪರಿಣಾಮ ಜಿಲ್ಲೆಯ ಗೌರಿಬಿದನೂರು ಮತ್ತು ಶಿಡ್ಲಘಟ್ಟ ತಾಲೂಕಿನ ರೈತರುಸಂಕಷ್ಟವನ್ನು ಅನುಭವಿಸಿದ್ದಾರೆ.-ಮುನೇಗೌಡ, ಜೆಡಿಎಸ್‌ ಅಧ್ಯಕ್ಷ

ಟಾಪ್ ನ್ಯೂಸ್

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

1—-wqwqeqwewqeq

India-born ಸುನೀತಾ ವಿಲಿಯಮ್ಸ್‌ ಇಂದು 3ನೇ ಬಾರಿ ನಭಕ್ಕೆ!: ಗಣೇಶನ ವಿಗ್ರಹ ಬಾಹ್ಯಾಕಾಶಕ್ಕೆ!

ಪ್ರಜ್ವಲ್‌ ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌

Prajwal Revanna ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Chikkaballapur: ಆಂಧ್ರದಿಂದ ಗಾಂಜಾ ತರುತ್ತಿದ್ದ ಇಬ್ಬರ ಬಂಧನ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

10

Drought relief: ಕೇಂದ್ರದ ಬರ ಪರಿಹಾರಕ್ಕೆ ಕಾದು ಕುಳಿತ ರೈತರು

Mangoes: ಹಣ್ಣುಗಳ ರಾಜ ಮಾವು ಈ ಬಾರಿ ದುಬಾರಿ

Mangoes: ಹಣ್ಣುಗಳ ರಾಜ ಮಾವು ಈ ಬಾರಿ ದುಬಾರಿ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.