ಸಚಿವ ರಾಮುಲು ಸಹ ಬೇಲ್‌ ಮೇಲಿದ್ದಾರೆ; ಮಾಜಿ ಸಂಸದ ಉಗ್ರಪ್ಪ

ಈ ಪ್ರಕರಣದ ಕುರಿತು ಬಹಿರಂಗ ಚರ್ಚೆಗೆ ಬರಲಿ

Team Udayavani, Oct 18, 2022, 6:15 PM IST

ಸಚಿವ ರಾಮುಲು ಸಹ ಬೇಲ್‌ ಮೇಲಿದ್ದಾರೆ; ಮಾಜಿ ಸಂಸದ ಉಗ್ರಪ್ಪ

ಬಳ್ಳಾರಿ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕಾಂಗ್ರೆಸ್‌ ಪಕ್ಷದ ರಾಷ್ಟ್ರೀಯ, ರಾಜ್ಯ ನಾಯಕರು ಬೇಲ್‌ ಮೇಲೆ ಹೊರಗಿದ್ದಾರೆ ಎಂದಿರುವ ಬಿಜೆಪಿ ಸಚಿವ ಶ್ರೀರಾಮುಲು ಸಹ ಸಾರ್ವಜನಿಕ ಆಸ್ತಿ ಕಬಳಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಷರತ್ತುಬದ್ಧ ಜಾಮೀನು ಪಡೆದು ಹೊರಗಿದ್ದಾರೆ ಎಂದು ಮಾಜಿ ಸಂಸದ ಉಗ್ರಪ್ಪ ತಿರುಗೇಟು ನೀಡಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉಗ್ರಪ್ಪ, ಸಚಿವ ಶ್ರೀರಾಮುಲು ಸಹ ಸಾರ್ವಜನಿಕರಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕ್ರಿಮಿನಲ್‌ ಕೇಸು ದಾಖಲಾಗಿದೆ. ಜೊತೆಗೆ ಅವರೀಗ ಬೇಲ್‌ ಮೇಲೆ ಹೊರಗಿದ್ದಾರೆ. ಈ ಹಿನ್ನೆಲೆಯಲ್ಲಿ ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

2011ರಲ್ಲಿ ಭೂ ಕಬಳಿಕೆ ಸಂಬಂಧ ದಾಖಲಾಗಿದ್ದ ಪ್ರಕರಣ, ರಾಜ್ಯ ಹೈಕೋರ್ಟ್‌ ಸೂಚನೆಯಂತೆ ಜಿಲ್ಲಾ ನ್ಯಾಯಾಲಯದಲ್ಲಿ ಕ್ರಿಮಿನಲ್‌ ಮೊಕದ್ದಮೆ ವಿಚಾರಣೆಗೆ
ಅನುಮತಿ ದೊರೆತಿದೆ. ಇದು ಮಾಜಿ ಸಚಿವ ಜನಾರ್ಧನ ರೆಡ್ಡಿಯವರ ಮಾವ ಪರಮೇಶ್ವರ ರೆಡ್ಡಿಯವರನ್ನೊಳಗೊಂಡ ಭೂ ಕಬಳಿಕೆ ಪ್ರಕರಣ. ಇದರಲ್ಲಿ ರಾಮುಲು ಅವರು 6ನೇ ಆರೋಪಿಯಾಗಿದ್ದು, ಹಾಲಿ ಬೇಲ್‌ ಮೇಲೆ ಹೊರಗಿದ್ದಾರೆ ಎಂದು ಆರೋಪಿಸಿದರು.

ಪದೇ ಪದೇ ನಮ್ಮ ನಾಯಕ ಸಿದ್ದರಾಮಯ್ಯ ಅವರ ಬಗ್ಗೆ ಮಾತನಾಡುವ ರಾಮುಲು ಖುದ್ದು ಬಳ್ಳಾರಿ ಜನ ತಮ್ಮನ್ನು ಸೋಲಿಸುತ್ತಾರೆ ಎಂಬ ಆತಂಕದಿಂದ ತಮ್ಮ ಕ್ಷೇತ್ರ ಬಿಟ್ಟು ಬಾದಾಮಿ, ಮೊಳಕಾಲ್ಮೂರು ಕ್ಷೇತ್ರದಿಂದ ಸ್ಪರ್ಧಿಸಿದ್ದು ಸುಳ್ಳೇ ಎಂದು ಅವರು ಕಿಡಿಕಾರಿದರು. ರಾಮುಲು ಅವರು ಸತ್ಯವಂತರು, ಪ್ರಾಮಾಣಿಕರು ಆಗಿದ್ದರೆ ಅವರು ಮಾಡಿದ ಈ ಪ್ರಕರಣದ ಕುರಿತು ಬಹಿರಂಗ ಚರ್ಚೆಗೆ ಬರಲಿ. ಈ ಕುರಿತು ಪ್ರತಿಯೊಂದು ಮಾಹಿತಿ ನನ್ನ ಬಳಿ ಇದೆ. ಎಲ್ಲವನ್ನೂ ನಾನು ಅಧಿಕೃತವಾಗಿ ಪಡೆದುಕೊಂಡಿದ್ದೇನೆ.

ಈ ವಿಷಯದಲ್ಲಿ ರಾಮುಲು ಪ್ರಮಾದ ಎಸಗಿರುವುದು ಮೇಲ್ನೋಟಕ್ಕೆ ನಿಜ ಎಂಬುದು ತಿಳಿಯುತ್ತದೆ ಎಂದರು. 2011ರಲ್ಲಿ ಒಂದೇ ದಿನ ರಾಮುಲು ಮತ್ತು ಜನಾರ್ಧನ ರೆಡ್ಡಿ ಮಾವ ಪರಮೇಶ್ವರ ರೆಡ್ಡಿ 27.25 ಎಕರೆ ಜಮೀನನ್ನು ಇಬ್ಬರೂ ಖರೀದಿಸುತ್ತಾರೆ. ಪರಮೇಶ್ವರ ರೆಡ್ಡಿಯವರು ಖರೀದಿಸಿದ್ದ ಜಮೀನಿನ ಪೈಕಿ 10 ಎಕರೆ ಜಮೀನು ಕಾಲುವೆಗೆ ಹೊಗುತ್ತದೆ. ಉಳಿದ ಭೂಮಿಯನ್ನು ಅವರ ಪುತ್ರಿ, ಜನಾರ್ಧನ ರೆಡ್ಡಿ ಪತ್ನಿ ಅರುಣ ಅವರ ಹೆಸರಿಗೆ ದಾನಪತ್ರ ಮೂಲಕ
ನೀಡುತ್ತಾರೆ. ಆದರೆ, ರಾಮುಲು ನಕಲಿ ಖರೀದಿ ಪತ್ರದ ಆಧಾರದ ಮೇಲೆ ಅವರು ತಮ್ಮದೂ 27.25 ಎಕರೆ ಜಮೀನು ಇದೆ ಎಂಬುದನ್ನು ನ್ಯಾಯಾಲಯದಿಂದ 39 ದಿನಗಳಲ್ಲಿ ಎಕ್ಸ್‌ ಪಾರ್ಟಿ ಆದೇಶ ತರುತ್ತಾರೆ ಎಂದು ವಿವರಿಸಿದರು.

ಹಾಗೆ ಪಡೆದ ಆದೇಶದ ಮೂಲಕ ಪರಮೇಶ್ವರ ರೆಡ್ಡಿ ಖರೀದಿಸಿದ್ದ ಜಾಗದ ಪಕ್ಕದಲ್ಲಿನ ಅದೇ ಸರ್ವೇ ನಂಬರ್‌ನಲ್ಲಿನ ಬಹುಭಾಷ ನಟಿ ರಮ್ಯಕೃಷ್ಣ ಅವರ ಸಂಬಂ ಧಿ ಹಾಗೂ ಇತರರಿಗೆ ಸೇರಿದ ಜಮೀನನ್ನು ಕಬಳಿಸುತ್ತಾರೆ. ಇದರಲ್ಲಿ ಜಿಲ್ಲಾ ಧಿಕಾರಿ, ಡಿಡಿಎಲ್‌ಆರ್‌, ಸರ್ವೆಯರ್‌, ಉಪ ಆಯುಕ್ತ, ತಹಶೀಲ್ದಾರ್‌ ಸೇರಿದಂತೆ ಎಲ್ಲರೂ ಭಾಗಿಯಾಗಿದ್ದಾರೆ. ಇದೀಗ ಎಲ್ಲರ ಮೇಲೂ ಪ್ರಕರಣ ದಾಖಲಾಗಿದೆ. ರಾಮುಲು ಅವರು ಸಾಚಾ ಆಗಿದ್ದರೆ ಇವೆಲ್ಲಾ ಏಕೆ ಎಂದು ಅವರು ಕುಟುಕಿದರು. ರಾಮುಲು ನಿಜವಾಗಲೂ ಪ್ರಾಮಾಣಿಕರು, ಜನಪರ ಎಂದಾದರೆ ಮೊದಲು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು.

ಅವರು ಕೊಡದೇ ಇದ್ದರೆ ಮುಖ್ಯಮಂತ್ರಿಗಳು ಅವರನ್ನು ಸಂಪುಟದಿಂದ ಕೈಬಿಡಬೇಕು. ಇಲ್ಲವೇ ರಾಜ್ಯಪಾಲರು ಅವರ ಮೇಲೆ ಕ್ರಮ ವಹಿಸಬೇಕು ಎಂದು ಅವರು ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಎಂ.ದಿವಾಕರ್‌ ಬಾಬು, ಮುಖಂಡ ಸುನೀಲ್‌ ರಾವೂರ್‌, ಬಿ.ಎಂ.ಪಾಟೀಲ್‌, ಲೋಕೇಶ್‌ ಇತರರಿದ್ದರು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.