ಉಗ್ರರಿಗೆ ರಕ್ಷಣೆ ಬೇಡ; ಜಗತ್ತಿನ ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಮನವಿ


Team Udayavani, Oct 18, 2022, 9:15 PM IST

ಉಗ್ರರಿಗೆ ರಕ್ಷಣೆ ಬೇಡ; ಜಗತ್ತಿನ ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಮನವಿ

ನವದೆಹಲಿ: ಉಗ್ರರಿಗೆ, ಮಾದಕ ವಸ್ತುಗಳ ಪೂರೈಕೆದಾರರಿಗೆ ಭಯೋತ್ಪಾದಕರಿಗೆ ಜಗತ್ತಿನಲ್ಲಿ ಸುರಕ್ಷಿತ ವ್ಯವಸ್ಥೆ ಇದೆ ಎಂಬ ಭಾವನೆಯೇ ಮೂಡಿಸುವ ವಾತಾವರಣ ಇರಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಜತೆಗೆ ಘಾತಕ ವ್ಯಕ್ತಿಗಳ ಪತ್ತೆಗೆ ನೀಡಲಾಗುವ ರೆಡ್‌ಕಾರ್ನರ್‌ ನೋಟಿಸ್‌ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕು ಎಂದೂ ಅವರು ಒತ್ತಾಯಿಸಿದ್ದಾರೆ.

ನವದೆಹಲಿಯಲ್ಲಿ ಮಂಗಳವಾರ ಶುರುವಾದ ಇಂಟರ್‌ಪೋಲ್‌ನ 90ನೇ ಸಾಮಾನ್ಯ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಜಗತ್ತಿಗೆ ಭಯೋತ್ಪಾದನೆ, ಭ್ರಷ್ಟಾಚಾರ, ಮಾದಕ ವಸ್ತುಗಳ ಕಳ್ಳಸಾಗಣೆ, ಸಂಘಟಿತ ಅಪರಾಧ, ಕಳ್ಳ ಬೇಟೆ ಮಾರಕವಾಗಿದೆ. ಇಂಥ ಕೃತ್ಯಗಳನ್ನು ಎಸಗುವವರಿಗೆ ಜಗತ್ತಿನಲ್ಲಿ ಸುರಕ್ಷಿತ ವ್ಯವಸ್ಥೆ ಇದೆ ಎಂದು ಅನಿಸುವ ವ್ಯವಸ್ಥೆ ಇರಬಾರದು.

ಈ ಕ್ಷೇತ್ರದಲ್ಲಿ ಉಂಟಾಗುತ್ತಿರುವ ಬದಲಾವಣೆಗಳು ನಿಜಕ್ಕೂ ಅಪಾಯಕಾರಿಯಾಗಿದೆ. ಜಗತ್ತಿನಾದ್ಯಂತ ಅವುಗಳ ಬೆದರಿಕೆ ಇರುವಾಗ ಕೇವಲ ಸ್ಥಳೀಯ ಮಟ್ಟದಲ್ಲಿ ಅದರ ವಿರುದ್ದ ಕಾರ್ಯಾಚರಣೆ ನಡೆದರೆ ಸಾಲದು’ ಎಂದರು.

ಹಲವು ದಶಕಗಳಿಂದ:
ಗಡಿಯಾಚೆಯಿಂದ ಭಾರತ ಹಲವು ದಶಕಗಳಿಂದ ಉಗ್ರವಾದದ ಸಮಸ್ಯೆ ಎದುರಿಸುತ್ತಿದೆ ಎಂದು ಪ್ರಧಾನಿ ಪ್ರತಿಪಾದಿಸಿದರು. ಜಗತ್ತಿನಲ್ಲಿ ಸುರಕ್ಷಿತ ಮತ್ತು ಸುಭದ್ರ ವ್ಯವಸ್ಥೆ ನಿರ್ಮಾಣ ಮಾಡುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದರು. ಜಗತ್ತಿನ ರಾಷ್ಟ್ರಗಳ ನಡುವೆ ನಿಕಟ ಸಹಕಾರ ಇದ್ದಾಗ, ಭಯೋತ್ಪಾದನೆ, ಮಾದಕ ವಸ್ತುಗಳ ಕಳ್ಳಸಾಗಣೆ ಸೇರಿದಂತೆ ಹಲವು ಕುಕೃತ್ಯಗಳು ನಡೆಯಲು ಅವಕಾಶವೇ ಇಲ್ಲ ಎಂದರು.

ತ್ವರಿತಗೊಳ್ಳಲಿ:
ಘಾತಕ ಕೃತ್ಯಗಳನ್ನು ಎಸಗಿದ ವ್ಯಕ್ತಿಗಳಿಗಾಗಿ ಇಂಟರ್‌ಪೋಲ್‌ ಹೊರಡಿಸುವ ರೆಡ್‌ಕಾರ್ನರ್‌ ನೋಟಿಸ್‌ ಪ್ರಕ್ರಿಯೆ ಮತ್ತಷ್ಟು ತ್ವರಿತಗೊಳ್ಳಬೇಕು. ಇದರಿಂದಾಗಿ ಅಪರಾಧಿಗಳನ್ನು ಕ್ಷಿಪ್ರವಾಗಿ ಹಿಡಿದು ಕಾನೂನಿನ ಅನ್ವಯ ಕ್ರಮ ಕೈಗೊಳ್ಳಲು ಸಾಧ್ಯವಾಗಲಿದೆ ಎಂದರು.

ಪ್ರಶ್ನೆ ತಬ್ಬಿಬ್ಟಾದ ಪಾಕ್‌ ನಿಯೋಗ
“ನೀವು ಭೂಗತ ಪಾತಕಿ ದಾವೂದ್‌ ಇಬ್ರಾಹಿಂ, 26/11 ದಾಳಿಯ ರೂವಾರಿ ಮತ್ತು ಉಗ್ರ ಹಫೀಜ್‌ ಸಯೀದ್‌ನನ್ನು ಭಾರತಕ್ಕೆ ಯಾವಾಗ ಹಸ್ತಾಂತರ ಮಾಡುತ್ತೀರಿ?’- ಇಂಥ ಪ್ರಶ್ನೆಯನ್ನು ಎದುರಿಸಿದ್ದು ಪಾಕಿಸ್ತಾನದ ಫೆಡರಲ್‌ ಇನ್ವೆಸ್ಟಿಗೇಷನ್‌ (ಎಫ್ಐಎ)ನ ಮುಖ್ಯಸ್ಥ ಮೊಹ್ಸಿàನ್‌ ಬಟ್‌. ಅನಿರೀಕ್ಷಿತವಾಗಿ ಬಂದ ಆಘಾತಕಾರಿ ಪ್ರಶ್ನೆಗೆ ತಡಬಡಾಯಿಸುವ ಸ್ಥಿತಿ ಅವರದ್ದಾಗಿತ್ತು.

ನವದೆಹಲಿಯ ಪ್ರಗತಿ ಮೈದಾನದಲ್ಲಿ ಮಂಗಳವಾರದಿಂದ ನಾಲ್ಕು ದಿನಗಳ ಕಾಲ ಆಯೋಜನೆಗೊಂಡಿರುವ ಇಂಟರ್‌ಪೋಲ್‌ನ 90ನೇ ಸಾಮಾನ್ಯ ಸಭೆಯಲ್ಲಿ ಭಾಗವಹಿಸಲು ಅವರು ಆಗಮಿಸಿದ್ದರು. ಪತ್ರಕರ್ತರು ಅವರನ್ನು ಪ್ರಶ್ನೆ ಮಾಡಿದಾಗ ತುಟಿ ಪಿಟಕ್ಕೆನ್ನದೆ, ಮೌನವಹಿಸಬೇಕು ಎಂದು ಸನ್ನೆ ಮಾಡುವ ಮೂಲಕ ಸೂಚಿಸಿದರು.

ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿ ಮಾತನಾಡಿದ ಬಳಿಕ ಪತ್ರಕರ್ತರು ಪಾಕಿಸ್ತಾನದ ನಿಯೋಗದ ಬಳಿ ತೆರಳಿದ್ದರು. 1993ರಲ್ಲಿ ಮುಂಬೈನಲ್ಲಿ ನಡೆದಿದ್ದ ಸ್ಫೋಟದ ರೂವಾರಿ ದಾವೂದ್‌ ಇಬ್ರಾಹಿಂ, 2008ರ ನ.26ರಂದು ಮುಂಬೈನಲ್ಲಿ ನಡೆದಿದ್ದ ಉಗ್ರ ದಾಳಿಯ ರೂವಾರಿ ಹಫೀಜ್‌ ಸಯೀದ್‌, ಜೈಶ್‌-ಎ-ಮೊಹಮ್ಮದ್‌ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್‌ ಅಜರ್‌ನನ್ನು ಭಾರತಕ್ಕೆ ಯಾವಾಗ ಪಾಕಿಸ್ತಾನ ಹಸ್ತಾಂತರಿಸಲಿದೆ, ಈ ಬಗ್ಗೆ ನಿಮ್ಮ ಸರ್ಕಾರ ಯಾವ ನಿರ್ಧಾರ ಕೈಗೊಂಡಿದೆ ಎಂದು ಪ್ರಶ್ನೆ ಮಾಡಿದರು.
ಪತ್ರಕರ್ತರ ಪ್ರಶ್ನೆಗಳಿಂದ ಒಂದು ಕ್ಷಣ ಎಫ್ಐಎನ ಮುಖ್ಯಸ್ಥ ಮೊಹ್ಸಿನ್‌ ಬಟ್‌ ಅವಕ್ಕಾದರು. ಜತೆಗೆ ಅವರು ಮೌನವಹಿಸುವಂತೆ ಸೂಚಿಸಿದರು. ಪದೇ ಪದೆ ಪ್ರಶ್ನೆಗಳನ್ನು ಪತ್ರಕರ್ತರು ಕೇಳುತ್ತಿರುವಂತೆಯೇ ಅವರು ಸ್ಥಳದಿಂದ ಹೊರ ನಡೆದರು.

ಟಾಪ್ ನ್ಯೂಸ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

voter

Odisha; ಒಂದೇ ವಿಧಾನಸಭಾ ಕ್ಷೇತ್ರಕ್ಕೆ 3 ಪಕ್ಷಗಳಿಂದ ಒಂದೇ ಕುಟುಂಬದ ಅಭ್ಯರ್ಥಿಗಳು!

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.