ಪಾಟ್ ಹೋಲ್ ಸಮಿಟ್ ಮಾಡಿ: ಸರಕಾರಕ್ಕೆ ಎಚ್.ಡಿ.ಕೆ. ಕುಟುಕು
Team Udayavani, Oct 19, 2022, 11:28 AM IST
ಬೆಂಗಳೂರು: ನಾಡಪ್ರಭು ಕೆಂಪೇಗೌಡರು ಕಟ್ಟಿದ ವಿಶ್ವಮಾನ್ಯ ನಗರ ಬೆಂಗಳೂರಿಗೆ ಪಿಂಚಣಿದಾರು ಉದ್ಯಾನ ನಗರ, ಸಿಲಿಕಾನ್ ವ್ಯಾಲಿ ಎಂದೆಲ್ಲ ಹೆಸರುಗಳಿದ್ದವು. ಈಗ ಅವು ಗುಂಡಿಗಳೂರು, ಅಧ್ವಾನ ನಗರ, ಗುಂಡಿಗಳ ವ್ಯಾಲಿ ಎಂದಾಗಿದೆ. ಕಾಮಗಾರಿಗಳಲ್ಲಿ ಪರ್ಸಂಟೇಜ್ ವ್ಯವಸ್ಥೆಯೇ ಇಂಥ ಕುಖ್ಯಾತಿಗೆ ಕಾರಣ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸರಣಿ ಟ್ವೀಟ್ ಮಾಡಿರುವ ಅವರು, ರಸ್ತೆಗುಂಡಿಗಳು ಸಾವಿನ ಗುಂಡಿಗಳಾಗಿವೆ. ನಗರದ ಲುಲೂ ಮಾಲ್ ಎದುರಿನ ರಸ್ತೆಯಲ್ಲಿ ಗುಂಡಿಗೆ ಇನ್ನೊಂದು ಜೀವ ಬಲಿಯಾದ ಮೇಲೆ ಎಚ್ಚೆತ್ತುಕೊಳ್ಳುವ ನಾಟಕ ನಡೆದಿದೆ. ಶಾಶ್ವತ ಪರಿಹಾರ ಎಲ್ಲಿ? ಎಂದು ಪ್ರಶ್ನಿಸಿದ್ದಾರೆ.
ಬೆಂಗಳೂರಿನಲ್ಲಿ ಕೊಲೆಪಾತಕ ಗುಂಡಿಕೂಪಗಳು ಸರಣಿ ಸಾವುಗಳಿಗೆ ಕಾರಣವಾಗಿದ್ದರೆ, ಅದೇ ಗುಂಡಿಗಳು ಕೆಲವರಿಗೆ ಕಲ್ಪವೃಕ್ಷವಾಗಿವೆ. ರಾಜ್ಯ ಬಿಜೆಪಿ ಸರಕಾರಕ್ಕೆ ರಸ್ತೆ ಗುಂಡಿಗಳು ಎಂದರೆ ಬಲು ಇಷ್ಟ. ಗುಂಡಿಗಳು ಬಿದ್ದಷ್ಟೂ ಕಿಸೆಗೆ ಹರಿದು ಬರಲಿದೆ ದುಡ್ಡು. ಇವರಿಗೆ ಹೈಕೋರ್ಟ್ ಛೀಮಾರಿ ಹಾಕಿದರೂ ನಾಚಿಕೆ, ಸಂಕೋಚ ಎನ್ನವುದಿಲ್ಲ. ಜೈಲಿಗೆ ಅಟ್ಟುವುದಾಗಿ ಎಚ್ಚರಿಕೆ ಕೊಟ್ಟರೂ ಅಧಿಕಾರಿಗಳು ಭಂಡತನ ಬಿಡುತ್ತಿಲ್ಲ ಎಂದು ಟೀಕಿಸಿದ್ದಾರೆ.
ಗುಂಡಿ ಬಿದ್ದ ರಸ್ತೆಗಳು ರಾಜ್ಯದ ಗೌರವವನ್ನು ಮೂರಾಬಟ್ಟೆ ಮಾಡುತ್ತಿರುವುದು ಒಂದೆಡೆ, ಇನ್ನೊಂದೆಡೆ ಸರಕಾರ ಜಾಗತಿಕ ಹೂಡಿಕೆದಾರರ ಸಮಾವೇಶ, ಜಾಗತಿಕ ತಂತ್ರಜ್ಞಾನ ಶೃಂಗ ನಡೆಸುತ್ತಿದೆ. ‘ ರಸ್ತೆ ಗುಂಡಿಗಳ ಶೃಂಗ’ (Patholes Summit) ವನ್ನೂ ನಡೆಸಿದರೆ ಇನ್ನೂ ಚೆನ್ನಾಗಿರುತ್ತದೆ ಎಂದು ವ್ಯಂಗ್ಯವಾಡಿದ್ದಾರೆ.
ರಸ್ತೆ ಗುಂಡಿಗಳ ಸರಣಿ ಸಾವುಗಳಿಗೆ ರಾಜ್ಯ ಬಿಜೆಪಿ ಸರಕಾರವೇ ನೇರ ಕಾರಣ. ಮುಗ್ಧ ಜನರು ಸಾವು ನೋವುಗಳಿಗೆ ಬಿಬಿಎಂಪಿಯೇ ಸಂಪೂರ್ಣ ಹೊಣೆ. ಸಂಬಂಧಪಟ್ಟ ಮಂತ್ರಿಗಳು, ಅಧಿಕಾರಿಗಳೇ ಇದಕ್ಕೆ ಉತ್ತರದಾಯಿಗಳು ಎಂದು ಆರೋಪಿಸಿದ್ದಾರೆ.
ಪಾಲಿಕೆ ಮಾಡಿದ ಪಾಪಕ್ಕೆ ನತದೃಷ್ಟ ಮಹಿಳೆ ಉಮಾದೇವಿ ಅವರು ಬಲಿಯಾಗಿದ್ದಾರೆ. ಅವರಿಗೆ ಪರಿಹಾರ ಕೊಟ್ಟು ಕೈತೊಳೆದುಕೊಳ್ಳುವುದಲ್ಲ. ಇನ್ನಾದರೂ ಗುಂಡಿಗಳನ್ನು ಮುಚ್ಚಬೇಕು ಹಾಗೂ ರಸ್ತೆಗಳನ್ನು ವೈಜ್ಞಾನಿಕವಾಗಿ ನಿರ್ವಹಣೆ ಮಾಡಬೇಕು. ಮೃತ ಮಹಿಳೆ ಉಮಾದೇವಿ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬಕ್ಕೆ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ. ರಾಜ್ಯ ಸರಕಾರ ಅವರಿಗೆ ಸೂಕ್ತ ಪರಿಹಾರ ಬಿಡುಗಡೆ ಮಾಡಬೇಕು ಎಂಬುದು ನನ್ನ ಒತ್ತಾಯ ಎಂದು ಆಗ್ರಹಿಸಿದ್ದಾರೆ.
ಗುಂಡಿ ಬಿದ್ದ ರಸ್ತೆಗಳು ರಾಜ್ಯದ ಗೌರವವನ್ನು ಮೂರಾಬಟ್ಟೆ ಮಾಡುತ್ತಿರುವುದು ಒಂದೆಡೆ, ಇನ್ನೊಂದೆಡೆ ಸರಕಾರ ಜಾಗತಿಕ ಹೂಡಿಕೆದಾರರ ಸಮಾವೇಶ, ಜಾಗತಿಕ ತಂತ್ರಜ್ಞಾನ ಶೃಂಗ ನಡೆಸುತ್ತಿದೆ. ‘ ರಸ್ತೆ ಗುಂಡಿಗಳ ಶೃಂಗ’ (Potholes Summit) ವನ್ನೂ ನಡೆಸಿದರೆ ಇನ್ನೂ ಚೆನ್ನಾಗಿರುತ್ತದೆ! 4/7
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 19, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್
Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್