ಹುಣಸೂರು: ಅಂಗನವಾಡಿ ಸಹಾಯಕಿಯ ಶವ ಅನುಮಾನಾಸ್ಪದವಾಗಿ ಪತ್ತೆ
Team Udayavani, Oct 19, 2022, 9:57 PM IST
ಹುಣಸೂರು: ಅಂಗನವಾಡಿ ಸಹಾಯಕಿಯ ಶವ ತಾಲೂಕಿನ ಬನ್ನಿಕುಪ್ಪೆ ಗೇಟ್ ಬಳಿಯಲ್ಲಿ ಅನುಮಾನಾ ಸ್ಪದವಾಗಿ ಪತ್ತೆಯಾಗಿದೆ.
ಹುಣಸೂರು ತಾಲೂಕಿನ ಕಟ್ಟೆಮಳಲವಾಡಿಯ ಅಂಗನವಾಡಿ ಸಹಾಯಕಿ ಮಲ್ಲಿಗೆ ಮಂಜುನಾಥ್(36) ಮೃತಪಟ್ಟಾಕೆ. ಇವರಿಗೆ ಪತಿ, ಇಬ್ಬರು ಹೆಣ್ಣು ಮಕ್ಕಳಿದ್ದಾರೆ.
ಪಿರಿಯಾಪಟ್ಟಣ ತಾಲೂಕಿನ ಮಲ್ಲಿಗೆಯನ್ನು ಕಟ್ಟೆಮಳಲವಾಡಿಯ ಕಟ್ಟಡ ಕಾರ್ಮಿಕ ಮಂಜುನಾಥನಿಗೆ ಮದುವೆ ಮಾಡಿಕೊಡಲಾಗಿತ್ತು, ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಪತಿ ಕೂಲಿ ಮತ್ತು ಅಂಗನವಾಡಿ ಸಹಾಯಕಿಯ ಹುದ್ದೆದಿಂದಲೇ ಜೀವನ ನಿರ್ವಹಣೆ ಮಾಡುತ್ತಿದ್ದರು.
ಬುಧವಾರ ಬೆಳಗ್ಗೆ ಮೈಸೂರು ಬಂಟ್ವಾಳ ರಾಷ್ಟ್ರೀಯ ಹೆದ್ದಾರಿಯ ಬನ್ನಿಕುಪ್ಪೆ ಗೇಟ್ ಬಳಿಯ ರಸ್ತೆ ಬದಿಯಲ್ಲಿ ಕ್ರಿಮಿನಾಶಕ ಸೇವಿಸಿರುವ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು. ಮಹಿಳೆ ಶವ ಪತ್ತೆಯಾಗಿರುವ ಬಗ್ಗೆ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದು, ತನಿಖೆಯಿಂದ ಸತ್ಯಾಂಶ ತಿಳಿಯಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ