ಇಪ್ಪಾಡಿ ಗ್ರಾಮ ಪಂಚಾಯತ್ ಜೆಡಿಎಸ್ ತೆಕ್ಕೆಗೆ; ಅಧ್ಯಕ್ಷರಾಗಿ ಸಿ.ಎಸ್. ಪ್ರಸನ್ನ ಆಯ್ಕೆ
Team Udayavani, Oct 20, 2022, 2:07 PM IST
ಕುಣಿಗಲ್: ತಾಲೂಕಿನ ಹುತ್ರಿದುರ್ಗ ಹೋಬಳಿ ಇಪ್ಪಾಡಿ ಗ್ರಾ.ಪಂ.ನ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸಿ.ಎಸ್. ಪ್ರಸನ್ನ ಅಧ್ಯಕ್ಷರಾಗಿ ಚುನಾಯಿತರಾಗಿದ್ದಾರೆ.
ಅಧ್ಯಕ್ಷ ಶ್ರೀನಿವಾಸ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಗೆ ಸಿ.ಎಸ್. ಪ್ರಸನ್ನ ಹಾಗೂ ದೇವರಾಜ್ ನಾಮಪತ್ರ ಸಲ್ಲಿಸಿದರು. ಸಿ.ಎಸ್.ಪ್ರಸನ್ನ 9 ಮತ ಗಳಿಸಿ ಜಯ ಸಾಧಿಸಿದ್ದು, ದೇವರಾಜ್ 4 ಮತ ಪಡೆದರು. ಚುನಾವಣಾಧಿಕಾರಿಯಾಗಿ ತಹಶೀಲ್ದಾರ್ ಮಹಬಲೇಶ್ವರ ಕರ್ತವ್ಯ ನಿರ್ವಹಿಸಿದರು.
ನೂತನ ಅಧ್ಯಕ್ಷ ಸಿ.ಎಸ್. ಪ್ರಸನ್ನ ಮಾತನಾಡಿ, ಪಂಚಾಯತ್ನ ಎಲ್ಲಾ ಸದಸ್ಯರ ವಿಶ್ವಾಸ ಪಡೆದು, ಗ್ರಾಮಗಳ ಸ್ಛಚ್ಛತೆ, ಕುಡಿಯುವ ನೀರು ಹಾಗೂ ಗ್ರಾಮಗಳ ಸರ್ವಾಂಗೀಣ ಅಭಿವೃದ್ದಿಗೆ ಶ್ರಮಿಸುವುದಾಗಿ ತಿಳಿಸಿದರು.
ತಾಲೂಕು ಜೆಡಿಎಸ್ ಅಧ್ಯಕ್ಷ ಬಿ.ಎನ್. ಜಗದೀಶ್ ಮಾತನಾಡಿ, ಪಂಚಾಯತ್ನ ಎಲ್ಲಾ ಸದಸ್ಯರ ವಿಶ್ವಾಸ ಪಡೆದು ಪಂಚಾಯತ್ ವ್ಯಾಪ್ತಿಯ ಎಲ್ಲಾ ಗ್ರಾಮಗಳ ಅಭಿವೃದ್ದಿಗೆ ನೂತನ ಅಧ್ಯಕ್ಷರು ಶ್ರಮಿಸುವಂತೆ ತಿಳಿಸಿದರು. ವಿಜೇತ ಅಭ್ಯರ್ಥಿ ಬೆಂಬಲಿಗರು ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು