ಸಾಹಿತಿ ಎಂ.ಎಂ.ಕಲಬುರ್ಗಿ ಹತ್ಯೆ ಕೇಸ್: ಸಾಕ್ಷಿಗಳ ಹೇಳಿಕೆ ದಾಖಲು
Team Udayavani, Oct 20, 2022, 9:54 PM IST
ಧಾರವಾಡ: ಸಾಹಿತಿ ಎಂ.ಎಂ. ಕಲಬುರ್ಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಆರೋಪಿಗಳನ್ನು ನಗರದ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಎದುರು ಗುರುವಾರ ಹಾಜರುಪಡಿಸಲಾಗಿತ್ತು.
ಆರೋಪಿಗಳಾದ ಅಮೋಲ್ ಕಾಳೆ, ಗಣೇಶ ಮಿಸ್ಕಿನ್, ಪ್ರವೀಣ ಚತುರ್, ವಾಸುದೇವ ಸೂರ್ಯವಂಶಿ, ಶರದ್ ಕಳಾಸ್ಕರ್, ಅಮಿತ್ ಬದ್ದಿ ಅವರನ್ನು ನ್ಯಾಯಾಲಯದ ಎದುರು ವಿಚಾರಣೆಗೆ ಪೊಲೀಸರು ಹಾಜರುಪಡಿಸಿದ್ದರು. ಈ ವೇಳೆ ಹಾಜರಿದ್ದ ಇಬ್ಬರು ಸಾಕ್ಷಿಗಳ ಪೈಕಿ ಒಬ್ಬರಿಂದ ಆರೋಪಿಗಳನ್ನು ಗುರುತಿಸಿ ಸಾಕ್ಷಿ ಹೇಳಿಕೆ ಪಡೆಯಲಾಯಿತು.
4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಶೋಭಾ ರಾಣಿ ಅವರು, ಪ್ರಕರಣಕ್ಕೆ ಸಂಬಂಧಿಸಿ ಸಾಕ್ಷಿಗಳ ಹೇಳಿಕೆ ದಾಖಲಿಸಿಕೊಂಡರು. ಬಳಿಕ ಈ ಕುರಿತು ಹೆಚ್ಚಿನ ವಿಚಾರಣೆ ಇದೆ ಎಂದು ಅಭಿಪ್ರಾಯಪಟ್ಟು, ವಿಚಾರಣೆಯನ್ನು ನ.22ಕ್ಕೆ ಮುಂದೂಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ