ಟಿ20 ವಿಶ್ವಕಪ್ ನಲ್ಲಿ ಅಚ್ಚರಿಯ ಫಲಿತಾಂಶ: ಐರ್ಲೆಂಡ್ ಸೂಪರ್ 12ಗೆ, ವೆಸ್ಟ್ ಇಂಡೀಸ್ ಮನೆಗೆ


Team Udayavani, Oct 21, 2022, 1:11 PM IST

Ireland beat West Indies to reach Super 12!

ಹೋಬಾರ್ಟ್: ಐಸಿಸಿ ಟಿ20 ವಿಶ್ವಕಪ್ ನ ಮೊದಲ ಸುತ್ತಿನಲ್ಲಿ ಇಂದು ನಡೆದ ಡು ಆರ್ ಡೈ ಪಂದ್ಯದಲ್ಲಿ ಎರಡು ಬಾರಿಯ ಚಾಂಪಿಯನ್ ವೆಸ್ಟ್ ಇಂಡೀಸ್ ತಂಡ ಮುಗ್ಗರಿಸಿದೆ. ಹೋಬಾರ್ಟ್ ನಲ್ಲಿ ನಡೆದ ಪಂದ್ಯದಲ್ಲಿ ಗೆದ್ದ ಐರ್ಲೆಂಡ್ ಸೂಪರ್ 12 ಹಂತಕ್ಕೆ ಪ್ರವೇಶಿಸಿದರೆ, ವೆಸ್ಟ್ ಇಂಡೀಸ್ ಕೂಟದಿಂದಲೇ ಹೊರಬಿತ್ತು.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ವೆಸ್ಟ್ ಇಂಡೀಸ್ ರನ್ ಗಳಿಸಲು ಪರದಾಡಿತು. ವಿಂಡೀಸ್ 20 ಓವರ್ ಗಳಲ್ಲಿ ಐದು ವಿಕೆಟ್ ಕಳೆದುಕೊಂಡು 146 ರನ್ ಮಾಡಿದರೆ, ಐರ್ಲೆಂಡ್ ತಂಡವು 17.3 ಓವರ್ ಗಳಲ್ಲಿ ಕೇವಲ ಒಂದು ವಿಕೆಟ್ ನಷ್ಟಕ್ಕೆ 150 ರನ್ ಗಳಿಸಿ ಜಯ ಸಾಧಿಸಿತು.

ವಿಂಡೀಸ್ ಪರ ಬ್ರಾಂಡನ್ ಕಿಂಗ್ ಅಜೇಯ ಆಟವಾಡಿದರು. 48 ಎಸೆತ ಎದುರಿಸಿದ ಕಿಂಗ್ 62 ರನ್ ಗಳಿಸಿದರೆ, ಜಾನ್ಸನ್ ಚಾರ್ಲ್ಸ್ 24 ರನ್, ಒಡೆನ್ ಸ್ಮಿತ್ ಅಜೇಯ 19 ರನ್ ಮಾಡಿದರು. ಐರ್ಲೆಂಡ್ ಪರ ಡೆಲಾನಿ ಮೂರು ವಿಕೆಟ್ ಕಿತ್ತು ಮಿಂಚಿದರು.

ಇದನ್ನೂ ಓದಿ:ಮಂಡ್ಯದ ಬೆಣ್ಣೆ ಇಡ್ಲಿ ಖ್ಯಾತಿಯ ಇಡ್ಲಿ ಶಿವಪ್ಪ ಅಪಘಾತದಲ್ಲಿ ನಿಧನ

ಗುರಿ ಬೆನ್ನತ್ತಿದ ಐರ್ಲೆಂಡ್ ಗೆ ಅನುಭವಿ ಪೌಲ್ ಸ್ಟರ್ಲಿಂಗ್ ಮತ್ತು ನಾಯಕ ಆಂಡ್ರ್ಯೂ ಬಾಲ್ಬಿರ್ನಿ ಉತ್ತಮ ಆರಂಭ ಒದಗಿಸಿದರು. ಆಂಡ್ರ್ಯೂ ಬಾಲ್ಬಿರ್ನಿ 37 ರನ್ ಗಳಿಸಿದರೆ, ಪೌಲ್ ಸ್ಟರ್ಲಿಂಗ್ ಅಜೇಯ 66 ರನ್ ಮಾಡಿದರು. ಎರಡನೇ ವಿಕೆಟ್ ಗೆ ಬಂದ ಟಕ್ಕರ್ ಅಜೇಯ 45 ರನ್ ಗಳಿಸಿದರು. ಇನ್ನೂ 15 ಎಸೆತ ಇರುವಾಗಲೇ ಸುಲಭದಲ್ಲಿ ಐರ್ಲೆಂಡ್ ಜಯ ಸಾಧಿಸಿತು.

ಕಳೆದ ಐದು ಟಿ20 ವಿಶ್ವಕಪ್ ಗಳಲ್ಲಿ ಮೊದಲ ಸುತ್ತನ್ನು ದಾಟಲು ವಿಫಲವಾದ ಐರ್ಲೆಂಡ್ ಈ ಬಾರಿ ಸೂಪರ್ 12 ಗೆ ಪ್ರವೇಶಿಸಿದೆ. ಮಾತ್ರವಲ್ಲದೆ ಎರಡು ಬಾರಿ ಚಾಂಪಿಯನ್‌ ವೆಸ್ಟ್ ಇಂಡೀಸ್ ನ್ನು ಸ್ಪರ್ಧೆಯಿಂದ ಹೊರಹಾಕಿದೆ.

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

IPL ಮುಂಬೈ ಇಂಡಿಯನ್ಸ್‌ ತಂಡಕ್ಕೆ ದಂಡ: ಹಾರ್ದಿಕ್‌ಗೆ ನಿಷೇಧ ಭೀತಿ

IPL ಮುಂಬೈ ಇಂಡಿಯನ್ಸ್‌ ತಂಡಕ್ಕೆ ದಂಡ: ಹಾರ್ದಿಕ್‌ಗೆ ನಿಷೇಧ ಭೀತಿ

IPL ಮಾಯಾಂಕ್‌ಗೆ ಮತ್ತೆ ಗಾಯ: ಮುಂದಿನ ಪಂದ್ಯಗಳಿಗೆ ಅಲಭ್ಯ?

IPL ಮಾಯಾಂಕ್‌ಗೆ ಮತ್ತೆ ಗಾಯ: ಮುಂದಿನ ಪಂದ್ಯಗಳಿಗೆ ಅಲಭ್ಯ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.