ತಾಯಿಯಿಂದ ತಿರಸ್ಕೃತ ಹುಲಿಮರಿಗೆ ಸಿಬ್ಬಂದಿ ಆಸರೆ!


Team Udayavani, Oct 22, 2022, 12:10 PM IST

ತಾಯಿಯಿಂದ ತಿರಸ್ಕೃತ ಹುಲಿಮರಿಗೆ ಸಿಬ್ಬಂದಿ ಆಸರೆ!

ಆನೇಕಲ್‌: ಹುಟ್ಟಿದ ಮೊದಲ ದಿನದಿಂದಲೇ ತಾಯಿಯಿಂದ ತಿರಸ್ಕೃತಗೊಂಡ ಹುಲಿಮರಿಯನ್ನು ಕಳೆದ 7 ತಿಂಗಳಿಂದ ಆರೈಕೆ ಮಾಡುವ ಮೂಲಕ ಬನ್ನೇರುಘಟ್ಟ ಜೈವಿಕ ಉದ್ಯಾನವನದ ವೈದ್ಯಾಧಿ ಕಾರಿಗಳು ಹಾಗೂ ಸಿಬ್ಬಂದಿ ಆಸರೆಯಾಗಿದ್ದಾರೆ.

ಬನ್ನೇರುಘಟ್ಟ ಜೈವಿಕ ಉದ್ಯಾನವನದ ಆಸ್ಪತ್ರೆ ಯಲ್ಲಿ ಬೆಳೆಯುತ್ತಿರುವ ಏಳು ತಿಂಗಳ ಹುಲಿಮರಿ, ಹುಟ್ಟಿದ ದಿನವೇ ತಾಯಿಯಿಂದ ಬೇರ್ಪಡುತ್ತಿದ್ದಂತೆ ದೃಷ್ಟಿಯನ್ನೂ ಕಳೆದುಕೊಂಡಿತ್ತು. ತಾಯಿಯ ಹಾಲಿಲ್ಲದೆ, ಕಣ್ಣಿನ ದೃಷ್ಟಿಯೂ ಸರಿಯಿಲ್ಲದೆ ಬೆಳೆಯುತ್ತಿ ರುವ ಕಂದಮ್ಮನನ್ನು ವೈದ್ಯರು ಹಾಗೂ ಸಿಬ್ಬಂದಿ ಪ್ರತಿದಿನ ಆರೈಕೆ ಮಾಡುತ್ತಿದ್ದು, ನಿತ್ಯ ಮೇಕೆ ಹಾಲನ್ನು ಬಾಟಲ್‌ ಮೂಲಕ ಕುಡಿಸಿ ಪೋಷಿಸುತ್ತಿದ್ದಾರೆ.

ಉದ್ಯಾನವನದಲ್ಲಿನ ಅನುಷ್ಕಾ ಹಾಗೂ ಮಿಥುನ್‌ ಹುಲಿಗಳಿಗೆ 2022ರ ಮಾರ್ಚ್‌ 25 ರಂದು ಜನಿಸಿದ ದಿನವೇ ತಾಯಿ ತನ್ನ ಮರಿಯನ್ನು ಹತ್ತಿರಕ್ಕೂ ಸೇರಿಸಿರಲಿಲ್ಲ. ಬಳಿಕ ಹುಲಿಮರಿಯನ್ನು ಉದ್ಯಾನವನದಲ್ಲಿರುವ ಮೃಗಾಲಯದ ಆಸ್ಪತ್ರೆಗೆ ತಂದು ಆರೈಕೆ ಮಾಡಲಾರಂಭಿಸಿದರು. ವೈದ್ಯರು ಮೊದಲು ಕಣ್ಣಿನ ಪೊರೆ ಚಿಕಿತ್ಸೆಗಾಗಿ ಪ್ರತ್ಯೇಕವಾಗಿ ಆರೈಕೆ ಮಾಡಿದ ಪರಿಣಾಮ ಮೂರು ತಿಂಗಳಿಂದೀಚೆಗೆ ಹುಲಿಮರಿಗೆ ದೃಷ್ಟಿ ಸರಿಯಾಗಿದೆ. ಇವಳ ಓಡಾಟ, ತುಂಟಾಟ, ಕುಣಿದಾಟ ಸಿಬ್ಬಂದಿಯ ಸಂಭ್ರಮಕ್ಕೆ ಕಾರಣವಾಗಿದೆ.

ವೈದ್ಯಾಧಿಕಾರಿ ಡಾ. ಉಮಾಶಂಕರ್‌ ನೇತೃತ್ವದಲ್ಲಿ ಡಾ.ಮಂಜುನಾಥ್‌, ಡಾ.ವಿಜಯ್‌, ಡಾ.ವಿಶಾಕ್‌ ತಂಡ ಪ್ರತಿದಿನ ಹುಲಿಮರಿಯನ್ನು ಕಾಳಜಿಯಿಂದ ಆರೈಕೆ ಮಾಡುತ್ತಿದ್ದಾರೆ. ಹಗಲಿನಲ್ಲಿ ಸಾವಿತ್ರಮ್ಮ, ಶಿವಕುಮಾರ್‌, ರಾತ್ರಿ ಸಮಯದಲ್ಲಿ ಮಹಾದೇವ, ರಾಜು, ಬಸಯ್ಯ ಅವರನ್ನು ಹುಲಿಮರಿಗೆ ಆಹಾರ ನೀಡಲು ನೇಮಿಸಲಾಗಿದೆ. ಬದುಕುವುದೇ ಅಸಾಧ್ಯ ಎಂಬಂತಿದ್ದ ಹುಲಿಮರಿ ಈಗ ಆರೋಗ್ಯವಾಗಿ ಬೆಳೆಯುತ್ತಿದ್ದು ಸಿಬ್ಬಂದಿ ಪ್ರೀತಿಗೆ ಪಾತ್ರವಾಗಿದೆ.

ತಾಯಿಯಿಂದ ಬೇರ್ಪಟ್ಟಾಗ ಮರಿಗೆ ಕಣ್ಣಿನ ದೃಷ್ಟಿ ಸರಿಯಿರಲಿಲ್ಲ. ಎರಡೂ ಕಿಡ್ನಿ ವೈಫ‌ಲ್ಯದಿಂದ ಮರಿ ಬಳಲುತ್ತಿತ್ತು. ನಿರಂತರ ಚಿಕಿತ್ಸೆ ಮೂಲಕ ಆರೈಕೆ ಮಾಡಲಾಗುತ್ತಿದೆ. ಆದರೆ ಕಿಡ್ನಿಯಲ್ಲಿರುವ ಕೆಲವು ರಂಧ್ರಗಳಿಂದ ತೊಂದರೆಯಾಗುವ ಸಾಧ್ಯತೆ ಇದ್ದು ಹೆಚ್ಚಿನ ಮುತುವರ್ಜಿಯಿಂದ ಸಲಹಲಾಗುತ್ತಿದೆ. -ಡಾ.ಉಮಾಶಂಕರ್‌, ವೈದ್ಯಾಧಿಕಾರಿ, ಬನ್ನೇರುಘಟ್ಟ ಜೈವಿಕ ಉದ್ಯಾನವನ

15 ವರ್ಷದ ಅನುಷ್ಕಾ ಎರಡು ಬಾರಿ ಮರಿ ಹಾಕಿದೆ. ಆದರೆ ಮರಿಗಳನ್ನು ದೂರ ಇಡುತ್ತಿದ್ದು, ಇದರಿಂದಾಗಿ ಆರೈಕೆ ಮಾಡಬೇಕಾಯಿತು. ಸದ್ಯ 7 ತಿಂಗಳ ಮರಿ ಮುದ್ದಾಗಿ ಬೆಳೆಯುತ್ತಿದ್ದು, ಅದರ ಪಾಲನೆಯನ್ನು ಸಿಬ್ಬಂದಿ ಚೆನ್ನಾಗಿ ನಿರ್ವಹಿಸುತ್ತಿದ್ದಾರೆ. -ಡಾ.ವಿಜಯ್‌, ಬನ್ನೇರುಘಟ್ಟ ಜೈವಿಕ ಉದ್ಯಾನವನ

ಪ್ರತಿದಿನ ಬೆಳಗ್ಗೆ ಮಧ್ಯಾಹ್ನ, ಸಂಜೆ, ರಾತ್ರಿ ಸಮಯದಲ್ಲಿ ಬಾಟಲ್‌ ಮೂಲಕ ಮೇಕೆ ಹಾಲು ಕುಡಿಸುತ್ತೇವೆ. ಈ ಸಂದರ್ಭದಲ್ಲಿ ನಮ್ಮ ಮನೆಯ ಮಕ್ಕಳಂತೆ ಮರಿ ಕೂಡ ಆಟವಾಡುತ್ತಾ, ಹಾಲು ಕುಡಿಯುತ್ತಾಳೆ. -ಸಾವಿತ್ರಮ್ಮ, ಉದ್ಯಾನವನದ ಸಿಬ್ಬಂದಿ

 

-ಮಂಜುನಾಥ್‌ ಎನ್‌.ಬನ್ನೇರುಘಟ್ಟ

ಟಾಪ್ ನ್ಯೂಸ್

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ

jairam ramesh

PM ಮೋದಿ ಒಬಿಸಿ ಮೀಸಲಾತಿಗೆ ಕೋಮು ಬಣ್ಣ ನೀಡಲು ಪ್ರಯತ್ನಿಸುತ್ತಿದ್ದಾರೆ: ಕಾಂಗ್ರೆಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ

8-

ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

7-haveri

Haveri: ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ; ವಿಡಿಯೋ ವೈರಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwwqewq

RCB ವೆಂಟಿಲೇಟರ್ ಆಫ್ ಮಾಡಲಾಗಿದೆ, ಆದರೂ ಐಸಿಯುನಲ್ಲಿದೆ: ಅಜಯ್ ಜಡೇಜಾ

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.