ಉಪ ಕುಲಪತಿಗಳಿಂದ ರಾಜೀನಾಮೆ ಕೇಳಿದ ಕೇರಳ ರಾಜ್ಯಪಾಲ
Team Udayavani, Oct 23, 2022, 9:30 PM IST
ತಿರುವನಂತಪುರಂ: ಕೇರಳದ ರಾಜ್ಯಪಾಲ ಆರಿಫ್ ಮೊಹಮದ್ ಖಾನ್ ಅವರು ರಾಜ್ಯದ 9 ವಿಶ್ವವಿದ್ಯಾಲಯಗಳ ಉಪ ಕುಲಪತಿಗಳಿಗೆ ಸೋಮವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲು ಸೂಚಿಸಿದ್ದಾರೆ.
ಎ.ಪಿ.ಜಿ.ಅಬ್ದುಲ್ ಕಲಾಂ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಯುಜಿಸಿ ನಿಯಮ ಉಲ್ಲಂಘಿಸಿ ಉಪ ಕುಲಪತಿ ನೇಮಕ ಮಾಡಿಕೊಳ್ಳಲಾಗಿದ್ದು, ಆ ನೇಮಕವನ್ನು ರದ್ದು ಮಾಡಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದ ಬೆನ್ನಲ್ಲೇ ರಾಜ್ಯಪಾಲರು ಈ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಅಬ್ದುಲ್ ಕಲಾಂ ತಾಂತ್ರಿಕ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ.ರಾಜಶ್ರೀ ಎಂ.ಎಸ್ ಸೇರಿದಂತೆ ಒಟ್ಟು 9 ವಿಶ್ವವಿದ್ಯಾಲಯಗಳ ಉಪ ಕುಲಪತಿಗಳಿಗೆ ಈ ಸೂಚನೆ ನೀಡಲಾಗಿದೆ.
ಸೋಮವಾರ ಬೆಳಗ್ಗೆ 11.30ರ ಒಳಗಾಗಿ ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ತಲುಪಿಸಬೇಕೆಂದೂ ಹೇಳಲಾಗಿದೆ.
ವಿಶ್ವವಿದ್ಯಾಲಯ ಅನುದಾನ ಆಯೋಗ(ಯುಜಿಸಿ) ನಿಯಮದ ಪ್ರಕಾರ ಸರ್ಕಾರ ರಚಿಸುವ ಶೋಧ ಸಮಿತಿಯು ಇಂಜಿನಿಯರಿಂಗ್ ವಿಜ್ಞಾನ ವಿಷಯದಲ್ಲಿ ಪರಿಣಿತರಾಗಿರುವ ಕನಿಷ್ಠ ಮೂವರು ಹೆಸರನ್ನು ಸೂಚಿಸಬೇಕಿತ್ತು. ಆದರೆ ಅಬ್ದುಲ್ ಕಲಾಂ ವಿವಿ ವಿಚಾರದಲ್ಲಿ ಕೇವಲ ಒಬ್ಬರ ಹೆಸರನ್ನು ಮಾತ್ರ ಸೂಚಿಸಿ, ಅವರನ್ನೇ ಉಪ ಕುಲಪತಿಯನ್ನಾಗಿಸಲಾಗಿತ್ತು. ಇದರಿಂದಾಗಿ ನಿಯಮ ಉಲ್ಲಂಘನೆಯಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
MUST WATCH
ಹೊಸ ಸೇರ್ಪಡೆ
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ