ಮೂಡಬೆಟ್ಟು: ಸಿಡಿಲು ಬಡಿದು ಮನೆ, ವಿದ್ಯುತ್‌ ಪರಿಕರಗಳಿಗೆ ಹಾನಿ


Team Udayavani, Oct 24, 2022, 12:39 AM IST

ಮೂಡಬೆಟ್ಟು: ಸಿಡಿಲು ಬಡಿದು ಮನೆ, ವಿದ್ಯುತ್‌ ಪರಿಕರಗಳಿಗೆ ಹಾನಿ

ಕಟಪಾಡಿ: ಮೂಡಬೆಟ್ಟು ಗ್ರಾಮದ ಶಂಕರಪುರ ಬಳಿಯ ಮನೆಯೊಂದಕ್ಕೆ ಸಿಡಿಲು ಬಡಿದು ಮನೆಯೊಡತಿ ಮೂರ್ಛೆ ತಪ್ಪಿದ್ದು, ಸುಮಾರು 2 ಲಕ್ಷ ರೂ.ಗೂ ಅಧಿಕ ನಷ್ಟ ಸಂಭವಿಸಿದ ಘಟನೆ ಶನಿವಾರ ರಾತ್ರಿ ನಡೆದಿದೆ.

ಶನಿವಾರ ರಾತ್ರಿಯ ವೇಳೆ ಏಕಾಏಕಿ ಸುರಿದ ಭಾರೀ ಮಳೆ ಜತೆ ಗುಡುಗು, ಸಿಡಿಲು ಮಿಂಚು ಜತೆ ಭಾರೀ ಮಳೆ ಸುರಿಯಿತು. ಈ ವೇಳೆ ಪ್ರಾರ್ಥನೆ ಪೂರೈಸಿ ಮನೆಯೊಳಗೆ ಪ್ರವೇಶಿಸಿದ ಕೆಲವೇ ಹೊತ್ತಿನಲ್ಲಿ ಲೀನಾ ಡಿ’ಸೋಜಾ ಅವರ ತಾರಸಿ ಮನೆಗೆ ಸಿಡಿಲು ಬಡಿದಿತ್ತು. ಇದರಿಂದ ಆಕೆ ಮೂಛೆì ತಪ್ಪಿಬಿದ್ದರು.

ಮನೆಯೊಳಗೆ ಬಡಿದ ಸಿಡಿಲು
ಆರಂಭದಲ್ಲಿ ಮನೆಯ ಮುಂಭಾಗದ ತೆಂಗಿನ ಮರಕ್ಕೆ ಬಡಿದ ಸಿಡಿಲು ಬಳಿಕ ವಾಸ್ತವ್ಯವಿದ್ದ ತಾರಸಿ ಮನೆಯ ವಿದ್ಯುತ್‌ ಸಂಪರ್ಕವನ್ನು ಹಾನಿಗೊಳಿಸಿದೆ. ತಮ್ಮದೇ ಪಕ್ಕದ ಹಂಚಿನ ಮನೆಯ ವಿದ್ಯುತ್‌ ಸಂಪರ್ಕವೂ ಸುಟ್ಟು ಕರಕಲಾಗಿದೆ.

ಸಿಡಿಲು ಬಡಿದ ಕೂಡಲೇ ದೊಡ್ಡ ಶಬ್ಧ ಉಂಟಾಗಿತ್ತು. ಮನೆಯೊಳಗೆ ಕತ್ತಲು ಆವರಿಸಿತ್ತು. ಈ ಸಂದರ್ಭ ಮನೆಯೊಡತಿ ಸುಮಾರು 15-20 ನಿಮಿಷ ಕಾಲ ಮೂರ್ಛೆ ತಪ್ಪಿದ್ದು, ಪತಿ ಅನಿಲ್‌ ಗ್ಲ್ಯಾಡ್ಸನ್‌ ಡಿ’ಸೋಜಾ ಕೂಡ ಸಾವರಿಸಿಕೊಳ್ಳುವಲ್ಲಿ ಅಸಹಾ ಯಕರಾಗಿದ್ದರು.

ಮನೆಯಂಗಳದಲ್ಲಿದ್ದ ತೆಂಗಿನ ಮರದ ಸಿಪ್ಪೆ ಎದ್ದು ಹೋಗಿದ್ದು, ಮಿಂಚು ಇಳಿದು ಬಂದ ಭಾಗವು ಸ್ಪಷ್ಟವಾಗಿ ಗೋಚರಿಸುತ್ತಿದೆ. ನೆರೆಯ ಕೆಲವು ಮನೆ‌ಗಳಿಗೂ ಅಲ್ಪ ಸ್ವಲ್ಪ ಹಾನಿ ಸಂಭವಿಸಿದೆ. ಈ ಘಟನೆಯಿಂದ ಮನೆಯೊಡತಿ ತನ್ನ ದೇಹದ ಒಂದು ಪಾರ್ಶ್ವದಲ್ಲಿ ತಲೆಯಿಂದ ಕಾಲಿನವರೆಗೆ ಬಲಹೀನತೆಯನ್ನು ಅನುಭವಿಸುವಂತಾಗಿದ್ದು, ವೈದ್ಯಕೀಯ ಶುಶ್ರೂಷೆ ಪಡೆಯಬೇಕಿದೆ ಎಂದು ಮಾಹಿತಿಯನ್ನು ನೀಡಿದ್ದಾರೆ.

ಘಟನೆ ನಡೆದ ಸ್ಥಳಕ್ಕೆ ಕಟಪಾಡಿ ಗ್ರಾಮ ಲೆಕ್ಕಿಗ ಡೇನಿಯಲ್‌ ಡೊಮ್ನಿಕ್‌ ಡಿ’ಸೋಜಾ ತೆರಳಿ ಪರಿಶೀಲನೆ ನಡೆಸಿದ್ದಾರೆ

ತಾರಸಿ ಮನೆಯ ಗೋಡೆ ಸಿಡಿದು ಕಂದಕ
ತಾರಸಿ ಮನೆಯ ಗೋಡೆ ಕೆಲವು ಭಾಗಗಳಲ್ಲಿ ಒಡೆದು ಹೋಗಿದೆ. ಮನೆಯ ಫ್ಯಾನ್‌, ಫ್ರಿಡ್ಜ್, ಬಲುºಗಳು, ವಿದ್ಯುತ್‌ ಸಂಪರ್ಕ, ಮಿಕ್ಸಿ ಸುಟ್ಟು ಹೋಗಿದ್ದು, ಅಸ್ತ್ರ ಒಲೆ ಒಡೆದು ಹೋಗಿದೆ. ಮನೆಯ ಗೋಡೆಯಲ್ಲಿ ಎರಡು ಮೂರು ಕಡೆ ಕಂದಕ ಸೃಷ್ಟಿಯಾಗಿದೆ. ವಿದ್ಯುತ್‌ ಸಂಪರ್ಕದ ಸ್ವಿಚ್‌ ಬೋರ್ಡ್‌, ಮೀಟರ್‌ ಬೋರ್ಡ್‌, ಪಂಪ್‌ ಸೆಟ್‌ನ ಸ್ವಿಚ್‌ ಬೋರ್ಡ್‌, ಬಲ್ಬ್, ವಯರಿಂಗ್‌ ಸಹಿತ ಎಲ್ಲವೂ ಸುಟ್ಟು ಕರಕಲಾಗಿದ್ದು ಒಂದೂವರೆ ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿದೆ.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.