ಮ್ಯಾನ್ಮಾರ್ ಸೇನೆಯಿಂದ ವೈಮಾನಿಕ ದಾಳಿ: 60 ಸಾವು
Team Udayavani, Oct 24, 2022, 9:30 PM IST
ನೈಪಿಡಾವ್: ಮ್ಯಾನ್ಮಾರ್ನ ಕಾಚಿನ್ ರಾಜ್ಯದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರ ಮೇಲೆ ಮ್ಯಾನ್ಮಾರ್ ಸೇನೆಯು ವೈಮಾನಿಕ ದಾಳಿ ನಡೆಸಿದೆ.
ಘಟನೆಯಿಂದಾಗಿ ಕನಿಷ್ಠ 60 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ಪ್ರತ್ಯೇಕತಾವಾದಿಗಳಾದ ಕಾಚಿನ್ ಸ್ವಾತಂತ್ರ್ಯ ಸಂಸ್ಥೆಯ 62ನೇ ಸಂಸ್ಥಾಪನಾ ದಿನದ ಕಾರ್ಯಕ್ರಮ ಭಾನುವಾರ ರಾತ್ರಿ ವೇಳೆ ನಡೆಯುತ್ತಿತ್ತು.
ಸ್ಥಳೀಯ ಗಾಯಕರು, ನೃತ್ಯ ಕಲಾವಿದರು ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಅದೇ ವೇಳೆ ಈ ದಾಳಿ ನಡೆದಿದೆ. 3 ಜೆಟ್ಗಳನ್ನು ಬಳಸಿಕೊಂಡು ಸೇನೆಯು ದಾಳಿ ನಡೆಸಿದ್ದಾಗಿ ವರದಿಯಾಗಿದೆ.
ಹಲವು ಪ್ರಸಿದ್ಧ ಗಾಯಕರು ಸೇರಿದಂತೆ ಅನೇಕರು ಸಾವನ್ನಪ್ಪಿರುವ ಅನುಮಾನವಿದೆ.
ಯೋಧರು ಕಾರ್ಯಕ್ರಮ ನಡೆಯುತ್ತಿದ್ದ ಸ್ಥಳದ ಸುತ್ತಲೂ ಚೆಕ್ಪಾಯಿಂಟ್ಗಳನ್ನು ರಚಿಸಿಕೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಅನುಮತಿ ನೀಡುತ್ತಿಲ್ಲ ಎನ್ನುವ ವರದಿಯಾಗಿದೆ.
ಮ್ಯಾನ್ಮಾರ್ನಲ್ಲಿ ಜನಾಂಗೀಯ ಅಲ್ಪಸಂಖ್ಯಾತರು ಮತ್ತು ಸರ್ಕಾರದ ಮಧ್ಯೆ ಜಗಳದಿಂದಾಗಿ ಹಿಂಸಾಚಾರ ಹೆಚ್ಚಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”
ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷ ಸುಬ್ರಮಣ್ಯ ಹೆಬ್ಬಾಗಿಲು: ಕೃತಜ್ಞತೆ, ಗೌರವ
Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್, ಸಾವಿನ ಸಂಖ್ಯೆ 90ಕ್ಕೆ ಏರಿಕೆ
Hamas ಕೊನೇ ಬಲಿಷ್ಠ ನೆಲೆ ಇಸ್ರೇಲ್ ವಶಕ್ಕೆ! ರಫಾ ಪೂರ್ವಭಾಗಕ್ಕೆ ನುಗ್ಗಿದ ಇಸ್ರೇಲ್ ಪಡೆ
ಚಿಕಿತ್ಸೆ ವೆಚ್ಚ ಭರಿಸಲಾಗದೆ ಹೆಂಡತಿಯನ್ನೇ ಕೊಂದ!
MUST WATCH
ಹೊಸ ಸೇರ್ಪಡೆ
Ramanagara ಶಾಸಕ ಇಕ್ಬಾಲ್ ಹುಸೇನ್ ವಿಡಿಯೋ ವೈರಲ್ ಕೇಸ್: ಇಬ್ಬರ ಬಂಧನ
SSLC ಫಲಿತಾಂಶ: ತುಮಕೂರು ಶೇ. 75.16 ರಷ್ಟು ಫಲಿತಾಂಶ
Ravichandran ಡ್ರೀಮ್ ಪ್ರಾಜೆಕ್ಟ್ ಪ್ರೇಮಲೋಕ-2ಗೆ ತಮಿಳಿನ ತೇಜು ಅಶ್ವಿನಿ?
Shimoga; ನನ್ನ ವಿರುದ್ಧ ಷಡ್ಯಂತ್ರ ನಡೆಸಿದ ರಾಘವೇಂದ್ರ ಬಂಧನವಾಗಬೇಕು: ಈಶ್ವರಪ್ಪ ಆಗ್ರಹ
SSLC Result: ಬೆಳ್ತಂಗಡಿಯ ಚಿನ್ಮಯ್ ಜಿ.ಕೆ. (624) ರಾಜ್ಯಕ್ಕೆ ದ್ವಿತೀಯ