ಸೈಕಾಲಜಿಕಲ್‌ ಥ್ರಿಲ್ಲರ್‌ ‘ಆದ್ಯಂತ’ ಚಿತ್ರದ ಮೂಲಕ ರೀ-ಎಂಟ್ರಿ ಕೊಟ್ಟ ಮಯೂರಿ


Team Udayavani, Oct 25, 2022, 12:14 PM IST

mayuri kyatari

ಸಾಮಾನ್ಯವಾಗಿ ಹಸೆಮಣೆ ಏರಿದ ಬಳಿಕ ಬಹುತೇಕ ನಟಿಯರು ಅಭಿನಯಕ್ಕೆ ಗುಡ್‌ ಬೈ ಹೇಳುತ್ತಾರೆ ಎಂಬುದು ಚಿತ್ರರಂಗದಲ್ಲಿ ಚಾಲ್ತಿಯಲ್ಲಿರುವ ಮಾತು. ಆದರೆ ಕೆಲವು ನಟಿಯರು ಮಾತ್ರ ಈ ಮಾತಿಗೆ ಅಪವಾದ. ಮದುವೆಯಾಗಿ, ಪೋಷಕರಾದ ನಂತರವೂ ಚಿತ್ರರಂಗದಲ್ಲಿ ಹೊಸ ಇನ್ನಿಂಗ್ಸ್‌ ಶುರುಮಾಡಿ, ತಮ್ಮದೇ ಆದ ಬೇಡಿಕೆ ಮತ್ತು ಅವಕಾಶ ಎರಡನ್ನೂ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗುತ್ತಾರೆ. ಇಂಥ ನಟಿಯರ ಸಾಲಿಗೆ ಈಗ ಸೇರ್ಪಡೆಯಾಗುತ್ತಿರುವ ಹೆಸರು ಮಯೂರಿ ಕ್ಯಾತರಿ.

ಹೌದು, “ಕೃಷ್ಣಲೀಲ’ ಸಿನಿಮಾದ ಮೂಲಕ ಸಿನಿಪ್ರಿಯರ ಗಮನ ಸೆಳೆಯಲು ಯಶಸ್ವಿಯಾದ ಮಯೂರಿ, ಬಳಿಕ “ಇಷ್ಟಕಾಮ್ಯ’, “ನಟರಾಜ ಸರ್ವೀಸ್‌’, “ಕರಿಯ-2′, “ರ್‍ಯಾಂಬೋ-2′, “8 ಎಂಎಂ’, “ರುಸ್ತುಂ’, “ನನ್ನ ಪ್ರಕಾರ’, “ಆಟಕ್ಕುಂಟು ಲೆಕ್ಕಕ್ಕಿಲ್ಲ’, “ಮೌನಂ’, “ಪೊಗರು’, “ವೀಲ್‌ಚೇರ್‌ ರೋವಿಯೋ’ ಹೀಗೆ ಒಂದಷ್ಟು ಸಾಲು ಸಾಲು ಸಿನಿಮಾಗಳಲ್ಲಿ ಅಭಿನಯಿಸಿ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿದ್ದರು. ಚಿತ್ರರಂಗದಲ್ಲಿ ಬಿಝಿಯಾಗಿರುವಾಗಲೇ ಹಸೆಮಣೆ ಏರಿದ್ದ ಮಯೂರಿ ಒಂದಷ್ಟು ಮಂದಿಗೆ ಸರ್‌ಪ್ರೈಸ್‌ ಕೂಡ ನೀಡಿದ್ದರು

ಮದುವೆಯಾದ ನಂತರ ಗೃಹಿಣಿಯಾಗಿ ಮನೆ ನಿರ್ವಹಣೆ, ಬಳಿಕ ಮಗುವಿನ ತಾಯಿಯಾಗಿ ಲಾಲನೆ-ಪಾಲನೆಯಲ್ಲಿ ಎಂಗೇಜ್‌ ಆಗಿದ್ದ ಮಯೂರಿ, ಇತ್ತೀಚೆಗಷ್ಟೇ ಕನ್ನಡ ಬಿಗ್‌ಬಾಸ್‌ ರಿಯಾಲಿಟಿ ಶೋನಲ್ಲಿ ಸ್ಪರ್ಧಿಯಾಗಿ ಬಿಗ್‌ಬಾಸ್‌ ಮನೆಗೆ ಅಡಿಯಿಟ್ಟಿದ್ದಾರೆ. ಈ ಮೂಲಕ ಮತ್ತೆ ಬಣ್ಣದ ಲೋಕದಲ್ಲಿ ಸಕ್ರಿಯವಾಗುವ ಸುಳಿವು ನೀಡಿದ್ದಾರೆ ಮಯೂರಿ. ಇದರ ಬೆನ್ನಲ್ಲೆ, ಮಯೂರಿ ನಾಯಕಿಯಾಗಿ ಅಭಿನಯಿಸಿರುವ ಮಹಿಳಾ ಪ್ರಧಾನ ಕಥಾಹಂದರ ಹೊಂದಿರುವ “ಆದ್ಯಂತ’ ಸಿನಿಮಾ ಕೂಡ ಬಿಡುಗಡೆಗೆ ತಯಾರಾಗಿದೆ.

ಅಂದಹಾಗೆ, “ಆದ್ಯಂತ’ ಸೈಕಲಾಜಿಕಲ್‌ ಥ್ರಿಲ್ಲರ್‌ ಕಥಾಹಂದರದ ಸಿನಿಮಾವಾಗಿದ್ದು, ಇದರಲ್ಲಿ ಮಯೂರಿ ಎರಡು ವಿಭಿನ್ನ ಶೇಡ್‌ನ‌ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ದಿಲೀಪ್‌ ನಾಯಕನಾಗಿರುವ ಈ ಸಿನಿಮಾದಲ್ಲಿ ರಮೇಶ್‌ ಭಟ್‌, ಶ್ರೀನಾಥ್‌ ವಸಿಷ್ಟ, ಪ್ರಶಾಂತ್‌ ನಟನ, ನಿಖೀಲ್‌ ಮೊದಲಾದವರು ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. “ಆರ್‌. ಆರ್‌ ಮೂವೀಸ್‌’ ಮತ್ತು “ಲೇಖನ ಕ್ರಿಯೇಷನ್ಸ್‌’ ಬ್ಯಾನರ್‌ನಲ್ಲಿ ಟಿ. ರಮೇಶ್‌ ಬಾಬು ನಿರ್ಮಿಸಿರುವ ಈ ಸಿನಿಮಾಕ್ಕೆ ಪುನೀತ್‌ ಶರ್ಮನ್‌ ನಿರ್ದೇಶನವಿದೆ.

ಈಗಾಗಲೇ “ಆದ್ಯಂತ’ ಸಿನಿಮಾದ ಮೋಶನ್‌ ಪೋಸ್ಟರ್‌, ಟೀಸರ್‌ ಬಿಡುಗಡೆಯಾಗಿದ್ದು ಸೋಶಿಯಲ್‌ ಮೀಡಿಯಾದಲ್ಲಿ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಇದೇ ಖುಷಿಯಲ್ಲಿರುವ ಚಿತ್ರತಂಡ ಸದ್ಯ ಸಿನಿಮಾದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿದ್ದು, ಇದೇ ಡಿಸೆಂಬರ್‌ ವೇಳೆಗೆ “ಆದ್ಯಂತ’ ತೆರೆಗೆ ಬರಲಿದೆ.

ಟಾಪ್ ನ್ಯೂಸ್

HD Revanna ಕೋರ್ಟ್‌ ಮೇಲೆ ನಂಬಿಕೆ ಇದೆ ನಿರ್ದೋಷಿಯಾಗುವೆ

HD Revanna ಕೋರ್ಟ್‌ ಮೇಲೆ ನಂಬಿಕೆ ಇದೆ ನಿರ್ದೋಷಿಯಾಗುವೆ

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

Rain Alert: ಕರಾವಳಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಸಾಧ್ಯತೆ

Rain Alert: ಕರಾವಳಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಸಾಧ್ಯತೆ

Siddapura ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!

Siddapura ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!

Rain ಕುಂದಾಪುರ, ಬೈಂದೂರು, ಹೆಬ್ರಿ: ಗಾಳಿ-ಮಳೆ ಅಬ್ಬರ; ಅಪಾರ ಹಾನಿ

Rain ಕುಂದಾಪುರ, ಬೈಂದೂರು, ಹೆಬ್ರಿ: ಗಾಳಿ-ಮಳೆ ಅಬ್ಬರ; ಅಪಾರ ಹಾನಿ

Malpe Beach: ಸೆ.15ರ ವರೆಗೆ ಪ್ರವಾಸೀ ಬೋಟ್‌ ಚಟುವಟಿಕೆ ಸ್ಥಗಿತ

Malpe Beach: ಸೆ.15ರ ವರೆಗೆ ಪ್ರವಾಸೀ ಬೋಟ್‌ ಚಟುವಟಿಕೆ ಸ್ಥಗಿತ

Uppinangady: ಬರಿದಾಗಿದೆ ನೇತ್ರಾವತಿ ನದಿಯ ಒಡಲು

Uppinangady: ಬರಿದಾಗಿದೆ ನೇತ್ರಾವತಿ ನದಿಯ ಒಡಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಕುಂಟೆಬಿಲ್ಲೆ ಮುಹೂರ್ತ

Sandalwood: ಕುಂಟೆಬಿಲ್ಲೆ ಮುಹೂರ್ತ

13

Entha Kathe Maraya: ಓಟಿಟಿಯಲ್ಲಿ ಎಂಥಾ ಕಥೆ ಮಾರಾಯ

ಕೊನೆಗೂ ʼಕಾಗೆ ಬಂಗಾರʼದ ಕಥೆ ಹೇಳಲು ರೆಡಿಯಾದ ಸೂರಿ: ವಿರಾಟ್‌ಗೆ ವಿಜಯ್‌ ಪುತ್ರಿ ನಾಯಕಿ

ಕೊನೆಗೂ ʼಕಾಗೆ ಬಂಗಾರʼದ ಕಥೆ ಹೇಳಲು ರೆಡಿಯಾದ ಸೂರಿ: ವಿರಾಟ್‌ಗೆ ವಿಜಯ್‌ ಪುತ್ರಿ ನಾಯಕಿ

Koti Movie: ʼಕೋಟಿʼ ಮೊದಲ ಹಾಡು ಬಂತು

Koti Movie: ʼಕೋಟಿʼ ಮೊದಲ ಹಾಡು ಬಂತು

Sandalwood: ʼದಿ ಜಡ್ಜ್ ಮೆಂಟ್‌ʼ; ಇದು ಮಾಮೂಲಿ ಸಿನಿಮಾ ಅಲ್ಲ

Sandalwood: ʼದಿ ಜಡ್ಜ್ ಮೆಂಟ್‌ʼ; ಇದು ಮಾಮೂಲಿ ಸಿನಿಮಾ ಅಲ್ಲ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

HD Revanna ಕೋರ್ಟ್‌ ಮೇಲೆ ನಂಬಿಕೆ ಇದೆ ನಿರ್ದೋಷಿಯಾಗುವೆ

HD Revanna ಕೋರ್ಟ್‌ ಮೇಲೆ ನಂಬಿಕೆ ಇದೆ ನಿರ್ದೋಷಿಯಾಗುವೆ

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

Rain Alert: ಕರಾವಳಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಸಾಧ್ಯತೆ

Rain Alert: ಕರಾವಳಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಸಾಧ್ಯತೆ

Siddapura ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!

Siddapura ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!

Rain ಕುಂದಾಪುರ, ಬೈಂದೂರು, ಹೆಬ್ರಿ: ಗಾಳಿ-ಮಳೆ ಅಬ್ಬರ; ಅಪಾರ ಹಾನಿ

Rain ಕುಂದಾಪುರ, ಬೈಂದೂರು, ಹೆಬ್ರಿ: ಗಾಳಿ-ಮಳೆ ಅಬ್ಬರ; ಅಪಾರ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.