ಸಿತ್ರಂಗ್‌ಗೆ 24 ಬಲಿ; ಬಾಂಗ್ಲಾದಲ್ಲಿ ಚಂಡಮಾರುತದ ಅಬ್ಬರ

13 ಜಿಲ್ಲೆಗಳಲ್ಲಿ ಅಪಾರ ಹಾನಿ

Team Udayavani, Oct 25, 2022, 8:22 PM IST

ಸಿತ್ರಂಗ್‌ಗೆ 24 ಬಲಿ; ಬಾಂಗ್ಲಾದಲ್ಲಿ ಚಂಡಮಾರುತದ ಅಬ್ಬರ

ಢಾಕಾ/ನವದೆಹಲಿ: ಬಂಗಾಳ ಕೊಲ್ಲಿಯಲ್ಲಿ ಎದ್ದ ಸಿತ್ರಂಗ್‌ ಚಂಡಮಾರುತವು ಬಾಂಗ್ಲಾದೇಶದಲ್ಲಿ ಜನಜೀವನವನ್ನು ಅಲ್ಲೋಲಕಲ್ಲೋಲವಾಗಿಸಿದೆ. ಸೋಮವಾರ ರಾತ್ರಿಯೇ ಬಾಂಗ್ಲಾ ಕರಾವಳಿಗೆ ಚಂಡಮಾರುತ ಅಪ್ಪಳಿಸಿದ್ದು, ಅಪಾರ ಪ್ರಮಾಣದ ಹಾನಿ ಉಂಟುಮಾಡಿದೆ. ಒಂದೇ ದಿನ ಬರೋಬ್ಬರಿ 24 ಮಂದಿಯನ್ನು ಸಿತ್ರಂಗ್‌ ಬಲಿಪಡೆದಿದೆ.

ಬರ್ಗುನಾ, ನರೈಲ್‌, ಸಿರಾಜ್‌ಗಂಜ್‌, ಭೋಲ್‌ ಸೇರಿದಂತೆ ಅತಿ ಹೆಚ್ಚು ಜನದಟ್ಟಣೆ ಇರುವ 13 ಜಿಲ್ಲೆಗಳಲ್ಲಿ ಮತ್ತು ತಗ್ಗುಪ್ರದೇಶಗಳಲ್ಲಿ ಚಂಡಮಾರುತವು ಭಾರೀ ಹಾನಿ ಉಂಟುಮಾಡಿದೆ. ಕೆಲವು ಜಿಲ್ಲೆಗಳಲ್ಲಿನ ಸಾವು-ನೋವಿನ ಮಾಹಿತಿ ಮಾತ್ರ ಬಂದಿದ್ದು, ಮೃತರ ಸಂಖ್ಯೆ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತರಲ್ಲಿ ಅನೇಕರು ಮರ ಬಿದ್ದು, ಮನೆ ಕುಸಿದು ಸಾವಿಗೀಡಾಗಿದ್ದಾರೆ. ಇವರಲ್ಲಿ ಮೂವರು ಮಕ್ಕಳೂ ಸೇರಿದ್ದಾರೆ. ಒಂದೇ ಕುಟುಂಬದ ಮೂವರು ಮನೆ ಮೇಲೆ ಮರ ಬಿದ್ದ ಕಾರಣ ಅಸುನೀಗಿದ್ದಾರೆ.

ಚಂಡಮಾರುತದ ಎಫೆಕ್ಟ್ ಎಂಬಂತೆ ಬೀಸಿದ ಬಿರುಗಾಳಿಯಿಂದ ನೂರಾರು ಮರಗಳು ಧರಾಶಾಹಿಯಾಗಿವೆ. ಲೈಟ್‌ ಕಂಬಗಳು, ಮರಗಳು ರಸ್ತೆ ಮೇಲೆ ಉರುಳಿಬಿದ್ದ ಪರಿಣಾಮ ಹಲವು ರಸ್ತೆಗಳಲ್ಲಿ ಕೆಲ ಗಂಟೆಗಳ ಕಾಲ ಸಂಪರ್ಕವೇ ಸಾಧ್ಯವಾಗಲಿಲ್ಲ. ಮೊಬೈಲ್‌, ಇಂಟರ್ನೆಟ್‌ ಸೇವೆಗಳಲ್ಲೂ ವ್ಯತ್ಯಯ ಉಂಟಾಯಿತು.

ಚಂಡಮಾರುತದಿಂದ ಹಾನಿಗೀಡಾದ ಮನೆಗಳು- 10,000
ಹಾನಿಗೊಳಗಾದ ಕೃಷಿ ಭೂಮಿ- 6,000 ಹೆಕ್ಟೇರ್‌
ನಾಶವಾದ ಸಿಗಡಿ ಫಾರ್ಮ್- 1,000
ನಿರಾಶ್ರಿತರಾದವರು- 10 ಲಕ್ಷ
ಶಿಬಿರಗಳಲ್ಲಿ ಆಶ್ರಯ ಪಡೆದವರು- 6,925
ಸ್ಥಳಾಂತರಗೊಂಡವರ ಸಂಖ್ಯೆ- 2 ಲಕ್ಷ

ಭಾರತ ಬಚಾವ್‌!
ಸಿತ್ರಂಗ್‌ ಚಂಡಮಾರುತವು ಭಾರತದ ಪಶ್ಚಿಮ ಬಂಗಾಳ ಸೇರಿದಂತೆ ಕರಾವಳಿ ಪ್ರದೇಶಗಳಲ್ಲಿ ಅಪಾರ ಹಾನಿ ಉಂಟುಮಾಡಬಹುದು ಎಂಬ ಆತಂಕ ದೂರವಾಗಿದೆ. ಸೋಮವಾರ ರಾತ್ರಿ ಚಂಡಮಾರುತವು ಪ.ಬಂಗಾಳ ಕರಾವಳಿಯನ್ನು ದಾಟಿ ಗಂಟೆಗೆ 56 ಕಿ.ಮೀ. ವೇಗದಲ್ಲಿ ಬಾಂಗ್ಲಾ ಕರಾವಳಿಯತ್ತ ಸಂಚರಿಸಿತು.

ಹೀಗಾಗಿ, ಬಂಗಾಳದಾದ್ಯಂತ ಅಲ್ಪಪ್ರಮಾಣದಿಂದ ಮಧ್ಯಮ ಪ್ರಮಾಣದಲ್ಲಿ ಮಳೆಯಾಯಿತು. ಯಾವುದೇ ಸಾವು-ನೋವು, ಆಸ್ತಿಪಾಸ್ತಿ ಹಾನಿ ಉಂಟಾಗಲಿಲ್ಲ. ಆದರೆ, ಈಶಾನ್ಯ ರಾಜ್ಯಗಳಾದ ಅಸ್ಸಾಂ, ಮೇಘಾಲಯ, ಮಿಜೋರಾಂ ಮತ್ತು ತ್ರಿಪುರದಲ್ಲಿ ಧಾರಾಕಾರ ಮಳೆಯಾಗಿದೆ.

ಟಾಪ್ ನ್ಯೂಸ್

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.