ಕರಾವಳಿಯ ವಿವಿಧೆಡೆ ವೀಕ್ಷಣೆ; ನಭದಲ್ಲಿ ಕೌತುಕ ಮೂಡಿಸಿದ ಸೂರ್ಯಗ್ರಹಣ

ಪೂಜಾ ಸೇವೆ ಸಮಯ ಬದಲಾವಣೆ

Team Udayavani, Oct 26, 2022, 6:10 AM IST

ಕರಾವಳಿಯ ವಿವಿಧೆಡೆ ವೀಕ್ಷಣೆ; ನಭದಲ್ಲಿ ಕೌತುಕ ಮೂಡಿಸಿದ ಸೂರ್ಯಗ್ರಹಣ

ಮಂಗಳೂರು/ಪಣಂಬೂರು: ದೀಪಾವಳಿ ಅಮಾವಾಸ್ಯೆ ದಿನವಾದ ಮಂಗಳವಾರ ನಭದಲ್ಲಿ ಸಂಭವಿಸಿದ ಪಾರ್ಶ್ವ ಸೂರ್ಯಗ್ರಹಣದ ಕೌತುಕ ಕರಾವಳಿಯಾದ್ಯಂತ ಕುತೂಹಲ ಮೂಡಿಸಿತು.

ದ.ಕ. ಜಿಲ್ಲೆಯಾದ್ಯಂತ ಆಸಕ್ತರು ಸೂರ್ಯಗ್ರಹಣವನ್ನು ಕಣ್ತುಂಬಿ ಕೊಂಡರೆ ವಿವಿಧ ದೇವಸ್ಥಾನಗಳಲ್ಲಿ ದೇವರ ದರ್ಶನ, ನಿತ್ಯಪೂಜೆ ಹಾಗೂ ಧಾರ್ಮಿಕ ಅನುಷ್ಠಾನದಲ್ಲಿ ಸಮಯ ಬದಲಾವಣೆ ಮಾಡಲಾಗಿತ್ತು. ಸೂರ್ಯ ಗ್ರಹಣ ಮುಗಿದ ಬಳಿಕ ಬಹುಮಂದಿ ಭಕ್ತರು ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಕೊನೆಕ್ಷಣದಲ್ಲಿ ಬರಿಗಣ್ಣಲ್ಲೂ ವೀಕ್ಷಣೆ
ಮಂಗಳವಾರ ಸಂಜೆ ಸಂಭವಿಸಿದ ಪಾರ್ಶ್ವ ಸೂರ್ಯಗ್ರಹಣ ವೀಕ್ಷಣೆಗೆ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ವತಿಯಿಂದ ಪಣಂಬೂರು ಕಡಲತೀರದಲ್ಲಿ ವ್ಯವಸ್ಥೆ ಮಾಡ ಲಾಗಿತ್ತು. ಗ್ರಹಣವನ್ನು ವೀಕ್ಷಿಸಲೆಂದು ತಯಾರಿಸಿದ ಸೌರ ಕನ್ನಡಕಗಳು, ಪಿನ್‌ ಹೋಲ್‌ ಪ್ರೊಜೆಕ್ಟರ್‌ ಮತ್ತು ಸೋಲಾರ್‌ ಫಿಲ್ಟರ್‌ ಅಳವಡಿಸಿದ ದೂರದರ್ಶಕಗಳ ಮೂಲಕ ಗ್ರಹಣ ವನ್ನು ಹಲವು ಆಸಕ್ತರು ಕಣ್ತುಂಬಿ ಕೊಂಡರು. ಬೀಚ್‌ಗೆ ಆಗ ಮಿಸಿದ ಪ್ರವಾಸಿಗರು ಕೂಡ ಸೂರ್ಯ ಗ್ರಹಣದ ಕುತೂಹಲವನ್ನು ಕಂಡು ಬೆರಗಾದರು. ಈ ಮಧ್ಯೆ ಸೂರ್ಯಾಸ್ತ ಸಂದರ್ಭದ ಕೊನೆಯ 10 ನಿಮಿಷ ಸೂರ್ಯನ ಪ್ರಖರತೆ ಕಡಿಮೆ ಇದ್ದ ಕಾರಣ ಬರಿಗಣ್ಣಿನಿಂದಲೇ ಗ್ರಹಣ ವೀಕ್ಷಿಸಲು ಸಾಧ್ಯವಾಯಿತು. ಸೂರ್ಯಾಸ್ತದ ಸಮಯವಾದ್ದರಿಂದ ದಿಗಂತವು ಶುಭ್ರವಾಗಿ ಗೋಚರಿಸಿತು. ಸೂರ್ಯಗ್ರಹಣದ ಕುರಿತು ಪಿಲಿಕುಳ ಪ್ರದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕ ಡಾ| ಕೆ.ವಿ. ರಾವ್‌ ಮಾಹಿತಿ ನೀಡಿದರು. ಪ್ರಾದೇಶಿಕ ಕೇಂದ್ರದ ಕ್ಯುರೇಟರ್‌ ಜಗನ್ನಾಥ್‌, ಸೈಂಟಿಫಿಕ್‌ ಆಫಿಸರ್‌ ವಿಘ್ನೇಶ್‌ ಭಟ್‌, ಶರಣಯ್ಯ, ಕಿಶೋರ್‌, ಶರತ್‌, ವಂದನಾ, ವಿಕ್ಟರ್‌, ಯತೀಶ್‌, ಶಿವರಾಮ್‌ ವಿಕ್ಷಣೆಗೆ ಸಹಕರಿಸಿದರು.

ಯೇನಪೊಯ ವಿ.ವಿ. ಸಹಯೋಗ ದಲ್ಲಿ ಬಲ್ಮಠದಲ್ಲಿರುವ ಯೇನಪೊಯ ಪದವಿ ಕಾಲೇಜಿನ 6ನೇ ಮಹಡಿಯಲ್ಲಿ ಸೂರ್ಯಗ್ರಹಣ ನೋಡಲು ವ್ಯವಸ್ಥೆ ಮಾಡಲಾಗಿತ್ತು. ಹಲವು ಆಸಕ್ತ ವಿದ್ಯಾರ್ಥಿಗಳು ಟೆಲಿಸ್ಕೋಪ್‌ ಸಹಾಯದಿಂದ ಗ್ರಹಣ ವೀಕ್ಷಿಸಿದರು.

ವಿದೌಟ್‌ ರಿಲೀಜನ್‌ ಆ್ಯಂಡ್‌ ಟ್ರಸ್ಟ್‌ ಮತ್ತು ದಕ್ಷಿಣ ಕನ್ನಡ ವಿಚಾರ ವಾದಿಗಳ ಅಸೋಸಿಯೇಶನ್‌ ಆಶ್ರಯದಲ್ಲಿ ನಗರದ ಲೇಡಿಹಿಲ್‌ ಬಳಿ ಗ್ರಹಣವನ್ನು ಸಾಮೂಹಿಕವಾಗಿ ವೀಕ್ಷಿಸಲಾಯಿತು.

ಜನ ಸಂಚಾರ ವಿರಳ!
ಗ್ರಹಣ ಹಿನ್ನೆಲೆಯಲ್ಲಿ ಮಧ್ಯಾಹ್ನ ಜಿಲ್ಲೆಯ ವಿವಿಧ ಕಡೆಗಳಲ್ಲಿ ವಾಹನ ಸಂಚಾರ ವಿರಳವಾಗಿತ್ತು. ಜನ ಸಂಚಾರವೂ ಕಡಿಮೆ ಇತ್ತು. ಬಸ್‌ಗಳಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆ ಯಾಗಿತ್ತು. ಕೆಲವು ಹೊಟೇಲ್‌ಗ‌ಳಿಗೆ ಗ್ರಾಹಕರು ಇಲ್ಲದೆ ಬಾಗಿಲು ಹಾಕಿದ್ದರೆ, ಇನ್ನೂ ಕೆಲವು ಹೊಟೇಲ್‌ಗ‌ಳು ಗ್ರಾಹಕರು ಇಲ್ಲದೆ ಬಿಕೋ ಎನ್ನುತ್ತಿದ್ದವು. ಅಂಗಡಿ ವ್ಯವಹಾರಕ್ಕೂ ಗ್ರಾಹಕರ ಕೊರತೆಯಿತ್ತು.

ಮಲ್ಪೆ ಬೀಚ್‌: ಸೂರ್ಯಗ್ರಹಣ
ವೀಕ್ಷಿಸಿ ಸಂಭ್ರಮಪಟ್ಟ ಜನ
ಮಲ್ಪೆ: ಮಲ್ಪೆ ಬೀಚ್‌ನಲ್ಲಿ ಸೂರ್ಯಗ್ರಹಣ ವೀಕ್ಷಣೆ ಮತ್ತು ವಿಶ್ಲೇಷಣೆ ನಡೆ ಯಿತು. ಟೆಲಿಸ್ಕೋಪ್‌ ಮೂಲಕ ಸೂರ್ಯಗ್ರಹಣ ವೀಕ್ಷಣೆಗೆ ಸಾವಿರಾರು ವಿದ್ಯಾರ್ಥಿಗಳು, ಸಾರ್ವ ಜನಿಕರು ಜಮಾಯಿಸಿದ್ದರು.

ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ಆಡಳಿತ ಮಂಡಳಿ, ಅಮೆಚೂರ್‌ ಕ್ಲಬ್‌ ಮತ್ತು ಮಲ್ಪೆ ಅಭಿವೃದ್ಧಿ ಸಮಿತಿ ಆಶ್ರಯದಲ್ಲಿ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು. ಪೂರ್ಣಪ್ರಜ್ಞ ಕಾಲೇಜಿನ ಹವ್ಯಾಸಿ ಖಗೋಳ ವೀಕ್ಷಕರ ಸಂಘ 500ಕ್ಕೂ ಅಧಿಕ ಜನರಿಗೆ ಕನ್ನಡಕದ ವ್ಯವಸ್ಥೆ ಮಾಡಿತ್ತು. ವೀಕ್ಷಕರು ಗ್ರಹಣದ ವಿವರಣೆಗಳನ್ನು ಕೇಳಿ ಸಂಶಯಗಳನ್ನು ಪರಿಹರಿಸಿ ಕೊಂಡರು. 8, 4 ಮತ್ತು 3 ಇಂಚಿನ ಟೆಲಿಸ್ಕೋಪನ್ನು ಸಾರ್ವಜನಿಕ ವೀಕ್ಷಣೆಗೆ ಮತ್ತು 3 ಇಂಚಿನ ಟೆಲಿ  ಸ್ಕೋಪನ್ನು ನೇರ ಪ್ರಸಾರಕ್ಕೆ ಇರಿಸಲಾಗಿತ್ತು. ಕಾಲೇಜಿನ 70 ಎನ್ನೆಸೆಸ್‌ ವಿದ್ಯಾರ್ಥಿಗಳಲ್ಲದೆ ಸಾವಿ ರಕ್ಕೂ ಅಧಿಕ ಮಂದಿ ಗ್ರಹಣವನ್ನು ವಿಕ್ಷಿಸಿದರು.

ಜಿಲ್ಲಾಧಿಕಾರಿ ಕೂರ್ಮಾರಾವ್‌ ವೀಕ್ಷಣೆಗೆ ಚಾಲನೆ ನೀಡಿದರು. ಶಾಸಕ ರಘುಪತಿ ಭಟ್‌ ಉಪಸ್ಥಿತರಿದ್ದರು.
ಯಶ್‌ಪಾಲ್‌ ಎ. ಸುವರ್ಣ, ಡಾ| ಪಿ. ಶ್ರೀರಮಣ ಐತಾಳ, ಡಾ| ಎ.ಪಿ. ಭಟ್‌, ರಾಮಚಂದ್ರ, ಡಾ| ವಿನಯ ಕುಮಾರ್‌, ಅತುಲ್‌ ಭಟ್‌ ಪಾಲ್ಗೊಂಡಿದ್ದರು.

ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ
ಗಂಗೊಳ್ಳಿಯ ಜುಮ್ಮಾ ಮಸೀದಿ ಯಲ್ಲಿ ಸೂರ್ಯ ಗ್ರಹಣ ಹಿನ್ನೆಲೆಯಲ್ಲಿ ಮಂಗಳವಾರ ವಿಶೇಷ ನಮಾಝ್ ಹಾಗೂ ಪ್ರಾರ್ಥನೆ ನೆರವೇರಿತು.

ಟಾಪ್ ನ್ಯೂಸ್

amit-shah

Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

ಗ್ಯಾರೆಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

Raichur; ಗ್ಯಾರಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

ICC Men’s Test Team Rankings; Team India slipped to second place

ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11-hunsur

Hunsur: ಉರುಳು ಹಾಕಿ ಜಿಂಕೆ ಕೊಂದು ಮಾಂಸ ಹೊತ್ತೊಯ್ಯುತ್ತಿದ್ದ ಇಬ್ಬರ ಬಂಧನ

amit-shah

Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

10

Thirthahalli: ಶಿಕ್ಷಕರ ಚುನಾವಣೆಯಲ್ಲಿ ಶಿಕ್ಷಕರೇ ಸ್ಪರ್ಧೆ ಮಾಡಬೇಕು: ಅರುಣ್ ಹೊಸಕೊಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.