ಪುಟಿದೆದ್ದ ಟೂರಿಸಂ; ರಾಜ್ಯದ ಪ್ರಮುಖ ಪ್ರವಾಸಿ ತಾಣಗಳು ಈಗ ಭರ್ತಿ

ಮೈಸೂರು, ಕೊಡಗು ಕರಾವಳಿಗೆ ಜನಾಕರ್ಷಣೆ

Team Udayavani, Oct 26, 2022, 7:00 AM IST

ಪುಟಿದೆದ್ದ ಟೂರಿಸಂ; ರಾಜ್ಯದ ಪ್ರಮುಖ ಪ್ರವಾಸಿ ತಾಣಗಳು ಈಗ ಭರ್ತಿ

ಬೆಂಗಳೂರು: ಎರಡು ವರ್ಷಗಳಿಂದ ಕುಂಟುತ್ತಾ ಸಾಗುತ್ತಿದ್ದ ಪ್ರವಾಸೋದ್ಯಮ ಕರಾ ವಳಿಯೂ ಸೇರಿದಂತೆ ರಾಜ್ಯಾದ್ಯಂತ ಅಕ್ಟೋಬರ್‌ ತಿಂಗಳ ಹಬ್ಬಗಳ ಮಾಸದಲ್ಲಿ ಪುಟಿದೆದ್ದಿದೆ.

ದಸರಾ ಹಾಗೂ ದೀಪಾವಳಿ ಸಂದರ್ಭದಲ್ಲಿ ಪ್ರವಾಸಿ ತಾಣಗಳು ಪ್ರವಾಸಿಗರಿಂದ ತುಂಬಿದೆ. ಈ ಬಾರಿ ಮೈಸೂರು, ಕೊಡಗು, ಕರಾವಳಿ ಹಾಗೂ ಮಲೆನಾಡು ಭಾಗದತ್ತ ಪ್ರವಾಸಿಗರು ಹೆಚ್ಚಿನ ಮಟ್ಟಿಗೆ ಆಕರ್ಷಿತರಾಗಿದ್ದಾರೆ. ದೇಶದ ಶೇ. 12ರಷ್ಟು ಪ್ರವಾಸಿಗರನ್ನು ಸೆಳೆಯುವ ಕರ್ನಾಟಕ ದಲ್ಲಿ ಈ ಬಾರಿಯ ಹಬ್ಬದ ಋತು ಪ್ರವಾ ಸೋದ್ಯಮಕ್ಕೆ ಶಕ್ತಿ ತುಂಬಿದೆ.

ಸತತ ರಜೆ ಇದ್ದುದರ ಜತೆಗೆ ಎರಡು ವರ್ಷಗಳಿಂದ ಪ್ರವಾಸಕ್ಕೆ ನಿರ್ಬಂಧ ಇದ್ದ ಹಿನ್ನೆಲೆ ಯಲ್ಲಿ ಈ ವರ್ಷ ನಿರೀಕ್ಷೆಗೂ ಮೀರಿ ವಿವಿಧ ಪ್ರವಾಸಿತಾಣಗಳಲ್ಲಿ ಜನಸಂದಣಿ ಕಂಡು ಬಂದಿದೆ. ದಸರಾ ಸಂದರ್ಭದಲ್ಲಂತೂ ಕೆಎಸ್‌ಆರ್‌ಟಿಸಿ ಎರಡು ಸಾವಿರ ವಿಶೇಷ ಬಸ್‌ ಸೇವೆ ಒದಗಿಸಿ 22 ಕೋಟಿ ರೂ. ದಾಖಲೆಯ ಲಾಭ ಗಳಿಸಿತ್ತು. ದೀಪಾವಳಿ ಸಂದರ್ಭದಲ್ಲೂ 1,500 ಬಸ್‌ಗಳ ವಿಶೇಷ ಸೇವೆ ಒದಗಿಸಿದ್ದು, ಹೆಚ್ಚಿನ ವಹಿವಾಟಿನ ನಿರೀಕ್ಷೆಯಲ್ಲಿದೆ. ಪ್ರವಾಸೋದ್ಯಮ ಇಲಾಖೆಯ ಪ್ಯಾಕೇಜ್‌ಗಳಿಗೆ ಉತ್ತಮ ಸ್ಪಂದನೆ ದೊರೆತಿದೆ ಎನ್ನುತ್ತವೆ ಕೆಎಸ್‌ಟಿಡಿ ಮೂಲಗಳು.
ಮೈಸೂ ರಿನ ಅರಮನೆಗೆ ಅ. 1ರಿಂದ 24ರ ವರೆಗೆ ಸುಮಾರು 3.27 ಲಕ್ಷ ಪ್ರವಾ ಸಿ ಗರು ಭೇಟಿ ನೀಡಿ ದ್ದಾರೆ ಎಂದು ಮೈಸೂರು ಅರ ಮನೆ ಮಂಡಳಿ ಮೂಲ ಗಳು ತಿಳಿಸಿವೆ. ಮೈಸೂರಿನ ಹೊಟೇಲ್‌ ಉದ್ಯಮ ಚೇತರಿಕೆಗೊಂಡಿದ್ದು, ಮಾಸಿಕ 200 ಕೋ. ರೂ. ವಹಿವಾಟು ನಡೆಸಿದೆ.

ಇಪ್ಪತ್ತು ದಿನ ಗಳಲ್ಲಿ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಮಂದಿ ಕೆಆರ್‌ಎಸ್‌ ಜಲಾಶಯ ಹಾಗೂ ಬೃಂದಾವನಕ್ಕೆ ಭೇಟಿ ನೀಡಿದ್ದಾರೆ. ಜಿಲ್ಲೆಯ ರಂಗನತಿಟ್ಟು, ಗಗನಚುಕ್ಕಿ ಜಲಪಾತ ವೀಕ್ಷಣೆಗೆ ಜನ ಧಾವಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ ಭಾಗದಲ್ಲಿ ಈ ವರ್ಷ ನೀಲಕುರುಂಜಿ ಹೂವು ಬಿಟ್ಟಿರುವುದು ಪ್ರವಾಸಿಗರ ಆಕರ್ಷಣೆಗೆ ಬೋನಸ್‌ ಎನಿಸಿದೆ.

ಕರಾವಳಿಯಲ್ಲೂ ಹೆಚ್ಚಳ
ಕರಾವಳಿಯಲ್ಲೂ ಪ್ರವಾಸಿಗರ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದೆ. ಪಣಂಬೂರು, ತಣ್ಣೀರು ಬಾವಿ, ಮಲ್ಪೆ, ಸೋಮೇಶ್ವರ ಹೀಗೆ ವಿವಿಧ ಬೀಚ್‌ಗಳಿಗೆ ದಿನಕ್ಕೆ 5-10 ಸಾವಿರ ಮಂದಿ ಭೇಟಿ ನೀಡುತ್ತಿದ್ದಾರೆ. ವಾರಾಂತ್ಯದಲ್ಲಿ ಈ ಸಂಖ್ಯೆ 15 ಸಾವಿರಕ್ಕೆ ತಲುಪುತ್ತಿದೆ. ಕಡಲು ಶಾಂತವಾಗಿದ್ದು, ನೀರಿಗೆ ಇಳಿಯಲು ಅವಕಾಶ ಇರು ವುದರಿಂದ ಪ್ರವಾಸಿಗರ ಸಂಖ್ಯೆಯಲ್ಲಿ ಏರಿಕೆಯಾಗಿದೆ.

ಮಂಗಳೂರಿನ ಪಿಲಿಕುಳ ನಿಸರ್ಗಧಾಮದಲ್ಲಿ ಸದ್ಯ ದಿನವೊಂದಕ್ಕೆ 3-4 ಸಾವಿರ ಮಂದಿ ಭೇಟಿ ನೀಡುತ್ತಿದ್ದು, ವಾರಾಂತ್ಯದಲ್ಲಿ ಈ ಸಂಖ್ಯೆ 5 ಸಾವಿರದವರೆಗೆ ಏರಿಕೆಯಾಗುತ್ತದೆ. ಇದ ರೊಂದಿಗೆ ಆದಾಯವೂ 3-4 ಪಟ್ಟು ಹೆಚ್ಚಾಗಿದೆ ಎಂದು ಪಿಲಿಕುಳ ನಿಸರ್ಗಧಾಮದ ನಿರ್ದೇಶಕ ಜಯಪ್ರಕಾಶ್‌ ಭಂಡಾರಿ ತಿಳಿಸಿದ್ದಾರೆ.

ವಸತಿ ವ್ಯವಸ್ಥೆ ಇರುವ ಹೊಟೇಲ್‌ಗ‌ಳಲ್ಲಿ ಕೊಠಡಿಗಳು ದೀಪಾವಳಿ ರಜೆ ಹಿನ್ನೆಲೆಯಲ್ಲಿ ಭರ್ತಿಯಾಗಿವೆ. ಕೋವಿಡ್‌ನ‌ 2 ವರ್ಷಗಳ ಬಳಿಕ ಹಿಂದಿನ ಸ್ಥಿತಿಗೆ ತಲುಪಿದೆ. ಬಹುತೇಕ ಕಾರ್ಪೊರೆಟ್‌ ಕಂಪೆನಿಗಳು ಕೋಣೆಗಳನ್ನು ಕಾದಿರಿಸುತ್ತಿವೆ. ಜತೆಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡುವವರೂ ಆಸಕ್ತಿ ತೋರುತ್ತಿದ್ದಾರೆ. ಹಾಗಾಗಿ ಮಂಗಳೂರಿನ ಶೇ. 90 ಹೊಟೇಲ್‌ಗ‌ಳಲ್ಲಿ ರೂಮ್‌ಗಳು ಭರ್ತಿಯಾಗಿವೆ.

ದೀಪಾವಳಿಗೆ ಶನಿವಾರ, ರವಿವಾರ ವಾರಾಂತ್ಯ  ರಜೆಯೂ ಸೇರಿದ ಕಾರಣ ಪ್ರವಾಸಿ ತಾಣ ಗಳಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ.
-ಜನಾರ್ಧನ್‌, ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕ

ಅಕ್ಟೋಬರ್‌ನಲ್ಲಿ ಪ್ರವಾಸಿತಾಣಗಳಲ್ಲಿ ಜನರ ಸಂಖ್ಯೆ ಹೆಚ್ಚಿದ್ದರಿಂದ ಹೋಟೆಲ್‌, ರೆಸಾರ್ಟ್‌ ಗಳಲ್ಲಿ ಉತ್ತಮ ವಹಿವಾಟು ನಡೆದಿದೆ.
-ಚಂದ್ರಶೇಖರ ಹೆಬ್ಬಾರ್‌
ರಾಜ್ಯ ಹೊಟೇಲ್‌ ಮಾಲೀಕರ ಸಂಘದ ಅಧ್ಯಕ್ಷ

ಟಾಪ್ ನ್ಯೂಸ್

Hassan Pen Drive Case ರೇವಣ್ಣಗೆ ಕಿಡ್ನಾಪ್‌ ಕೇಸ್‌, ಲುಕ್‌ಔಟ್‌ ನೋಟಿಸ್‌ ಕಂಟಕ

Hassan Pen Drive Case ರೇವಣ್ಣಗೆ ಕಿಡ್ನಾಪ್‌ ಕೇಸ್‌, ಲುಕ್‌ಔಟ್‌ ನೋಟಿಸ್‌ ಕಂಟಕ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

Hassan Pen Drive Case; ಹೊಸ ನಿರೀಕ್ಷಣ ಜಾಮೀನು ಅರ್ಜಿ ಸಲ್ಲಿಸಿದ ರೇವಣ್ಣ

Hassan Pen Drive Case; ಹೊಸ ನಿರೀಕ್ಷಣ ಜಾಮೀನು ಅರ್ಜಿ ಸಲ್ಲಿಸಿದ ರೇವಣ್ಣ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case ರೇವಣ್ಣಗೆ ಕಿಡ್ನಾಪ್‌ ಕೇಸ್‌, ಲುಕ್‌ಔಟ್‌ ನೋಟಿಸ್‌ ಕಂಟಕ

Hassan Pen Drive Case ರೇವಣ್ಣಗೆ ಕಿಡ್ನಾಪ್‌ ಕೇಸ್‌, ಲುಕ್‌ಔಟ್‌ ನೋಟಿಸ್‌ ಕಂಟಕ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

Hassan Pen Drive Case; ಹೊಸ ನಿರೀಕ್ಷಣ ಜಾಮೀನು ಅರ್ಜಿ ಸಲ್ಲಿಸಿದ ರೇವಣ್ಣ

Hassan Pen Drive Case; ಹೊಸ ನಿರೀಕ್ಷಣ ಜಾಮೀನು ಅರ್ಜಿ ಸಲ್ಲಿಸಿದ ರೇವಣ್ಣ

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Minchu

Madikeri: ಸಿಡಿಲು ಬಡಿದು ಅಸ್ಸಾಂ ಮೂಲದ ಕಾರ್ಮಿಕ ಮೃತ್ಯು

Hassan Pen Drive Case ರೇವಣ್ಣಗೆ ಕಿಡ್ನಾಪ್‌ ಕೇಸ್‌, ಲುಕ್‌ಔಟ್‌ ನೋಟಿಸ್‌ ಕಂಟಕ

Hassan Pen Drive Case ರೇವಣ್ಣಗೆ ಕಿಡ್ನಾಪ್‌ ಕೇಸ್‌, ಲುಕ್‌ಔಟ್‌ ನೋಟಿಸ್‌ ಕಂಟಕ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

Hassan Pen Drive Case; ಹೊಸ ನಿರೀಕ್ಷಣ ಜಾಮೀನು ಅರ್ಜಿ ಸಲ್ಲಿಸಿದ ರೇವಣ್ಣ

Hassan Pen Drive Case; ಹೊಸ ನಿರೀಕ್ಷಣ ಜಾಮೀನು ಅರ್ಜಿ ಸಲ್ಲಿಸಿದ ರೇವಣ್ಣ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.