ದೇಶದಲ್ಲಿ ಸರಕು ವಿಮಾನ ಉತ್ಪಾದನೆ; ಗುಜರಾತ್‌ನ ವಡೋದರಾದಲ್ಲಿ ಹೊಸ ಘಟಕ ಸ್ಥಾಪನೆ

ಐರೋಪ್ಯ ಒಕ್ಕೂಟದ ಹೊರಭಾಗದಲ್ಲಿ ಇದೇ ಮೊದಲ ಬಾರಿಗೆ  ಸಿ-295 ವಿಮಾನಗಳನ್ನು ಉತ್ಪಾದಿಸಲಾಗುತ್ತಿದೆ.

Team Udayavani, Oct 28, 2022, 12:38 PM IST

ದೇಶದಲ್ಲಿ ಸರಕು ವಿಮಾನ ಉತ್ಪಾದನೆ; ಗುಜರಾತ್‌ನ ವಡೋದರಾದಲ್ಲಿ ಹೊಸ ಘಟಕ ಸ್ಥಾಪನೆ

ನವದೆಹಲಿ: ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್‌ (ಟಿಎಎಸ್‌ಎಲ್‌) ಮತ್ತು ಏರ್‌ಬಸ್‌ ನಡುವೆ ಸಿ-295 ಮಾದರಿಯ ವಿಮಾನ ನಿರ್ಮಾಣ ಮಾಡುವ ಬಗ್ಗೆ ಒಪ್ಪಂದ ಉಂಟಾಗಿದೆ. ಒಟ್ಟು 21,935 ಕೋಟಿ ರೂ. ಮೊತ್ತದ ಡೀಲ್‌ ಇದಾಗಿದೆ.

ಗುಜರಾತ್‌ನ ವಡೋದರಾದಲ್ಲಿ ಅದನ್ನು ಉತ್ಪಾದಿಸಲಾಗುತ್ತದೆ. ಭಾನುವಾರ (ಅ.30) ನಡೆಯುವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ಘಟಕಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಭಾರತೀಯ ವಾಯುಪಡೆ (ಐಎಎಫ್)ಗಾಗಿ ಈ ವಿಮಾನಗಳು ಲಭ್ಯವಾಗಲಿವೆ.

ಈ ಬಗ್ಗೆ ನವದೆಹಲಿಯಲ್ಲಿ ಮಾಹಿತಿ ನೀಡಿದ ರಕ್ಷಣಾ ಖಾತೆ ಕಾರ್ಯದರ್ಶಿ ಡಾ.ಅಜಯ ಕುಮಾರ್‌ ಭಾರತೀಯ ವಾಯುಪಡೆಯನ್ನು ಅಗತ್ಯವನ್ನು ಪೂರೈಸುವ ನಿಟ್ಟಿನಲ್ಲಿ ಗುಜರಾತ್‌ನ ವಡೋದರಾದಲ್ಲಿ ಸ್ಥಾಪಿಸಲಾಗುವ ಘಟಕದಲ್ಲಿ ಸರಕು ಸಾಗಣೆ ವಿಮಾನವನ್ನು ಉತ್ಪಾದಿಸಲಾಗುತ್ತದೆ. ದೇಶೀಯ ವಿಮಾನ ಉತ್ಪಾದನಾ ಕ್ಷೇತ್ರದಲ್ಲಿ ಇದೊಂದು ಪ್ರಮುಖ ಯೋಜನೆಯಾಗಲಿದೆ. ಜತೆಗೆ ಈ ಘಟಕದಿಂದ ವಿದೇಶಗಳಿಗೆ ರಫ್ತು ಮಾಡುವ ನಿಟ್ಟಿನಲ್ಲಿಯೂ ವಿಮಾನಗಳ ಉತ್ಪಾದನೆ ಮಾಡಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ ಏರ್‌ಬಸ್‌ ಡಿಫೆನ್ಸ್‌ ಆ್ಯಂಡ್‌ ಸ್ಪೇಸ್‌ ಜತೆಗೆ ಕೇಂದ್ರ ಸರ್ಕಾರ ಸಿ-295 ಮಾದರಿಯ ಸರಕು ಸಾಗಣೆ ವಿಮಾನ ಖರೀದಿ ಮಾಡುವ ನಿಟ್ಟಿನಲ್ಲಿ ಒಪ್ಪಂದ ಮಾಡಿಕೊಂಡಿತ್ತು. ಉದ್ದೇಶಿತ ವಿಮಾನಗಳು ಸದ್ಯ ಐಎಎಫ್ ಹೊಂದಿರುವ ಆ್ಯವ್ರೋ-748 ಸರಕು ಸಾಗಣೆ ವಿಮಾನಗಳ ಸ್ಥಾನದಲ್ಲಿ ಹೊಸತು ಬರಲಿವೆ.

ಇದು ಪ್ರಥಮ: ಮಿಲಿಟರಿ ಉದ್ದೇಶಕ್ಕಾಗಿ ದೇಶದಲ್ಲಿ ಇದೇ ಮೊದಲ ಬಾರಿಗೆ ಖಾಸಗಿ ಕಂಪನಿಯಿಂದ ವಿಮಾನ ತಯಾರಿಸಲಾಗುತ್ತದೆ. ಭಾರತದಲ್ಲಿ ಟಾಟಾ ಸಮೂಹ ವಿಮಾನ ಉತ್ಪಾದನೆ ಮಾಡಲಿದೆ. ಒಪ್ಪಂದದ ಅನ್ವಯ ಏರ್‌ಬಸ್‌ ಸ್ಪೇನ್‌ನ ಸೆವೆಲ್ಲೆ ಘಟಕದಿಂದ 16 ಯುದ್ಧ ವಿಮಾನಗಳನ್ನು ನಾಲ್ಕು ವರ್ಷಗಳ ಅವಧಿಯಲ್ಲಿ ನೀಡಲಿದೆ. ಅಂದರೆ, 2023 ಸೆಪ್ಟೆಂಬರ್‌ ಮತ್ತು 2025ರ ಆಗಸ್ಟ್‌ ಒಳಗಾಗಿ ಈ ವಿಮಾನಗಳು ಲಭ್ಯವಾಗಲಿದೆ.ಉಳಿದ 40 ಯುದ್ಧ ವಿಮಾನಗಳನ್ನು ಗುಜರಾತ್‌ನ ವಡೋದರಾದಲ್ಲಿ ಸ್ಥಾಪಿಸಲಾಗುವ ಹೊಸ ಘಟಕದಲ್ಲಿ ಉತ್ಪಾದಿಸಲಾಗುತ್ತದೆ. ಈ ವಿಮಾನವನ್ನು ನಾಗರಿಕ ಉದ್ದೇಶಗಳಿಗಾಗಿ ಕೂಡ ಬಳಕೆ ಮಾಡಲು ಅವಕಾಶ ಇದೆ. ಐರೋಪ್ಯ ಒಕ್ಕೂಟದ ಹೊರಭಾಗದಲ್ಲಿ ಇದೇ ಮೊದಲ ಬಾರಿಗೆ  ಸಿ-295 ವಿಮಾನಗಳನ್ನು ಉತ್ಪಾದಿಸಲಾಗುತ್ತಿದೆ.

ವಡೋದರಾ ಘಟಕದಲ್ಲಿ ಉತ್ಪಾದನೆಯಾಗುವ ವಿಮಾನಗಳು ಸ್ಪೇನ್‌ನ ಸೆವೆಲ್ಲೆ ಘಟಕದಲ್ಲಿ ಉತ್ಪಾದನೆಯಾಗುವ ವಿಮಾನಗಳಷ್ಟೇ ಗುಣಮಟ್ಟವನ್ನು ಹೊಂದಿರಲಿದೆ ಎಂದು ರಕ್ಷಣಾ ಕಾರ್ಯದರ್ಶಿ ಅಜಯ ಕುಮಾರ್‌ ಹೇಳಿದ್ದಾರೆ.

ದೇಶೀಯ ಉತ್ಪನ್ನಗಳ ಬಳಕೆ
ವಡೋದರಾ ಘಟಕದಲ್ಲಿ ಉತ್ಪಾದಿಸಲಾಗುವ ಹೊಸ ಮಾದರಿಯ ವಿಮಾನಗಳಿಗೆ ಭಾರತ್‌ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ ಮತ್ತು ಭಾರತ್‌ ಡೈನಾಮಿಕ್ಸ್‌ ಲಿಮಿಟೆಡ್‌ ಉತ್ಪಾದಿಸಿದ ಇಲೆಕ್ಟ್ರಾನಿಕ್ಸ್‌ ವಸ್ತುಗಳನ್ನೇ ಬಳಕೆ ಮಾಡಲಾಗುತ್ತದೆ. ಒಟ್ಟು 56 ವಿಮಾನಗಳಿಗೆ ಅವುಗಳನ್ನು ಬಳಕೆ ಮಾಡಲಾಗುತ್ತದೆ ಎಂದು ಐಎಎಫ್ ಉಪ ಮುಖ್ಯಸ್ಥ ಏರ್‌ ಮಾರ್ಷಲ್‌ ಸಂದೀಪ್‌ ಸಿಂಗ್‌ ಗೇಳಿದ್ದಾರೆ. ಐಎಎಫ್ ಗೆ ಬೇಕಾಗಿರುವ ವಿಮಾನಗಳ ಉತ್ಪಾದನೆ ಪೂರ್ತಿಗೊಂಡ ಬಳಿಕ ಕಂಪನಿಗೆ ಉಳಿದ ವಿಮಾನಗಳನ್ನು ರಫ್ತು ಮಾಡಲೂ ಅವಕಾಶ ನೀಡಲಾಗುತ್ತದೆ ಎಂದರು.

ವಿಶೇಷತೆಗಳೇನು?
* ಮೊದಲ ಬಾರಿಗೆ ದೇಶದಲ್ಲಿ ರಕ್ಷಣಾ ಉದ್ದೇಶಕ್ಕಾಗಿ ಖಾಸಗಿ ಕಂಪನಿಯಿಂದ ವಿಮಾನ ಉತ್ಪಾದನೆ
* ಐರೋಪ್ಯ ಒಕ್ಕೂಟದಿಂದ ಮೊದಲ ಬಾರಿಗೆ ಸಿ-295 ಉತ್ಪಾದನೆ ಮಾಡಲು ಸಿದ್ಧತೆ
* 16-ನಾಲ್ಕು ವರ್ಷಗಳಲ್ಲಿ ಸಿಗುವ ವಿಮಾನಗಳು
* 40-ವಡೋದರಾದಲ್ಲಿ ಉತ್ಪಾದನೆ ಯಾಗಲಿರುವ ವಿಮಾನಗಳು
* 21,935 ಕೋಟಿ ರೂ.- ಯೋಜನೆಯ ಒಟ್ಟು ಮೌಲ್ಯ

ಟಾಪ್ ನ್ಯೂಸ್

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ  ಮುಂಚೂಣಿಯಲ್ಲಿದ್ದಾರೆ!

Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ ಮುಂಚೂಣಿಯಲ್ಲಿದ್ದಾರೆ!

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Rekha Jhunjhunwala lost Rs 800 crore in a single day!

Share Market; ರೇಖಾ ಜುಂಜುನ್‌ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqeqewqe

Traffic ದಂಡವನ್ನು ತಪ್ಪಿಸಲು ಹೆಲ್ಮೆಟ್‌ ಧರಿಸಿ ಕಾರು ಚಾಲನೆ!

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.