ಎನ್ಇಪಿ ಜಾರಿಯಿಂದ ಸಮಸ್ಯೆ: ವಿಶ್ರಾಂತ ಕುಲಪತಿಗಳ ವೇದಿಕೆ ಆರೋಪ
Team Udayavani, Oct 30, 2022, 6:35 AM IST
ಬೆಂಗಳೂರು: ರಾಜ್ಯದ ಉನ್ನತ ಶಿಕ್ಷಣ ಇಲಾಖೆಯು ದೇಶದಲ್ಲೇ ಮೊದಲ ರಾಜ್ಯವಾಗಿ “ರಾಷ್ಟ್ರೀಯ ಶಿಕ್ಷಣ ನೀತಿ-2020′ ಅನ್ನು ತರಾತುರಿ ಯಲ್ಲಿ ಜಾರಿಗೊಳಿಸಿದ ಪರಿಣಾಮ ವಿದ್ಯಾರ್ಥಿಗಳ ನೋಂದಣಿ, ಕೋರ್ಸ್ಗಳ ಆಯ್ಕೆ, ಎನ್ಇಪಿ ಬಗ್ಗೆ ಉಪನ್ಯಾಸಕರಿಗೆ ಅಗತ್ಯ ಜ್ಞಾನವಿಲ್ಲದೆ ಸಾಕಷ್ಟು ಸಮಸ್ಯೆಯಾಗಿದೆ ಎಂದು ಕರ್ನಾಟಕ ವಿಶ್ರಾಂತ ಕುಲಪತಿಗಳ ವೇದಿಕೆ ಗಂಭೀರ ಆರೋಪ ಮಾಡಿದೆ.
ಈ ಸಂಬಂಧ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆ ಅಧ್ಯಕ್ಷ ಡಾ| ಕೆ.ಎಸ್.ರಂಗಪ್ಪ, ಪ್ರಖರವಾಗಿ ಎನ್ಇಪಿ ಅನುಷ್ಠಾನಗೊಳಿಸಲು ಬಹುಮುಖ್ಯವಾಗಿ ಪ್ರಾಧ್ಯಾಪಕರಿಗೆ ತರಬೇತಿ ನೀಡಬೇಕಿದೆ. ಆದರೆ ಸಾಂಕೇತಿಕವಾಗಿ ತರಬೇತಿ ನೀಡಿರುವುದರಿಂದ ಪ್ರಾಧ್ಯಾಪಕರಿಗೆ ಪೂರ್ಣ ಪ್ರಮಾಣದಲ್ಲಿ ಎನ್ಇಪಿ ಅರ್ಥವಾಗದ ಪರಿಣಾಮ ತಾಂತ್ರಿಕವಾಗಿ ಸಾಕಷ್ಟು ಸಮಸ್ಯೆಯಾಗುತ್ತಿದೆ ಎಂದರು.
ಪದವಿ ಕಾಲೇಜುಗಳಲ್ಲಿ ಬಹುತೇಕ ಅತಿಥಿ ಉಪನ್ಯಾಸಕರೇ ಇರುವುದರಿಂದ ಅವರಿಗೆ ಎನ್ಇಪಿ ಬಗ್ಗೆ ತರಬೇತಿ ನೀಡಬೇಕಿದೆ. ತರಬೇತಿ ನೀಡಲು ವಿಶ್ರಾಂತ ಕುಲಪತಿಗಳ ವೇದಿಕೆ ಸಿದ್ಧವಿದೆ. ಆರಂಭಿಕ ಹಂತವಾಗಿ ಮೈಸೂರು ವಿಶ್ವವಿದ್ಯಾನಿಲಯದ 12 ಕಾಲೇಜುಗಳಲ್ಲಿ ತರಬೇತಿ ನೀಡಿದ್ದೇವೆ. ಕರಾವಳಿ, ಕಲಬುರಗಿ ಮತ್ತು ಧಾರವಾಡ ವಿಭಾಗಗಳಲ್ಲಿಯೂ ತರಬೇತಿ ನೀಡಬೇಕಿದೆ ಎಂದು ಸಲಹೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ