ಟಿ20 ವಿಶ್ವಕಪ್‌: ಇಂದು ಭಾರತಕ್ಕೆ ದಕ್ಷಿಣ ಆಫ್ರಿಕಾ ಎದುರಾಳಿ


Team Udayavani, Oct 30, 2022, 8:00 AM IST

ಟಿ20 ವಿಶ್ವಕಪ್‌: ಇಂದು ಭಾರತಕ್ಕೆ ದಕ್ಷಿಣ ಆಫ್ರಿಕಾ ಎದುರಾಳಿ

ಪರ್ತ್‌: ಸಾಂಪ್ರದಾಯಿಕ ಎದುರಾಳಿ ಪಾಕಿಸ್ಥಾನ ಮತ್ತು ನೆದರ್ಲೆಂಡ್‌ ವಿರುದ್ಧ ಭರ್ಜರಿ ಗೆಲುವು ಸಾಧಿಸುವ ಮೂಲಕ ಟಿ20 ವಿಶ್ವಕಪ್‌ ಅಭಿಯಾನವನ್ನು ಆರಂಭಿಸಿರುವ ಭಾರತವು ರವಿವಾರ ಪರ್ತ್‌ ಕ್ರೀಡಾಂಗಣದಲ್ಲಿ ನಡೆಯುವ ಸೂಪರ್‌ 12ರ ಹೋರಾಟದಲ್ಲಿ ದಕ್ಷಿಣ ಆಫ್ರಿಕಾದ ಸವಾಲನ್ನು ಎದುರಿಸಲಿದೆ.

ನೆದರ್ಲೆಂಡ್‌ ವಿರುದ್ಧ ಅರ್ಧಶತಕ ದಾಖಲಿಸಿರುವ ರೋಹಿತ್‌ ಶರ್ಮ ಮತ್ತು ಸೂರ್ಯಕುಮಾರ್‌ ಯಾದವ್‌ ಮತ್ತೆ ಫಾರ್ಮ್ ಗೆ ಮರಳಿರುವುದನ್ನು ದೃಡಪಡಿಸಿದ್ದಾರೆ. ಅವರಿಬ್ಬರ ಜತೆ ವಿರಾಟ್‌ ಕೊಹ್ಲಿ ಶ್ರೇಷ್ಠ ಫಾರ್ಮ್ ನಲ್ಲಿರುವುದು ತಂಡದ ಬ್ಯಾಟಿಂಗ್‌ ಬಲವನ್ನು ಹೆಚ್ಚಿಸಿದೆ. ಅವರು ಮೊದಲ ಎರಡು ಪಂದ್ಯಗಳಲ್ಲಿ ಅಜೇಯ ಅರ್ಧಶತಕ ಹೊಡೆದಿರುವುದು ಸಮಾ ಧಾನ ತಂದಿದೆ.

ಸೆಮಿಫೈನಲ್‌ ಭರವಸೆಯನ್ನು ಬಲಗೊಳಿಸಲು ಭಾರತಕ್ಕೆ ಈ ಪಂದ್ಯ ಅತ್ಯಂತ ಪ್ರಮುಖವಾಗಿದೆ. ಹೀಗಾಗಿ ತಂಡದಲ್ಲಿ ಯಾವುದೇ ಬದಲಾವಣೆ ಮಾಡದಿರಲು ಭಾರತ ನಿರ್ಧರಿಸಿದೆ. ಕೊಹ್ಲಿ ಅವರ ಮೇಲೆ ತಂಡ ಮತ್ತೆ ನಂಬಿಕೆ ಇಟ್ಟಿದ್ದು ಉತ್ತಮ ನಿರ್ವಹಣೆ ನೀಡುವ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಬೌಲಿಂಗ್‌ನಲ್ಲಿ ಮೊಹಮ್ಮದ್‌ ಶಮಿ, ಭುವನೇಶ್ವರ್‌ ಕುಮಾರ್‌ ಮತ್ತು ಅರ್ಷದೀಪ್‌ ಸಿಂಗ್‌ ಪರ್ತ್‌ ಪಿಚ್‌ನ ಪರಿಪೂರ್ಣ ಲಾಭ ಎತ್ತುವ ನಿರೀಕ್ಷೆಯಿದೆ.
ಪರ್ತ್‌ ಪಿಚ್‌ ವೇಗದ ದಾಳಿಗೆ ಬಹ ಳಷ್ಟು ನೆರವು ನೀಡುವುದರಿಂದ ಭಾರತ ಎಚ್ಚರಿಕೆಯಿಂದ ಆಡಬೇಕಾಗಿದೆ. ದಕ್ಷಿಣ ಆಫ್ರಿಕಾ ತಂಡದಲ್ಲಿ ವಿಶ್ವದ ಅತೀ ವೇಗದ ಬೌಲರ್‌ ಖ್ಯಾತಿಯ ಕಾಗಿಸೊ ರಬಾಡ, ಆ್ಯನ್ರಿಚ್‌ ನೋರ್ಜೆ ಸಹಿತ ಇತರರು ವೇಗದ ದಾಳಿ ಎಸೆಯುವಲ್ಲಿ ಪರಿಣತಿ ಹೊಂದಿದ್ದಾರೆ. ಅವರ ದಾಳಿಯನ್ನು ಭಾರತೀಯ ಆಟಗಾರರು ಯಾವ ರೀತಿ ಎದುರಿಸುತ್ತಾರೆ ಎಂಬುದರ ಮೇಲೆ ಈ ಪಂದ್ಯದ ಫ‌ಲಿತಾಂಶ ನಿರ್ಧಾರವಾಗಲಿದೆ. ಒಂದು ವೇಳೆ ಭಾರತದ ಅಗ್ರ ಆಟಗಾರರು ದಕ್ಷಿಣ ಆಫ್ರಿಕಾದ ದಾಳಿಯನ್ನು ಮೆಟ್ಟಿ ನಿಂತರೆ ಭಾರತ ಗೆಲ್ಲುವ ಸಾಧ್ಯತೆಯಿದೆ.
ಭಾರತ ಈ ಪಂದ್ಯದಲ್ಲಿ ಗೆದ್ದರೆ ಸೆಮಿಫೈನಲ್‌ಗೇರುವುದು ಖಚಿತ. ಲೀಗ್‌ ಹಂತದಲ್ಲಿ ಭಾರತ ಮತ್ತೆ ಬಾಂಗ್ಲಾದೇಶ ಮತ್ತು ಜಿಂಬಾಬ್ವೆ ವಿರುದ್ಧ ಆಡಲಿದೆ.

ದಕ್ಷಿಣ ಆಫ್ರಿಕಾ ಬಲಿಷ್ಠ
ಬ್ಯಾಟಿಂಗ್‌ ಮತ್ತು ಬೌಲಿಂಗ್‌ನಲ್ಲಿ ದಕ್ಷಿಣ ಆಫ್ರಿಕಾ ಅತ್ಯಂತ ಬಲಿಷ್ಠ ತಂಡಗಳಲ್ಲಿ ಒಂದಾಗಿದೆ. ಉತ್ತಮ ಫಾರ್ಮ್ನಲ್ಲಿರುವ ಕ್ವಿಂಟನ್‌ ಡಿ ಕಾಕ್‌, ರಿಲೀ ರೋಸ್ಯೊ ಮತ್ತು ಡೇವಿಡ್‌ ಮಿಲ್ಲರ್‌ ಬ್ಯಾಟಿಂಗ್‌ನಲ್ಲಿ ಮಿಂಚುವ ಸಾಧ್ಯತೆಯಿದೆ. ಬೌಲಿಂಗ್‌ ಪಡೆಯೂ ಬಲಿಷ್ಠವಾಗಿದೆ. ಗೆಲ್ಲಲೇಬೇಕಾದ ಒತ್ತಡದಲ್ಲಿರುವ ದಕ್ಷಿಣ ಆಫ್ರಿಕಾ ಈ ಪಂದ್ಯದಲ್ಲಿ ಶ್ರೇಷ್ಠ ನಿರ್ವಹಣೆ ನೀಡುವುದು ಖಂಡಿತ.

23 ಬಾರಿ ಮುಖಾಮುಖಿ
ಭಾರತ ಮತ್ತು ದಕ್ಷಿಣ ಆಫ್ರಿಕಾ ಇಷ್ಟ್ರವರೆಗೆ 23 ಬಾರಿ ಮುಖಾಮುಖಿಯಾಗಿದ್ದು 13 ಬಾರಿ ಭಾರತ ಜಯಭೇರಿ ಬಾರಿಸಿದೆ. 9 ಬಾರಿ ದಕ್ಷಿಣ ಆಫ್ರಿಕಾ ಗೆಲುವು ಸಾಧಿಸಿದ್ದರೆ ಒಂದು ಪಂದ್ಯದಲ್ಲಿ ಫ‌ಲಿತಾಂಶ ಬಂದಿರಲಿಲ್ಲ.

ಅಗ್ರಸ್ಥಾನಕ್ಕಾಗಿ ಹೋರಾಟ
ಈ ಪಂದ್ಯದ ಫ‌ಲಿತಾಂಶವು ಬಣ ಎರಡರ ಅಗ್ರಸ್ಥಾನವನ್ನು ಯಾರು ಪಡೆಯುತ್ತಾರೆಂದು ನಿರ್ಧರಿಸುವ ಸಾಧ್ಯತೆಯಿದೆ. ಸದ್ಯ ಎರಡರಲ್ಲಿ ಗೆದ್ದಿರುವ ಭಾರತ ಅಗ್ರಸ್ಥಾನದಲ್ಲಿದ್ದರೆ ದಕ್ಷಿಣ ಆಫ್ರಿಕಾ ಮೂರಂಕದೊಂದಿಗೆ ದ್ವಿತೀಯ ಸ್ಥಾನದಲ್ಲಿದೆ. ಬಾಂಗ್ಲಾದೇಶ ವಿರುದ್ಧ ಭರ್ಜರಿ ಗೆಲುವು ದಾಖಲಿಸಿದ್ದ ದಕ್ಷಿಣ ಆಫ್ರಿಕಾ ತಂಡ ಜಿಂಬಾಬ್ವೆ ವಿರುದ್ಧ ದ ಪಂದ್ಯ ಮಳೆಯಿಂದ ರದ್ದುಗೊಂಡ ಹಿನ್ನೆಲೆಯಲ್ಲಿ ಭಾರೀ ನಿರಾಶೆ ಅನುಭವಿಸಿತು. ಇದರಿಂದ ದಕ್ಷಿಣ ಆಫ್ರಿಕಾ ಎರಡಂಕ ಗಳಿಸುವ ಅವಕಾಶದಿಂದ ವಂಚಿತವಾಯಿತು.

ಪರ್ತ್‌ ಪಿಚ್‌ ಸ್ಥಿತಿ
ಪರ್ತ್‌ನ ಪಿಚ್‌ ಆಸ್ಟ್ರೇಲಿಯದ ಅತೀವೇಗದ ಪಿಚ್‌ಗಳಲ್ಲಿ ಒಂದಾಗಿದೆ. ಈ ಪಿಚ್‌ ಬಹಳಷ್ಟು ಬೌನ್ಸ್‌ ಮತ್ತು ವೇಗದ ನಡೆಯನ್ನು ಹೊಂದಿದೆ. ಇಲ್ಲಿ ಬ್ಯಾಟಿಂಗ್‌ ಮಾಡಲು ಬಹಳ ಕಷ್ಟ. ಆದರೆ ಬ್ಯಾಟಿಂಗ್‌ ನಡೆಸಲು ಸಮರ್ಥರಾದರೆ ಉತ್ತಮ ನಿರ್ವಹಣೆ ನೀಡಲು ಸಾಧ್ಯ. ಸಂಜೆಯ ಹೊತ್ತಿಗೆ ಮಂಜು ಬೀಳುವ ಸಾಧ್ಯತೆಯಿದೆ. ಹೀಗಾಗಿ ಟಾಸ್‌ ಗೆದ್ದ ನಾಯಕರು ಮೊದಲು ಬೌಲಿಂಗ್‌ ಆಯ್ಕೆ ಮಾಡುವ ಸಾಧ್ಯತೆಯಿದೆ.

ಇಂದಿನ ಪಂದ್ಯ
ಬಾಂಗ್ಲಾದೇಶ – ಜಿಂಬಾಬ್ವೆ
ಆರಂಭ: ಬೆಳಗ್ಗೆ 8.30
ಸ್ಥಳ: ಬ್ರಿಸ್ಟನ್‌

ನೆದರ್ಲೆಂಡ್‌ – ಪಾಕಿಸ್ಥಾನ
ಆರಂಭ: ಅಪರಾಹ್ನ 12.30
ಸ್ಥಳ: ಪರ್ತ್‌

ಭಾರತ – ದಕ್ಷಿಣ ಆಫ್ರಿಕಾ
ಆರಂಭ: ಸಂಜೆ 4.30
ಸ್ಥಳ: ಪರ್ತ್‌
ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್

 

ಟಾಪ್ ನ್ಯೂಸ್

1-wqqewqeq

Hubli; ಜನರಲ್ಲಿ ಪೊಲೀಸರ ಬಗ್ಗೆ ನಂಬಿಕೆ ಹೋಗಿದೆ: ಎಡಿಜಿಪಿ ಹಿತೇಂದ್ರ

1-qweeqw

Kundapura; ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿಯೂ ವಿಧಿವಶ!

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

13-doctor

Health: ಸದಾ ಎಚ್ಚರದಿಂದಿರಿ: ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

12-

Heat Weather: ಹಬೆಯಾಡುತ್ತಿರುವ ವಸುಂಧರೆ

11-candle

UV Fusion: ಆಯಸ್ಸು ಅಳಿಯುವ ಮುನ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ದಿ.ಕಾರ್ತಿಕ್ ಹೇಳಿದ್ದೇನು

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ಕಾರ್ತಿಕ್ ಹೇಳಿದ್ದೇನು

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

1-qweewq

IPL ಇಂದು ಲೀಗ್‌ ಪಂದ್ಯಗಳಿಗೆ ತೆರೆ: KKR vs RR ಟೇಬಲ್‌ ಟಾಪರ್‌ಗಳ ಸೆಣಸಾಟ

MUST WATCH

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

ಹೊಸ ಸೇರ್ಪಡೆ

1-wqqewqeq

Hubli; ಜನರಲ್ಲಿ ಪೊಲೀಸರ ಬಗ್ಗೆ ನಂಬಿಕೆ ಹೋಗಿದೆ: ಎಡಿಜಿಪಿ ಹಿತೇಂದ್ರ

1-qweeqw

Kundapura; ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿಯೂ ವಿಧಿವಶ!

1-aaa

Kaup: ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.