ಸರ್ಕಾರಿ ಸ್ಮಶಾನ ಕಬಳಿಕೆಗೆ ನಕಲಿ ದಾಖಲೆ ಸೃಷ್ಟಿ


Team Udayavani, Oct 30, 2022, 11:38 AM IST

ಸರ್ಕಾರಿ ಸ್ಮಶಾನ ಕಬಳಿಕೆಗೆ ನಕಲಿ ದಾಖಲೆ ಸೃಷ್ಟಿ

ನೆಲಮಂಗಲ: ನಕಲಿ ದಾಖಲೆ ಸೃಷ್ಟಿಸಿ ಮೂರ್‍ನಾಲ್ಕು ಕೋಟಿ ಬೆಲೆ ಬಾಳುವ ಸ್ಮಶಾನ ಜಾಗವನ್ನು ಕಬಳಿಕೆ ಮಾಡಿದ್ದಾರೆ ಎಂದು ಟಿ.ಬೇಗೂರು ಗ್ರಾಪಂ ಕಚೇರಿ ಎದುರು ಅಣಕು ಶವಯಾತ್ರೆ ಮಾಡಿ ಗ್ರಾಮಸ್ಥರು ಪ್ರತಿಭಟನೆ ಮಾಡಿದರು.

ತಾಲೂಕಿನ ಟಿ.ಬೇಗೂರು ಗ್ರಾಮದಲ್ಲಿ ಮಾತ್ರ ಜಿಲ್ಲಾಧಿಕಾರಿ ಗ್ರಾಮಕ್ಕೆ ನೀಡಿದ್ದ ಸರ್ವೆ ನಂ. 247ರ 2.20 ಎಕರೆ ಜಮೀನುನಲ್ಲಿ 1.10 ಎಕರೆ ಜಾಗವನ್ನು 307, 308, 309ರ ಸರ್ವೆ ನಂಬರ್‌ಗೆ ಸೇರಿಸಿ ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳಿಗೆ ಖಾತೆ ಮಾಡಿದ್ದಾರೆ. ಟಿ.ಬೇಗೂರಿನ ಪಿಡಿಒ ಈ ಜಾಗಕ್ಕೆ ಇ-ಖಾತೆ ನೀಡಿದ್ದು, ಅಧಿಕಾರಿಗಳ ವೈಫ‌ಲ್ಯ ಹಾಗೂ ಭ್ರಷ್ಟಾಚಾರಕ್ಕೆ ಸ್ಮಶಾನ ಜಾಗ ಬಲಿಯಾಗಿದೆ. ನಮಗೆ ನ್ಯಾಯ ಸಿಗುವವರೆಗೂ ಗ್ರಾಪಂ ಕಚೇರಿ ಬಿಟ್ಟು ಹೋಗುವುದಿಲ್ಲ ಎಂದುಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಪಿಡಿಒ ಹಣ ಪಡೆದ ಆರೋಪ: ಟಿ.ಬೇಗೂರು ಗ್ರಾಪಂನ ಪಿಡಿಒ ಉಷಾ ಅವರು ಆರ್‌ಎಸ್‌ಎಸ್‌ ಮುಖ್ಯಸ್ಥ ಪ್ರಭಾಕರ್‌ ಭಟ್‌ ಹೆಸರು ಹೇಳಿಕೊಂಡು ಧಮ್ಕಿ ಹಾಕುತ್ತಿದ್ದಾರೆ. ಸಮಯಕ್ಕೆ ಸರಿ ಯಾಗಿ ಕಚೇರಿಗೆ ಬರುತ್ತಿಲ್ಲ ಎಂಬ ಆರೋಪದ ಬೆನ್ನಲ್ಲೆ, ಹಣ ಪಡೆದು ಸ್ಮಶಾನದ ಜಾಗಕ್ಕೆ ಇ-ಖಾತೆ ಮಾಡಿದ್ದು, ಪ್ರಶ್ನೆ ಮಾಡಿದರೆ ಪ್ರಭಾವಿಗಳ ಒತ್ತಡವಿತ್ತು ಮಾಡಿದ್ದೇನೆ ಎಂದು ಬೇಜಾವಬ್ದಾರಿ ಉತ್ತರ ನೀಡುತ್ತಿದ್ದಾರೆ. ಇಂತಹ ಪಿಡಿಒ ಅವರನ್ನು ಅಮಾ ನತು ಮಾಡಿ ಕಾನೂನು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಅಣುಕು ಶವಯಾತ್ರೆ: ಸ್ಮಶಾನ ಜಾಗವನ್ನು ಕಬಳಿಕೆ ಮಾಡಲು ಕೆಲ ಗ್ರಾಪಂ ಸದಸ್ಯರು, ತಾಪಂ ಮಾಜಿ ಸದಸ್ಯರು, ಪಿಡಿಒ, ಕಂದಾಯ ಇಲಾಖೆ ಅಧಿಕಾರಿಗಳು, ಭೂಮಾಪನ ಇಲಾಖೆಯ ಅಧಿಕಾರಿಗಳು ಶಾಮೀಲಾಗಿದ್ದು, ಇವರು ನಮ್ಮ ಗ್ರಾಮದ ಪಾಲಿಗೆ ಸತ್ತಿದ್ದಾರೆ. ಮೇಲಾಧಿಕಾರಿಗಳು ನ್ಯಾಯ ನೀಡ ಬೇಕು ಎಂದು ಗ್ರಾಮಸ್ಥರು ಹಾಗೂ ಕಾಂಗ್ರೆಸ್‌ ಮುಖಂಡರು ಅಣುಕು ಶವಯಾತ್ರೆ ಮಾಡಿದರು.

ತಹಶೀಲ್ದಾರ್‌ ಭೇಟಿ, ಭರವಸೆ: ಪ್ರತಿಭಟನೆ ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್‌ ಮಂಜು ನಾಥ್‌ ಸರ್ವೆ ಮಾಡಿ ಸ್ಮಶಾನ ಜಾಗವನ್ನು ಸರ್ಕಾರದ ವ್ಯಾಪ್ತಿಗೆ ತರುವುದು ನಮ್ಮ ಹೊಣೆ. ಮುಂದಿನ ತಿಂಗಳು ಸ್ಥಳದ ಸರ್ವೆ ನಡೆಸಿ ದಾಖಲಾತಿ ಪರಿಶೀಲನೆ ಮಾಡಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುತ್ತದೆ ಎಂದು ಗ್ರಾಮಸ್ಥರಿಗೆ ಭರವಸೆ ನೀಡಿ ಸ್ಮಶಾನ ಜಾಗದ ಸ್ಥಳ ಪರಿಶೀಲನೆ ಮಾಡಿದರು.

ಉಗ್ರ ಹೋರಾಟ: ಭರವಸೆಯಂತೆ ನಮ್ಮ ಗ್ರಾಮದ ಸ್ಮಶಾನ ಉಳಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರಹೋರಾಟ ಮಾಡಲಾಗುತ್ತದೆ. ಹೆದ್ದಾರಿಯಲ್ಲಿ ಕುಳಿತು ಅಹೋರಾತ್ರಿ ಧರಣಿ ಮಾಡಲು ಸಿದ್ದರಿದ್ದೇವೆ ಎಂದು ಯೂತ್‌ ಕಾಂಗ್ರೆಸ್‌ ಅಧ್ಯಕ್ಷ ನಾರಾಯಣಗೌಡ, ಮುಖಂಡ ಶ್ರೀನಿವಾಸ್‌, ಬಾಲಾಜಿಗೌಡ ಎಚ್ಚರಿಕೆ ನೀಡಿದ್ದಾರೆ.

ಇಒ ಮೋಹನ್‌ಕುಮಾರ್‌, ಪಿಡಿಒ ಉಷಾ, ಸ್ಥಳೀಯ ಮುಖಂಡ ಬಾಲಾಜಿಗೌಡ, ಮಲ್ಲಯ್ಯ, ನಾರಾಯಣಗೌಡ, ಕರಿವರ ದಯ್ಯ, ಪ್ರಕಾಶ್‌, ಸಿದ್ದಲಿಂಗಯ್ಯ, ರಮೇಶ್‌, ಪರಮೇಶ್‌, ಹನುಮಯ್ಯ, ಬೈರೇಗೌಡ, ನಾರಾಯಣಗೌಡ, ತಿಮ್ಮಾರಸಯ್ಯ, ಕೆಂಪರಾಜು ಮತ್ತಿತರರು ಇದ್ದರು.

ಟಾಪ್ ನ್ಯೂಸ್

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqeqewqe

Traffic ದಂಡವನ್ನು ತಪ್ಪಿಸಲು ಹೆಲ್ಮೆಟ್‌ ಧರಿಸಿ ಕಾರು ಚಾಲನೆ!

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.