200 ದಿನಗಳನ್ನು ಪೂರೈಸಿದ ಮಹಾಲಿಂಗಪುರ ತಾಲೂಕು ಹೋರಾಟ!

ತಾಲೂಕು ಆಗುವರೆಗೂ ಹೋರಾಟ ನಿರಂತರ : ತಾಲೂಕು ಘೋಷಣೆ ಯಾವಾಗ?

Team Udayavani, Oct 30, 2022, 5:24 PM IST

8

ಮಹಾಲಿಂಗಪುರ: ಪಟ್ಟಣವನ್ನು ತಾಲೂಕು ಕೇಂದ್ರವನ್ನಾಗಿಸಬೇಕೆಂದು ಆಗ್ರಹಿಸಿ ಪಕ್ಷಾತೀತ ಮತ್ತು ಜಾತ್ಯಾತೀತವಾಗಿ ಕಳೆದ ಏಪ್ರೀಲ್ 14 ರಂದು ಪಟ್ಟಣದ ಚನ್ನಮ್ಮ ವೃತ್ತದಲ್ಲಿ ವೇದಿಕೆ ನಿರ್ಮಿಸಿ, ತಾಲೂಕು ಹೋರಾಟ ವೇದಿಕೆಯ ನೇತೃತ್ವದಲ್ಲಿ ಪ್ರಾರಂಭಿಸಿರುವ ಅನಿರ್ಧಿಷ್ಟಾವಧಿ ಹೋರಾಟವು ಅ.30ರ ರವಿವಾರ 200 ದಿನಗಳನ್ನು ಪೂರೈಸಿದೆ.

ಮೊದಲು ಮುಧೋಳ ತಾಲೂಕಿನಲ್ಲಿದ್ದ ಮಹಾಲಿಂಗಪುರ ಪಟ್ಟಣವನ್ನು 2018ರಲ್ಲಿ ಹಿಂದಿನ ಕಾಂಗ್ರೆಸ್ ಸರಕಾರ ನೂತನ ರಬಕವಿ-ಬನಹಟ್ಟಿ ತಾಲೂಕಿಗೆ ಸೇರ್ಪಡೆ ಮಾಡಿತ್ತು. ಇದರಿಂದ ಪಟ್ಟಣದ ಜನತೆಗೆ ಮುಧೋಳಕ್ಕಿಂತ ನೂತನ ರಬಕವಿ-ಬನಹಟ್ಟಿ ತಾಲೂಕು ಮತ್ತೇ 10 ಕೀ.ಮಿ ಸಮೀಪವಾಯಿತು.

30 ವರ್ಷಗಳ ಬೇಡಿಕೆ:     

ಪಟ್ಟಣವನ್ನು ತಾಲೂಕು ಕೇಂದ್ರ ಮಾಡಬೇಕೆಂಬುದು ಕಳೆದ 30 ವರ್ಷಗಳ ನಿರಂತರ ಬೇಡಿಕೆಯಾಗಿದೆ. ಈ ಹಿಂದೆ ತಾಲೂಕಿಗಾಗಿ 2003ರಲ್ಲಿ ಪಟ್ಟಣದ ಬಸವವೃತ್ತದಲ್ಲಿ ಒಂದು ತಿಂಗಳ ಕಾಲ ಪ್ರತಿಭಟನೆ ಮಾಡಲಾಗಿತ್ತು. ಅಂದು ನಡೆದ ತಾಲೂಕು ಹೋರಾಟದ ಫಲವಾಗಿ ಟಿ.ಎಂ.ಹುಂಡೆಕಾರ ವರದಿಯು ನಿಯೋಜಿತ ನಕ್ಷೆಯೊಂದನ್ನು ಸಿದ್ದಪಡಿಸಿ ಸರಕಾರಕ್ಕೆ ಶಿಪಾರಸ್ಸು ಮಾಡಿತ್ತು. ಅದರಂತೆ ಅಂದಿನ ಕಂದಾಯ ಸಚಿವ ಬಿ.ಎಂ.ಶ್ರೀಕಂಠಯ್ಯ ಅವರು ಏಪ್ರೀಲ್ 1ರಂದು ಮಹಾಲಿಂಗಪುರಕ್ಕೆ ಉಪತಹಶೀಲ್ದಾರ ಹುದ್ದೆಯ ಮಂಜೂರಿಯ ಆದೇಶ ಪತ್ರವನ್ನು ಕಳಿಸಿದ್ದರಿಂದ ಹೋರಾಟವನ್ನು ಮೊಟಕುಗೊಳಿಸಲಾಗಿತ್ತು. ಮುಂದೆ ರಾಜಕೀಯ ಇಚ್ಛಾಶಕ್ತಿ ಕೊರತೆಯಿಂದ ಹೋರಾಟ ಮುಂದುವರೆಯಲಿಲ್ಲ, ತಾಲೂಕು ಆಗಲೇ ಇಲ್ಲ.

ಉದ್ಘಾಟನೆಗೆ ಮಾತ್ರ ಸೀಮಿತ ? : 

ತೇರದಾಳ ಮತಕ್ಷೇತ್ರದ ಅಂದಿನ ಶಾಸಕಿ, ಸಚಿವೆ ಉಮಾಶ್ರೀ ಅವರು 9-2-2018ರಂದು ಅಧಿಕೃತವಾಗಿ ರಬಕವಿ-ಬನಹಟ್ಟಿ ತಾಲೂಕಾ ಪ್ರಾರಂಭೋತ್ಸವ ಸಮಾರಂಭವನ್ನು ಮಾಡಿದ್ದರು. ಆದರೆ ನೂತನ ತಾಲೂಕು ಘೋಷಣೆಯಾಗಿ 4 ವರ್ಷ 8 ತಿಂಗಳು ಕಳೆದರು ಸಹ, ಇದುವರೆಗೆ ಎಲ್ಲಾ ಇಲಾಖೆಗಳು ಪೂರ್ಣ ಪ್ರಮಾಣದಲ್ಲಿ ಸ್ಥಳಾಂತರಗೊಂಡಿಲ್ಲ. ಇದರಿಂದಾಗಿ ಸಾರ್ವಜನಿಕರು ಮನೆ-ಹೊಲ ಖರೀದಿಗಾಗಿ ಮುಧೋಳಕ್ಕೆ, ತಹಶೀಲ್ದಾರ ಕೆಲಸಗಳಿಗಾಗಿ ರಬಕವಿ-ಬನಹಟ್ಟಿಗೆ, ಮಾಶಾಸನ, ಜಾತಿ-ಆದಾಯ ಪತ್ರಗಳಿಗಾಗಿ ತೇರದಾಳಕ್ಕೆ ಸೇರಿದಂತೆ ಇಂದಿಗೂ ಮೂರು ಕಡೆಗೆ ಅಲೆದಾಡುವದು ತಪ್ಪಿಲ್ಲ.

2019ರಿಂದ ಮತ್ತೇ ಹೋರಾಟ ತೀವೃ:             ‌‌

ಮಾಜಿ ಸಿಎಂ ಕುಮಾರಸ್ವಾಮಿಯವರು 2018 ವಿಧಾನಸಭಾ ಚುನಾವಣೆ ಪ್ರಚಾರಕ್ಕೆ ಬಂದಾಗ ನಾನು ಸಿಎಂ ಆದರೆ ತೇರದಾಳ ತಾಲೂಕಾ ಕೇಂದ್ರ ಮಾಡುವುದಾಗಿ ಘೋಷಿಸಿದ್ದರು. ಬದಲಾದ ರಾಜಕೀಯ ಬೆಳವಣಿಗೆಯಲ್ಲಿ ಮೈತ್ರಿ ಸರ್ಕಾರದ ಸಿಎಂ ಖುರ್ಚಿ ಅಲಂಕರಿಸಿದ ನಂತರ ಕುಮಾರಸ್ವಾಮಿಯವರು 2019-20ನೇ ಸಾಲಿನ ಬಜೆಟ್‍ನಲ್ಲಿ ತೇರದಾಳನ್ನು ನೂತನ ತಾಲೂಕು ಘೋಷಿಸಿದರು.

ತೇರದಾಳ ತಾಲೂಕು ಘೋಷಣೆ ನಂತರ 2019ರಿಂದ ಮಹಾಲಿಂಗಪುರ ತಾಲೂಕು ಹೋರಾಟ ತೀವ್ರ ಸ್ಪರೂಪ ಪಡೆದುಕೊಂಡು, 2019ರಿಂದ 2021ರವರೆಗೆ ಹಲವು ಬಾರಿ ಬೆಂಗಳೂರು ನಿಯೋಗ ತೆರಳಿ ಮುಖ್ಯಮಂತ್ರಿ, ಕಂದಾಯ ಮಂತ್ರಿಗಳಿಗೆ ಮನವಿ ಸಲ್ಲಿಸಿ, ತಾಲೂಕು ಕೇಂದ್ರಕ್ಕಾಗಿ ಒತ್ತಾಯಿಸಲಾಗಿತ್ತು.

ಅಂತಿಮವಾಗಿ ಅನಿರ್ಧಿಷ್ಟಾವಧಿ ಹೋರಾಟ : 

ಮೂರು ತಾಲೂಕಿಗೆ ಅಲೆದಾಡುವ ತ್ರಿಶಂಕು ಸ್ಥಿತಿಯಲ್ಲಿ ಸಿಕ್ಕಿ ಒದ್ದಾಡುವಂತಿರುವಾಗಲೇ ಈ ಮೊದಲು ರಬಕವಿ-ಬನಹಟ್ಟಿ ತಾಲೂಕಿಗೆ ಸೇರ್ಪಡೆಯಾಗಿದ್ದ ಮಹಾಲಿಂಗಪುರ ಪಟ್ಟಣ ಮತ್ತು ಸುತ್ತಮುತ್ತಲಿನ ಹಳ್ಳಿಗಳನ್ನು ನೂತನ ತೇರದಾಳ ತಾಲೂಕಿಗೆ ಸೇರ್ಪಡೆ ಮಾಡಿದ್ದ 2022ರ ಏಪ್ರೀಲ್‍ನಲ್ಲಿ ತಾಲೂಕು ಹೋರಾಟ ತೀವ್ರ ಸ್ವರೂಪಕ್ಕೆ ತಿರುಗಿ, ತೇರದಾಳ ತಾಲೂಕಿಗೆ ಸೇರಿಸಿದ್ದನ್ನು ವಿರೋಧಿಸಿ ರಬಕವಿ-ಬನಹಟ್ಟಿ ತಾಲೂಕಿನಲ್ಲಿಯೇ ಉಳಿಸಿಕೊಂಡು ಮಹಾಲಿಂಗಪುರ ತಾಲೂಕಿಗಾಗಿ ಅನಿರ್ಧಿಷ್ಟಾವಧಿ ಹೋರಾಟ ಆರಂಭಿಸಲಾಯಿತು.

ಅಭೂತಪೂರ್ವ ಬೆಂಬಲ :

ಕಳೆದ ಏಪ್ರೀಲ್ 14ರಂದು ಪ್ರಾರಂಭವಾದ ತಾಲೂಕು ಹೋರಾಟಕ್ಕೆ ಮಹಾಲಿಂಗಪುರ ಹಾಗೂ ಸುತ್ತಮುತ್ತಲಿನ 14 ಗ್ರಾಮಗಳ ಜನತೆಯು ಪಕ್ಷಾತೀತ ಮತ್ತು ಅಭೂತಪೂರ್ವ ಬೆಂಬಲ ವ್ಯಕ್ತಪಡಿಸಿದ್ದಾರೆ. ಎಲ್ಲಾ ಪಕ್ಷಗಳ ಹಾಲಿ, ಮಾಜಿ ಶಾಸಕರು, ಸಚಿವರು, ಪಕ್ಷದ ಮುಖಂಡರು ಹೋರಾಟ ವೇದಿಕೆಗೆ ಆಗಮಿಸಿ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. ಕಳೆದ ಸೆಪ್ಟೆಂಬರ್ 15ರಂದು ತಾಲೂಕು ಹಾರಾಟ ವೇದಿಕೆ ಹಾಗೂ ಸರ್ವಪಕ್ಷಗಳ ನಿಯೋಗದಿಂದ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ. ನಮ್ಮ ಸರ್ಕಾರದ ಅವಧಿಯಲ್ಲೇ ಸಿಹಿಸುದ್ದಿ ನೀಡುವ ಭರವಸೆ ಕೊಟ್ಟಿರುವ ಕಾರಣ, ಮಹಾಲಿಂಗಪುರ ತಾಲೂಕು ಹೋರಾಟವು 200 ದಿನಗಳ ನಂತರವು ಮುಂದುವರೆಯಲಿದೆ.‌ ‌‌‌‌‌‌‌

ಜನಪ್ರತಿನಿಧಿಗಳ ಮೇಲೆ ಹೆಚ್ಚಿದ ಒತ್ತಡ :    ‌        ‌‌‌‌‌‌‌‌‌‌       ‌‌‌‌‌‌‌‌

ಈಗಾಗಲೇ ತಾಲೂಕು ಹೋರಾಟ 200 ದಿನಗಳನ್ನು ಪೂರೈಸಿದ್ದು ಮತ್ತು ಇನ್ನು 5-6 ತಿಂಗಳಲ್ಲೇ ವಿಧಾನಸಭಾ ಚುನಾವಣೆಯು ಸಮೀಪಿಸುತ್ತಿರುವ ಕಾರಣ, ಅಂತಿಮವಾಗಿ 2023ರ ಫೆಬ್ರುವರಿ ತಿಂಗಳಲ್ಲಿ ನಡೆಯಬಹುದಾದ ಚುನಾವನೆಯ ಬಜೆಟ್ ಅಧಿವೇಶನದಲ್ಲಿಯಾದರೂ, ರಾಜ್ಯ ಸರ್ಕಾರದ ಮೇಲೆ ಒತ್ತಡ ತಂದು ಮಹಾಲಿಂಗಪುರ ಪಟ್ಟಣವನ್ನು ಶತಾಯಗತಾಯ ತಾಲೂಕು ಕೇಂದ್ರವನ್ನಾಗಿ ಘೋಷಿಸಬೇಕಾದ ಬಹುದೊಡ್ಡ ಜವಾಬ್ದಾರಿ, ಒತ್ತಡ ತೇರದಾಳ ಮತಕ್ಷೇತ್ರದ ಶಾಸಕ ಸಿದ್ದು ಸವದಿ, ಮುಧೋಳ ಶಾಸಕರು, ಸಚಿವರಾದ ಗೋವಿಂದ ಕಾರಜೋಳ, ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಸಿ.ಪಾಟೀಲ, ಸಂಸದ ಪಿ.ಸಿ.ಗದ್ದಿಗೌಡರ ಅವರ ಹೆಗಲ ಮೇಲಿದೆ.

-ಚಂದ್ರಶೇಖರ ಮೋರೆ

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.