ಡಬಲ್ ಸೆಂಚುರಿ ಬಾರಿಸಿದ ಮಹಾಲಿಂಗಪುರ ತಾಲೂಕು ಹೋರಾಟ

ಶೀಘ್ರ ತಾಲೂಕು ಘೋಷಣೆಗೆ ಮುಖಂಡರ ಒತ್ತಾಯ

Team Udayavani, Oct 30, 2022, 6:44 PM IST

10

ಮಹಾಲಿಂಗಪುರ: ರವಿವಾರ ಮಹಾಲಿಂಗಪುರ ತಾಲೂಕು ಹೋರಾಟವು 200 ದಿನಗಳನ್ನು ಪೂರೈಸಿದ ಹಿನ್ನಲೆಯಲ್ಲಿ ತಾಲೂಕು ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ಚನಬಸು ಹುರಕಡ್ಲಿಯವರು ತಮ್ಮ ಬಸವನಗರದ ಗುರು-ಹಿರಿಯರು, ಮಹಿಳೆಯರು, ಯುವಕರು ಸೇರಿದಂತೆ ನೂರಾರು ಜನರೊಂದಿಗೆ ಡಬಲ್ ಸೆಂಚೂರಿ ಹೋರಾಟದಲ್ಲಿ ಭಾಗವಹಿಸಿ ಅಭೂತಪೂರ್ವ ಬೆಂಬಲ ಸೂಚಿಸಿದರು.

ಅದ್ದೂರಿ ಪ್ರತಿಭಟನಾ ಮೆರವಣಿಗೆ :

200ನೇ ದಿನದ ತಾಲೂಕು ಹೋರಾಟದ ನಿಮಿತ್ತ ಪುರಸಭೆ ಸದಸ್ಯೆ ಸವಿತಾ ಹುರಕಡ್ಲಿ, ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ಚನಬಸು ಹುರಕಡ್ಲಿ ಅವರ ನೇತೃತ್ವದಲ್ಲಿ ಬಸವನಗರ ಬಸವೇಶ್ವರ ಸಮುದಾಯ ಭವನದಿಂದ ಬಸವವೃತ್ತ, ಡಬಲ ರಸ್ತೆ, ವಿವೇಕ ವೃತ್ತ, ನಡಚೌಕಿ, ಜವಳಿ ಬಜಾರ, ಗಾಂಧಿವೃತ್ತ ಮಾರ್ಗವಾಗಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ, ಚನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಶೀಘ್ರ ತಾಲೂಕು ಘೋಷಣೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಗೆ ವಿಶೇಷ ಮೆರಗು:

ಬಸವನಗರದಿಂದ ಹೋರಾಟ ವೇದಿಕೆವರೆಗೆ ನಡೆದ ಬೃಹತ್ ಪ್ರತಿಭಟನಾ ಜಾಥಾದಲ್ಲಿ ನಾಲ್ಕು ಕುದುರೆಗಳ ಮೇಲೆ ಛತ್ರಪತಿ ಶಿವಾಜಿ ಮಹಾರಾಜರು, ಕಿತ್ತೂರ ಚನ್ನಮ್ಮ, ಸಂಗೊಳ್ಳಿ ರಾಯಣ್ಣ ವೇಷಭೂಷಣ ಧರಿಸಿ ಜಾಥಾದಲ್ಲಿ ಭಾಗವಹಿಸಿದ್ದರು.

ತೆರೆದ ಜೀಪ್‌ನಲ್ಲಿ ಅಂಬೇಡ್ಕರ್, ಗಾಂಧೀಜಿ, ಝಾನ್ಸಿರಾಣಿ ಲಕ್ಮೀ ಬಾಯಿ ಸೇರಿದಂತೆ ವಿವಿಧ ರಾಷ್ಟ್ರಪುರುಷರ ವೇಷದಲ್ಲಿ ಭಾಗವಹಿಸಿದ್ದ ಮಕ್ಕಳು ಗಮನ ಸೆಳೆದರು. ಹಾಸ್ಯ ಕಲಾವಿದ ರಾಜು ಗೆದ್ದೆಪ್ಪನವರ ತಲೆಗುಂಡು ಹೊಡೆಸಿಕೊಂಡು ಮಹಾತ್ಮ ಗಾಂಧಿ ವೇಷಧಲ್ಲಿ ಪ್ರತಿಭಟನೆಯ ಜಾಥಾ ಮತ್ತು ಹೋರಾಟ ವೇದಿಕೆಯಲ್ಲಿ ಸಂಜೆವರೆಗೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು. ಜಾಥಾದಲ್ಲಿ ಭಾಗವಹಿಸಿದ್ದ ಹಲವರು ಗಾಂಧಿ ಛದ್ಮವೇಷಧಾರಿಗಳೊಂದಿಗೆ ಸೆಲ್ಪಿ ತೆಗೆದುಕೊಂಡು ಸಂಭ್ರಮಿಸಿದರು.

ಶೀಘ್ರ ತಾಲೂಕು ಘೋಷಣೆಗೆ ಒತ್ತಾಯ :

ತಾಲಕು ಹೋರಾಟ ವೇದಿಕೆ ಪ್ರಧಾನ ಕಾರ್ಯದರ್ಶಿ ಚನಬಸು ಹುರಕಡ್ಲಿ ಮಾತನಾಡಿ, ಮಹಾಲಿಂಗಪುರ ತಾಲೂಕು ಆಗಲು ಎಲ್ಲಾ ರೀತಿಯಲ್ಲಿಯೂ ಯೋಗ್ಯವಾದ ಪಟ್ಟಣವಾಗಿದೆ. ಹೋರಾಟವು ಈಗಾಗಲೇ 200 ದಿನಗಳನ್ನು ಪೂರೈಸಿರುವುದರಿಂದ ತೇರದಾಳ ಮತಕ್ಷೇತ್ರದ ಶಾಸಕರು ಸರ್ಕಾರದ ಮೇಲೆ ಒತ್ತಡ ಹೇರಿ ಶೀಘ್ರ ತಾಲೂಕು ಕೇಂದ್ರವನ್ನಾಗಿ ಘೋಷಿಸಬೇಕೆಂದು ಒತ್ತಾಯಿಸಿದರು.

ನೇಕಾರ ಮುಖಂಡ ಅಂಬಾದಾಸ ಕಾಮೂರ್ತಿ, ರನ್ನ ಬೆಳಗಲಿ ಗ್ರಾ.ಪಂ. ಮಾಜಿ ಅಧ್ಯಕ್ಷ ಸಿದ್ದುಗೌಡ ಪಾಟೀಲ, ರೈತ ಸಂಘದ ಗಂಗಾಧರ ಮೇಟಿ, ಸುಭಾಸ ಶಿರಬೂರ, ಬಂದು ಪಕಾಲಿ, ಆಮ ಆದ್ಮಿಯ ಅರ್ಜುನ ಹಲಗಿಗೌಡರ, ಹೋರಾಟ ವೇದಿಕೆ ಅಧ್ಯಕ್ಷ ಸಂಗಪ್ಪ ಹಲ್ಲಿ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಮೋರೆ, ಖಜಾಂಚಿಗಳಾದ ನಿಂಗಪ್ಪ ಬಾಳಿಕಾಯಿ, ಮಹಾದೇವ ಮೇಟಿ, ಮಹಿಳಾ ಸಂಘದ ಭಾರತಿ ಹಿಟ್ಟಿನಮಠ, ಕಾಂಗ್ರೆಸ್ ಮುಖಂಡ ಮಲ್ಲಪ್ಪ ಸಿಂಗಾಡಿ ಸೇರಿದಂತೆ ಹಲವರು ಮಾತನಾಡಿ 30 ವರ್ಷಗಳ ಬೇಡಿಕೆ ಹಾಗೂ ಎಲ್ಲಾ ರೀತಿಯಲ್ಲಿಯೂ ಯೋಗ್ಯವಾದ ಮಹಾಲಿಂಗಪುರ ಪಟ್ಟಣವನ್ನು ಅತಿ ಶೀಘ್ರದಲ್ಲೇ ತಾಲೂಕು ಕೇಂದ್ರವನ್ನಾಗಿ ಘೋಷಿಸಬೇಕೆಂದು ಜನಪ್ರತಿನಿಧಿಗಳು ಮತ್ತು ಸರ್ಕಾರಕ್ಕೆ ಆಗ್ರಹಿಸಿದರು.

200ನೇ ದಿನ ಬೃಹತ್ ಪ್ರತಿಭಟನಾ ಮೆರವಣಿಗೆ ಮತ್ತು ಹೋರಾಟದಲ್ಲಿ ಡಾ| ಅಜೀತ ಕನಕರಡ್ಡಿ, ಎಸ್.ಎಂ.ಪಾಟೀಲ, ಶಿವನಗೌಡ ಪಾಟೀಲ, ಭೀಮಪ್ಪ ಪೂಜೇರಿ, ಶ್ರೀಶೈಲಪ್ಪ ಬಾಡನವರ, ಡಾ. ಎಂ.ಬಿ.ಪೂಜೇರಿ, ಸಿದ್ದರಾಮ ಯರಗಟ್ಟಿ, ನ್ಯಾಯವಾದಿ ಎಂ.ಎಸ್.ಮನ್ನಯ್ಯನವರಮಠ, ಪ್ರಕಾಶ ಬಾಡನವರ, ಸಂಜು ಬಾರಕೋಲ, ವೆಂಕಣ್ಣ ಬಿರಾದರ, ಬಸವರಾಜ ಹುಲ್ಯಾಳ, ವಿಜಯ ಸಬಕಾಳೆ, ಆನಂದ ಬೆಳ್ಳಿಕಟ್ಟಿ, ಬಸವರಾಜ ಗಿರಿಸಾಗರ, ಶಿವರಾಜ್ ಕಡಬಲ್ಲವರ, ರವಿ ಗಿರಿಸಾಗರ, ಮಹಾಂತೇಶ ಪಾತ್ರೋಟ, ಹಣಮಂತ ಬಂಡಿವಡ್ಡರ, ಮಹಾಲಿಂಗ ಹುದ್ದಾರ, ಪುರಸಭೆ ಸದಸ್ಯೆ ಸವಿತಾ ಹುರಕಡ್ಲಿ, ಮಹಾನಂದಾ ಗುನಾರಿ, ಭಾರತಿ ಹಿಟ್ಟಿನಮಠ, ಅರುಣಾ ಹಣಗಂಡಿ, ರಾಜಶ್ರೀ ಗಿರಿಸಾಗರ, ಬಸವರಾಜ ಹುರಕಡ್ಲಿ, ತಾಲುಕಾ ಹೋರಾಟ ಸಮಿತಿಯ ಪರಪ್ಪ ಸತ್ತಿಗೇರಿ, ಸಿದ್ದು ಶಿರೋಳ, ಮಾರುತಿ ಕರೋಶಿ, ಮನೋಹರ ಶಿರೋಳ, ಸುರೇಶ ಮಡಿವಾಳರ, ರಪೀಕ್ ಮಾಲದಾರ, ವಿರೇಶ ನ್ಯಾಮಗೌಡ, ಭೀಮಸಿ ಕೌಜಲಗಿ ಸೇರಿದಂತೆ ನೂರಾರು ಜನರು 200ನೇ ದಿನದ ತಾಲೂಕು ಹೋರಾಟದಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.