ಬಂಟ್ವಾಳ: ಬಾವಿ ಸ್ವಚ್ಛಗೊಳಿಸುವಾಗ ನಿತ್ರಾಣಗೊಂಡ ವ್ಯಕ್ತಿಯನ್ನು ರಕ್ಷಿಸಿದ ಅಗ್ನಿಶಾಮಕ
Team Udayavani, Oct 31, 2022, 1:13 PM IST
ಬಂಟ್ವಾಳ: ತಾಲೂಕಿನ ಗಾಣದಪಡ್ಪು ಎಂಬಲ್ಲಿ ಶ್ರೀ. ಬಿ.ವಾಸು ಪೂಜಾರಿ ಎಂಬವರು ಮನೆಯ ಬಾವಿಯನ್ನು ಸ್ವಚ್ಚಗೊಳಿಸಲು ಬಾವಿಗೆ ಇಳಿದ್ದಿದ್ದು, ಸ್ವಚ್ಚತಾ ಕಾರ್ಯ ಮಾಡುವ ವೇಳೆ ನಿತ್ರಾಣಗೊಂಡು ಬಾವಿಯಿಂದ ಮೇಲೆ ಬರಲು ಆಗದಿದ್ದಾಗ ,ಬಂಟ್ವಾಳ ಅಗ್ನಿಶಾಮಕ ಠಾಣೆಯ ತಂಡ ಸ್ಥಳಕ್ಕೆ ತೆರಳಿ ವ್ಯಕ್ತಿಯನ್ನು ರಕ್ಷಿಸಿರುವ ಘಟನೆ ನಡೆದಿದೆ.
ಅಗ್ನಿಶಾಮಕ ಸಿಬ್ಬಂದಿ ನಂದಪ್ಪ ನಾಯ್ಕೋಡಿಯರವರು ಬಾವಿಗೆ ಇಳಿದು ಶ್ರೀ.ಬಿ.ವಾಸು ಪೂಜಾರಿಯವರನ್ನು ಯಾವುದೇ ಪ್ರಾಣಾಪಾಯ ಇಲ್ಲದೆ ಜೀವಂತವಾಗಿ ಮೇಲಕ್ಕೆತ್ತಿ ರಕ್ಷಿಸಲಾಯಿತು.
ಬಂಟ್ವಾಳ ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ಯು.ರವೀಂದ್ರ, ಸಿಬ್ಬಂದಿ ಪುರುಷೋತ್ತಮ, ರೋಹಿತ್, ರುಕ್ಕಯ್ಯ ಅಮೀನ್ ಹಾಗೂ ಗೃಹರಕ್ಷಕ ದಳದ ಸಿಬ್ಬಂದಿ ಜಯಗಣೇಶ್ ಮತ್ತಿತರರು ಕಾರ್ಯಚರಣೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ