ಜನಾರ್ಧನರೆಡ್ಡಿ ಬಳಸಿಕೊಂಡು ಸಿಎಂ ಆದವರು ಕಷ್ಟಕಾಲದಲ್ಲಿ ನೆರವಿಗೆ ನಿಲ್ಲಲಿ: ಯತ್ನಾಳ


Team Udayavani, Nov 1, 2022, 3:03 PM IST

yatnal

ವಿಜಯಪುರ: ಮಾಜಿ ಸಚಿವ ಜನಾರ್ಧನರೆಡ್ಡಿ ಪರಿಶ್ರಮದಿಂದ ಬಿಜೆಪಿ ಗೆದ್ದಿದೆ. ಅವರನ್ನು ಬಳಸಿಕೊಂಡೇ ಕೆಲವರು ಮುಖ್ಯಮಂತ್ರಿಯಾಗಿ ಅಧಿಕಾರದ ಗದ್ದುಗೆ ಏರಿದ್ದಾರೆ. ರೆಡ್ಡಿ ಅವರಿಂದ ನೆರವು ಪಡೆದವರು ಕಷ್ಟಕಾಲದಲ್ಲಿ ಅವರ ರಕ್ಷಣೆಗೆ ಧಾವಿಸಲಿ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಪರೋಕ್ಷವಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಕುಟುಕಿದರು.

ಮಂಗಳವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಷ್ಟ ಕಾಲದಲ್ಲಿ ತಮ್ಮ ಬೆಂಬಲಕ್ಕೆ ಬಾರದ ಬಿಜೆಪಿ ಪಕ್ಷದ ನಾಯಕರ ಮೇಲೆ ಮಾಜಿ ಸಚಿವ ಜನಾರ್ದನರೆಡ್ಡಿ ಅವರಿಗೆ ಮುನಿಸು ಸಹಜವಾಗಿದೆ. ಪಕ್ಷದ ಹಿರಿಯರು ಸರಿಪಡಿಸುತ್ತಾರೆ ಎಂಬ ವಿಶ್ವಾಸವಿದೆ ಎಂದರು.

ಒಂದು ಕಾಲದಲ್ಲಿ ರೆಡ್ಡಿ ಅವರಿಂದ ಬಿಜೆಪಿಗೆ ಅನುಕೂಲ ಮಾಡಿಕೊಂಡು ಮುಖ್ಯಮಂತ್ರಿ ಆಗಿದ್ದಾರೆ. ಅಂಥವರು ಜನಾರ್ದನರೆಡ್ಡಿ ಸಹಾಯಕ್ಕೆ ಹೋಗಬೇಕಿದೆ ಎಂದು ಪರೋಕ್ಷವಾಗಿ ಮಾಜಿ ಸಿಎಂ ಯಡಿಯೂರಪ್ಪ ವಿರುದ್ದ ಗುಡುಗಿದರು.

ಇದನ್ನೂ ಓದಿ:ನ.8 ಚಂದ್ರಗ್ರಹಣ: ಧರ್ಮಸ್ಥಳ; ದೇವರ ದರ್ಶನದ ಸಮಯ ಬದಲಾವಣೆ

ರಾಜ್ಯ ಸಚಿವ ಸಂಪುಟ ವಿಸ್ತರಣೆಯಾದರೂ ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಯಾರಾದರೂ ಸಚಿವರಾಗಲಿ. ಉತ್ತಮ ಆಡಳಿತ ನೀಡುವ ಸಚಿವರನ್ನು ನಮ್ಮ ಜಿಲ್ಲೆಗೆ ಉಸ್ತುವಾರಿ ಮಾಡಿ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಹೇಳಿದ್ದೇನೆ. ಯಾರನ್ನೇ ಉಸ್ತುವಾರಿ ಸಚಿವರನ್ನಾಗಿ ನೇಮಿಸಿದರೂ ನನ್ನ ತಕರಾರು ಇಲ್ಲದೇ ಸ್ವಾಗತಿಸುತ್ತೇನೆ ಎಂದರು.

ಈಗಿರುವ ಪರಿಸ್ಥಿತಿಯಲ್ಲಿ ನನಗಂತೂ ಸಚಿವ ಸಂಪುಟ ವಿಸ್ತರಣೆಯಾಗುತ್ತದೆ ಎಂಬ ನಿರೀಕ್ಷೆ ಇಲ್ಲ. ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೂ ಸಚಿವ ಸಂಪುಟ ವಿಸ್ತರಣೆ ಮಾಡುವ ಆಸಕ್ತಿ ಇಲ್ಲ. ಸಂಪುಟ ವಿಸ್ತರಣೆ ಮಾಡಿದರೆ ಸಹಜವಾಗಿ ಅಸಮಾಧಾನ, ಭಿನ್ನಮತ ಏಳುತ್ತದೆ. ಹೀಗಾಗಿ ಈ ಗೊಂದಲದ ಗೊಡವೆಯೇ ಬೇಡವೆಂದು ಸುರಕ್ಷಿತವಾಗಿ ಇನ್ನು ಆರು ತಿಂಗಳು ರಕ್ಷಣಾತ್ಮಕವಾಗಿ ಅಧಿಕಾರ ನಡೆಸಲು ಬಯಸಿದ್ದಾರೆ ಎಂದು ವ್ಯಾಖ್ಯಾನಿಸಿದರು.

ಬಣಜಿಗ ಸಮಾಜದ ಅವಹೇಳನ ಮಾತನಾಡಿದ್ದೇನೆಂದು ಕೆಲವರು ನನ್ನ ವಿರುದ್ದ ಅನಗತ್ಯವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬಣಜಿಗ ಸಮುದಾಯದ ವಿರುದ್ದ ನನ್ನನ್ನು ಎತ್ತಿಕಟ್ಟಲು ಕೆಲವರು ಉದ್ದೇಶಪೂರ್ವಕವಾಗಿ ಈ ಕೆಲಸದಲ್ಲಿ ತೊಡಗಿದ್ದಾರೆ. ಹೀಗೆಲ್ಲಾ ಮಾಡಿದರೆ ಅವರ ಜನಪ್ರತಿನಿಧಿಗಳ ಸಂಖ್ಯೆ ಕಡಿಮೆ ಆಗಲಿದೆ. ಅದನ್ನು ಗಂಭೀರವಾಗಿ ತಿಳಿದುಕೊಳ್ಳಬೇಕು. ಹೀಗೆ ಮಾಡುತ್ತ ಸಾಗಿದರೆ ಭವಿಷ್ಯದಲ್ಲಿ ಅವರ ಮಹಾನ್ ಮೇರು ನಾಯಕನೂ ಔಟ್ ಆದರೆ ಆಶ್ಚರ್ಯವಿಲ್ಲ ಎಂದು ಪರೋಕ್ಷವಾಗಿ ತಮ್ಮ ರಾಜಕೀಯ ವಿರೋಧಿ ನಾಯಕರನ್ನು ಕುಟುಕಿದರು.

ಟಾಪ್ ನ್ಯೂಸ್

Kadaba ಕಾರು ಚರಂಡಿಗೆ ಬಿದ್ದು ಮಂಡ್ಯ ಮೂಲದ ವ್ಯಕ್ತಿ ಸಾವು

Kadaba ಕಾರು ಚರಂಡಿಗೆ ಬಿದ್ದು ಮಂಡ್ಯ ಮೂಲದ ವ್ಯಕ್ತಿ ಸಾವು

women trafficking

Honnali; ಕೆಲಸಕ್ಕೆಂದು ಕರೆದುಕೊಂಡು ಒಂದು ಲಕ್ಷ ರೂ ಗೆ ಮಹಿಳೆಯ ಮಾರಾಟ!

ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು

Bidar; ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ

11-gadaga

ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Kadaba ಕಾರು ಚರಂಡಿಗೆ ಬಿದ್ದು ಮಂಡ್ಯ ಮೂಲದ ವ್ಯಕ್ತಿ ಸಾವು

Kadaba ಕಾರು ಚರಂಡಿಗೆ ಬಿದ್ದು ಮಂಡ್ಯ ಮೂಲದ ವ್ಯಕ್ತಿ ಸಾವು

3 students of Indian origin passed away in Georgia

Georgia ಕಾರು ಅಪಘಾತ: ಭಾರತ ಮೂಲದ 3 ವಿದ್ಯಾರ್ಥಿಗಳ ಸಾವು

ಎನ್‌ಇಪಿ ರದ್ದು, ರಾಜಕೀಯ ಪ್ರೇರಿತ: ಬೊಮ್ಮಾಯಿ

Bidar; ಎನ್‌ಇಪಿ ರದ್ದು ರಾಜಕೀಯ ಪ್ರೇರಿತ: ಬೊಮ್ಮಾಯಿ

women trafficking

Honnali; ಕೆಲಸಕ್ಕೆಂದು ಕರೆದುಕೊಂಡು ಒಂದು ಲಕ್ಷ ರೂ ಗೆ ಮಹಿಳೆಯ ಮಾರಾಟ!

Bangla MP who came to Kolkata goes missing

ಕೋಲ್ಕತಾಗೆ ಬಂದ ಬಾಂಗ್ಲಾ ಸಂಸದ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.