ಜಿಲ್ಲೆಯ ತಾಣಗಳಿಗೆ ಪ್ರವಾಸಿಗರ ಲಗ್ಗೆ


Team Udayavani, Nov 2, 2022, 4:42 PM IST

tdy-17

ಮಂಡ್ಯ: ದಸರಾ, ದೀಪಾವಳಿ ಹಾಗೂ ಕನ್ನಡ ರಾಜ್ಯೋತ್ಸವ ದಿನದಲ್ಲಿ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಲಗ್ಗೆ ಇಡುತ್ತಿದ್ದು, ಕೆಆರ್‌ಎಸ್‌, ರಂಗನತಿಟ್ಟು ಹಾಗೂ ಗಗನಚುಕ್ಕಿ ಫಾಲ್ಸ್‌ ಹೆಚ್ಚು ಮಂದಿ ಭೇಟಿ ನೀಡಿದ್ದಾರೆ. 2020 ಹಾಗೂ 2021ರಲ್ಲಿ ಕೊರೊನಾ ಸಂದರ್ಭದಲ್ಲಿ ಬಂದ್‌ ಆಗಿದ್ದರಿಂದ ನಷ್ಟ ಉಂಟಾಗಿತ್ತು. ಆದರೆ, 2022ರಲ್ಲಿ ಯಾವುದೇ ಕೊರೊನಾ ಸೋಂಕಿನ ಭಯವಿಲ್ಲದ ಪರಿಣಾಮ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ.

ಕೆಆರ್‌ಎಸ್‌ಗೆ ಒಂದು ಲಕ್ಷ ಮಂದಿ: ವಿಶ್ವ ಪ್ರಸಿದ್ಧವಾಗಿರುವ ಜಿಲ್ಲೆಯ ಕೃಷ್ಣರಾಜಸಾಗರ ಜಲಾಶಯಕ್ಕೆ ದಸರಾ ಹಬ್ಬದ ಸಂದರ್ಭದಲ್ಲಿ ಪ್ರತಿದಿನ 10 ಸಾವಿರಕ್ಕೂ ಹೆಚ್ಚು ಮಂದಿ ಭೇಟಿ ನೀಡಿದ್ದಾರೆ. ನಂತರ ದಿನಗಳಲ್ಲಿ 6ರಿಂದ 7 ಸಾವಿರ ಮಂದಿ ಆಗಮಿಸಿದ್ದಾರೆ. ಕಳೆದ 20 ದಿನಗಳಲ್ಲಿ ಸುಮಾರು ಲಕ್ಷಕ್ಕೂ ಹೆಚ್ಚು ಮಂದಿ ಕೆಆರ್‌ಎಸ್‌ ಜಲಾಶಯ, ಬೃಂದಾವನಕ್ಕೆ ಭೇಟಿ ನೀಡಿದ್ದಾರೆ.

ರಂಗನತಿಟ್ಟಿಗೂ ಭೇಟಿ: ದಸರಾ ವೇಳೆ ಪ್ರತಿದಿನ 5 ಸಾವಿರಕ್ಕೂ ಹೆಚ್ಚು ಮಂದಿ ಪ್ರವಾಸಿಗರು ಶ್ರೀರಂಗಪಟ್ಟಣದ ರಂಗನತಿಟ್ಟು ಪಕ್ಷಿಧಾಮಕ್ಕೂ ಭೇಟಿ ನೀಡಿದ್ದಾರೆ. ಆದರೆ ಈ ವರ್ಷ ಹೆಚ್ಚು ಮಳೆಯಾಗುತ್ತಿರುವುದರಿಂದ ಕಾವೇರಿ ನದಿಯಲ್ಲಿ ನೀರು ಹೆಚ್ಚಾದ ಸಂದರ್ಭಗಳಲ್ಲಿ ಪಕ್ಷಿಧಾಮದಲ್ಲಿ ಆಗಾಗ್ಗೆ ಬೋಟಿಂಗ್‌ ಸ್ಥಗಿತಗೊಳಿಸಲಾಗಿತ್ತು. ಇದರಿಂದ ಪ್ರವಾಸಿಗರ ಸಂಖ್ಯೆ ಕ್ಷೀಣಿಸಿದೆ. ಇದೇ ತಿಂಗಳ 12ರಿಂದ ಮತ್ತೆ ಬೋಟಿಂಗ್‌ ಸ್ಥಗಿತಗೊಳಿಸಲಾಗಿತ್ತು. ನಂತರ ನಾಲ್ಕು ದಿನಗಳಿಂದ ಬೋಟಿಂಗ್‌ ಪುನಾರಂಭಿಸಲಾಗಿದೆ. ಇದರಿಂದ ಪ್ರತಿದಿನ 2500ಕ್ಕೂ ಹೆಚ್ಚು ಮಂದಿ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ.

ಗಗನಚುಕ್ಕಿ ವೈಭವ ಕಣ್ತುಂಬಿಕೊಳ್ಳುತ್ತಿರುವ ಪ್ರವಾಸಿಗರು: ಮತ್ತೂಂದು ಆಕರ್ಷಣೀಯ ಸ್ಥಳವೆಂದರೆ ಮಳವಳ್ಳಿ ತಾಲೂಕಿನ ಗಗನಚುಕ್ಕಿ ಜಲಪಾತ. ಕಳೆದ ಇಪ್ಪತ್ತು ವರ್ಷಗಳಲ್ಲೇ ಪ್ರಸ್ತುತ ವರ್ಷ ಅತಿ ಹೆಚ್ಚು ದಾಖಲೆ ಮಳೆಯಾಗಿದೆ. ಇದರಿಂದ ಕೆಆರ್‌ಎಸ್‌ ಜಲಾಶಯಕ್ಕೆ ಅತಿ ಹೆಚ್ಚು ನೀರು ಹರಿದು ಬರುತ್ತಿದೆ. ಕೆಆರ್‌ಎಸ್‌ ಹಾಗೂ ಕಬಿನಿ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಯುತ್ತಿರುವುದರಿಂದ ಗಗನಚುಕ್ಕಿ ಫಾಲ್ಸ್‌ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. ಕೆಆರ್‌ಎಸ್‌ ಹಾಗೂ ರಂಗನತಿಟ್ಟು ಪಕ್ಷಿಧಾಮಕ್ಕೆ ಭೇಟಿ ನೀಡಿದವರು ಗಗನಚುಕ್ಕಿಗೂ ಭೇಟಿ ನೀಡಿ ಕಣ್ತುಂಬಿಕೊಳ್ಳುತ್ತಿದ್ದಾರೆ.

ಬಲಮುರಿ, ಎಡಮುರಿಗೂ ಭೇಟಿ: ಶ್ರೀರಂಗಪಟ್ಟಣದಲ್ಲೇ ಇರುವ ಎಡಮುರಿ, ಬಲಮುರಿ ಪ್ರವಾಸಿ ತಾಣಗಳಿಗೂ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಅದರಲ್ಲೂ ಶನಿವಾರ, ಭಾನುವಾರ ಹಾಗೂ ವಿಶೇಷ ಹಬ್ಬದ ದಿನಗಳಲ್ಲಿ ಹೆಚ್ಚು ಮಂದಿ ಭೇಟಿ ನೀಡುತ್ತಿದ್ದಾರೆ. ಪ್ರವಾಸಿ ತಾಣಗಳಲ್ಲಿ ಭರ್ಜರಿ ವ್ಯಾಪಾರ : ಕೆಆರ್‌ಎಸ್‌ ಜಲಾಶಯದ ಅಕ್ಕಪಕ್ಕದ ಹೋಟೆಲ್‌, ಸಣ್ಣಪುಟ್ಟ ಅಂಗಡಿ, ಬೀದಿ ಬದಿ ವ್ಯಾಪಾರಿಗಳಿಗೆ ಭರ್ಜರಿ ವ್ಯಾಪಾರವಾಗುತ್ತಿದೆ.

ದಸರಾ ಸಂದರ್ಭದಲ್ಲಿ ಅತಿ ಹೆಚ್ಚು ಪ್ರವಾಸಿಗರು ಆಗಮಿಸುತ್ತಿದ್ದರಿಂದ ಹೋಟೆಲ್‌, ಬೀದಿಬದಿ ವ್ಯಾಪಾರಿಗಳು, ಸಣ್ಣಪುಟ್ಟ ಅಂಗಡಿ ಸೇರಿ ವಿವಿಧ ವರ್ತಕರಿಗೆ ಉತ್ತಮ ವ್ಯಾಪಾರ ನಡೆದಿದೆ. ಗಗನಚುಕ್ಕಿಯಲ್ಲೂ ಹೋಟೆಲ್‌, ಬೀದಿಬದಿ ವ್ಯಾಪಾರಸ್ಥರಿಗೆ ವ್ಯಾಪಾರ ಜೋರಾಗಿದೆ.

ದಸರಾ ವೇಳೆ ಅತಿ ಹೆಚ್ಚು ಪ್ರವಾಸಿಗರು ಕೆಆರ್‌ಎಸ್‌ ಜಲಾಶಯಕ್ಕೆ ಭೇಟಿ ನೀಡಿದ್ದಾರೆ. ಪ್ರತಿದಿನ 10 ಸಾವಿರಕ್ಕೂ ಹೆಚ್ಚು ಮಂದಿ ಭೇಟಿ ನೀಡಿದ್ದರು. ನಂತರ ಪ್ರತಿ ದಿನ 6ರಿಂದ 7 ಸಾವಿರ ಮಂದಿ ಭೇಟಿ ನೀಡಿದ್ದಾರೆ. ಇದುವರೆಗೂ ಒಂದೂವರೆ ಲಕ್ಷಕ್ಕೂ ಹೆಚ್ಚು ಮಂದಿ ಭೇಟಿ ನೀಡಿದ್ದಾರೆ. – ಫಾರೂಕ್‌ ಅಬು, ಎಇಇ, ಕಾವೇರಿ ನೀರಾವರಿ ನಿಗಮ, ಕೆಆರ್‌ಎಸ್‌ ವಿಭಾಗ

ಅ.12ರಿಂದ ನದಿಯಲ್ಲಿ ನೀರು ಹೆಚ್ಚಾಗಿದ್ದರಿಂದ ಬೋಟಿಂಗ್‌ ಸ್ಥಗಿತಗೊಳಿಸಲಾಗಿತ್ತು. ಈಗ ಮತ್ತೆ ನೀರು ಕಡಿಮೆಯಾಗಿರುವುದರಿಂದ ಬೋಟಿಂಗ್‌ ನಡೆಯುತ್ತಿದೆ. ಪ್ರತಿದಿನ 2500ಕ್ಕೂ ಹೆಚ್ಚು ಮಂದಿ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. – ಪುಟ್ಟಮಾದೇಗೌಡ, ಉಪವಲಯ ಅರಣ್ಯಾ ಧಿಕಾರಿ, ರಂಗನತಿಟ್ಟು ಪಕ್ಷಿಧಾಮ

ಟಾಪ್ ನ್ಯೂಸ್

10-uv-fusion

Harekala Hajabba: ಕೋಟಿ ಒಡೆಯನಲ್ಲ, ಆದರೂ ಈತ ಕೋಟಿಗೊಬ್ಬ

ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

LokSabha Election; ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

9-uv-fusion

Pens: ಬಹುರೂಪದಲ್ಲಿ ಲಭ್ಯವಿರುವ ಬಹುಪಯೋಗಿ ಲೇಖನಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-uv-fusion

Harekala Hajabba: ಕೋಟಿ ಒಡೆಯನಲ್ಲ, ಆದರೂ ಈತ ಕೋಟಿಗೊಬ್ಬ

ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

LokSabha Election; ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Brahmavara-ಉಡುಪಿ ಟ್ರಾಫಿಕ್‌ ಜಾಮ್‌ ಸಮಸ್ಯೆ: ಸವಾರರು ಸುಸ್ತೋ ಸುಸ್ತು

Brahmavara-ಉಡುಪಿ ಟ್ರಾಫಿಕ್‌ ಜಾಮ್‌ ಸಮಸ್ಯೆ: ಸವಾರರು ಸುಸ್ತೋ ಸುಸ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.