ಮಂಗಳೂರು : ಅನಧಿಕೃತ ರೈಲ್ವೇ ಆ್ಯಪ್‌ ನಂಬಿ ಬೇಸ್ತು ಬಿದ್ದ ಪ್ರಯಾಣಿಕರು!


Team Udayavani, Nov 3, 2022, 9:31 AM IST

ಮಂಗಳೂರು : ಅನಧಿಕೃತ ರೈಲ್ವೇ ಆ್ಯಪ್‌ ನಂಬಿ ಬೇಸ್ತು ಬಿದ್ದ ಪ್ರಯಾಣಿಕರು!

ಮಂಗಳೂರು : ಕೊಂಕಣ ರೈಲು ಮಾರ್ಗದಲ್ಲಿ ಈಗ ಎಲ್ಲ ರೈಲುಗಳು ಮಾಮೂಲಿ ವೇಳಾಪಟ್ಟಿಯಂತೆ ಸಂಚಾರ ಆರಂಭಿಸಿದ್ದರೂ ಕೆಲವು ಅನಧಿಕೃತ ರೈಲ್ವೇ ಆ್ಯಪ್‌ ಬಳಸುವ ಗ್ರಾಹಕರಿಗೆ ಕೆಲವು ರೈಲುಗಳು ತಪ್ಪಿ ಹೋಗುತ್ತಿರುವುದಾಗಿ ತಿಳಿದುಬಂದಿದೆ.

ಈಗಾಗಲೇ ರೈಲುಗಳು ಮಾನ್ಸೂನ್‌ ವೇಳಾಪಟ್ಟಿ ಅವಧಿ ಮುಗಿದ ಬಳಿಕ ಮಾಮೂಲಿ ವೇಳಾಪಟ್ಟಿಯನ್ವಯ ಸಂಚರಿಸುತ್ತಿವೆ. ಆದರೆ ಕೆಲವೊಂದು ಅನಧಿಕೃತ ರೈಲ್ವೇ ಆ್ಯಪ್‌ಗ್ಳು ಮಾತ್ರ ಹಳೆಯ ವೇಳಾಪಟ್ಟಿಯನ್ನೇ ತೋರಿಸುತ್ತಿರುವ ಕಾರಣ ಅವುಗಳನ್ನು ಬಳಸಿದ ಕೆಲವು ಪ್ರಯಾಣಿಕರಿಗೆ ರೈಲುಗಳು ತಪ್ಪಿಹೋಗುತ್ತಿವೆ.

ನ. 2ರಂದು ದಿಲ್ಲಿಯಿಂದ ತಿರುವನಂತಪುರ ಕಡೆಗೆ ತೆರಳುವ ರಾಜಧಾನಿ ಎಕ್ಸ್‌ಪ್ರೆಸ್‌ ಮಾಮೂಲಿ ವೇಳಾಪಟ್ಟಿಯಂತೆ ಮಧ್ಯಾಹ್ನ 12.10ಕ್ಕೆ ಮಂಗಳೂರು ಸೆಂಟ್ರಲ್‌ನಿಂದ ಹೋಗಿದೆ. ಅನಧಿಕೃತ ಆ್ಯಪ್‌ ಬಳಸಿದ ಪ್ರಯಾಣಿಕರು ಮಾನ್ಸೂನ್‌ ವೇಳಾಪಟ್ಟಿಯನ್ವಯ ಮಧ್ಯಾಹ್ನ 2.15ಕ್ಕೆ ನಿಲ್ದಾಣಕ್ಕೆ ಆಗಮಿಸುವಾಗ ರೈಲು ತೆರಳಿರುವುದು ತಿಳಿದುಬಂದಿದೆ.

ಇಂತಹ ಪ್ರಕರಣಗಳು ಸಂಭವಿಸುವ ಕಾರಣದಿಂದ ಪ್ರಯಾಣಿಕರು ಪರಿಷ್ಕೃತ ವೇಳಾಪಟ್ಟಿಯನ್ನು ನೋಡಿ ಸಮಯ ದೃಢಪಡಿಸಿಕೊಳ್ಳಬೇಕು, ಅದಕ್ಕಾಗಿ ರಾಷ್ಟ್ರೀಯ ರೈಲು ವಿಚಾರಣಾ ವ್ಯವಸ್ಥೆ (ಎನ್‌ಟಿಇಎಸ್‌)ಯನ್ನು ವೆಬ್‌ ಅಥವಾ ಆ್ಯಪ್‌ ಮೂಲಕ ಅಥವಾ 139 ಸಹಾಯವಾಣಿ ನೆರವು ಪಡೆದುಕೊಳ್ಳಬಹುದು. ಈಗಲೂ ಮಾನ್ಸೂನ್‌ ವೇಳಾಪಟ್ಟಿಯನ್ನೇ ತೋರಿಸುತ್ತಿರುವ ಆ್ಯಪ್‌ಗ್ಳನ್ನು ನೋಡಿ ಮೋಸಹೋಗಬಾರದು ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

ಇಂದು ವೆಸ್ಟ್‌ಕೋಸ್ಟ್‌ ವಿಳಂಬ
ತಲಶೆರಿ ಎಟಕ್ಕೋಟ್‌ ರೈಲು ನಿಲ್ದಾಣದ ಮಧ್ಯೆ ಹೊಸ ಸೇತುವೆಯ ಕಾಮಗಾರಿ ಇರುವುದರಿಂದ ನ. 3ರಂದು ನಂ. 22638 ಮಂಗಳೂರು ಸೆಂಟ್ರಲ್‌ – ಚೆನ್ನೈ ಸೆಂಟ್ರಲ್‌ ವೆಸ್ಟ್‌ಕೋಸ್ಟ್‌ ಎಕ್ಸ್‌ಪ್ರೆಸ್‌ ರೈಲಿನ ವೇಳಾಪಟ್ಟಿಯಲ್ಲಿ ವ್ಯತ್ಯಾಸ ಇರಲಿದೆ. ಮಂಗಳೂರು ಸೆಂಟ್ರಲ್‌ನಿಂದ ರಾತ್ರಿ 11.45ರ ಬದಲು 3.30 ಗಂಟೆ ತಡವಾಗಿ ನ. 4ರಂದು ಮುಂಜಾನೆ 3.15ಕ್ಕೆ ತೆರಳಲಿದೆ ಎಂದು ಪ್ರಕಟನೆ ತಿಳಿಸಿದೆ.

ಇದನ್ನೂ ಓದಿ : ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ : ಮಡಿಕೇರಿಯ ತುಫೈಲ್‌ಗೆ ತೀವ್ರ ಶೋಧ

ಟಾಪ್ ನ್ಯೂಸ್

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

D.K ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್‌ ಯಾತ್ರೆ

May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್‌ ಯಾತ್ರೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

Raichur; ಚುನಾವಣೆ ನಿರತ ಬಿಎಲ್‌ಒ ಸಾವು

Raichur; ಚುನಾವಣೆ ಕರ್ತವ್ಯನಿರತ ಬಿಎಲ್‌ಒ ಸಾವು

10-

Koratagere: ಪಟ್ಟಣಕ್ಕೆ 10 ದಿನಕ್ಕೊಮ್ಮೆ ನೀರು ಸರಬರಾಜು

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.