ಮಹದೇವಪುರ: ಕ್ರೇನ್ ಹರಿದು ಬಿ.ಕಾಂ.ವಿದ್ಯಾರ್ಥಿನಿ ಸಾವು
Team Udayavani, Nov 3, 2022, 10:29 PM IST
ಮಹದೇವಪುರ: ಕ್ರೇನ್ ವಾಹನ ಹರಿದ ಪರಿಣಾಮ ಕಾಲೇಜು ವಿದ್ಯಾರ್ಥಿನಿ ಮೃತಪಟ್ಟಿರುವ ದಾರುಣ ಘಟನೆ ವೈಟ್ಫೀಲ್ಡ್ ಸಂಚಾರ ಠಾಣೆ ವ್ಯಾಪ್ತಿಯ ಕನ್ನಮಂಗಲ ಗೈಟ್ ಸಮೀಪ ಜರುಗಿದೆ.
ಕನ್ನಮಂಗಲ ಗ್ರಾಮದಲ್ಲಿ ಪೋಷಕರೊಂದಿಗೆ ವಾಸವಾಗಿದ್ದ ನೂರ್ ಫಿಜ (19) ಮೃತ ದುರ್ದೈವಿ. ಖಾಸಗಿ ಕಾಲೇಜಿನಲ್ಲಿ ಬಿ.ಕಾಂ. ಪದವಿ ವ್ಯಾಸಂಗ ಮಾಡುತ್ತಿದ್ದ ನೂರ್ ಫಿಜ ಕನ್ನಮಂಗಲ ಬಸ್ಸು ನಿಲ್ದಾಣದಿಂದ ಮನೆಗೆ ನಡೆದುಕೊಂಡು ಹೋಗುವ ಸಂದರ್ಭದಲ್ಲಿ ಹಿಂದಿನಿಂದ ಬಂದ ಕ್ರೇನ್ ವಾಹನದ ಚಾಲಕನ ಅಜಾಗರೂಕತೆಯಿಂದ ಮೇಲೆ ನೂರ್ ಫಿಜ ದೇಹದ ಮೇಲೆ ಹರಿದಿದೆ. ಘಟನೆ ಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನೂರ್ ಫಿಜ ಅವ ರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದರೆ, ಚಿಕಿತ್ಸೆ ಫಲಕಾರಿಯಾಗದೆ ಮೆದುಳು ನಿಷ್ಕ್ರಿಯಗೊಂಡು ಸಾವನ್ನಪ್ಪಿದ್ದಾರೆ.
ಚಾಲಕನ ಅಜಾಗರೂಕತೆಯಿಂದ ಯುವತಿಯ ಮೇಲೆ ಕ್ರೇನ್ ವಾಹನ ಹರಿದಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕನ್ನಮಂಗಲ ಗ್ರಾಮದ ಕ್ರೇನ್ ವಾಹನವನ್ನು ಜಪ್ತಿ ಮಾಡಲಾಗಿದ್ದು, ಚಾಲಕನನ್ನು ಸಹ ವಶಕ್ಕೆ ಪಡೆಯಲಾಗಿದೆ ಎಂದು ಪೋಲಿಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!
Swindon Borough ಕೌನ್ಸಿಲ್ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ
W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ
Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು
Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ