ಕಾಂಗ್ರೆಸ್ನಿಂದ ಜಿಲ್ಲಾವಾರು ಸಭೆ: ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕಸರತ್ತು
Team Udayavani, Nov 4, 2022, 10:05 PM IST
ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಕಾಂಗ್ರೆಸ್ ತಯಾರಿ ಆರಂಭಿಸಿದ್ದು, ಜಿಲ್ಲಾವಾರು ಸಭೆ ನಡೆಸುತ್ತಿದೆ.
ಶುಕ್ರವಾರ ಕೆಪಿಸಿಸಿ ಕಚೇರಿಯಲ್ಲಿ ಕೋಲಾರ, ಹಾವೇರಿ, ಹುಬ್ಬಳ್ಳಿ-ಧಾರವಾಡ, ಉತ್ತರ ಕನ್ನಡ ಜಿಲ್ಲೆಗಳ ಸಭೆ ನಡೆಸಿದ ಮುಖಂಡರಿಂದ ಮಾಹಿತಿ ಸಂಗ್ರಹಿಸಲಾಯಿತು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಬಿ.ಕೆ.ಹರಿಪ್ರಸಾದ್ ಸೇರಿ ಹಲವು ನಾಯಕರು ಪಾಲ್ಗೊಂಡಿದ್ದರು.
ಶನಿವಾರ ಹಾಸನ, ದಕ್ಷಿಣ ಕನ್ನಡ, ಬೆಳಗಾವಿ ನಗರ ವ್ಯಾಪ್ತಿಯ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಸಭೆ ನಡೆಯಲಿದೆ. ಇದಾದ ನಂತರ ನ.6 ರಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಭಿನಂದನಾ ಸಮಾವೇಶ ನಡೆಯಲಿದ್ದು, ನ.10 ಮತ್ತು 11 ರಂದು ಮತ್ತೆ ಸಭೆ ನಡೆಯಲಿದೆ.
ನ.10 ರಂದು ಬೆಂಗಳೂರು ಸೆಂಟ್ರಲ್, ಬೆಂಗಳೂರು ಗ್ರಾಮಾಂತರ , ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳ ಸಭೆ, ನ.11 ರಂದು ರಾಯಚೂರು, ವಿಜಯಪುರ, ಬಾಗಲಕೇಟೆ ಜಿಲ್ಲೆಗಳ ಸಭೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್