ಜೆಸಿಬಿ ಪಕ್ಷಗಳಿಂದ ಕರ್ನಾಟಕ ರಾಜ್ಯಕ್ಕೆ ಕುತ್ತು


Team Udayavani, Nov 5, 2022, 4:43 PM IST

tdy-15

ಬೇಲೂರು: ಕರ್ನಾಟಕ ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಸರ್ಕಾರ ಶೇ.40 ರಷ್ಟು ಕಮಿಷನ್‌ ಸರ್ಕಾರವಾಗಿದೆ. ರಾಜ್ಯದಲ್ಲಿ ಕೋಮುಗಲಭೆ ಸೇರಿದಂತೆ ನಾಡಿ ಸೌಹಾರ್ದತೆ ಹಾಳಾಗಿದೆ. ಇನ್ನು ಕಾಂಗ್ರೆಸ್‌ ಮತ್ತು ಜೆಡಿಎಸ್‌ ಸ್ವಾರ್ಥರಾಜಕೀಯ ಪಕ್ಷಗಳಾಗಿದ್ದು ಇಂತಹ ಜೆಸಿಬಿ ಪಕ್ಷಗಳಿಂದ ರಾಜ್ಯಕ್ಕೆ ಕುತ್ತು ಬರಲಿದ್ದು, ಜನತೆ ಸೈದ್ಧಾಂತಿಕ ತತ್ವಗಳನ್ನು ಅಳವಡಿಸಿಕೊಂಡು ಸಂವಿಧಾನದ ಅಡಿಯಲ್ಲಿ ಕೆಲಸ ಮಾಡುವ ಬಿಎಸ್ಪಿ ಪಕ್ಷವನ್ನು ಬೆಂಬಲಿಸಬೇಕು ಎಂದು ಬಿಎಸ್ಪಿ ರಾಜ್ಯ ಉಸ್ತುವಾರಿ ಉತ್ತರ ಪ್ರದೇಶದ ನಿತಿನ್‌ ಸಿಂಗ್‌ ಕರೆ ನೀಡಿದರು.

ಬಹುಜನ ಸಮಾಜ ಪಾರ್ಟಿಯ ವತಿಯಿಂದ ಹಮ್ಮಿಕೊಂಡ ಸಂವಿಧಾನ ಸಂರಕ್ಷಣೆಗಾಗಿ ಕರ್ನಾಟಕ ಜೈಭೀಮ್‌ ಜನಜಾಗೃತಿ ಜಾಥ ಬೇಲೂರಿಗೆ ಆಗಮಿಸಿದ ವೇಳೆ ಪಟ್ಟಣದ ಬಸವೇಶ್ವರ ವೃತ್ತ ಬಳಿ ಸಭೆ ನಡೆಸಿ ಮಾತನಾಡಿದ ಅವರು, ಬಹುಸಂಸ್ಕೃತಿಯಿಂದ ಬದುಕುವ ದೇಶದಲ್ಲಿ ಏಕ ಸಂಸ್ಕೃತಿಯನ್ನು ಹೇರುವ ಹುನ್ನಾರವನ್ನು ಆಡಳಿತ ಪಕ್ಷಗಳು ನಡೆಸುತ್ತಾ ಬಂದಿದೆ. ಇದ್ದರಿಂದ ದೇಶದಲ್ಲಿ ಕೋಮುಗಲಭೆ ಸೃಷ್ಟಿಯಾಗುತ್ತಿದೆ. ಇಂತಹ ಪಕ್ಷಗಳಿಂದ ದೇಶದಲ್ಲಿ ಅಭಿವೃದ್ಧಿಯನ್ನು ನಿರೀಕ್ಷೆ ಮಾಡುವುದು ಸಾಧ್ಯವಿಲ್ಲ ಈ ನಿಟ್ಟಿನಲ್ಲಿ ಬಿಎಸ್ಪಿ ಪಕ್ಷವನ್ನು ಎಲ್ಲರೂ ಬೆಂಬಲಿಸುವ ಮೂಲಕ ಅಧಿಕಾರ ನೀಡಬೇಕು ಎಂದರು.

ಬಿಎಸ್ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಗಂಗಾಧರ್‌ ಬಹುಜನ್‌ ಮಾತನಾಡಿ, ದೇಶದಲ್ಲಿ ಅಧಿಕಾರಕ್ಕೆ ಬಂದ ಪಕ್ಷಗಳು ಸಂವಿಧಾನ ವಿರೋಧಿ ಹೇಳಿಕೆಯಿಂದ ಸಂವಿಧಾನವನ್ನು ಅಪಮಾನ ಮಾಡುತ್ತಿದ್ದಾರೆ. ಇಷ್ಟಾದರೂ ಕಾಂಗ್ರೆಸ್‌ ಮಾತ್ರ ಮೌನಕ್ಕೆ ಜಾರಿದೆ. ಸಂವಿಧಾನ ಆಚರಣೆಗೆ ಬಂದ ದಿನದಿಂದಲೂ ಭಾರತದಲ್ಲಿ ಪ್ರತಿಯೊಬ್ಬರಿಗೆ ಸಾಮಾಜಿಕ ಸಮಾನತೆ, ಅರ್ಥಿಕ ವಿಮೋಚನೆ, ಲಿಂಗಬೇಧಗಳಿಲ್ಲದೆ ಎಲ್ಲ ವರ್ಗಕ್ಕೆ ಜನಸಂಖ್ಯೆಗೆ ಅನುಗುಣ ಸೂಕ್ತ ಪ್ರಾತಿನಿಧ್ಯ ಎಲ್ಲವನ್ನು ನೀಡಿದರೂ ಸಹ ಸಂವಿಧಾನ ವಿರೋಧದ ಹೇಳಿಕೆ ಬರುತ್ತಿದೆ ಎಂದರು.

ಸಂವಿಧಾನ ರಕ್ಷ ಣೆಗೆ ಜಾಥಾ: ಸಂವಿಧಾನವನ್ನು ಸಂರಕ್ಷಿಸುವ ಮತ್ತು ದೇಶದಲ್ಲಿ ಸಂವಿಧಾನ ನೀಡಿದ ಸವಲತ್ತುಗಳನ್ನು ಜನತೆಗೆ ತಿಳಿಸುವ ಉದ್ದೇಶದಿಂದಲೇ ಬಹುಜನ ಸಮಾಜ ಪಾರ್ಟಿ ಸಂವಿಧಾನ ಸಂರಕ್ಷಣೆಗಾಗಿ ಕರ್ನಾಟಕ ರಾಜ್ಯ ವ್ಯಾಪಿ ಜೈಭೀಮ್‌ ಜನಜಾಗೃತಿ ಜಾಥಾವನ್ನು ಹಮ್ಮಿಕೊಂಡಿದ್ದು, ಇದರ ನೇತೃತ್ವವನ್ನು ರಾಷ್ಟ್ರೀಯ ಮಟ್ಟದ ನಾಯಕರು ವಹಿಸಿದ್ದಾರೆ. ತಾಲೂಕಿನ ಅರೇಹಳ್ಳಿ ಮತ್ತು ಬಿಕ್ಕೋಡಿನಲ್ಲಿ ಸುಮಾರು 1000ಕ್ಕೂ ಹೆಚ್ಚಿನ ಬಿಎಸ್ಪಿ ಕಾರ್ಯಕರ್ತರು ಬೈಕ್‌ ಜಾಥಾದ ಮೂಲಕ ಅದ್ಧೂರಿಯಿಂದ ಸ್ವಾಗತಿಸಿದ್ದಾರೆ. ಹಾಗೇಯೆ ಬೇಲೂರು ಪಟ್ಟಣದಲ್ಲಿ ಅಸಂಖ್ಯಾತ ಕಾರ್ಯಕರ್ತರ ಸಮ್ಮುಖದಲ್ಲಿ ಸಭೆ ನಡೆಸಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ದೆಹಲಿಯಿಂದ ಆಗಮಿಸಿ ರಾಜ್ಯ ಸಂಯೋಜಕ ದಿನೇಶ್‌ ಗೌತಮ್‌, ರಾಜ್ಯ ಸಂಯೋಜಕ ಎಂ.ಗೋಪಿನಾಥ್‌, ರಾಜ್ಯಾಧ್ಯಕ್ಷ ಡಾ.ಎಂ. ಕೃಷ್ಣಮೂರ್ತಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್‌. ಮುನಿಯಪ್ಪ ಹಾಗೂ ಜಾಕೀರ್‌ ಹುಸೇನ್‌, ರಾಜ್ಯ ಕಾರ್ಯದರ್ಶಿ ಜಾಕೀರ್‌ ಆಲಿಖಾನ್‌ ಮತ್ತು ಕಾಂತಪ್ಪ ಅಲಂಗಾರ್‌, ಜಿಲ್ಲಾ ಕಾರ್ಯದರ್ಶಿ ರಾಜು , ತಾಲೂಕು ಅಧ್ಯಕ್ಷ ಪ್ರಕಾಶ್‌ , ಉಮೇಶ್‌, ಲೋಕೇಶ್‌, ಲೋಹಿತ್‌, ನಿಂಗರಾಜ್‌, ಮಂಜುನಾಥ್‌, ಶ್ರೀನಾಥ್‌ , ಶಶಿಕುಮಾರ್‌, ಲೋಕೇಶ್‌, ಚಿಕ್ಕಣ್ಣ, ಧನಪಾಲಾಕ್ಷ, ಪುಟ್ಟಸ್ವಾಮಿ, ಭಾಗ್ಯಮ್ಮ, ಕವಿತಾ, ಜಗದೀಶ್‌, ಸುನೀಲ್‌ ಹಾಗೂ ಶ್ರೀಧರ್‌ ಸೇರಿದಂತೆ ಇನ್ನು ಮುಂತಾದವರು ಹಾಜರಿದ್ದರು.

ಟಾಪ್ ನ್ಯೂಸ್

1-qweqweqwe

Kejriwal ಮನೆಯಲಿ ಹಲ್ಲೆ ಪ್ರಕರಣ: ಮಲಿವಾಲ್‌-ಆತಿಷಿ ವಾಗ್ಯುದ್ಧ

Amit Shah 2

Kejriwal ನೋಡಿದಾಗ ಜನರಿಗೆ ‘ಬಾಟಲಿ’ ನೆನಪಾಗುತ್ತೆ: ಅಮಿತ್‌ ಶಾ

Supreme Court

ಮತದಾನ ವಿವರ ವಿಳಂಬ: ಅರ್ಜಿಯ ತ್ವರಿತ ವಿಚಾರಣೆಗೆ ಸುಪ್ರೀಂ ಅಸ್ತು

1—–ewqeqwe

Sunil Chhetri; ಬೆಂಗಳೂರು ಎಫ್ಸಿ ಪರ ಆಡುವೆ

Mangaluru”ಯುವ ಸಮಾಜದ ಸೇವೆ ದೇಶಕ್ಕೆ ಅದ್ವಿತೀಯ ಕೊಡುಗೆ’

Mangaluru”ಯುವ ಸಮಾಜದ ಸೇವೆ ದೇಶಕ್ಕೆ ಅದ್ವಿತೀಯ ಕೊಡುಗೆ’

boxing

Doping test ನಕಾರ: ಬಾಕ್ಸರ್‌ ಪರ್ವೀನ್‌ ಹೂಡಾಗೆ ನಿಷೇಧ

Rain ಮುಂದುವರಿದ “ಎಲ್ಲೋ ಅಲರ್ಟ್‌’

Rain ಮುಂದುವರಿದ “ಎಲ್ಲೋ ಅಲರ್ಟ್‌’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

ಜೈಲಿಂದ ಬಿಡುಗಡೆಯಾದ ರೇವಣ್ಣ ತವರು ಜಿಲ್ಲೆ ಭೇಟಿ ದಿಢೀರ್‌ ರದ್ದು

ಜೈಲಿಂದ ಬಿಡುಗಡೆಯಾದ ರೇವಣ್ಣ ತವರು ಜಿಲ್ಲೆ ಭೇಟಿ ದಿಢೀರ್‌ ರದ್ದು

Hassan ಮುಸ್ಸಂಜೆಯಿಂದ ಮುಂಜಾನೆವರೆಗೂ ಎಸ್‌ಐಟಿ ಶೋಧನೆ

Hassan ಮುಸ್ಸಂಜೆಯಿಂದ ಮುಂಜಾನೆವರೆಗೂ ಎಸ್‌ಐಟಿ ಶೋಧನೆ

Hassan; ಪೆನ್‌ಡ್ರೈವ್‌ ಹಂಚಿದ್ದವರ ಜಾಮೀನು ಅರ್ಜಿ ವಜಾ

Hassan; ಪೆನ್‌ಡ್ರೈವ್‌ ಹಂಚಿದ್ದವರ ಜಾಮೀನು ಅರ್ಜಿ ವಜಾ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-qweqweqwe

Kejriwal ಮನೆಯಲಿ ಹಲ್ಲೆ ಪ್ರಕರಣ: ಮಲಿವಾಲ್‌-ಆತಿಷಿ ವಾಗ್ಯುದ್ಧ

Amit Shah 2

Kejriwal ನೋಡಿದಾಗ ಜನರಿಗೆ ‘ಬಾಟಲಿ’ ನೆನಪಾಗುತ್ತೆ: ಅಮಿತ್‌ ಶಾ

1-eewewqe

Attack; ಹಾರ ಹಾಕುವ ನೆಪದಲ್ಲಿ ಕೈ ಅಭ್ಯರ್ಥಿ ಕನ್ಹಯ್ಯ ಮೇಲೆ ದಾಳಿ!

Supreme Court

ಮತದಾನ ವಿವರ ವಿಳಂಬ: ಅರ್ಜಿಯ ತ್ವರಿತ ವಿಚಾರಣೆಗೆ ಸುಪ್ರೀಂ ಅಸ್ತು

1—–ewqeqwe

Sunil Chhetri; ಬೆಂಗಳೂರು ಎಫ್ಸಿ ಪರ ಆಡುವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.