ನ.14 ರೊಳಗೆ ಆ್ಯಂಬುಲೆನ್ಸ್ ಸಿಬ್ಬಂದಿಗೆ ಬಾಕಿ ವೇತನ ಪಾತಿಸಲು ಸೂಚನೆ
Team Udayavani, Nov 5, 2022, 8:30 PM IST
ಬೆಂಗಳೂರು: 108 ಆ್ಯಂಬುಲೆನ್ಸ್ ಸಿಬ್ಬಂದಿಗೆ ನ.14ರೊಳಗೆ 2 ತಿಂಗಳಿಂದ ವೇತನ ಪಾವತಿಸಬೇಕು. ಇಲ್ಲದಿದ್ದರೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಜಿವಿಕೆ ಕಂಪನಿಗೆ ಆರೋಗ್ಯ ಇಲಾಖೆ ಆಯುಕ್ತ ಡಿ.ರಂದೀಪ್ ಎಚ್ಚರಿಕೆ ಕೊಟ್ಟಿದ್ದಾರೆ.
108 ಆ್ಯಂಬುಲೆನ್ಸ್ ಸಿಬ್ಬಂದಿಗೆ 2 ತಿಂಗಳ ವೇತನ ಬಾಕಿ ಉಳಿಸಿಕೊಂಡಿದ್ದ ಹಿನ್ನೆಲೆಯಲ್ಲಿ ನೌಕರರು ಈ ವಿಚಾರವನ್ನು ಆರೋಗ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದಿದ್ದರು. ಇದರ ಬೆನ್ನಲ್ಲೇ ಡಿ.ರಂದೀಪ್ ಶುಕ್ರವಾರ ಆರೋಗ್ಯ ಸೌಧದದಲ್ಲಿರುವ ತಮ್ಮ ಕಚೇರಿಯಲ್ಲಿ ಜಿವಿಕೆ ಕಂಪನಿ, 108 ಆ್ಯಂಬುಲೆನ್ಸ್ ನೌಕರರ ಜತೆ ಸಭೆ ನಡೆಸಿದರು.
ಸರ್ಕಾರದಿಂದ ಹಣ ಬಿಡುಗಡೆಯಾದರೂ ಆ್ಯಂಬುಲೆನ್ಸ್ ನೌಕರರಿಗೆ 2 ತಿಂಗಳ ವೇತನ ಕೊಡದಿರುವ ಬಗ್ಗೆ ಆಯುಕ್ತರು ಜಿವಿಕೆ ಕಂಪನಿ ಅಧಿಕಾರಿಗಳ ಬಳಿ ಪ್ರಶ್ನಿಸಿದರು.
ಈ ಬಗ್ಗೆ ಆಂಧ್ರ ಪ್ರದೇಶದಲ್ಲಿರುವ ತಮ್ಮ ಮೇಲಧಿಕಾರಿಗಳ ಬಳಿ ವಿಚಾರಿಸಬೇಕಾಗಿದೆ ಎಂದು ಜಿವಿಕೆ ಸಿಬ್ಬಂದಿ ಉತ್ತರಿಸಿದರು. ಬಳಿಕ ಜಿವಿಕೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಆಯುಕ್ತರು, ನ.14ರೊಳಗೆ ನೌಕರರಿಗೆ ವೇತನ ಪಾವತಿಸಬೇಕು. ಇಲ್ಲದಿದ್ದರೆ ನಿಮ್ಮ ಸಂಸ್ಥೆಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ಕೊಟ್ಟರು.
ನಂತರ ನ.14ಕ್ಕೆ ವೇತನ ಪಾವತಿಸದಿದ್ದರೆ ಸರ್ಕಾರದ ಮೂಲಕ ನಿಮ್ಮ ವೇತನ ಕೊಡಿಸುವುದಾಗಿ ಸಭೆಯಲ್ಲಿದ್ದ ಆ್ಯಂಬುಲೆನ್ಸ್ ನೌಕರರಿಗೆ ಆಶ್ವಾಸನೆ ನೀಡಿದರು ಎಂದು ಸಭೆಯಲ್ಲಿದ್ದ ಆ್ಯಂಬುಲೆನ್ಸ್ ನೌಕರರ ಸಂಘದ ಮುಖಂಡರೊಬ್ಬರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ