ಮಹಾಲಿಂಗಪುರ: ಮುಗಿಯದ ಕಬ್ಬು ದರ ಸಮರ; ಸೋಮವಾರಕ್ಕೆ ಸಭೆ ಮುಂದೂಡಿಕೆ

ಕಬ್ಬು ಬೆಳೆಗಾರರ ಸಂಘ ಮತ್ತು ರೈತ ಸಂಘದ ಸಭೆ ವಿಫಲ....

Team Udayavani, Nov 5, 2022, 9:10 PM IST

1-addsa

ಮಹಾಲಿಂಗಪುರ: ಸಮೀಪದ ಸೈದಾಪುರ-ಸಮೀರವಾಡಿಯ ಶಿವಲಿಂಗೇಶ್ವರ ದೇವಾಲಯದಲ್ಲಿ ಪ್ರಸಕ್ತ ಸಾಲಿನ ಕಬ್ಬಿಗೆ ದರ ನಿಗದಿಗಾಗಿ ಸಮೀರವಾಡಿ ಕಬ್ಬು ಬೆಳೆಗಾರ ಸಂಘ ಮತ್ತು ಬಾಗಲಕೋಟೆ ಜಿಲ್ಲಾ ಕಬ್ಬು ಬೆಳೆಗಾರ ಸಂಘ, ರೈತ ಸಂಘದ ಸಭೆಯು ಶನಿವಾರ ಮುಂಜಾನೆ 11ರಿಂದ ಸಂಜೆ 7 ರವರೆಗೆ ನಡೆಯಿತು.

ಸಭೆಯಲ್ಲಿ ಭಾಗವಹಿಸಿದ್ದ ಅನೇಕ ರೈತರು ಹಾಗೂ ರೈತ ಸಂಘದ ಮುಖಂಡರು ಬಾಗಲಕೋಟೆ ಜಿಲ್ಲೆಯ ರನ್ನ ಶುಗರ್ಸ್ 2900, ಬೆಳಗಾವಿ ಜಿಲ್ಲೆಯ ಕಾಗವಾಡ ಶಿರಗುಂಪಿ ಕಾರ್ಖಾನೆಯವರು 2850 , ಬೆಳಗಾವಿ ಜಿಲ್ಲೆಯ ಬೆಡಕಿಹಾಳ ವೆಂಕಟೇಶ್ವರ ಕಾರ್ಖಾನೆ 2900, ನಿಪ್ಪಾಣಿ ಹಾಲಸಿದ್ದನಾಥ ಕಾರ್ಖಾನೆಯವರು 2950 ರಂತೆ ದರ ಘೋಷಿಸಿ, ಈಗಾಗಲೇ ಕಾರ್ಖಾನೆ ಪ್ರಾರಂಭಿಸಿದ್ದಾರೆ. ಅವರು ನೀಡಿದಂತೆ ಸಮೀರವಾಡಿ ಸಕ್ಕರೆ ಕಾರ್ಖಾನೆಯವರು ಸಹ 2900 ರೂಗಳ ದರ ಘೋಷಿಸಿ ಕಾರ್ಖಾನೆ ಪ್ರಾರಂಭಿಸಬೇಕೆಂದು ಸಭೆಯಲ್ಲಿ ಪಟ್ಟು ಹಿಡಿದರು.

ಸಮೀರವಾಡಿ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ರಾಮನಗೌಡ ಪಾಟೀಲ ಮಾತನಾಡಿ, ರೈತರ ಅಭಿವೃದ್ಧಿಗಾಗಿ ಮತ್ತು ಸೇವೆಗಾಗಿಯೇ ಸಂಘಟನೆ ಇರುವುದು, ಕಬ್ಬು ಬೆಳೆಗೆ ವೈಜ್ಞಾನಿಕ ಬೆಲೆ ಪಡೆಯುವತನಕ ತಮ್ಮ ಸಹಕಾರ ಹೀಗೆಯೇ ಮುಂದುವರಿಯಲಿ. ಕಬ್ಬು ಬೆಳೆಗಾರರ ಸಂಘವೂ ಸಹ ಸದಾ ತಮ್ಮ ಬೆನ್ನಿಗೆ ಇದೆ ಸೌಹಾರ್ದ ನೆಲೆಯಲ್ಲಿ ಸಮಸ್ಯೆ ಬಗೆ ಹರಿಸೋಣ ಎಂದರು.

ಸಮೀರವಾಡಿ ಕಬ್ಬು ಬೆಳೆಗಾರರ ಸಂಘದ ಕಾರ್ಯದರ್ಶಿ ರಂಗನಗೌಡ ಪಾಟೀಲ ಮಾತನಾಡಿ, ಕಾರ್ಖಾನೆಗಳು ರೈತ ಬೆಳೆದ ಕಬ್ಬ ಟನ್‌ಗೆ 4 ರಿಂದ 5 ಸಾವಿರ ನಿಗದಿ ಮಾಡಿದರೂ ಕಡಿಮೆಯೇ. ರೈತರ ಹಿತ ದೃಷ್ಟಿಯನ್ನು ಪರಿಗಣಿಸಿ, ಈ ಮುಂಚೆ ನಡೆದ ಕಬ್ಬು ಬೆಳೆಗಾರರ ಸಭೆಯಲ್ಲಿ ಸುಮಾರು 500 ಜನ ರೈತರ ಒಪ್ಪಿಗೆಯಂತೆ 2022-23ನೇ ಸಾಲಿಗೆ ಪ್ರತಿ ಟನ್ ಕಬ್ಬಿಗೆ 2800 ರೂಗಳು ಹಾಗೂ ಕಳೆದ ವರ್ಷದ ಎರಡನೇ ಕಂತಿನ 62 ರೂಗಳಿಗೆ ಒಪ್ಪಿಗೊಂಡಿದ್ದೇವೆ. ಇದೊಂದು ಬಾರಿ ಇದೇ ದರ ಪಡೆಯೋಣ, ಇದರಲ್ಲಿ ನಮ್ಮ ಯಾವುದೇ ಲಾಭಿ ಇಲ್ಲ ಎಂದರು.

ಸಭೆ ಸೋಮವಾರಕ್ಕೆ ಮುಂದೂಡಿಕೆ
ಶನಿವಾರ ಮುಂಜಾನೆ 11 ರಿಂದ ಸಂಜೆ 7 ವರೆಗೆ ಸಭೆ ನಡೆದರೂ ಸಹ ಸಮೀರವಾಡಿ ಕಬ್ಬು ಬೆಳೆಗಾರರು ಮತ್ತು ರೈತ ಸಂಘ, ಬಾಗಲಕೋಟೆ ಕಬ್ಬು ಬೆಳಗಾರ ಸಂಘದ ಮಧ್ಯೆ ಒಮ್ಮತ ಮೂಡದ ಕಾರಣ, ಸಭೆಯನ್ನು ನ.7ರ ಸೋಮವಾರಕ್ಕೆ ಮುಂದೂಡಲಾಯಿತು.

ಸಭೆಯಲ್ಲಿ ರೈತ ಮುಖಂಡರಾದ ಸಂಗಪ್ಪ ನಾಗರಡ್ಡಿ ಮುತ್ತಪ್ಪ ಕೋಮಾರ, ಸುಭಾಸ ಶಿರಬೂರ, ಶ್ರೀಕಾಂತ್ ಗೂಳನ್ನವರ, ಮಹಾಲಿಂಗಪ್ಪ ಸನದಿ, ಪ್ರಕಾಶ ಚನ್ನಾಳ, ಈರಪ್ಪ ಹಂಚಿನಾಳ, ಉದಯ ಸಾರವಾಡ, ಗಂಗಾಧರ ಮೇಟಿ, ಬಸವಂತಪ್ಪ ಕಾಂಬಳೆ, ಸುನ್ನಪ್ಪ ಪೂಜಾರಿ, ಬಿ.ಜಿ ಹೊಸೂರ, ಶ್ರೀಶೈಲ ಬೂಮಾರ, ಭೀಮಶಿ ಕರಿಗೌಡರ, ಬಸನಗೌಡ ಪಾಟೀಲ್, ಮಹಾದೇವ ಮಾರಾಪೂರ, ಚಿದಾನಂದ ಅಂಗಡಿ, ಲಕ್ಕಪ್ಪ ಪಾಟೀಲ್, ಬಂದು ಪಕಾಲಿ, ರಮೇಶ ಕುಲಕರ್ಣಿ, ರಾಮಣ್ಣ ಮಳಲಿ, ಮಹಾದೇವ ನಾಡಗೌಡ, ಬಸವಣ್ಣೆಪ್ಪ ಬ್ಯಾಳಿ, ಮಲ್ಲಪ್ಪ ಬಾಯಪ್ಪಗೋಳ, ಶಿವನಗೌಡ ಪಾಟೀಲ್, ಮಲ್ಲಪ್ಪ ಗುರವ, ವೆಂಕಪ್ಪ ಗಿಡ್ಡಪ್ಪನ್ನವರ, ರಮೇಶ ಮೇಟಿ, ಸದಾಶಿವ ಕಂಬಳಿ, ಪ್ರಕಾಶ ಕೋಳಿಗುಡ್ಡ, ಸದಾಶಿವ ಗೊಬ್ಬರದ, ಬಸವರಾಜ ಮಳಲಿ, ಪಿಯೂಷ್ ಓಸ್ವಾಲ, ಮಹಾಲಿಂಗಪ್ಪ ಇಟ್ನಾಳ, ರಾಮಪ್ಪ ಹಟ್ಟಿ, ಯಲ್ಲಪ್ಪ ಉಪ್ಪಾರ ಸೇರಿದಂತೆ ರೈತ ಸಂಘ ಮತ್ತು ಕಬ್ಬು ಬೆಳೆಗಾರರ ಸಂಘದ ಸಾವಿರಾರು ರೈತರು ಸಭೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.