ಬಿಜೆಪಿ ಎರಡು ಬಣದ ನಡುವೆ ಮಾತಿನ ಚಕಮಕಿ


Team Udayavani, Nov 6, 2022, 4:40 PM IST

tdy-13

ಮಾಲೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಕೆಂಪೇಗೌಡ ಪ್ರತಿಮೆ ನಿರ್ಮಾಣ ಮಾಡಿರುವ ಸ್ಥಳದಲ್ಲಿ ಥೀಮ್‌ ಪಾರ್ಕ್‌ ನಿರ್ಮಾಣಕ್ಕೆ ಮಣ್ಣು ಸಂಗ್ರಹ ಮಾಡಲು ಕೆಂಪೇಗೌಡ ರಥ ಯಾತ್ರೆ ತಾಲೂಕಿನ ಟೇಕಲ್‌ ಹೋಬಳಿ ಕೆ.ಜಿ.ಹಳ್ಳಿಗೆ ಆಗಮಿಸಿದ್ದು, ಬಿಜೆಪಿ ಎರಡು ಬಣಗಳ ನಡುವೆ ಉಂಟಾದ ಗದ್ದಲ, ಮಾತಿನ ಚಕ ಮಕಿ ನಡೆದು ಅರ್ಥಹೀನಾವಾಗಿ ಪರಿಣಮಿಸಿತ್ತು.

ಬಿಜೆಪಿಯ ಗುಂಪೊಂದು ಕೆಂಪೇಗೌಡ ರಥಯಾತ್ರೆಯನ್ನು ಸರ್ಕಾರ ಮತ್ತು ಜಿಲ್ಲಾಡಳಿತಗಳ ನಿದೇಶನದಂತೆ ಪೂರ್ಣಕುಂಭ ಸ್ವಾಗತದಿಂದ ಕರೆದೋಯ್ಯಬೇಕು ಎಂದು ಪಟ್ಟು ಹಿಡಿದ ಹಿನ್ನೆಲೆ, ಮಾಜಿ ಶಾಸಕ ಕೆ.ಎಸ್‌. ಮಂಜುನಾಥ್‌ ಗೌಡ ಹಾಗೂ ಹೂಡಿ ವಿಜಯ್‌ಕುಮಾರ್‌ ಅವರ ಬೆಂಬಲಿಗ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು.

ಸಂಸದ ಎಸ್‌.ಮುನಿಸ್ವಾಮಿ ಹಾಗೂ ಪೊಲೀಸರ ಮಧ್ಯಸ್ತಿಕೆಯಿಂದ ತಿಳಿಗೊಂಡಿತು. ಬಂಗಾರಪೇಟೆಯಿಂದ ಪಾರ್ಶಗಾನಹಳ್ಳಿ ಮಾರ್ಗವಾಗಿ ರಥಯಾತ್ರೆ ಕೆ.ಜಿ.ಹಳ್ಳಿ ಗ್ರಾಮಕ್ಕೆ ಆಗಮಿಸಿದ ವೇಳೆ ಬಿಜೆಪಿಯ ಹೂಡಿ ವಿಜಯ್‌ ಕುಮಾರ್‌, ಆರ್‌.ಪ್ರಭಾಕರ್‌ ಅವರ ಬೆಂಬಲಿಗರು ರಥಕ್ಕೆ ಸ್ವಾಗತ ಕೋರಲು ಪೂರ್ಣಕುಂಭ ಕಳಶಗಳನ್ನು ಹೊತ್ತ ಮಹಿಳೆಯರು ಸ್ವಾಗತ ಕೋರಲು ಆಗಮಿಸದ ಕಾರಣ, ರಥಯಾತ್ರೆ ಹೋಗುವುದು ಬೇಡ ಎಂದು ಪಟ್ಟು ಹಿಡಿದರು.

ಸಂಸದ ಎಸ್‌.ಮುನಿಸ್ವಾಮಿ ಅವರು, ಕಾರ್ಯಕ್ರಮಕ್ಕೆ ಈಗಾಗಲೇ ತಡವಾಗಿದೆ. ರಥಯಾತ್ರೆಯೂ ತಾಲೂಕಿನ ಸಂಚರಿಸಬೇಕೆಂದು ಎಷ್ಟೇ ಮನವೊಲಿಸಿದರೂ, ಹೂಡಿ ವಿಜಯ್‌ ಕುಮಾರ್‌ ಬೆಂಬಲಿಗರು ರಥವನ್ನು ಮುಂದೆ ಸಂಚರಿಸಲು ಬಿಡಲಿಲ್ಲ. ಆಗ ಕಾರ್ಯಕ್ರಮ ನಿಗದಿಪಡಿಸಿದ ಸ್ಥಳದಿಂದ ಮಾಜಿ ಶಾಸಕ ಕೆ.ಎಸ್‌.ಮಂಜುನಾಥ್‌ ಗೌಡ ಅವರು ಆಗಮಿಸಿ ಕೆಂಪೇಗೌಡ ರಥಯಾತ್ರೆಯು ತಾಲೂಕಿಗೆ ಆಗಮಿಸಿರುವುದು ಈಗಾಗಲೇ ತಡವಾಗಿದೆ. ಪಕ್ಷಾತೀತವಾಗಿ ರಥಯಾತ್ರೆಗೆ ನಾವು ಭವ್ಯ ಸ್ವಾಗತವನ್ನು ಕೋರಬೇಕು ಹೊರತು, ರಥಯಾತ್ರೆಗೆ ಅಡ್ಡಿಪಡಿಸುವುದು ಸರಿಯಲ್ಲವೆಂದು ಹೇಳಿದರು. ಅಷ್ಟೊತ್ತಿಗೆ ಎರಡೂ ಕಡೆಯ ಬೆಂಬಲಿಗ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ವಾಗ್ವಾದ ತಾರಕಕ್ಕೇರಿತು. ಪೊಲೀಸರು ಮಧ್ಯಪ್ರವೇಶಿ ಎರಡು ಬಣಗಳನ್ನು ಮನವೊಲಿಸಿ ರಥಯಾತ್ರೆ ತಾಲೂಕು ಆಡಳಿತ ನಿಗದಿಪಡಿಸಿದ್ದ ಸ್ಥಳಕ್ಕೆ ಕೆಂಪೇಗೌಡ ರಥಯಾತ್ರೆ ತೆರಳಿತು.

ಬಿಜೆಪಿಯಲ್ಲಿ ಯಾವುದೇ ಬಣಗಳಿಲ್ಲ: ಸಂಸದ ಎಸ್‌.ಮುನಿಸ್ವಾಮಿ ಮಾತನಾಡಿ, ಕೆಂಪೇಗೌಡರ ಥೀಮ್‌ ಪಾರ್ಕ ನಿರ್ಮಿಸಲು ರಾಜ್ಯದ ಎಲ್ಲ ಕಡೆಯಿಂದ ಮಣ್ಣು ಸಂಗ್ರಹ ಹಾಗೂ ಕೆಂಪೇಗೌಡರ ಇತಿಹಾಸವನ್ನು ಸಾರುವ ರಥಯಾತ್ರೆ ಹಮ್ಮಿಕೊಂಡಿದೆ. ಎಲ್ಲರೂ ಪಕ್ಷಾತೀತವಾಗಿ ರಥಯಾತ್ರೆಯನ್ನು ಸ್ವಾಗತಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಆದರೆ, ಕೆಲವರು ರಥಯಾತ್ರೆಗೆ ಅಡ್ಡಿಪಡಿಸಿರುವುದು ಕೆಂಪೇಗೌಡ ಅವರಿಗೆ ಅಪಮಾನವೇಸಗಿದಂತೆ. ಬಿಜೆಪಿಯಲ್ಲಿ ಯಾವುದೇ ಬಣಗಳಿಲ್ಲ. ನಾವೆಲ್ಲರೂ ಒಗ್ಗಟ್ಟಾಗಿ ರಥಯಾತ್ರೆಯನ್ನು ತಾಲೂಕಿನಲ್ಲಿ ಸಂಚರಿಸಲು ಸಹಕಾರ ನೀಡಬೇಕು ಎಂದರು. ಮಾಜಿ ಶಾಸಕ ಕೆ.ಎಸ್‌. ಮಂಜುನಾಥ್‌ ಗೌಡ ಮಾತನಾಡಿ, ಕೆಂಪೇಗೌಡ ರಥಯಾತ್ರೆಗೆ ಹೂಡಿ ವಿಜಯ್‌ ಕುಮಾರ್‌, ಆರ್‌.ಪ್ರಭಾಕರ್‌ ಹಾಗೂ ಅವರ ಬೆಂಬಲಿಗರು ಅಡ್ಡಿಪಡಿಸುವುದರ ಮೂಲಕ ಕೆಂಪೇಗೌಡ ರಥ ಯಾತ್ರೆಗೆ ಅಪಮಾನ ಮಾಡಿದ್ದಾರೆ. ಇದು ಪಕ್ಷದಲ್ಲಿ ಒಳ್ಳೆಯ ಬೆಳವಣಿಗೆಗಳಲ್ಲ ಎಂದರು.

ಕಾರ್ಯಕರ್ತರ ಮೇಲೆ ಹಲ್ಲೆ: ಬಿಜೆಪಿ ಫಲಾನುಭವಿಗಳ ಪ್ರಕೋಷ್ಠ ಸಮಿತಿ ಸದಸ್ಯ ಹೂಡಿ ವಿಜಯ್‌ ಕುಮಾರ್‌ ಮಾತನಾಡಿ, ಪೂರ್ಣ ಕುಂಭದೊಂದಿಗೆ ರಥಯಾತ್ರೆ ಕರೆ ದೋಯ್ಯಲು ಸಂಸದರ ಬಳಿ ತಿಳಿಸಿದ್ದೆವು. ಆದರೆ, ಮಾಜಿ ಶಾಸಕರು ಏಕ ಏಕಿ ಆಗಮಿಸಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿ, ಸ್ವತಃ ಅವರೇ ರಥಯಾತ್ರೆಯ ವಾಹನ ಚಾಲನೆ ಮಾಡಲು ಮುಂದಾಗಿದ್ದು ಸರಿಯಲ್ಲ ಎಂದು ಆರೋಪಿಸಿದರು.

ವಿಧಾನ ಪರಿಷತ್‌ ಸದಸ್ಯ ವೈ.ಎ.ನಾರಾಯಣಸ್ವಾಮಿ, ತಹಶೀಲ್ದಾರ್‌ ಮಲ್ಲಿಕಾ ರ್ಜುನ್‌, ತಾಪಂ ಇಒ ಮುನಿರಾಜು, ಜಿ.ಇ.ರಾಮೇ ಗೌಡ, ಸತೀಶ್‌ ಆರಾಧ್ಯ, ತಾಲೂಕು ಬಿಜೆಪಿ ಅಧ್ಯಕ್ಷ ಪುರ ನಾರಾಯಣಸ್ವಾಮಿ, ಎಂ.ರಮಮೂರ್ತಿ, ಆಗ್ರಿನಾರಾಯಣಪ್ಪ, ಹರೀಶ್‌ ಗೌಡ, ಟಿ.ಬಿ. ಕೃಷ್ಣಪ್ಪ, ನೂಟವೆ ವೆಂಕಟೇಶ್‌ ಗೌಡ, ಬಿ. ಆರ್‌.ವೆಂಕಟೇಶ್‌, ತಿಮ್ಮನಾಯಕನಹಳ್ಳಿ ನಾರಾಯಣಸ್ವಾಮಿ, ಬಾನುತೇಜ್‌, ಮುನಿರಾಜು, ಸೋಮಣ್ಣ, ಚಂದ್ರಶೇಖರ್‌, ಅಜ್ಗರ್‌, ಕೂರಿಮಂಜು, ಬೋರ್‌ ಮಂಜು ಹಾಗೂ ಬಿಜೆಪಿ ಕಾರ್ಯಕರ್ತರು ಇದ್ದರು.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.