ಬಾದಾಮಿಯಲ್ಲಿ ಸ್ಪರ್ಧಿಸಲ್ಲ: ವಿಪಕ್ಷ ನಾಯಕ ಸಿದ್ದರಾಮಯ್ಯ

ಕಾರ್ಯಕರ್ತರು ಒತ್ತಾಯಿಸುತ್ತಿದ್ದರೂ ಮನಸ್ಸು ಒಪ್ಪುತ್ತಿಲ್ಲ

Team Udayavani, Nov 8, 2022, 6:45 AM IST

ಬಾದಾಮಿಯಲ್ಲಿ ಸ್ಪರ್ಧಿಸಲ್ಲ: ವಿಪಕ್ಷ ನಾಯಕ ಸಿದ್ದರಾಮಯ್ಯ

ಬೆಳಗಾವಿ: ಬಾದಾಮಿ ಕ್ಷೇತ್ರ ಭೌಗೋಳಿಕವಾಗಿ ದೂರ ಇರುವುದರಿಂದ ಅಲ್ಲಿಯ ಜನರಿಗೆ ನ್ಯಾಯ ಒದಗಿಸಲು ಆಗುತ್ತಿಲ್ಲ. ಹೀಗಾಗಿ ಕ್ಷೇತ್ರ ಬಿಡುವ ಚಿಂತನೆ ಮಾಡಿದ್ದೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಬಾದಾಮಿ ಕ್ಷೇತ್ರದಿಂದಲೇ ಸ್ಪರ್ಧೆಗೆ ಹೆಚ್ಚಿನ ಒತ್ತಡ ಇದೆ. ಸಾವಿರಾರು ಮಹಿಳೆಯರು ಮನೆ ಎದುರು ಪ್ರತಿಭಟನೆ ಮಾಡುವುದಾಗಿ ಹೇಳಿದ್ದಾರೆ. ಅಭಿಮಾನಿಗಳು ಪತ್ರ ಬರೆಯುತ್ತಿದ್ದಾರೆ. ನೀವು ಕ್ಷೇತ್ರಕ್ಕೆ ಭೇಟಿ ನೀಡದಿದ್ದರೂ ನಡೆಯುತ್ತದೆ ಎನ್ನುತ್ತಿದ್ದಾರೆ. ನನಗೆ ಮನಸ್ಸು ಒಪ್ಪುತ್ತಿಲ್ಲ. ಕೋಲಾರ, ಚಾಮರಾಜಪೇಟೆಯಿಂದ ಸ್ಪರ್ಧೆಗೆ ಆಹ್ವಾನ ಬಂದಿದೆ. ವರುಣಾದಿಂದ ಸ್ಪರ್ಧಿಸುವಂತೆ ನಮ್ಮ ಮಗ ಹೇಳುತ್ತಿದ್ದಾನೆ. ಚಾಮರಾಜಪೇಟೆಯಿಂದ ನಿಂತುಕೊಳ್ಳುವಂತೆ ಜಮೀರ್‌ ಹೇಳುತ್ತಿದ್ದಾನೆ. ಆದರೆ, ನನ್ನ ಸ್ಪರ್ಧೆ ಬಗ್ಗೆ ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ. ಯಾವುದೇ ಕ್ಷೇತ್ರ ಇಲ್ಲದಿದ್ದರೂ ಬಹಳಷ್ಟು ಜನರು ನನ್ನನ್ನು ಆಹ್ವಾನಿಸುತ್ತಿದ್ದಾರೆ. ಬಿಜೆಪಿಯವರಿಗೆ ಬುದ್ಧಿ ಇಲ್ಲ ಎಂದರು.

ವೈಯಕ್ತಿಕವಾಗಿ ಸಿ.ಎಂ.ಇಬ್ರಾಹಿಂ ಒಳ್ಳೆಯ ಗೆಳೆಯ. ಆದರೆ ನಮ್ಮನ್ನು ಬಿಟ್ಟು ಜೆಡಿಎಸ್‌ಗೆ ಹೋಗಿ ಅಧ್ಯಕ್ಷರಾಗಿದ್ದಾರೆ. ಅವರು ಭದ್ರಾವತಿಗೆ ಜೆಡಿಎಸ್‌ನಿಂದ ನಿಂತುಕೊಳ್ಳಲಿ. ನಾನು ಎಲ್ಲಿ ನಿಂತುಕೊಳ್ಳಬೇಕು ಅಂತ ಪಕ್ಷ ತೀರ್ಮಾನ ಮಾಡುತ್ತದೆ, ಜೆಡಿಎಸ್‌ ಅಲ್ಲ. ನಾನು ಒಬ್ಬಂಟಿ ಅಲ್ಲ. ಲಕ್ಷ್ಮೀ ಹೆಬ್ಟಾಳಕರ, ಅಂಜಲಿ ನಿಂಬಾಳಕರ, ಫಿರೋಜ್‌ ಸೇಠ್ , ಎಂ.ಬಿ.ಪಾಟೀಲ್‌ ಸೇರಿದಂತೆ ಎಲ್ಲ ಧರ್ಮದವರು, ಜಾತಿಯವರು ನನ್ನ ಜತೆ ಇದ್ದಾರೆ. ಜನಾರ್ದನ ರೆಡ್ಡಿ ಕಾಂಗ್ರೆಸ್‌ಗೆ ಬರುವ ಕುರಿತು ನನ್ನ ಜತೆ ಚರ್ಚಿಸಿಲ್ಲ ಎಂದರು.

ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಸಂಬಂಧ ಐವರು ನ್ಯಾಯಮೂರ್ತಿಗಳು ಕೂಡಿ ಮಾಡಿದ ತೀರ್ಮಾನ ಅಲ್ಲ. ಮೂವರು ನ್ಯಾಯಮೂರ್ತಿಗಳು ಒಂದು ತರಹ, ಇಬ್ಬರು ಒಂದು ತರಹ ತೀರ್ಪು ನೀಡಿದ್ದಾರೆ. ಇದು ನನ್ನ ಅಭಿಪ್ರಾಯ, ನಾನು ಜಡ್ಜ್ಮೆಂಟ್‌ ಮೇಲೆ ಹೇಳುತ್ತಿಲ್ಲ. ಅವರು ಕಾನೂನು ಪ್ರಕಾರ ತೀರ್ಪು ನೀಡಿದ್ದಾರೆ. ನಾನು ಸಂವಿಧಾನದಲ್ಲಿ ಅರ್ಥ ಮಾಡಿಕೊಂಡ ಪ್ರಕಾರ ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ನೀಡಬೇಕು ಅಂತ ಆರ್ಟಿಕಲ್‌ 15 ಆಗಲಿ, ಆರ್ಟಿಕಲ್‌ 16 ಆಗಲಿ ಹೇಳುವುದಿಲ್ಲ. ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಕೊಡಬೇಕು ಅಂತ ಹೇಳುತ್ತದೆ. ಆದೇಶದ ತೀರ್ಪು ಪ್ರತಿ ಬಂದ ಮೇಲೆ ಮಾತನಾಡುತ್ತೇನೆ ಎಂದರು.

ವಿನಯ ಕುಲಕರ್ಣಿಗೆ ಶೀಘ್ರ ಕ್ಲೀನ್‌ಚಿಟ್‌
ವಿನಯ ಕುಲಕರ್ಣಿ ಕೊಲೆ ಆರೋಪಿ. ಅದ್ಧೂರಿ ಜನ್ಮದಿನ ಮೂಲಕ ಏನು ಸಂದೇಶ ಕೊಡ್ತಿದ್ದಾರೆ ಎಂದು ಪ್ರಶ್ನಿಸುವ ಬಿಜೆಪಿಗೆ ಅಮಿತ್‌ ಶಾ ಮೇಲೆಯೂ ಕೊಲೆ ಆರೋಪ ಇದೆ. ಅವರು ಗಡಿಪಾರು ಆಗಿದ್ದರು. ಈಗ ಗೃಹ ಸಚಿವರಾಗಿದ್ದಾರೆ ಎಂಬುದು ಗೊತ್ತಿಲ್ಲವೇ? ಅಮಿತ್‌ ಶಾಗೆ ಕ್ಲೀನ್‌ಚಿಟ್‌ ಸಿಕ್ಕಂತೆ ವಿನಯ ಕುಲಕರ್ಣಿಗೂ ಕ್ಲೀನ್‌ಚಿಟ್‌ ಸಿಗುತ್ತದೆ. ಬೇಕಾದಷ್ಟು ಜನರ ಮೇಲೆ ಮರ್ಡರ್‌ ಕೇಸ್‌ ಇದೆ, ಎಂಎಲ್‌ಎ ಆಗಿದ್ದಾರೆ, ಎಂಪಿ ಆಗಿದ್ದಾರೆ. ಅಪರಾಧ ಸಾಬೀತಾಗುವರೆಗೂ ಅವರು ಅಮಾಯಕರು. ಅಪರಾಧ ಸಾಬೀತಾಗುವವರೆಗೂ ಎಲ್ಲ ಆರೋಪಿಗಳು ಅಮಾಯಕರು ಎಂದು ಸಿದ್ದರಾಮಯ್ಯ ಹೇಳಿದರು.

ಬೊಮ್ಮಾಯಿ-ಬಿಎಸ್‌ವೈ ಸಂಬಂಧ ಹಳಸಿದೆ
ಸಿದ್ದರಾಮಯ್ಯ-ಡಿಕೆಶಿ ಸಂಬಂಧ ಸರಿ ಇಲ್ಲ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಸಂಬಂಧ ಚೆನ್ನಾಗಿದೆಯಾ ಅಂತಾ ಗೊತ್ತಾ. ಬೊಮ್ಮಾಯಿ, ಯಡಿಯೂರಪ್ಪ ಸಂಬಂಧ ಹಳಸಿ ಹೋಗಿದೆ. ಆದರೆ, ಡಿಕೆಶಿ ನಾನು ಚೆನ್ನಾಗಿದ್ದೇವೆ ಎಂದು ನಸುನಕ್ಕರು.

ಮುಂದಿನ ಸಿಎಂ ಸಿದ್ದರಾಮಯ್ಯ ಎಂಬ ಘೋಷಣೆ
ಇಲ್ಲಿಯ ವಿಮಾನ ನಿಲ್ದಾಣದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಬರುತ್ತಿದ್ದಂತೆ ಮುಂದಿನ ಸಿಎಂ ಸಿದ್ದರಾಮಯ್ಯ ಎಂಬ ಘೋಷಣೆ ಮೊಳಗಿತು. ಸಿದ್ದರಾಮಯ್ಯ ಅಭಿಮಾನಿಗಳು, ಕಾಂಗ್ರೆಸ್‌ ಕಾರ್ಯಕರ್ತರು ಮುಂದಿನ ಸಿಎಂ ಘೋಷಣೆ ಕೂಗಿದರು. ಮಾಧ್ಯಮ ಗ್ಯಾಲರಿಗೆ ಬರುತ್ತಿದ್ದಂತೆ ಅಭಿಮಾನಿಗಳ ಘೋಷಣೆ ಮೊಳಗಿತು. ಕ್ಯಾಮೆರಾಗಳು ಕಾಣಿಸುತ್ತಿದ್ದಂತೆ ಕಾರ್ಯಕರ್ತರು ಜೋರಾಗಿ ಕೂಗಿದಾಗ, ಸುಮ್ಮನಿರಪ್ಪ ಎಂದು ಅಭಿಮಾನಿಗಳನ್ನು ಸಿದ್ದರಾಮಯ್ಯ ಗದರಿಸಿದರು.

ಟಾಪ್ ನ್ಯೂಸ್

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Wild Elephant ಕೊಡಗಿನಲ್ಲಿ 2 ಕಾಡಾನೆಗಳ ಸಾವು

Wild Elephant ಕೊಡಗಿನಲ್ಲಿ 2 ಕಾಡಾನೆಗಳ ಸಾವು

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

Lok Sabha Elections 6ನೇ ಹಂತ: ಶೇ.59.06ರಷ್ಟು ಮತದಾನ

Lok Sabha Elections 6ನೇ ಹಂತ: ಶೇ.59.06ರಷ್ಟು ಮತದಾನ

Bangladesh ಸಂಸದರ ಹತ್ಯೆ ಕೇಸ್‌: ಭಾರತಕ್ಕೆ ಢಾಕಾ ಅಧಿಕಾರಿಗಳ ತಂಡ

Bangladesh ಸಂಸದರ ಹತ್ಯೆ ಕೇಸ್‌: ಭಾರತಕ್ಕೆ ಢಾಕಾ ಅಧಿಕಾರಿಗಳ ತಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

ರಾಜ್ಯದಲ್ಲಿ ಕಾನೂನಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ : ಅಶೋಕ್‌

ರಾಜ್ಯದಲ್ಲಿ ಕಾನೂನಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ : ಅಶೋಕ್‌

27

H. Vishwanath: ವಿಧಾನಸೌಧವೂ ಮಾಲ್‌ ಆಗಿ ಪರಿವರ್ತನೆ

26

Road mishap: ಅಯೋಧ್ಯೆ ಸಮೀಪ ಅಪಘಾತ; ಕಲಬುರಗಿಯ ಮೂವರ ಸಾವು

Legislative Council: ಎಚ್‌. ಆಂಜನೇಯಗೆ ವಿಧಾನ ಪರಿಷತ್‌ ಸ್ಥಾನ ನೀಡಲು  ಆಗ್ರಹ

Legislative Council: ಎಚ್‌. ಆಂಜನೇಯಗೆ ವಿಧಾನ ಪರಿಷತ್‌ ಸ್ಥಾನ ನೀಡಲು  ಆಗ್ರಹ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Wild Elephant ಕೊಡಗಿನಲ್ಲಿ 2 ಕಾಡಾನೆಗಳ ಸಾವು

Wild Elephant ಕೊಡಗಿನಲ್ಲಿ 2 ಕಾಡಾನೆಗಳ ಸಾವು

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.