ಅಕ್ರಮ ಗೋ ಸಾಗಾಟಕ್ಕೆ ತಡೆ: ನಗ, ನಗದು ಕಾಣೆ ಆರೋಪ: ಮಜ್ಜಾರು ಕ್ಷೇತ್ರಕ್ಕೆ ದೂರು


Team Udayavani, Nov 9, 2022, 6:55 AM IST

ಅಕ್ರಮ ಗೋ ಸಾಗಾಟಕ್ಕೆ ತಡೆ: ನಗ, ನಗದು ಕಾಣೆ ಆರೋಪ: ಮಜ್ಜಾರು ಕ್ಷೇತ್ರಕ್ಕೆ ದೂರು

ಕಡಬ: ಕೆಲವು ದಿನಗಳ ಹಿಂದೆ ಕೋಡಿಂಬಾಳದ ಮುರಚೆಡವು ಬಳಿ ಜಾನುವಾರು ಸಾಗಿಸುತ್ತಿದ್ದ ನಮ್ಮ ವಾಹನವನ್ನು ತಡೆದ ಬಜರಂಗದಳ ಕಾರ್ಯಕರ್ತರು ನಮ್ಮ ಚಿನ್ನದ ಚೈನ್‌ ಹಾಗೂ ನಗದು ಅಪಹರಿಸಿದ್ದಾರೆ ಎಂದು ಜಾನುವಾರು ಸಾಗಿಸುತ್ತಿದ್ದವರು ಕೋಡಿಂಬಾಳದ ಮಜ್ಜಾರು ಕಾರಣಿಕ ಕ್ಷೇತ್ರಕ್ಕೆ ದೂರು ನೀಡಿರುವ ಘಟನೆ ನಡೆದಿದೆ.

ಏನೆಕಲ್ಲು ನಿವಾಸಿಗಳಾದ ಸುಧೀರ್‌ ಹಾಗೂ ಬೆಳಿಯಪ್ಪ ಅವರು ಅಕ್ರಮವಾಗಿ ಪಿಕಪ್‌ ನಲ್ಲಿ ಜಾನುವಾರು ಸಾಗಾಟ ಮಾಡುತ್ತಿದ್ದ ವೇಳೆ ಕಡಬದ ವಿಹಿಂಪ ಹಾಗೂ ಬಜರಂಗದಳ ಕಾರ್ಯಕರ್ತರು ತಡೆಯೊಡ್ಡಿ ಆರೋಪಿಗಳು ಹಾಗೂ ಜಾನುವಾರು ಇದ್ದ ವಾಹನವನ್ನು ಪೊಲೀಸರಿಗೆ ಹಸ್ತಾಂತರಿಸಿದ್ದರು. ಘಟನೆಯ ಸಂದರ್ಭ ಜಾನುವಾರು ಸಾಗಾಟದಾರರೊಬ್ಬರ ಚಿನ್ನದ ಚೈನು ಹಾಗೂ ಹಣ ಕಾಣೆಯಾಗಿದ್ದು, ಅದನ್ನು ಕಡಬ ಪ್ರಖಂಡ ವಿಹಿಂಪ ಕಾರ್ಯದರ್ಶಿ ಪ್ರಮೋದ್‌ ರೈ ನಂದುಗುರಿ, ಗೋ ರಕ್ಷಾ ಪ್ರಮುಖ್‌ ಜಯಂತ ಕಲ್ಲುಗುಡ್ಡೆ, ಬಜರಂಗದಳದ ರಕ್ಷಿತ್‌ ಕೇಪು, ಸಂತೋಷ್‌ ದೋಳ, ತೀರ್ಥೇಶ್‌ ಮೀನಾಡಿ ಕದ್ದಿದ್ದಾರೆ ಎಂದು ಕೋಡಿಂಬಾಳದ ಮಜ್ಜಾರು ಕಾರಣಿಕ ಕ್ಷೇತ್ರಕ್ಕೆ ದೂರು ನೀಡಿದ ಹಿನ್ನೆಲೆಯಲ್ಲಿ ಮಂಗಳವಾರ ಕ್ಷೇತ್ರದಲ್ಲಿ ಕ್ಷೇತ್ರದ ಅಧ್ಯಕ್ಷ ಪ್ರಸಾದ ಕೆದಿಲಾಯ ಅವರ ನೇತೃತ್ವದಲ್ಲಿ ದೂರು ವಿಚಾರಣೆ ನಡೆಸಲಾಯಿತು.

ಆರೋಪ ನಿರಾಕರಣೆ
ವಿಚಾರಣೆಗೆ ಹಾಜರಾಗಿದ್ದ ಬಜರಂಗದಳ ಕಾರ್ಯಕರ್ತರು ದೂರುದಾರರ ಆರೋಪವನ್ನು ನಿರಾಕರಿಸಿ ನಾವು ಅಕ್ರಮವಾಗಿ ಕಸಾಯಿಖಾನೆಗೆ ಗೋವುಗಳನ್ನು ಸಾಗಾಟ ಮಾಡುತ್ತಿದ್ದುದನ್ನು ತಡೆದು ಪೊಲೀಸರಿಗೆ ಒಪ್ಪಿಸಿದ್ದು ನಿಜ. ಆದರೆ ಚಿನ್ನ, ಹಣ ಕದ್ದಿಲ್ಲ, ಅದನ್ನು ನೋಡಿಯೂ ಇಲ್ಲ, ಆ ಬಗ್ಗೆ ನೀವು ದೈವದ ಸಾನಿಧ್ಯದಲ್ಲಿ ಪ್ರಾರ್ಥನೆ ಮಾಡಿಕೊಳ್ಳಲು ನಮ್ಮದೇನು ಅಭ್ಯಂತವಿಲ್ಲ. ಆದರೆ ನೀವು ಅಕ್ರಮವಾಗಿ ಕಸಾಯಿಖಾನೆಗೆ ಜಾನುವಾರುಗಳನ್ನು ಹಿಂಸಾತ್ಮಾಕ ರೀತಿಯಲ್ಲಿ ಸಾಗಿಸುತ್ತಿದ್ದರೂ ಒಪ್ಪಿಕೊಳ್ಳದೆ, ಜಾನುವಾರನ್ನು ತಂಗಿಯ ಮನೆಗೆ ಸಾಕಲು ಕೊಂಡೊಯ್ಯುತ್ತಿರುವುದಾಗಿ ಸುಳ್ಳು ಹೇಳಿದ್ದೀರಿ. ಅದನ್ನೇ ದೈವದ ಸಾನಿಧ್ಯದ ಎದುರು ಹೇಳುವಂತೆ ಕೇಳಿಕೊಂಡರು. ಆ ಸಂದರ್ಭದಲ್ಲಿ ಜಾನುವಾರು ಸಾಗಿಸಿದವರ ಪೈಕಿ ಸುಧೀರ್‌ ಅವರು ತನ್ನ ತಪ್ಪನ್ನು ಒಪ್ಪಿಕೊಂಡು ಘಟನೆಯ ವೇಳೆ ನಾವು ತಂಗಿಯ ಮನೆಗೆ ಜಾನುವಾರು ಸಾಗಿಸುತ್ತಿದ್ದುದು ಎಂದು ಸುಳ್ಳು ಹೇಳಿದ್ದೇವೆ. ನಾವು ವ್ಯಕ್ತಿಯೋರ್ವರಿಗೆ ಕೊಡುವುದಕ್ಕಾಗಿ ಜಾನುವಾರು ಸಾಗಿಸುತ್ತಿದ್ದುದಾಗಿ ಹೇಳಿ ಮುಂದೆ ಅಕ್ರಮ ಕಸಾಯಿಖಾನೆಗೆ ಜಾನುವಾರು ಸಾಗಾಟ ಮಾಡುವುದಿಲ್ಲ ಎಂದು ಕ್ಷಮೆ ಯಾಚಿಸಿದರು.

ಆ ಬಳಿಕ ಚಿನ್ನ ಮತ್ತು ಹಣ ಕಾಣೆಯಾಗಿರುವ ಬಗ್ಗೆ ರಾಜನ್‌ ದೈವದ ಸಾನಿಧ್ಯದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭ ಮಜ್ಜಾರು ಕ್ಷೇತ್ರದ ಪ್ರಮುಖರಾದ ಸುದರ್ಶನ ಗೌಡ, ಮಾಧವ ಕೋಲ್ಪೆ, ರಘುರಾಮ ನಾೖಕ್‌ ಕುಕ್ಕೆರೆಬೆಟ್ಟು ಮತ್ತಿತರರು ಉಪಸ್ಥಿತರಿದ್ದರು.

 

ಟಾಪ್ ನ್ಯೂಸ್

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Yelimale ಶಾಲೆಯ ತಡೆಗೋಡೆ ಕುಸಿತ; 20ಕ್ಕೂ ಅಧಿಕ ಕೋಳಿಗಳ ಸಾವು

Yelimale ಶಾಲೆಯ ತಡೆಗೋಡೆ ಕುಸಿತ; 20ಕ್ಕೂ ಅಧಿಕ ಕೋಳಿಗಳ ಸಾವು

Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

Uppinangady: ಹೆದ್ದಾರಿ ತಡೆಗೋಡೆ ಕುಸಿತ

Uppinangady: ಹೆದ್ದಾರಿ ತಡೆಗೋಡೆ ಕುಸಿತ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.