ಇಂದು ಅಕ್ರಮ ಗಣಿ ಪ್ರಕರಣ ವಿಚಾರಣೆ; ಮಾಜಿ ಸಚಿವ ಜನಾರ್ದನ ರೆಡ್ಡಿ ಹಾಜರ್‌

ಉದ್ಯಮಿ ಟಪಾಲ್‌ ಏಕಾಂಬರ್‌ಗೆ ಸಮನ್ಸ್‌ ಜಾರಿ

Team Udayavani, Nov 9, 2022, 6:40 AM IST

ಇಂದು ಅಕ್ರಮ ಗಣಿ ಪ್ರಕರಣ ವಿಚಾರಣೆ; ಮಾಜಿ ಸಚಿವ ಜನಾರ್ದನ ರೆಡ್ಡಿ ಹಾಜರ್‌

ಬಳ್ಳಾರಿ: ಓಬಳಾಪುರಂ ಮೈನಿಂಗ್‌ ಕಂಪನಿಯ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್‌ ಸಿಬಿಐ ನ್ಯಾಯಾಲಯದಲ್ಲಿ ಬುಧವಾರ ವಿಚಾರಣೆ ನಡೆಯಲಿದ್ದು ಈ ಕುರಿತು ಆರೋಪಿಸಿದ್ದ ಗಣಿ ಉದ್ಯಮಿ ಟಪಾಲ್‌ ಎಕಾಂಬರಂ ಅವರಿಗೆ ದಾಖಲೆ ಸಲ್ಲಿಸುವಂತೆ ಸಮನ್ಸ್‌ ಜಾರಿಗೊಳಿಸಿದೆ.

ಮಾಜಿ ಸಚಿವ ಜನಾರ್ದನರೆಡ್ಡಿ ಸಹಭಾಗಿತ್ವದ ಓಎಂಸಿ ಗಣಿ ಕಂಪನಿಯಲ್ಲಿ ಅಕ್ರಮ ಮತ್ತು ಅವೈಜ್ಞಾನಿಕವಾಗಿ ಗಣಿಗಾರಿಕೆ ಮತ್ತು ಅದಿರು ಸಾಗಣೆ ಮಾಡಲಾಗಿದೆ ಎಂಬ ದೂರಿನನ್ವಯ 2011, ಸೆ.5ರಂದು ಜನಾರ್ದನ ರೆಡ್ಡಿ ಅವರನ್ನು ಸಿಬಿಐ ಅ ಧಿಕಾರಿಗಳು ಬಂಧಿಸಿದ್ದರು. 5 ವರ್ಷಗಳ ಕಾಲ ಹೈದ್ರಾಬಾದ್‌ ಮತ್ತು ಬೆಂಗಳೂರು ಜೈಲಿನಲ್ಲಿರಿಸಿ ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತಾದರೂ ಬಳ್ಳಾರಿ, ಅನಂತಪುರಂ, ಕರ್ನೂಲ್‌ ಜಿಲ್ಲೆಗಳಿಗೆ ಹೋಗದಂತೆ ಷರತ್ತು ವಿಧಿಸಿತ್ತು. ಆ ಷರತ್ತನ್ನು ಸಹ ಕಳೆದ ಒಂದು ವರ್ಷದಿಂದ ಸಡಿಲಿಸಲಾಗಿತ್ತಾದರೂ ಸುಪ್ರೀಂಕೋರ್ಟ್‌ ನ.6ರವರೆಗೆ ಮಾತ್ರ ಬಳ್ಳಾರಿಯಲ್ಲಿ ಇರಲು ಅವಕಾಶ ನೀಡಿ ಇದೀಗ ಈ ಹಿಂದಿನಂತೆ ಷರತ್ತು ಮುಂದುವರಿಸಿದೆ.

ಈ ಮಧ್ಯೆ ಸುಪ್ರೀಂ ಕೋರ್ಟ್‌ ಸಿಬಿಐ ನ್ಯಾಯಾಲಯಕ್ಕೆ ರೆಡ್ಡಿ ಮೇಲಿನ ಆರೋಪದ ಪ್ರಕರಣದ ವಿಚಾರಣೆ ತೀವ್ರ ವಿಳಂಬವಾಗುತ್ತಿದ್ದು ಬರುವ ಆರು ತಿಂಗಳಲ್ಲಿ ವಿಚಾರಣೆ ಮುಗಿಸಲು ಸೂಚಿಸಿದ ಹಿನ್ನೆಲೆಯಲ್ಲಿ ಈಗ ಪ್ರಕರಣ ತೀವ್ರತೆ ಪಡೆದುಕೊಂಡಿದೆ.

ಈ ಕುರಿತು ದೂರವಾಣಿ ಮೂಲಕ ಮಾತನಾಡಿದ ಗಣಿ ಉದ್ಯಮಿ ಟಪಾಲ್‌ ಎಕಾಂಬರಂ, ಓಎಂಸಿ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಆಂಧ್ರ ಸರ್ಕಾರ ಪ್ರಕರಣ ದಾಖಲಿಸಿದ್ದು, ನಮ್ಮನ್ನು ಸಾಕ್ಷಿಯನ್ನಾಗಿಸಿತ್ತು. ಈ ಹಿನ್ನೆಲೆಯಲ್ಲಿ ದಾಖಲೆ ಸಲ್ಲಿಸುವಂತೆ ಸಿಬಿಐ ನ್ಯಾಯಾಲಯ ಸಮನ್ಸ್‌ ಜಾರಿಗೊಳಿಸಿದೆ. ಹಾಗಾಗಿ ಬುಧವಾರ ಹೈದ್ರಾಬಾದ್‌ಗೆ ತೆರಳಿ ಸರ್ಕಾರಿ ಅಭಿಯೋಜಕರಿಗೆ ದಾಖಲೆಗಳನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Prajwal Revanna ಕಣ್ಣಾಮುಚ್ಚಾಲೆ ಆಟಕ್ಕೆ ಎಸ್‌ಐಟಿ ಸುಸ್ತು!

Prajwal Revanna ಕಣ್ಣಾಮುಚ್ಚಾಲೆ ಆಟಕ್ಕೆ ಎಸ್‌ಐಟಿ ಸುಸ್ತು!

Kunigal: ಅಪರಿಚಿತ ವಾಹನ ಡಿಕ್ಕಿ ಹೊಡೆದು ಎಎಸ್ಐ ಗೆ ಗಂಭೀರ ಗಾಯ

Kunigal: ಅಪರಿಚಿತ ವಾಹನ ಡಿಕ್ಕಿ ಹೊಡೆದು ಎಎಸ್ಐ ಗೆ ಗಂಭೀರ ಗಾಯ

ಪ್ರಜ್ವಲ್‌ ಎಲ್ಲಿದ್ದಾನೆ ಎಂದು ಗೊತ್ತಿದ್ದರೆ ಹೇಳಿ: ಪರಂ

ಪ್ರಜ್ವಲ್‌ ಎಲ್ಲಿದ್ದಾನೆ ಎಂದು ಗೊತ್ತಿದ್ದರೆ ಹೇಳಿ: ಡಾ| ಜಿ. ಪರಮೇಶ್ವರ್‌

Pen Drive Case; ತಿಮಿಂಗಿಲ ಬಡಿದು ತಿನ್ನಬೇಕಾ, ಬೇಡವಾ?

Pen Drive Case; ತಿಮಿಂಗಿಲ ಬಡಿದು ತಿನ್ನಬೇಕಾ, ಬೇಡವಾ?

Theft Case ಗುಜರಿ ಅಂಗಡಿಯಿಂದ 3 ನೇ ಬಾರಿ ಕಳವು : ಇಬ್ಬರ ಬಂಧನ

Theft Case ಗುಜರಿ ಅಂಗಡಿಯಿಂದ 3 ನೇ ಬಾರಿ ಕಳವು : ಇಬ್ಬರ ಬಂಧನ

Kasaragod ಬೈಕ್‌ಗಳ ಮುಖಾಮುಖಿ ಢಿಕ್ಕಿ; ವಿದ್ಯಾರ್ಥಿ ಸಾವು, ಇಬ್ಬರಿಗೆ ಗಾಯ

Kasaragod ಬೈಕ್‌ಗಳ ಮುಖಾಮುಖಿ ಢಿಕ್ಕಿ; ವಿದ್ಯಾರ್ಥಿ ಸಾವು, ಇಬ್ಬರಿಗೆ ಗಾಯ

4.76 ಕೋಟಿ ರೂ. ವಂಚಿಸಿದ ಪ್ರಕರಣ; ರಿಯಲ್‌ ಎಸ್ಟೇಟ್‌ನಲ್ಲಿ ಹೂಡಿಕೆ ಸಾಧ್ಯತೆ ?

4.76 ಕೋಟಿ ರೂ. ವಂಚಿಸಿದ ಪ್ರಕರಣ; ರಿಯಲ್‌ ಎಸ್ಟೇಟ್‌ನಲ್ಲಿ ಹೂಡಿಕೆ ಸಾಧ್ಯತೆ ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna ಕಣ್ಣಾಮುಚ್ಚಾಲೆ ಆಟಕ್ಕೆ ಎಸ್‌ಐಟಿ ಸುಸ್ತು!

Prajwal Revanna ಕಣ್ಣಾಮುಚ್ಚಾಲೆ ಆಟಕ್ಕೆ ಎಸ್‌ಐಟಿ ಸುಸ್ತು!

Kunigal: ಅಪರಿಚಿತ ವಾಹನ ಡಿಕ್ಕಿ ಹೊಡೆದು ಎಎಸ್ಐ ಗೆ ಗಂಭೀರ ಗಾಯ

Kunigal: ಅಪರಿಚಿತ ವಾಹನ ಡಿಕ್ಕಿ ಹೊಡೆದು ಎಎಸ್ಐ ಗೆ ಗಂಭೀರ ಗಾಯ

ಪ್ರಜ್ವಲ್‌ ಎಲ್ಲಿದ್ದಾನೆ ಎಂದು ಗೊತ್ತಿದ್ದರೆ ಹೇಳಿ: ಪರಂ

ಪ್ರಜ್ವಲ್‌ ಎಲ್ಲಿದ್ದಾನೆ ಎಂದು ಗೊತ್ತಿದ್ದರೆ ಹೇಳಿ: ಡಾ| ಜಿ. ಪರಮೇಶ್ವರ್‌

Pen Drive Case; ತಿಮಿಂಗಿಲ ಬಡಿದು ತಿನ್ನಬೇಕಾ, ಬೇಡವಾ?

Pen Drive Case; ತಿಮಿಂಗಿಲ ಬಡಿದು ತಿನ್ನಬೇಕಾ, ಬೇಡವಾ?

mango

ಧಾರವಾಡ ಮಾವು ಮೇಳಕ್ಕೆ ಉತ್ತಮ‌ ಸ್ಪಂದನೆ: 40 ಟನ್ ಮಾರಾಟ, ಮತ್ತೆ ಮೂರು ದಿನ‌ ವಿಸ್ತರಣೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Prajwal Revanna ಕಣ್ಣಾಮುಚ್ಚಾಲೆ ಆಟಕ್ಕೆ ಎಸ್‌ಐಟಿ ಸುಸ್ತು!

Prajwal Revanna ಕಣ್ಣಾಮುಚ್ಚಾಲೆ ಆಟಕ್ಕೆ ಎಸ್‌ಐಟಿ ಸುಸ್ತು!

Kunigal: ಅಪರಿಚಿತ ವಾಹನ ಡಿಕ್ಕಿ ಹೊಡೆದು ಎಎಸ್ಐ ಗೆ ಗಂಭೀರ ಗಾಯ

Kunigal: ಅಪರಿಚಿತ ವಾಹನ ಡಿಕ್ಕಿ ಹೊಡೆದು ಎಎಸ್ಐ ಗೆ ಗಂಭೀರ ಗಾಯ

ಪ್ರಜ್ವಲ್‌ ಎಲ್ಲಿದ್ದಾನೆ ಎಂದು ಗೊತ್ತಿದ್ದರೆ ಹೇಳಿ: ಪರಂ

ಪ್ರಜ್ವಲ್‌ ಎಲ್ಲಿದ್ದಾನೆ ಎಂದು ಗೊತ್ತಿದ್ದರೆ ಹೇಳಿ: ಡಾ| ಜಿ. ಪರಮೇಶ್ವರ್‌

Pen Drive Case; ತಿಮಿಂಗಿಲ ಬಡಿದು ತಿನ್ನಬೇಕಾ, ಬೇಡವಾ?

Pen Drive Case; ತಿಮಿಂಗಿಲ ಬಡಿದು ತಿನ್ನಬೇಕಾ, ಬೇಡವಾ?

Theft Case ಗುಜರಿ ಅಂಗಡಿಯಿಂದ 3 ನೇ ಬಾರಿ ಕಳವು : ಇಬ್ಬರ ಬಂಧನ

Theft Case ಗುಜರಿ ಅಂಗಡಿಯಿಂದ 3 ನೇ ಬಾರಿ ಕಳವು : ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.