ಪಾಕ್ ಗೆ ಹೋಗೋದು ಒಳ್ಳೇದು: ಜಾರಕಿಹೊಳಿ ವಿರುದ್ಧ ಮಧ್ಯಪ್ರದೇಶ ಸಚಿವ ಮಿಶ್ರಾ ಆಕ್ರೋಶ
ರಾಹುಲ್ ಗಾಂಧಿ ಹಿಂದೂ ಮತ್ತು ಹಿಂದೂತ್ವದ ಬಗ್ಗೆ ವ್ಯಾಖ್ಯಾನಿಸಲು ಪ್ರಯತ್ನಿಸಿದ್ದಾರೆ
Team Udayavani, Nov 9, 2022, 10:50 AM IST
ಭೋಪಾಲ್: ಹಿಂದೂ ಪದ ಪರ್ಷಿಯನ್ ಮೂಲದ್ದಾಗಿದ್ದು, ಇದು ತುಂಬಾ ಕೆಟ್ಟ ಅರ್ಥವನ್ನು ಹೊಂದಿದೆ ಎಂಬ ಕಾಂಗ್ರೆಸ್ ಮುಖಂಡ, ಶಾಸಕ ಸತೀಶ್ ಜಾರಕಿಹೊಳಿ ಹೇಳಿಕೆಯನ್ನು ಮಧ್ಯಪ್ರದೇಶದ ಗೃಹ ಸಚಿವ, ಬಿಜೆಪಿ ಮುಖಂಡ ನರೋತ್ತಮ್ ಮಿಶ್ರಾ ಬಲವಾಗಿ ಖಂಡಿಸಿದ್ದು, ಈ ಬಗ್ಗೆ ಕಾಂಗ್ರೆಸ್ ಪಕ್ಷ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದ್ದಾರೆ.
ಇದನ್ನೂ ಓದಿ:ದೇಶದ 50ನೇ ಸಿಜೆಐ ಆಗಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್
ಈ ವಿವಾದಿತ ಹೇಳಿಕೆ ಕುರಿತು ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿರುವ ಮಿಶ್ರಾ, ಜಾರಕಿಹೊಳಿ ಹೇಳಿಕೆ ಬಗ್ಗೆ ರಾಹುಲ್ ಗೆ ಪತ್ರ ಬರೆಯುವುದಾಗಿ ತಿಳಿಸಿದ್ದಾರೆ.
ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಹಿಂದೂ ಮತ್ತು ಹಿಂದೂತ್ವದ ಬಗ್ಗೆ ವ್ಯಾಖ್ಯಾನಿಸಲು ಪ್ರಯತ್ನಿಸಿದ್ದಾರೆ. ಆದರೆ ಇದೀಗ ಕಾಂಗ್ರೆಸ್ ಮುಖಂಡರೊಬ್ಬರು ಹಿಂದೂ ಪದದ ಬಗ್ಗೆ ವಿವಾದಿತ ಹೇಳಿಕೆ ನೀಡಿದ್ದಾರೆ ಎಂದು ಮಿಶ್ರಾ ವಾಗ್ದಾಳಿ ನಡೆಸಿದರು.
“ಯಾರಿಗೆ ಹಿಂದೂಗಳು ಮತ್ತು ಹಿಂದುತ್ವದ ಬಗ್ಗೆ ಸಮಸ್ಯೆಯಾಗುತ್ತಿದ್ದರೆ ಅವರು ಪಾಕಿಸ್ತಾನಕ್ಕೆ ಹೋಗಬಹುದು. ನೆರೆಯ ದೇಶದ ಸದ್ಯದ ರಾಜಕೀಯ ಪರಿಸ್ಥಿತಿಯನ್ನು ಅವಲೋಕಿಸಿದರೆ ಪಾಕಿಸ್ತಾನಕ್ಕೆ ಇಂತಹ (ಜಾರಕಿಹೊಳಿ) ಜನರ ಅಗತ್ಯತೆ ಇದೆ” ಎಂದು ಮಿಶ್ರಾ ವ್ಯಂಗ್ಯವಾಡಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಳ್ಳರು & ದರೋಡೆಕೋರರ ಗ್ಯಾಂಗ್ ಚುಚ್ಚಿದ್ದ ವಿಷಕ್ಕೆ ಪೊಲೀಸ್ ಕಾನ್ಸ್ ಟೇಬಲ್ ಮೃತ್ಯು
Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ
Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್ ಉತ್ಸುಕವಾಗಿದೆ: ಪ್ರಧಾನಿ ಮೋದಿ
Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್ ಆದೇಶದಲ್ಲೇನಿದೆ?
Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು
MUST WATCH
ಹೊಸ ಸೇರ್ಪಡೆ
Spray fans: ಬಿಸಿ ಗಾಳಿಯೂ ತಂಪಾಯ್ತು
ಕಳ್ಳರು & ದರೋಡೆಕೋರರ ಗ್ಯಾಂಗ್ ಚುಚ್ಚಿದ್ದ ವಿಷಕ್ಕೆ ಪೊಲೀಸ್ ಕಾನ್ಸ್ ಟೇಬಲ್ ಮೃತ್ಯು
Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು
Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ
Jasti Preethi; ಫೇಸ್ ಬುಕ್ ಪೋಸ್ಟ್ ಸಿನಿಮಾವಾಯಿತು..