ಜೈಲಿಗೆ ಆಹಾರ ತರಿಸಿಕೊಂಡರೆ ಹೆಚ್ಚುವರಿ ಶಿಕ್ಷೆ: ಸಚಿವ ಆರಗ ಜ್ಞಾನೇಂದ್ರ
Team Udayavani, Nov 10, 2022, 8:00 AM IST
ಹುಳಿಯಾರು: ಜೈಲಿನಲ್ಲಿ ಬಿರಿಯಾನಿ ತರಿಸಿ ತಿನ್ನುತ್ತಿದ್ದಾರೆ. ಮದ್ಯ ಸೇವಿಸುತ್ತಿದ್ದಾರೆ. ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಅಲ್ಲದೆ ಮಾಧಕ ವಸ್ತುಗಳನ್ನು ತರಿಸಿಕೊಳ್ಳುತ್ತಿದ್ದಾರೆ. ಇದು ಸೆರೆಮನೆಯೋ, ಅರಮನೆಯೋ ಎಂದು ಸಾರ್ವಜನಿಕ ವಲಯದಲ್ಲಿ ತೀವ್ರ ಟೀಕೆಗೆ ಗುರಿಯಾಗಿದೆ.
ಹಾಗಾಗಿ ಜೈಲಿನಲ್ಲಿರುವ ಕೈದಿಗಳಿಗೆ ಹೊರಗಡೆಯಿಂದ ಏನನ್ನಾದರೂ ತಂದು ಕೊಟ್ಟರೆ ಜೈಲು ಅಧಿಕಾರಿಗಳಿಗೆ 5 ವರ್ಷ ಜೈಲು ಶಿಕ್ಷೆ, ತರಿಸಿಕೊಂಡವರಿಗೆ ಅವರ ಸೆರೆವಾಸ ಮುಗಿದ ಬಳಿಕ ಪುನಃ 5 ವರ್ಷ ಶಿಕ್ಷೆ ಮುಂದುವರಿಸುವ ಕಾನೂನು ಜಾರಿಗೆ ತಂದಿದ್ದೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.
ಹುಳಿಯಾರು ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಿರುವ ಪೊಲೀಸ್ ಠಾಣೆಯ ಕಟ್ಟಡದ ಉದ್ಘಾಟನೆಯನ್ನು ಬುಧವಾರ ನೆರವೇರಿಸಿ ಅವರು ಮಾತನಾಡಿದರು
ರಾಜ್ಯದಲ್ಲಿ ಶಾಂತಿಸುವ್ಯವಸ್ಥೆ ಕಾಪಾಡಿರುವ ಪೊಲೀಸರಿಗೆ ಅಗತ್ಯ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ 200 ಕೋಟಿ ರೂ. ವೆಚ್ಚದಲ್ಲಿ 117 ಪೊಲೀಸ್ ಠಾಣೆಗೆ ನೂತನ ಕಟ್ಟಡ ನಿರ್ಮಾಣ ಮಾಡಲಾಗುತ್ತಿದ್ದು 20 ಕಟ್ಟಡಗಳು ಈಗಾಗಲೇ ಉದ್ಘಾಟನೆ ಮಾಡಲಾಗಿದೆ. 4 ಸಾವಿರ ಕೋಟಿ ರೂ. ವೆಚ್ಚದಲ್ಲಿ ಪೊಲೀಸರಿಗೆ ಡಬಲ್ ಬೆಡ್ರೂಂ ಮನೆ ಕಟ್ಟಿಕೊಡುತ್ತಿದ್ದೇವೆ. 50 ಕೋಟಿ ರೂ. ವೆಚ್ಚದಲ್ಲಿ ಪೊಲೀಸರಿಗೆ ಹೊಸ ವಾಹನಗಳನ್ನು ಕೊಡಿಸಲಿದ್ದೇವೆ ಎಂದು ವಿವರಿಸಿದರು.
ಮಾಧುಸ್ವಾಮಿ ಆಪತ್ಬಾಂಧವ
ಜೆ.ಸಿ.ಮಾಧುಸ್ವಾಮಿ ಅವರು ತಮ್ಮ ಅಖಂಡ ವಿದ್ವತ್ತು ಮತ್ತು ಅಪ್ರತಿಮ ಪಾಂಡಿತ್ಯದ ಮೂಲಕ ಎದುರಾಳಿಗಳಿಗೆ ಚಾಟಿ ಬೀಸುತ್ತಾರೆ, ತೊಡೆಯನ್ನೂ ತಟ್ಟುತ್ತಾರೆ. ಒಂದರ್ಥದಲ್ಲಿ ಸರಕಾರಕ್ಕೆ ಆಪತ್ಬಾಂಧವರಾಗಿದ್ದಾರೆ ಎಂದು ಆರಗ ಹೇಳಿದರು.
ಸೀನ್ ಆಫ್ ಕ್ರೈಂ ಆಫೀಸರ್ ನೇಮಕ
ಪೊಲೀಸರು ಎಫ್ಐಆರ್ ಹಾಕಿ ಚಾರ್ಚ್ಶೀಟ್ ಹಾಕಿದರೂ ಸಾಕ್ಷ್ಯಾಧಾರಗಳಿಲ್ಲದೆ ಬಿದ್ದು ಹೋಗುತ್ತವೆ. ಹಾಗಾಗಿ ಅಪರಾಧ ನಡೆದ ಕೆಲವು ನಿಮಿಷದಲ್ಲೇ ಸಾಕ್ಷಿ ಕಾಪಾಡಬೇಕು, ಸಾಕ್ಷಿ ನಾಶ ಆದರೆ ಪತ್ತೆ ಕಷ್ಟ.
ಹಾಗಾಗಿ ವಿಧಿವಿಜ್ಞಾನ ಜ್ಞಾನ ಇರುವವರ ಅಗತ್ಯವಿದೆ ಎನ್ನುವ ನಿಟ್ಟಿನಲ್ಲಿ ಅಪರಾಧ ಶೋಧನೆಗೆ ಹೊಸ ಹೆಜ್ಜೆ ಇರಿಸಿದ್ದು, ಸೀನ್ ಆಫ್ ಕ್ರೈಂ ಆಫೀಸರ್ ನೇಮಕ ಮಾಡಿಕೊಳ್ಳುತ್ತಿದೆ. ಇವರಿಂದ ಅಪರಾಧ ಪತ್ತೆ ಶೀಘ್ರವಾಗಲಿದೆ, ಶೀಘ್ರ ನ್ಯಾಯ ಸಿಗಲಿದೆ ಎಂದು ವಿಶ್ವಾಸವನ್ನು ಗೃಹ ಸಚಿವ ಅರಗ ಜ್ಞಾನೇಂದ್ರ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
MUST WATCH
ಹೊಸ ಸೇರ್ಪಡೆ
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ