ಹಳೆ ಮಾದರಿ ಗೇಟಿಗೆ ಸಿಕ್ಕಿಲ್ಲ ಮುಕ್ತಿ

ರೈಲ್ವೇ ಹಳಿ ಸಂಪರ್ಕ ರಸ್ತೆಗಳಲ್ಲಿ ತಪ್ಪದ ಟ್ರಾಫಿಕ್‌ ಸಮಸ್ಯೆ

Team Udayavani, Nov 10, 2022, 10:40 AM IST

3

ಪುತ್ತೂರು: ಮಂಗಳೂರು-ಬೆಂಗಳೂರು ರೈಲು ಹಳಿಯಲ್ಲಿನ ಪುತ್ತೂರಿನಿಂದ ನೆಟ್ಟಣ ತನಕ ಹದಿನೈದು ಮಾನವ ಆಧಾರಿತ ಗೇಟುಗಳು ದಿನಂಪ್ರತಿ ವಾಹನ ಸಂಚಾರಕ್ಕೆ ತಡೆ ಒಡ್ಡುತ್ತಿದೆ.

ಪದೇ-ಪದೆ ಬಂದ್‌ ಆಗುವ ರೈಲ್ವೇ ಗೇಟ್‌ ಎದುರು ವಾಹನಗಳು ತಾಸುಗಟ್ಟಲೇ ಕಾಯುವ ಸ್ಥಿತಿಗೆ ಮುಕ್ತಿ ಯಾವಾಗ ಎನ್ನುವ ಪ್ರಶ್ನೆಯೀಗ ಎದ್ದಿದೆ. ಕಳೆದ ಹತ್ತಾರು ವರ್ಷಗಳಿಂದ ರೈಲ್ವೇ ಮೇಲ್ಸೇತುವೆ ಅಥವಾ ಅಂಡರ್‌ಪಾಸ್‌ ನಿರ್ಮಿಸಬೇಕೆಂದು ಸ್ಥಳೀಯರು ಆಗ್ರಹ, ಮನವಿ ಮಾಡುತ್ತಿದ್ದರೂ ಅದಕ್ಕಿನ್ನು ವೇಗ ಸಿಕ್ಕಿಲ್ಲ. ಹೀಗಾಗಿ ಗೇಟು ಮುಂದೆ ಕಾಯುವ ಸ್ಥಿತಿ ತಪ್ಪಿಲ್ಲ.

ಪುತ್ತೂರು, ಸುಳ್ಯ, ಕಡಬ ಮೂಲಕ ಹಾದು ಹೋಗಿರುವ ರೈಲ್ವೇ ಹಳಿಯಲ್ಲಿ ಮಾನವ ಆಧಾರಿತ ಗೇಟು ಹೊಂದಿರುವ ಸಂಖ್ಯೆ 15. ಎಪಿಎಂಸಿ ರಸ್ತೆ, ಸಾಮೆತ್ತಡ್ಕ, ಬೆದ್ರಾಳ, ಮುಕ್ವೆ, ಪುರುಷರಕಟ್ಟೆ, ಗಡಿಪಿಲ, ಸವಣೂರು, ಬರೆಪ್ಪಾಡಿ, ಬೆಳಂದೂರು, ಚಾರ್ವಾಕ, ಎಡಮಂಗಲ-2, ಕೋರಿಯರ್‌, ಬಜಕ್ಕೆರೆ, ಮುದೂರು ಬಳಿ ಗೇಟುಗಳಿವೆ. ಇವುಗಳ ಪೈಕಿ ಹತ್ತಾರು ವರ್ಷಗಳ ಬೇಡಿಕೆಯ ಪರಿಣಾಮ ಎಪಿಎಂಸಿ ರಸ್ತೆ ಬಳಿ 11 ಕೋ.ರೂ.ವೆಚ್ಚದಲ್ಲಿ ಅಂಡರ್‌ಪಾಸ್‌ ನಿರ್ಮಾಣ ಹಂತದಲ್ಲಿ ಇದೆ. ಉಳಿದ ಮೂರು ಕಡೆಗಳಲ್ಲಿ ಪ್ರಸ್ತಾವನೆ ಸಲ್ಲಿಕೆ ಆಗಿದೆ ಅನ್ನುವುದು ರೈಲ್ವೇ ಇಲಾಖೆ ನೀಡುವ ಮಾಹಿತಿ.

ದಿನವಿಡೀ ಸಂಚಾರ

ಮಂಗಳೂರಿನಿಂದ ಬೆಂಗಳೂರಿಗೆ ಸಂಪರ್ಕ ಹೊಂದಿರುವ ಈ ರೈಲು ಮಾರ್ಗದಲ್ಲಿ ದಿನವೊಂದಕ್ಕೆ 16 ಬಾರಿ ರೈಲು ಸಂಚರಿಸುತ್ತವೆ (ರಿಟರ್ನ್ ಸೇರಿ). ಎಪಿಎಂಸಿ ರಸ್ತೆ, ಬೆದ್ರಾಳ, ಮುಕ್ವೆ, ಪುರುಷರಕಟ್ಟೆ, ಸವಣೂರು, ಎಡಮಂಗಲ ಮೊದಲಾದ ಗೇಟುಗಳಲ್ಲಿ ಸದಾ ವಾಹನ ದಟ್ಟಣೆ ಇದೆ. ನಿಲ್ದಾಣಕ್ಕೆ ಒಮ್ಮೆ ರೈಲು ಬರುವ ಸೂಚನೆ ಕಂಡು ಬಂದರೆ ಹತ್ತರಿಂದ ಹನ್ನೆರಡು ನಿಮಿಷ ಗೇಟನ್ನು ಹಾಕುತ್ತಾರೆ. ಒಮ್ಮೊಮ್ಮೆ ಅದಕ್ಕಿಂತ ಹೆಚ್ಚು ಬಾರಿ ನಿಲ್ಲುತ್ತದೆ. ಈ ವೇಳೆ ರಸ್ತೆಯ ಎರಡೂ ಬದಿ ವಾಹನಗಳ ನಿಲುಗಡೆಯಿಂದ ಟ್ರಾಫಿಕ್‌ ಕಿರಿ-ಕಿರಿ ಉಂಟಾಗುತ್ತಿದೆ. ಇದು ದೈನಂದಿನ ಗೋಳು ಕೂಡ ಆಗಿದೆ. ಪ್ರತಿದಿನ ಇಂತಹ ಟ್ರಾಫಿಕ್‌ ಕಿರಿಕಿರಿಯಿಂದ ಪ್ರಯಾಣಿಕರು ಬೇಸತ್ತಿದ್ದಾರೆ.

ಮಾನವ ಆಧಾರಿತ ಗೇಟುಗಳಿಗೆ ಮುಕ್ತಿ: ಕೇಂದ್ರ ಸರಕಾರದಿಂದ ರೈಲ್ವೇ ಹಳಿ ಹಾದು ಹೋಗಿರುವ ಕಡೆಗಳಲ್ಲಿ ಇರುವ ಮಾನವ ಆಧಾರಿತ ಗೇಟುಗಳಿಗೆ ಮುಕ್ತಿ ನೀಡುವ ಕಾರ್ಯ ಆಗುತ್ತಿದೆ. ಪುತ್ತೂರು ಭಾಗದಲ್ಲಿನ ಎಪಿಎಂಸಿ ರಸ್ತೆ ಬಳಿ ಅಂಡರ್‌ ಪಾಸ್‌ ನಿರ್ಮಾಣ ಹಂತದಲ್ಲಿದೆ. ಉಳಿದೆಡೆಯು ಮಾನವ ಆಧಾರಿತ ಗೇಟು ತೆರವು ಮಾಡುವ ಬಗ್ಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು ಶೀಘ್ರ ಅನುಷ್ಠಾನಕ್ಕೆ ಬರಲಿದೆ. –ನಳಿನ್‌ ಕುಮಾರ್‌ ಕಟೀಲು, ಸಂಸದರು, ದ.ಕ.ಲೋಕಸಭಾ ಕ್ಷೇತ್ರ

ಅಪಘಾತಕ್ಕೆ ಕಾರಣ

ಒಮ್ಮೆ ರೈಲ್ವೇ ಗೇಟು ಹಾಕಿದರೆ ಎರಡೂ ಬದಿ ನೂರಾರು ದ್ವಿಚಕ್ರ ವಾಹನ ಸವಾರರು ಗೇಟ್‌ ಹತ್ತಿರ ಜಮಾಯಿಸುತ್ತಾರೆ. ಗೇಟ್‌ ತೆಗೆದ ತತ್‌ಕ್ಷಣ ಒಮ್ಮೆಲೆ ನುಗ್ಗುತ್ತಾರೆ. ಇದರಿಂದ ಸವಾರರು ಬಿದ್ದು, ಎದ್ದು ತೆರಳಬೇಕಾದ ಪರಿಸ್ಥಿತಿ ಉಂಟಾಗುತ್ತದೆ. ಒಮ್ಮೊಮ್ಮೆ ಅಪಘಾತ ಸಂಭವಿಸುತ್ತದೆ. ತುರ್ತು ಚಿಕಿತ್ಸೆಗೆಂದು ಹೊರಟವರು ಅಲ್ಲೇ 15 ನಿಮಿಷ ಆ್ಯಂಬುಲೆನ್ಸ್‌ ನಲ್ಲೇ ಇರಬೇಕು. ಅಲ್ಲದೇ ರಸ್ತೆ ಸಂಚಾರಿಗಳಿಗೆ ಪ್ರತೀ ನಿತ್ಯ ತೊಂದರೆಯಾಗುತ್ತಿದೆ. ಅಪಘಾತ, ಹೆರಿಗೆ ಇತ್ಯಾದಿ ನಿಮಿತ್ತ ತುರ್ತಾಗಿ ಆಸ್ಪತ್ರೆಗೆ ಸೇರಬೇಕಾದ ಸಂದರ್ಭ ಈ ಸ್ಥಳದಲ್ಲಿ ವಿಳಂಬವಾದ ಘಟನೆ ಹಲವು ಸಲ ಸಂಭವಿಸಿದೆ. ಈ ಸ್ಥಳದಲ್ಲಿ ಮೇಲ್ಸೇತುವೆ ಶೀಘ್ರ ನಿರ್ಮಾಣವಾಗಬೇಕು ಅನ್ನುವ ಆಗ್ರಹ ಕೇಳಿ ಬಂದಿದೆ.

-ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.