ಸೆಮಿ ಫೈನಲ್ ಸಮರ : ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿದ ಇಂಗ್ಲೆಂಡ್


Team Udayavani, Nov 10, 2022, 1:11 PM IST

ಸೆಮಿ ಫೈನಲ್ ಸಮರ : ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿದ ಇಂಗ್ಲೆಂಡ್

ಆಡಿಲೇಡ್‍ : ಟಿ20 ವಿಶ್ವಕಪ್‍ನ ಎರಡನೇ ಸೆಮಿಫೈನಲ್ ಕಾದಾಟದಲ್ಲಿ ಇಂದು ಭಾರತ ಹಾಗೂ ಇಂಗ್ಲೆಂಡ್ ಕಾದಾಡಲಿದ್ದು ಟಾಸ್ ಗೆದ್ದ ಇಂಗ್ಲೆಂಡ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ಏಕದಿನ ವಿಶ್ವಕಪ್‌ ಚಾಂಪಿಯನ್‌ ಖ್ಯಾತಿಯ, ಕೂಟದ ಬಲಿಷ್ಠ ತಂಡಗಳಲ್ಲೊಂದಾದ ಇಂಗ್ಲೆಂಡ್‌ ತಂಡವನ್ನು ರೋಹಿತ್‌ ಪಡೆ ಎದುರಿಸಲಿದ್ದು, ತನ್ನ 3ನೇ ಟಿ20 ವಿಶ್ವಕಪ್‌ ಫೈನಲ್‌ ಗುರಿಯನ್ನು ಸಾಕಾರಗೊಳಿಸಬೇಕಿದೆ.

ಇದೀಗ ವಿಶ್ವ ಕ್ರಿಕೆಟ್ ಪ್ರೇಮಿಗಳ ಚಿತ್ತ ಆಡಿಲೇಡ್‍ನತ್ತ ನೆಟ್ಟಿದೆ. ರೋಹಿತ್ ತಂಡ ಯಾವ ರೀತಿ ಬಟ್ಲರ್‌ ಪಡೆಯ ಮೇಲೆ ಹಿಡಿತ ಸಾಧಿಸಲಿದೆ ಎಂದು ಕಾದುನೋಡಬೇಕಾಗಿದೆ.

ಇಂದಿನ ಪಂದ್ಯದಲ್ಲಿ ಗೆದ್ದ ತಂಡ ಮುಂದಿನ ಭಾನುವಾರ ನಡೆಯುವ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನದ ಎದುರು ಸೆಣೆಸಲಿದೆ. ಹಾಗಾಗಿ ಇಂದಿನ ಪಂದ್ಯ ತುಂಬಾ ರೋಚಕವಾಗಲಿದೆ.

ಈವರೆಗಿನ ಟಿ20 ವಿಶ್ವಕಪ್‌ ಇತಿಹಾಸವನ್ನು ಅವಲೋಕಿಸುವಾಗ ಭಾರತ, ಇಂಗ್ಲೆಂಡ್‌ ಸಮಬಲದ ಸಾಧನೆ ದಾಖಲಿಸಿರುವುದನ್ನು ಮರೆಯುವಂತಿಲ್ಲ. ಇತ್ತಂಡಗಳು ಒಮ್ಮೆ ಚಾಂಪಿಯನ್‌ ಆಗಿದ್ದು, ಮತ್ತೊಮ್ಮೆ ಫೈನಲ್‌ನಲ್ಲಿ ಮುಗ್ಗರಿಸಿವೆ.

ಭಾರತ 2007ರ ಚೊಚ್ಚಲ ಟಿ20 ವಿಶ್ವಕಪ್‌ ಎತ್ತಿ ಮೆರೆದಾಡಿದ ತಂಡ. ಅನಂತರ 2014ರ ಫೈನಲ್‌ನಲ್ಲಿ ಶ್ರೀಲಂಕಾಕ್ಕೆ 6 ವಿಕೆಟ್‌ಗಳಿಂದ ಶರಣಾಯಿತು.

ಇನ್ನೊಂದೆಡೆ ಇಂಗ್ಲೆಂಡ್‌ 2010ರಲ್ಲಿ ಆಸ್ಟ್ರೇಲಿಯವನ್ನು ಮಣಿಸಿ ಟಿ20 ವಿಶ್ವ ಚಾಂಪಿಯನ್‌ ಎನಿಸಿತು. ಇದು ಕ್ರಿಕೆಟ್‌ ಜನಕರೆಂಬ ಖ್ಯಾತಿಯ ಇಂಗ್ಲೆಂಡ್‌ಗೆ ಒಲಿದ ಮೊದಲ ವಿಶ್ವಕಪ್‌ ಕೂಡ ಹೌದು. 2016ರಲ್ಲಿ ಮತ್ತೆ ಪ್ರಶಸ್ತಿ ಸುತ್ತಿಗೆ ಲಗ್ಗೆ ಇರಿಸಿತಾದರೂ ಅಲ್ಲಿ ವೆಸ್ಟ್‌ ಇಂಡೀಸ್‌ಗೆ 4 ವಿಕೆಟ್‌ಗಳಿಂದ ತಲೆ ಬಾಗಿತು. 3ನೇ ಫೈನಲ್‌ ಟಿಕೆಟ್‌ ಯಾರಿಗೆಂಬುದು ಇಂದಿನ ಪಂದ್ಯದ ಕುತೂಹಲವಾಗಿದೆ.

ಇದನ್ನೂ ಓದಿ : ಚುನಾವಣೆಯಲ್ಲಿ ಸೋಮಶೇಖರ ರೆಡ್ಡಿಗೆ ಟಿಕೆಟ್ ನೀಡಿದರೆ ಬಿಜೆಪಿಗೆ ಕಷ್ಟ: ರಾಮಲಿಂಗಪ್ಪ ಅಸಮಾಧಾನ

 

ಟಾಪ್ ನ್ಯೂಸ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

8-uv-fusion

UV Fusion: ಬಾಯಾರಿ ಬರುವ ಬಾನಾಡಿಗಳ ರಕ್ಷಿಸೋಣ

veerappa-moily

Prajwal case; ಪಾತ್ರ ಯಾರದ್ದು ಮುಖ್ಯವಲ್ಲ; ಅಭಿನಯ ಮಾಡಿದ್ದು ಮುಖ್ಯ; ವೀರಪ್ಪ ಮೊಯ್ಲಿ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

6-virtual-world

UV Fusion: ವರ್ಚುವಲ್‌  ಪ್ರಪಂಚದಲ್ಲಿ ಅನಾಥರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SUNIPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

IPL ಮುಂಬೈ ಇಂಡಿಯನ್ಸ್‌ ತಂಡಕ್ಕೆ ದಂಡ: ಹಾರ್ದಿಕ್‌ಗೆ ನಿಷೇಧ ಭೀತಿ

IPL ಮುಂಬೈ ಇಂಡಿಯನ್ಸ್‌ ತಂಡಕ್ಕೆ ದಂಡ: ಹಾರ್ದಿಕ್‌ಗೆ ನಿಷೇಧ ಭೀತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬರಪೀಡಿತ ಪಟ್ಟಿಯಲ್ಲಿ ಸೇರಿದ ಕಾರ್ಕಳಕ್ಕೆ 152 ಕೆರೆಗಳೇ ಶ್ರೀರಕ್ಷೆ

ಬರಪೀಡಿತ ಪಟ್ಟಿಯಲ್ಲಿ ಸೇರಿದ ಕಾರ್ಕಳಕ್ಕೆ 152 ಕೆರೆಗಳೇ ಶ್ರೀರಕ್ಷೆ

Davanagere; ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರಿಗೆ ಮಾತೃ ವಿಯೋಗ

Davanagere; ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರಿಗೆ ಮಾತೃ ವಿಯೋಗ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

8-uv-fusion

UV Fusion: ಬಾಯಾರಿ ಬರುವ ಬಾನಾಡಿಗಳ ರಕ್ಷಿಸೋಣ

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.