ಮಂಗಳೂರು: ಆದಾಯಕ್ಕಿಂತ ಹೆಚ್ಚಿನ ಆಸ್ತಿ:ಪಿಡಬ್ಲ್ಯುಡಿ ಎಇ ನರಸಿಂಹರಾಜುಗೆ ಜೈಲು, 25 ಲ.ರೂ.ದಂಡ
Team Udayavani, Nov 10, 2022, 7:54 PM IST
ಮಂಗಳೂರು: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ್ದ ಪ್ರಕರಣದಲ್ಲಿ ಮಂಗಳೂರಿನಲ್ಲಿ ಲೋಕೋಪಯೋಗಿ ಎಕ್ಸಿಕ್ಯೂಟಿವ್ ಎಂಜಿನಿಯರ್ ಆಗಿದ್ದ ಎನ್.ನರಸಿಂಹ ರಾಜು ಅವರ ಮೇಲಿನ ಆರೋಪ ಸಾಬೀತಾಗಿದೆ.
ಇಲ್ಲಿನ 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಅಪರಾಧಿಗೆ 3 ವರ್ಷ 6 ತಿಂಗಳು ಶಿಕ್ಷೆ ಹಾಗೂ 25 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಬೆಂಗಳೂರು ದೇವನಹಳ್ಳಿ ಮದ್ದಯ್ಯ ರಸ್ತೆ ನಿವಾಸಿ ಎನ್. ನರಸಿಂಹರಾಜು ವಿರುದ್ಧ 2010ರ ಮಾ. 24ರಂದು ಆದಾಯಕ್ಕಿಂತ ಹೆಚ್ಚಿನ ಆಸ್ತಿಗಳನ್ನು ಹೊಂದಿರುವ ಬಗ್ಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಬಿ.ಬಿ. ಜಕಾತಿ ನ. 10ರಂದು ತೀರ್ಪು ನೀಡಿದ್ದು, ತೀರ್ಪಿನಲ್ಲಿ ಅಪರಾಧಿ ನರಸಿಂಹರಾಜುವಿಗೆ 3ವರ್ಷ 6ತಿಂಗಳು ಶಿಕ್ಷೆ, 25 ಲಕ್ಷ ರೂ. ದಂಡ, ದಂಡ ಕಟ್ಟಲು ವಿಫಲವಾದಲ್ಲಿ ಮತ್ತೆ 6 ತಿಂಗಳು ಸಾದಾ ಸಜೆ ವಿಧಿಸಿ ಅಂತಿಮ ತೀರ್ಪು ನೀಡಿದ್ದಾರೆ.
ಪೊಲೀಸ್ ಉಪಾಧೀಕ್ಷಕ ಸದಾನಂದ ಎಂ. ವರ್ಣೇಕರ್ ದೂರುದಾರರಾಗಿದ್ದು, ಪೊಲೀಸ್ ಉಪಾಧೀಕ್ಷಕ ವಿಠಲದಾಸ್ ಪೈ ಪ್ರಕರಣದ ತನಿಖೆಯನ್ನು ನಡೆಸಿ ಆರೋಪಿಯ ವಿರುದ್ಧ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು. ಕರ್ನಾಟಕ ಲೋಕಾಯುಕ್ತದ ವಿಶೇಷ ಸಾರ್ವಜನಿಕ ಅಭಿಯೋಜಕ ರವೀಂದ್ರ ಮನ್ನಿಪಾಡಿ ಸರಕಾರದ ಪರವಾಗಿ ವಾದಿಸಿದ್ದರು.
ಮತ್ತೂಂದು ಪ್ರಕರಣ: ನರಸಿಂಹರಾಜು ವಿರುದ್ಧ 2009ರ ಸೆ. 8ರಂದು ಟ್ರಾÂಪ್ ಪ್ರಕರಣವೂ ದಾಖಲಾಗಿದ್ದು, ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ