“ನವ ಭಾರತದ ಸಂಕಲ್ಪ” ಕರ್ನಾಟಕವನ್ನು ಹಾಡಿ ಹೊಗಳಿದ ಪ್ರಧಾನಿ ಮೋದಿ


Team Udayavani, Nov 11, 2022, 1:43 PM IST

“ನವ ಭಾರತದ ಸಂಕಲ್ಪ” ಕರ್ನಾಟಕವನ್ನು ಹಾಡಿ ಹೊಗಳಿದ ಪ್ರಧಾನಿ ಮೋದಿ

ಬೆಂಗಳೂರು: ಕೆಂಪೇಗೌಡರು ಹೇಗೆ ಕಲ್ಪನೆ ಮಾಡಿದ್ದರೋ ಹಾಗೆ ಬೆಂಗಳೂರಿನ ಅಭಿವೃದ್ಧಿ ಮಾಡಲು ನಾವು ಸಂಕಲ್ಪ ಮಾಡಿದ್ದೇವೆ. ಕರ್ನಾಟಕವು ಡಬಲ್ ಇಂಜಿನ್ ಬಲದಲ್ಲಿ ಸಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ವಂದೇ ಭಾರತ್ ರೈಲು, ವಿಮಾನ ನಿಲ್ದಾಣದಲ್ಲಿ ಎರಡನೇ ಟರ್ಮಿನಲ್ ಉದ್ಘಾಟನೆ ಮತ್ತು ಕೆಂಪೇಗೌಡರ ಪ್ರತಿಮೆ ಅನಾವರಣಗೊಳಿಸಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘’ಕರ್ನಾಟಕ ಸಮಸ್ತ ಜನತೆಗೆ ನನ್ನ ಕೋಟಿ ಕೋಟಿ ನಮಸ್ಕಾರಗಳು…” ಎಂದು ಕನ್ನಡದಲ್ಲಿ ಮಾತು ಆರಂಭಿಸಿದರು.

ಕರ್ನಾಟಕಕ್ಕಿಂದು ಮೊದಲ ಮೇಡ್ ಇನ್ ಇಂಡಿಯಾ ವಂದೇ ಭಾರತ್ ರೈಲು ಸಿಕ್ಕಿದೆ. ರಾಜ್ಯದ ಜನತೆಗೆ ಆತೋಧ್ಯಾ- ಪ್ರಯಾಗ್ ರಾಜ್ ಕಾಶಿ ದರ್ಶನ ಮಾಡುವ ಭಾರತ್ ಗೌರವ್ ಕಾಶಿ ದರ್ಶನ ರೈಲು ಉದ್ಘಾಟನೆಯಾಗಿದೆ. ವಿಮಾನ ನಿಲ್ದಾಣದ ಟರ್ಮಿನಲ್ 2 ನ ಕೆಲವು ಫೋಟೊಗಳನ್ನು ಕೆಲ ದಿನಗಳ ಮೊದಲು ನಾನು ಸೋಶಿಯಲ್ ಮಿಡಿಯಾದಲ್ಲಿ ಪೋಸ್ಟ್ ಮಾಡಿದೆ. ಆದರೆ ಅಲ್ಲಿ ಹೋಗಿ ನೋಡಿದಾಗ ಫೋಟೊಕ್ಕಿಂತ ಟರ್ಮಿನಲ್ ಚೆನ್ನಾಗಿದೆ. ಇದು ಬೆಂಗಳೂರಿನ ಜನತೆಯ ಹಲವು ಸಮಯದ ಬೇಡಿಕೆಯಾಗಿತ್ತು. ಇಂದು ನಮ್ಮ ಸರ್ಕಾರ ಅದನ್ನು ಪೂರ್ಣಗೊಳಿಸಿದೆ ಎಂದರು.

ವಿಶ್ವದಲ್ಲಿ ಭಾರತವು ತನ್ನ ಸ್ಟಾರ್ಟ್ ಅಪ್ ಗಳಿಂದ ಗುರುತಿಸಿಕೊಳ್ಳುತ್ತಿದೆ. ಅದಕ್ಕೆ ಬೆಂಗಳೂರು ದೊಡ್ಡ ಕೊಡುಗೆ ನೀಡುತ್ತಿದೆ. ಬೆಂಗಳೂರು ಸ್ಟಾರ್ಟ್ ಅಪ್ ಸ್ಪಿರಿಟ್ ನ ಪ್ರತಿನಿಧಿಯಾಗಿದೆ. ದೇಶದಲ್ಲಿ ನಡೆಯುತ್ತಿರುವ ಬಂಡವಾಳ ಹೂಡಿಕೆಯಿಂದ ಕರ್ನಾಟಕವೂ ಲಾಭ ಪಡೆಯುತ್ತಿದೆ ಎಂದರು.

ವಂದೇ ಭಾರತ್ ಕೇವಲ ರೈಲಲ್ಲ. ಇದು ಹೊಸ ಭಾರತದ ಹೊಸ ಗುರುತಾಗಿದೆ. 21ನೇ ಶತಮಾನದಲ್ಲಿ ಭಾರತದ ರೈಲ್ವೇ ಹೇಗಿರಲಿದೆ ಎನ್ನವುದರ ಪರಿಚಯವಾಗಿದೆ. ಮುಂದಿನ ದಿನಗಳಲ್ಲಿ ಭಾರತೀಯ ರೈಲ್ವೇಗೆ ಹೊಸ ರೂಪ ನೀಡುತ್ತಿದ್ದೇವೆ. ವಿಶ್ವೇಶ್ವರಯ್ಯ ರೈಲ್ವೇ ನಿಲ್ದಾಣಕ್ಕೆ ತೆರಳಿದರೆ ನಮಗೆ ಬೇರೆಯೇ ಪ್ರಪಂಚಕ್ಕೆ ತೆರಳಿದ ಅನುಭವಾಗುತ್ತದೆ. ಹೀಗೆಯೇ ಯಶವಂತಪುರಂ ನಿಲ್ದಾಣದ ಕಾಯಕಲ್ಪಕ್ಕೆ ಕೆಲಸ ಮಾಡಲಾಗುತ್ತಿದೆ ಎಂದು ಮೋದಿ ಹೇಳಿದರು.

ಭಾರತದ ಅಭಿವೃದ್ಧಿಯಲ್ಲಿ ಸಂಪರ್ಕವು ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ವಾಯು ಸಂಪರ್ಕ ಮತ್ತು ಹೊಸ ವಿಮಾನ ನಿಲ್ದಾಣಗಳನ್ನು ರಚಿಸುವುದು ಸಮಯದ ಅಗತ್ಯವಾಗಿದೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೊಸ ಟರ್ಮಿನಲ್ ಸೌಲಭ್ಯಗಳನ್ನು ಹೆಚ್ಚಿಸಲಿದೆ. ಅಭಿವೃದ್ಧಿ ಸಾಧಿಸಲು ನಾವು ಭೌತಿಕ ಮತ್ತು ಸಾಮಾಜಿಕ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸಬೇಕಾಗಿದೆ. ದೇಶದಲ್ಲಿ ಅತ್ಯಾಧುನಿಕ ರೈಲುಗಳ ನಿರ್ಮಾಣವಾಗುತ್ತಿದೆ. 2014ರ ಮೊದಲು ದೇಶದಲ್ಲಿ 70 ಏರ್ ಪೋರ್ಟ್ ಗಳಿದ್ದವು. ಇದೀಗ 140 ಕ್ಕೆ ಏರಿಕೆಯಾಗಿದೆ. ಇದು ವಾಣಿಜ್ಯ ಸೇರಿದಂತೆ ಹಲವು ಕಾರ್ಯಗಳಿಗೆ ಸಹಾಯಕವಾಗುತ್ತದೆ. ದೇಶದ ಏರ್ ಕ್ರಾಫ್ಟ್ ಮತ್ತು ಸ್ಪೇಸ್ ಕ್ರಾಫ್ಟ್ ನಿರ್ಮಾಣದಲ್ಲಿ ಅರ್ಧದಷ್ಟು ಕರ್ನಾಟಕದಲ್ಲೇ ನಡೆಯುತ್ತಿದೆ ಎಂದರು.

ಕೋವಿಡ್ ಕಾರಣದಿಂದ ವಿಶ್ವ ಸಾಕಷ್ಟು ಸಂಕಷ್ಟ ಅನುಭವಿಸಿದೆ. ಆದರೆ ಈ ಸಮಯದಲ್ಲಿ ಕರ್ನಾಟಕದಲ್ಲಿ ನಾಲ್ಕು ಲಕ್ಷ ಕೋಟಿ ರೂ.  ಬಂಡವಾಳ ಹೂಡಿಕೆಯಾಗಿದೆ. ಕರ್ನಾಟಕವು ಡಬಲ್ ಇಂಜಿನ್ ಬಲದಲ್ಲಿ ಸಾಗುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಭಕ್ತಿ ಮತ್ತು ಸಾಮಾಜಿಕ ಶಕ್ತಿಯಿಂದ ಸಮಾಜವನ್ನು ಹೇಗೆ ಒಂದಾಗಿಸಬೇಕು ಎಂದು ಸಂತ ಕನಕದಾಸರು ತೋರಿಸಿಕೊಟ್ಟಿದ್ದಾರೆ. ಕೃಷ್ಣ ಭಕ್ತಿಯೊಂದಿಗೆ ‘ಕುಲ ಕುಲವೆಂದು ಹೊಡೆದಾಡದಿರಿ’ ಎಂದು ಜಾತಿ ವ್ಯವಸ್ತೆಯ ವಿರುದ್ಧ ಅವರು ಸಮಾನತೆಯ ತತ್ವ ಸಾರಿದ್ದರು ಎಂದರು.

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.