ಕೊರಟಗೆರೆ ತಾಲೂಕು ಕಚೇರಿಯಲ್ಲಿ ಕನಕದಾಸ, ಒನಕೆ ಓಬವ್ವ ಜಯಂತಿ


Team Udayavani, Nov 11, 2022, 5:47 PM IST

1-SADSDSAD

ಕೊರಟಗೆರೆ: ಕನಕದಾಸರ ಸಾಮಾಜಿಕ ಸಮಾನತೆಯ ತತ್ವ ಸಿದ್ದಾಂತದ ಕೀರ್ತನೆಗಳು, ಮತ್ತು ಒನಕೆ ಓಬವ್ವರ ದೇಶ ಪ್ರೇಮ, ಪರಾಕ್ರಮ, ಶೌರ್ಯ ವಿಶ್ವಕ್ಕೆ ಮಾದರಿ ಎಂದು ತಹಶೀಲ್ದಾರ್ ನಾಹಿದಾ ಜಮ್ ಜಮ್ ತಿಳಿಸಿದರು.

ಪಟ್ಟಣದ ತಾಲೂಕು ಕಚೇರಿಯಲ್ಲಿ ಕನಕದಾಸರ 535 ನೇ ಜಯಂತಿ ಮತ್ತು ಸರ್ಕಾರದ ಮೊದಲ ಒನಕೆ ಓಬವ್ವ ಜಯಂತಿಯನ್ನು ಆಚರಿಸಿ ಮಾತನಾಡಿ, ಕನಕದಾಸರ ಜೀವನ ಚರಿತ್ರೆ ನಮಗೆಲ್ಲಾ ಆದರ್ಶವಾಗಿದೆ, ಅವರು ಸಮಾಜದಲ್ಲಿ ಜಾತಿ ಪದ್ದತಿ, ವರ್ಣ ಬೇಧ ನೀತಿ, ಅಸ್ಪೃಶ್ಯತೆ ವಿರುದ್ದ ಕೀರ್ತನೆ ಮುಖಾಂತರ ಸಮಾಜದಲ್ಲಿ ಅರಿವು ಮೂಡಿಸಿದವರು, ದೇವರಲ್ಲಿ ನಿರ್ಮಲ ಭಕ್ತಿ ಇದ್ದರೆ ಸಾಕು ಒಲಿಯುತ್ತಾರೆ ಎಂದು ತೋರಿಸಿ ಕೊಟ್ಟಿರುವುದು ಉಡುಪಿಯಲ್ಲಿ ಶ್ರೀ ಕೃಷ್ಣರ ದೇವಾಲಯದಲ್ಲಿ ಸಹ ಸಾಕ್ಷಿಯಾಗಿದೆ. ಇದರಿಂದಲೇ ಕನಕದಾಸರು ದಾಸ ಶ್ರೇಷ್ಟರಾಗಿದ್ದಾರೆ. ಅದೇ ರೀತಿ ಚಿತ್ರದುರ್ಗದ ಒನಕೆ ಓಬ್ಬವ್ವ ತೋರಿಸದ ಶೌರ್ಯ ಬೇರೆ ಯಾರು ತೋರಲಾರರು, ಯಾರಿಗೂ ತಿಳಿಯದೆ ತಕ್ಷಣ ಬಂದ ಶತ್ರು ಸೈನಿಕರ ಬಗ್ಗೆ ಗಂಡನಿಗೆ ಹೇಳದೆ, ಮನೆಯಲ್ಲಿ ಇದ್ದ ಒನಕೆಯನ್ನೇ ಆಯುಧವನ್ನಾಗಿ ಮಾಡಿಕೊಂಡು ತನ್ನ ರಾಜ್ಯ ರಕ್ಷಣೆಗೆ ಹೋರಾಡಿ ತಾಯಿ ನಾಡಿಗಾಗಿ ಮಡಿದ ಓಬವ್ವ ಸ್ರೀ ಕುಲದ ಸ್ವಾಭಿಮಾನದ ಸಂಕೇತವಾಗಿದ್ದಾರೆ, ಅವರ ಜಯಂತಿಯನ್ನು ಸರ್ಕಾರ ಜಾರಿಗೆ ತಂದಿರುವುದು ನಾವೆಲ್ಲರೂ ಧನ್ಯವಾದ ತಿಳಿಸಿಬೇಕಿದೆ ಎಂದರು.

ತಾಲೂಕು ಕುರುಬ ಸಂಘದ ಅದ್ಯಕ್ಷ ಮೈಲಾರಪ್ಪ ಮಾತನಾಡಿ ಕನಕದಾಸರ ಕೃತಿ ಕೀರ್ತನೆಗಳು ಎಲ್ಲಾ ಕಾಲದ ಜನರಿಗೆ ಮಾದರಿ ಎಂದರು. ತಾಲೂಕು ಕನಕ ಯುವ ಸೇನೆ ಅಧ್ಯಕ್ಷ ರಂಗಧಾಮಯ್ಯ ಮಾತನಾಡಿ ಕನಕದಾಸರು ಒಂದು ವರ್ಗಕ್ಕೆ ಸೀಮಿತವಲ್ಲ. ನೊಂದ ಶೋಷಿತರ ಪರ ಹೋರಾಡಿದವರಾಗಿದ್ದಾರೆ ಎಂದರು. ಕಾಳಿದಾಸ ವಿದ್ಯಾವರ್ಧಕ ಸಂಘದ ಜಿಲ್ಲಾ ನಿರ್ದೇಶಕ ನಾಗಭೂಷಣ್ ಮಾತನಾಡಿ ಕನಕದಾಸರು ೫೩೫ ವರ್ಷಗಳಿಂದ ಜನರ ಮನಸ್ಸಿನಲ್ಲಿ ಇದ್ದು ಅವರ ತತ್ವ ಸಿದ್ದಾಂತ ನಮಗೆ ದಾರಿ ದೀಪ ಎಂದರು.

ತಾಲೂಕು ಸಂಗೋಳ್ಳಿ ರಾಯಣ್ಣ ಯುವ ವೇದಿಕೆ ಕಾರ್ಯದರ್ಶಿ ನಂಜುಂಡಯ್ಯ ಮಾತನಾಡಿ ಕನಕ ದಾಸರ ಜೀವನ ಚರಿತ್ರೆ ಮನುಕುಲದ ಎಲ್ಲಾರಿಗೂ ಅದರ್ಶವಾಗಿದೆ, ಬ್ರಾಹ್ಮಣರ ಜಾತಿ ಕಿರುಕುಳ ಮದ್ಯೆ ಸಮಾನತೆಗೆ ಹೋರಾಡಿದ ಮಹಾನ್ ಚೇತನ ಎಂದರು.

ತಾಲೂಕು ಛಲವಾದಿ ಸಂಘದ ಕಾರ್ಯದರ್ಶಿ ಪಟ್ಟರಾಜು ಮಾತನಾಡಿ ಒನಕೆ ಓಬವ್ವ ದೇಶದ ಸಮಸ್ತ ಎಲ್ಲಾ ನಾರಿಯರಿಗೆ ಆದರ್ಶವಾಗಿದ್ದಾರೆ, ಹೈದರಾಲಿ ಸೈನಿಕರು ಮೋಸದಿಂದ ಚಿತ್ರದುರ್ಗದ ಕೋಟೆಗೆ ನುಸುಳಿದಾಗ ಯಾವುದೇ ಪೂರ್ವ ತಯಾರಿ ಇಲ್ಲದೆ ಕೈಗೆ ಸಿಕ್ಕ ಒನಕೆಯಲ್ಲೇ ಶತ್ರುಗಳನ್ನು ನಾಶ ಮಾಡಿ ಕೋಟೆ ರಕ್ಷಿದ ಓಬವ್ವ ಜಯಂತಿಯನ್ನು ಸರ್ಕಾರ ಮಾಡುತ್ತಿರುವುದು ಹರ್ಷ ತಂದಿದೆ ಎಂದರು.

ಕಾರ್ಯಕ್ರಮದಲ್ಲಿ ಜಿ.ಪಂ. ಎ.ಇ,ಇ, ರವಿಕುಮಾರ್, ಪಶುವೈದ್ಯಾಧಿಕಾರಿ ಡಾ, ಸಿದ್ದನ ಗೌಡ, ಪ.ಪಂ. ಮುಖ್ಯಾಧಿಕಾರಿ ಭಾಗ್ಯಮ್ಮ, ಸಮಾಜಕಲ್ಯಾಣಧಿಕಾರಿ ಉಮಾದೇವಿ, ಕಂದಾಯ ಇಲಾಖೆಯ ರಂಗನಾಥ್, ಪ್ರತಾಪ್, ಬಸವರಾಜು, ನಕುಲ್, ಛಲವಾದಿ ಸಂಘದ ಅದ್ಯಕ್ಷ ಹನುಮಮೂರ್ತಿ, ಉಪಾದ್ಯಕ್ಷ ಹನುಮಂತ, ಕುರುಬ ಸಂಘದ ಗಂಗರಾಜು, ಲಕ್ಷೀಪ್ರಸಾದ್, ಅನಂದ್, ರಂಗರಾಜು, ಮಧುನಂದನ್, ಶಿವಣ್ಣ ಮುಂತಾದವರು ಹಾಜರಿದ್ದರು. ನಿವೃತ್ತ ಶಿಕ್ಷಕ ಕೃಷ್ಣಾಚಾರ್ ಕನಕದಾಸರ ಕೀರ್ತನೆ ಹಾಡಿದರು.

ಟಾಪ್ ನ್ಯೂಸ್

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

1——-qweweqw

Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮೊಹಮ್ಮದ್ ಜುಬೇರ್ ಉಚ್ಛಾಟನೆ

Kunigal: ಪ್ರತ್ಯೇಕ ಅಪಘಾತ; ಇಬ್ಬರು ಸಾವು

Kunigal: ಪ್ರತ್ಯೇಕ ಅಪಘಾತ; ಇಬ್ಬರು ಸಾವು

4-Pavagada

Pavagada: ಸಿಡಿಲಿನ ಪರಿಣಾಮ ಹೊತ್ತಿ ಉರಿದ ದನದ ಕೊಟ್ಟಿಗೆ; ಸ್ಥಳದಲ್ಲಿಯೇ ಹಸು ಸಜೀವ ದಹನ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.