ಮೃತ ತಂದೆಯನ್ನು ಬದುಕಿಸಲು ಮಗುವಿನ ಬಲಿ ನೀಡಲು ಮುಂದಾದ ಮಹಿಳೆ ಬಂಧನ
ದೆಹಲಿಯಲ್ಲಿ 2 ತಿಂಗಳ ಮಗುವನ್ನು ಅಪಹರಿಸಿ ದುಷ್ಕೃತ್ಯಕ್ಕೆ ಮುಂದಾದ ದುಷ್ಟೆ
Team Udayavani, Nov 12, 2022, 1:58 PM IST
ನವದೆಹಲಿ : ಮೃತಪಟ್ಟಿದ್ದ ತಂದೆಯನ್ನು ಬದುಕಿಸುವ ಹುಚ್ಚುತನದಿಂದ ಮಗುವೊಂದನ್ನು ಅಪಹರಿಸಿ ಬಲಿ ನೀಡಲು ಮುಂದಾದ ಆರೋಪದ ಮೇಲೆ 25 ವರ್ಷದ ಮಹಿಳೆಯನ್ನು ಆಗ್ನೇಯ ದೆಹಲಿಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಆರೋಪಿಯಿಂದ ಮಗುವನ್ನು ಸುರಕ್ಷಿತವಾಗಿ ವಶಪಡಿಸಿಕೊಳ್ಳಲಾಗಿದ್ದು, ಬಂಧಿತೆ ಕೋಟ್ಲಾ ಮುಬಾರಕ್ಪುರ ನಿವಾಸಿ ಶ್ವೇತಾ ಎಂದು ಗುರುತಿಸಲಾಗಿದೆ. ಆಕೆ ಈ ಹಿಂದೆ ಎರಡು ದರೋಡೆ ಮತ್ತು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.
ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಗರ್ಹಿ ಪ್ರದೇಶದ ಅಪರಿಚಿತ ಮಹಿಳೆಯೊಬ್ಬರು ಎರಡು ತಿಂಗಳ ಗಂಡು ಮಗುವನ್ನು ಅಪಹರಿಸಿದ್ದಾರೆ ಎಂಬ ಮಾಹಿತಿ ಲಭಿಸಿ, ಪ್ರಕರಣವನ್ನು ಭೇದಿಸಲು ಸಬ್ ಇನ್ಸ್ಪೆಕ್ಟರ್ ರಾಜಿಂದರ್ ಸಿಂಗ್, ಹೆಡ್ ಕಾನ್ಸ್ಟೆಬಲ್ಗಳಾದ ರವೀಂದರ್ ಗಿರಿ, ಶೇರ್ ಸಿಂಗ್, ಸಚಿನ್ ಸರೋಹ, ನೀರಜ್ ಕುಮಾರ್ ಮತ್ತು ದಿನೇಶ್ ಕುಮಾರ್ ಮತ್ತು ಮಹಿಳಾ ಕಾನ್ಸ್ಟೆಬಲ್ ಪೂನಂ ಅವರನ್ನು ಒಳಗೊಂಡ ತಂಡವನ್ನು ರಚಿಸಲಾಗಿತ್ತು. ಈ ತಂಡದ ನೇತೃತ್ವವನ್ನು ಎಸ್ಎಚ್ಒ ಅಮರ್ ಕಾಲೋನಿ ಪೊಲೀಸ್ ಠಾಣೆಯ ಪ್ರದೀಪ್ ರಾವತ್ ವಹಿಸಿದ್ದರು.
ಪೊಲೀಸರ ಪ್ರಕಾರ, ಅಪಹರಣ ಮಾಡಿದ ಮಹಿಳೆ ತನ್ನನ್ನು ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಭೇಟಿಯಾಗಿದ್ದು ತಾನು ಜಚ್ಚಾ-ಬಚ್ಚಾ ಆರೈಕೆಗಾಗಿ ಕೆಲಸ ಮಾಡುವ ಎನ್ಜಿಒ ಸದಸ್ಯೆ ಎಂದು ಪರಿಚಯಿಸಿಕೊಂಡಿದ್ದಾಳೆ ಎಂದು ಶಿಶುವಿನ ತಾಯಿ ತಿಳಿಸಿದ್ದಾರೆ.
ತಾಯಿ ಮತ್ತು ಮಗುವಿಗೆ ಉಚಿತ ಔಷಧ ಮತ್ತು ಸಲಹೆ ನೀಡುವುದಾಗಿ ಶ್ವೇತಾ ಭರವಸೆ ನೀಡಿ ನಂತರ, ನವಜಾತ ಶಿಶುವನ್ನು ಪರೀಕ್ಷಿಸುವ ನೆಪದಲ್ಲಿ ಹಿಂಬಾಲಿಸಿ ಅಪಹರಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ತನ್ನ ತಂದೆ ಅಕ್ಟೋಬರ್ನಲ್ಲಿ ನಿಧನ ಹೊಂದಿದ್ದು, ಅಂತಿಮ ವಿಧಿಗಳ ಸಮಯದಲ್ಲಿ, ಅದೇ ಲಿಂಗದ ಶಿಶುವಿನ ನರಬಲಿಯು ತನ್ನ ತಂದೆಯನ್ನು ಪುನರುಜ್ಜೀವನಗೊಳಿಸಬಹುದು ಮತ್ತು ಅವರನ್ನು ಜೀವಂತಗೊಳಿಸಬಹುದು ಎಂದು ಶ್ವೇತಾ ಬಹಿರಂಗಪಡಿಸಿದ್ದಾಳೆ ಅಧಿಕಾರಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು