ತಮಿಳುನಾಡಿನಲ್ಲಿ ಮಳೆಯಬ್ಬರ ನ. 16ಕ್ಕೆ ಮತ್ತೆ ವಾಯುಭಾರ ಕುಸಿತ ಸಾಧ್ಯತೆ
Team Udayavani, Nov 14, 2022, 7:10 AM IST
ಚೆನ್ನೈ: ಬಂಗಾಲಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ತಮಿಳುನಾಡಿನಲ್ಲಿ ಇನ್ನೂ ಎರಡು ದಿನಗಳ ಕಾಲ ಮಳೆ ಆಗಲಿದೆ. ರಾಜಧಾನಿ ಚೆನ್ನೈ ಸಹಿತ ಹಲವು ಜಿಲ್ಲೆಗಳಲ್ಲಿ ಮಳೆ ಜನಜೀವನಕ್ಕೆ ತೊಂದರೆಯನ್ನು ಉಂಟು ಮಾಡಿದೆ.
ನ. 11ರಿಂದ ಇದುವರೆಗೆ ಚೆನ್ನೈಯಲ್ಲಿ 205.47 ಮಿ.ಮೀ. ಮಳೆಯಾಗಿದೆ. ಹೀಗಾಗಿ ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ತಿರುವಳ್ಳೂರ್, ರಾಣಿಪೇಟ್, ಕಾಂಚಿಪುರಂ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಮೈಲಾಡುತುರೈ, ಕಡಲೂರ್ ಸೇರಿದಂತೆ 23 ಜಿಲ್ಲೆಗಳಲ್ಲಿ ಬೆಳೆದು ನಿಂತ 45,800 ಹೆಕ್ಟೇರ್ ಭತ್ತದ ಬೆಳೆ ನೀರು ಪಾಲಾಗಿದೆ. ರಾಜಧಾನಿ ಚೆನ್ನೈಯ ಉತ್ತರ ಭಾಗ ಸೇರಿದಂತೆ ಹಲವು ಪ್ರದೇಶಗಳು ಜಲಾವೃತವಾಗಿವೆ. ಚಿಟ್ಲಾಪಕಂ ಕೆರೆಯಲ್ಲಿ ನೀರು ತುಂಬಿದ್ದು, ವಸತಿ ಪ್ರದೇಶಕ್ಕೆ ನೆರೆ ನೀರು ಹರಿಯುತ್ತಿದೆ.
ನ. 14ರಿಂದ ತಮಿಳುನಾಡಿನ ಉತ್ತರ ಕರಾವಳಿ, ಮಳೆಯಾಗಲಿದ್ದು, ಕೇರಳದ 7 ಜಿಲ್ಲೆಗಳಲ್ಲಿ ಸೋಮವಾರ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ನ. 16ರಿಂದ ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
E.D. ಬಂಧನ ಪ್ರಶ್ನಿಸಿದ್ದ ಸೊರೇನ್ ಅರ್ಜಿ ತಿರಸ್ಕಾರ
Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್ ಗೆ ಬಿಜೆಪಿ ತಿರುಗೇಟು
Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ
Lok Sabha Election: ಬೃಜ್ ಭೂಷಣ್ ಸಿಂಗ್ ಬದಲಿಗೆ ಪುತ್ರನಿಗೆ ಟಿಕೆಟ್ ನೀಡಿದ ಬಿಜೆಪಿ
ಕಾಂಗ್ರೆಸ್ನಿಂದ ಮತ ಬ್ಯಾಂಕ್ ರಾಜಕಾರಣ; ನೇಹಾ ಹತ್ಯೆ ಲವ್ ಜೆಹಾದ್:ಅಮಿತ್ ಶಾ ಆರೋಪ
MUST WATCH
ಹೊಸ ಸೇರ್ಪಡೆ
Sullia ವಿವಿಧೆಡೆ ಕಾಡಾನೆಗಳಿಂದ ಕೃಷಿ ಹಾನಿ : ಅರಣ್ಯ ಇಲಾಖೆ ಅಧಿಕಾರಿಗಳಿಂದ ಪರಿಶೀಲನೆ
Theme Park Karkala ಅವಶೇಷ ತೆರವಿಗೆ ಕೋರ್ಟ್ ಆದೇಶ; ಜಿಲ್ಲಾಧಿಕಾರಿ ತಡೆ!
E.D. ಬಂಧನ ಪ್ರಶ್ನಿಸಿದ್ದ ಸೊರೇನ್ ಅರ್ಜಿ ತಿರಸ್ಕಾರ
Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್ ಶೆಟ್ಟಿ ಆರೋಪ
Rahul Gandhi ಭೇಟಿ ಯಾವುದೇ ಪರಿಣಾಮ ಬೀರದು: ಬಿಎಸ್ವೈ