ಪೊಲೀಸ್ ಠಾಣೆ ಎದುರು ಶವ ಇಟ್ಟು ಪ್ರತಿಭಟನೆ
Team Udayavani, Nov 14, 2022, 2:56 PM IST
ಹುಬ್ಬಳ್ಳಿ: ಸಂತೋಷ ಮುರಗೋಡನನ್ನು ಕೊಲೆ ಮಾಡಿದವರಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಮೃತನ ಕುಟುಂಬಸ್ಥರು, ಸ್ನೇಹಿತರು ರವಿವಾರ ಕಸಬಾಪೇಟೆ ಪೊಲೀಸ್ ಠಾಣೆ ಎದುರು ಶವವಿಟ್ಟು ಪ್ರತಿಭಟನೆ ನಡೆಸಿದರು.
ಕೊಲೆಗೈದಿರುವ ಶಿವ್ಯಾ ಕಳ್ಳತನ ಸೇರಿದಂತೆ ಇನ್ನಿತರೆ ಕೃತ್ಯ ಎಸಗುತ್ತಿದ್ದ. ಈ ಬಗ್ಗೆ ಸಂತೋಷ ಪೊಲೀಸರಿಗೆ ಮಾಹಿತಿ ಕೊಟ್ಟಿದ್ದರೂ ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಂಡಿರಲಿಲ್ಲ. ಮೊದಲೇ ಅವನ ವಿರುದ್ಧ ಕ್ರಮ ತೆಗೆದುಕೊಂಡಿದ್ದರೆ ಸಂತೋಷನ ಕೊಲೆ ಆಗುತ್ತಿರಲಿಲ್ಲ. ಇದಕ್ಕೆಲ್ಲ ಪೊಲೀಸರೇ ಕಾರಣ. ಶಿವ್ಯಾಗೆ ಅವರ ಕುಮ್ಮಕ್ಕಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಸಂತೋಷ ಯಾವುದೇ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರಲಿಲ್ಲ. ಈಗಲಾದರೂ ಪೊಲೀಸರು ಕೊಲೆಗಡುಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾನಿರತರು ಆಗ್ರಹಿಸಿದರು. ಈ ಸಂದರ್ಭದಲ್ಲಿ ಠಾಣೆ ಬಳಿ ಕೆಲಹೊತ್ತು ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಕೊಲೆಯಾದ ಸಂತೋಷಗೆ ಒಂದು ತಿಂಗಳ ಹೆಣ್ಣು ಮಗುವಿದೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಶಾಸಕ ಪ್ರಸಾದ ಅಬ್ಬಯ್ಯ ಭೇಟಿ ನೀಡಿ, ಕ್ರಿಮಿನಲ್ ಪ್ರಕರಣ ಇರುವ ಶಿವ್ಯಾ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಇದಕ್ಕೆ ಪೊಲೀಸರೇ ನೇರ ಹೊಣೆ. ನಿರ್ಲಕ್ಷ್ಯ ವಹಿಸಿದ ಪೊಲೀಸರನ್ನು ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿದರು. ಕ್ಷುಲ್ಲಕ ವಿಷಯವಾಗಿ ಶನಿವಾರ ರಾತ್ರಿ ಹಳೇಹುಬ್ಬಳ್ಳಿ ಹೊರ ಠಾಣೆ ಬಳಿ ಸಂತೋಷ ಮುರಗೋಡನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ, ಕಸಬಾಪೇಟೆ ಪೊಲೀಸರು ಜಂಗ್ಲಿಪೇಟೆ ವಡ್ಡರ ಓಣಿಯ ಸಂಜಯ ಊರ್ಫ್ ಶಿವ್ಯಾ ನರೋಟಿಯನ್ನು ರವಿವಾರ ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka ಮುಂಗಾರು ಪೂರ್ವ ಮಳೆ: ಸಿಡಿಲಿಗೆ ಇಬ್ಬರು ಸಾವು
Pune-Bangalore ಹೊಸ ಹೆದ್ದಾರಿಗೆ ಚಾಲನೆ ನೀಡಲು ಸಿದ್ಧತೆ
Drugs Case; ಕಠಿಣ ಕ್ರಮ ಕೈಗೊಳ್ಳದಿದ್ದರೆ ಕರ್ನಾಟಕ ಪಂಜಾಬ್ ಅನ್ನು ಮೀರಿಸಲಿದೆ; ಜೋಶಿ
Hubli:ಬಸ್ ಸೋರದಿದ್ದರೂ ಕೊಡೆ ಹಿಡಿದು ಚಾಲನೆ; ಮೋಜಿಗಾಗಿ ಮಾಡಿದ ತಪ್ಪಿಗೆ ಅಮಾನತು ಶಿಕ್ಷೆ
ಬರದ ಬೆನ್ನಲ್ಲೇ ರೈತರಿಗೆ ಬಿತ್ತನೆ ಬೀಜ ದರ ಏರಿಕೆಯ ಆಘಾತ
MUST WATCH
ಹೊಸ ಸೇರ್ಪಡೆ
ಮುಕ್ತ ವ್ಯಾಪಾರಕ್ಕೆ ಭಾರತ- ಮಾಲ್ದೀವ್ಸ್ ಒಪ್ಪಂದ
Gujarat; ಗೇಮಿಂಗ್ ಸೆಂಟರ್ ಬೆಂಕಿ ದುರಂತ ಸಾವಿನ ಸಂಖ್ಯೆ 33ಕ್ಕೆ : ಹೈಕೋರ್ಟ್ ವಿಚಾರಣೆ
Qatar ವಿಮಾನ ಆಗಸದಲ್ಲಿ ಓಲಾಡಿ 12 ಮಂದಿಗೆ ಗಾಯ
Bird hit; ಲೇಹ್ಗೆ ಹೊರಟಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ: ದಿಲ್ಲಿಗೆ ವಾಪಸ್
Cyclone ಬಾಂಗ್ಲಾ ಕರಾವಳಿಗೆ ರೆಮಲ್; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ