ಕೊರಟಗೆರೆ: 67ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ರಾಜ್ಯಮಟ್ಟದ ದೇಶಿ ಕುಸ್ತಿ ಪಂದ್ಯಾವಳಿ
Team Udayavani, Nov 14, 2022, 7:13 PM IST
ಕೊರಟಗೆರೆ: 67ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ಬಿ ಎಚ್ ಅನಿಲ್ ಕುಮಾರ್ ಅಭಿಮಾನಿ ಬಳಗದ ವತಿಯಿಂದ ಕೊರಟಗೆರೆ ಪಟ್ಟಣದಲ್ಲಿ ಕೊರಟಗೆರೆ ಪೈಲ್ವಾನ್ ದಿವಂಗತ ಪಾಪಣ್ಣನವರ ವೇದಿಕೆಯಲ್ಲಿ ರಾಜ್ಯಮಟ್ಟದ ದೇಶಿ ಕುಸ್ತಿ ಪಂದ್ಯಾವಳಿಯನ್ನು ಬಹಳ ವಿಜೃಂಭಣೆಯಿಂದ ಆಯೋಜನೆಗೊಳಿಸಲಾಯಿತು.
ಕೊರಟಗೆರೆ ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜ್ ಮೈದಾನದಲ್ಲಿ ಮೈಸೂರು ಸಂಸ್ಥಾನದ ಪ್ರಖ್ಯಾತಿಯ ಪೈಲ್ವಾನರಾದ ದಿವಂಗತ ಪಾಪಣ್ಣನವರ ಜ್ಞಾಪಕಾರ್ಥವಾಗಿ ಹೊನಲು ಬೆಳಕಿನ ರಾಜ್ಯ ಮಟ್ಟದ ದೇಶಿ ಕುಸ್ತಿ ಪಂದ್ಯಾವಳಿ ಆಯೋಜನೆಗೊಳಿಸಲ್ಲಾಗಿ, ಸಾರ್ವಜನಿಕರ ಮನೋರಂಜನೆಗೆ ಸುಮಧುರ ಸಂಗೀತ ನೃತ್ಯದೊಂದಿಗೆ ಬಹಳ ಯಶಸ್ವಿಯಾಗಿ ವಿಜೃಂಭಣೆಯಿಂದ ಆಯೋಜನೆಗೊಳಿಸಲಾಯಿತು.
ಕುಸ್ತಿ ಪಂದ್ಯಾವಳಿಯಲ್ಲಿ 100ಕ್ಕೂ ಹೆಚ್ಚು ಕುಸ್ತಿಪಟುಗಳು ಭಾಗವಹಿಸಿ ನೈಪುಣ್ಯತೆ ಪ್ರದರ್ಶಿಸಿದರು, ಗೆದ್ದ ವಿಜೇತರಿಗೆ ಪ್ರೋತ್ಸಾಹ ಧನ ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಲೋಕಸಭಾ ಸದಸ್ಯ ಜಿಎಸ್ ಬಸವರಾಜು ಮಾತನಾಡಿ ನಮ್ಮ ಆತ್ಮೀಯ ಬಿ.ಹೆಚ್ ಅನಿಲ್ ಕುಮಾರ್ ಗ್ರಾಮೀಣ ಕ್ರೀಡೆ ಪ್ರೋತ್ಸಾಹಕ್ಕೆ ಕಾರ್ಯಕ್ರಮ ಆಯೋಜನೆಗೊಳಿಸಲಾಗಿದ್ದು ಯಾವುದೇ ಚುನಾವಣೆ ಉದ್ದೇಶದಿಂದ ಆಯೋಜನೆಗೊಳಿಸಲಾಗಿಲ್ಲ ಸಾರ್ವಜನಿಕರ ಮನೋರಂಜನೆಗೆ ಹಾಗೂ ಕೊರಟಗೆರೆ ಮೂಲದ ಮೈಸೂರು ಸಂಸ್ಥಾನ ಪ್ರಖ್ಯಾತಿ ಪೈಲ್ವಾನರಾದ ಪಾಪಣ್ಣನವರ ಜ್ಞಾಪಕಾರ್ಥ ಈ ಕುಸ್ತಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದರು.
ಈ ಕಾರ್ಯಕ್ರಮದಲ್ಲಿ ಕುಸ್ತಿ ಪಂದ್ಯಾವಳಿಯ ಆಯೋಜಕರು ಬಿಜೆಪಿ ವಿಧಾನಸಭಾ ಕ್ಷೇತ್ರದ ಸಂಭಾವ್ಯ ಆಕಾಂಕ್ಷಿ ಬಿ ಎಚ್ ಅನಿಲ್ ಕುಮಾರ್, ಜಿಲ್ಲಾ ಕಾರ್ಯದರ್ಶಿ ತಿಮ್ಮಜ್ಜ, ಖಜಾಂಚಿ ಸಿ ಎಸ್ ಹನುಮಂತರಾಜು,ದಾಡಿ ವೆಂಕಟೇಶ್, ತಾಲೂಕು ಬಿಜೆಪಿ ಘಟಕದ ಅಧ್ಯಕ್ಷ ಪವನ್ ಕುಮಾರ್, ಯುವ ಮೋರ್ಚಾ ಅಧ್ಯಕ್ಷ ಗುರು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ