ಒಂದೇ ಪುಟದಲ್ಲಿ ಸಂಪೂರ್ಣ ರಾಮಾಯಣ ಚಿತ್ರಣ

ಸಂತೆಕಸಲಗೆರೆ ಸರ್ಕಾರಿ ಪ್ರೌಢಶಾಲೆ ಚಿತ್ರಕಲಾ ಶಿಕ್ಷಕ ನರಸಿಂಹಚಾರ್‌ರ ಕೈಚಳಕ

Team Udayavani, Nov 15, 2022, 2:45 PM IST

ಒಂದೇ ಪುಟದಲ್ಲಿ ಸಂಪೂರ್ಣ ರಾಮಾಯಣ ಚಿತ್ರಣ

ಮಂಡ್ಯ: ಒಂದೇ ಚಿತ್ರದಲ್ಲಿ ಇಡೀ ಸಂಪೂರ್ಣ ರಾಮಾಯಣದ ದೃಶ್ಯ ಚಿತ್ರಿಸುವ ಮೂಲಕ ಚಿತ್ರಕಲಾ ಶಿಕ್ಷಕ ನರಸಿಂಹಚಾರ್‌ ಗಮನ ಸೆಳೆದಿದ್ದಾರೆ.

ಸಂತೆಕಸಲಗೆರೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಚಿತ್ರಕಲಾ ಶಿಕ್ಷಕರಾಗಿರುವ ನರಸಿಂಹಚಾರ್‌ ಕೆರಗೋಡು ಹೋಬಳಿ ಮರಿಲಿಂಗನದೊಡ್ಡಿ ಗ್ರಾಮದವರಾಗಿದ್ದಾರೆ.

ಗಮನ ಸೆಳೆಯುತ್ತಿದೆ: ಪ್ರತಿದಿನ 5 ಗಂಟೆಯಂತೆ ಸುಮಾರು 12 ದಿನ ಈ ಚಿತ್ರ ಬಿಡಿಸಿದ್ದಾರೆ. ಬ್ಲ್ಯಾಕ್‌ ಜೆಲ್‌ ಪೆನ್‌, ಅಕ್ರಾಲಿಕ್‌ ಬ್ಲಾಕ್‌ ಕಲರ್‌ ಉಪಯೋಗಿ ಸಿದ್ದಾರೆ. 16X24 ಅಳತೆಯ ಒಂದು ಡ್ರಾಯಿಂಗ್‌ ಶೀಟ್‌ನಲ್ಲಿ ಸಂಪೂರ್ಣ ರಾಮಾಯಣದ ದೃಶ್ಯಾವಳಿ ಗಳನ್ನು ಒಂದೇ ಚಿತ್ರದಲ್ಲಿ ಕಟ್ಟಿಕೊಟ್ಟಿದ್ದಾರೆ. ಸಂಪೂರ್ಣ ರಾಮಾಯಣದಲ್ಲಿ ಬರುವ ರಾಮ, ಲಕ್ಷ್ಮಣ, ಸೀತೆ, ಆಂಜನೇಯ, 10 ತಲೆಯ ರಾವಣ, ದಶರಥ ಸೇರಿ ಎಲ್ಲಾ ಪಾತ್ರಗಳನ್ನೊಳಗೊಂಡ ಚಿತ್ರ ಬಿಡಿಸಿದ್ದಾರೆ. ಈ ಚಿತ್ರ ಎಲ್ಲರ ಗಮನ ಸೆಳೆಯುತ್ತಿದೆ.

ಹೆಸರುವಾಸಿ: ನರಸಿಂಹಚಾರ್‌ ಈ ಹಿಂದೆ ವರನಟ ಡಾ.ರಾಜ್‌ಕುಮಾರ್‌ ಅವರು ನಟಿಸಿರುವ ಎಲ್ಲಾ ಸಿನಿಮಾಗಳ ಚಿತ್ರ ಬಿಡಿಸುವ ಮೂಲಕ ಗಮನ ಸೆಳೆದಿದ್ದರು. ಅಲ್ಲದೆ, ರಾಜ್‌ಕುಮಾರ್‌ ಹಾಗೂ ಪಾರ್ವತಮ್ಮ ರಾಜ್‌ಕುಮಾರ್‌ ಅವರ ಅರ್ಧ ಭಾಗ ಬಿಡಿಸುವ ಮೂಲಕ ವಿಭಿನ್ನ ಹಾಗೂ ಸರಳ ಚಿತ್ರಕಲೆಗೆ ಹೆಸರು ವಾಸಿಯಾಗಿದ್ದರು. ಸಂಪೂರ್ಣ ರಾಮಾಯಣದ ಚಿತ್ರವನ್ನು ಈಗಾಗಲೇ ಸಾಕಷ್ಟು ಮಂದಿ ಚಿತ್ರಿಸಿದ್ದಾರೆ. ಆದರೆ, ಒಂದೇ ಚಿತ್ರದಲ್ಲಿ ಸರಳವಾಗಿ ಚಿತ್ರ ಬಿಡಿಸಿರುವುದು ಇದೇ ಮೊದಲು. ಚಿತ್ರಕಲೆ ಡಿಪ್ಲೋಮಾ ಪಡೆದಿರುವ ನರಸಿಂಹಚಾರ್‌ ಮಕ್ಕಳಿಗೂ ಚಿತ್ರಕಲೆ ಪಾಠ ಮಾಡುತ್ತಿದ್ದಾರೆ.

ಚಿತ್ರಕಲೆ ಶಿಕ್ಷಕರು: ಚಿಕ್ಕಂದಿನಿಂದಲೇ ರಾಜ್‌ ಕುಮಾರ್‌ ಸಿನಿಮಾ ವೀಕ್ಷಣೆ ಮಾಡುತ್ತಾ, ಅವರ ಪ್ರೇರಣೆಯಿಂದಲೇ ಚಿತ್ರಕಲೆಯತ್ತ ಆಸಕ್ತಿ ಬೆಳೆಸಿ ಕೊಂಡಿದ್ದಾರೆ. ಮೊದಲು ರಾಜ್‌ಕುಮಾರ್‌ ಅವರ ವಿವಿಧ ರೀತಿಯ ಚಿತ್ರ ಬಿಡಿಸುತ್ತಿದ್ದರು. ನಂತರ ಜಿಲ್ಲೆ ಯ ರೈತರ ಎತ್ತಿನಗಾಡಿಗಳಿಗೆ ಚಿತ್ರ ಬರೆಯುತ್ತಿದ್ದ ಅವರು, ನಂತರ ಡಿಪ್ಲೋಮಾ ಮಾಡಿಕೊಂಡು ಶಿಕ್ಷಕರಾಗಿದ್ದಾರೆ. ತಂದೆಯೂ ಚಿತ್ರಕಲಾವಿದರಾಗಿದ್ದರು. ಅದರಂತೆ ನರಸಿಂಹಚಾರ್‌ ಕೂಡ ತಮ್ಮ ಮಗಳು ಮೋನಿಕಾಗೂ ಚಿತ್ರಕಲೆ ಹೇಳಿಕೊಟ್ಟು ಆಕೆಯೂ ಬೆಂಗಳೂರಿನ ಶಾಲೆಯೊಂದರಲ್ಲಿ ಚಿತ್ರಕಲೆ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಚಿತ್ರಕಲೆಯಲ್ಲಿ ನನಗೆ ಸಂಪೂರ್ಣ ತೃಪ್ತಿ ಇದೆ. ಇನ್ನಷ್ಟು ವಿಭಿನ್ನ ವಿವಿಧ ರೀತಿಯ ಚಿತ್ರಗಳನ್ನು ಸರಳವಾಗಿ ಬಿಡಿಸುವ ಹಂಬಲವಿದ್ದು, ಮತ್ತಷ್ಟು ಚಿತ್ರ ಬಿಡಿಸಲು ಪ್ರಯತ್ನಿಸುತ್ತೇನೆ. -ನರಸಿಂಹಚಾರ್‌, ಚಿತ್ರಕಲಾವಿದ 

ನಟ ರಾಜ್‌ ಕುಮಾರ್‌ ಹಾಗೂ ಪಾರ್ವತಮ್ಮ ರಾಜ್‌ ಕುಮಾರ್‌ ಅವರಭಾವಚಿತ್ರವನ್ನು ಒಂದೇ ಚಿತ್ರದಲ್ಲಿಚಿತ್ರಿಸಿರುವುದು.

ಟಾಪ್ ನ್ಯೂಸ್

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಕ್ಕರೆ ಕಾರ್ಖಾನೆಗಳಿಗೆ ಈಗ ಕಬ್ಬು “ಬರ’! ನೀರಿನ ಕೊರತೆಯಿಂದ ಬೆಳೆಯದ ಕಬ್ಬು

Sugar ಕಾರ್ಖಾನೆಗಳಿಗೆ ಈಗ ಕಬ್ಬು “ಬರ’! ನೀರಿನ ಕೊರತೆಯಿಂದ ಬೆಳೆಯದ ಕಬ್ಬು

Ambulance ಸಕಾಲಕ್ಕೆ ಬಂದಿದ್ದರೆ ನಟಿ ಬದುಕುತ್ತಿದ್ದರು: ಸ್ನೇಹಿತ

Ambulance ಸಕಾಲಕ್ಕೆ ಬಂದಿದ್ದರೆ ನಟಿ ಬದುಕುತ್ತಿದ್ದರು: ಸ್ನೇಹಿತ

ಕುಮಾರಸ್ವಾಮಿಗೂ ರೇವಣ್ಣ ಸ್ಥಿತಿಯೇ ಬರಲಿದೆ: ಕಾಂಗ್ರೆಸ್‌ ಶಾಸಕ ಉದಯ್‌

HD ಕುಮಾರಸ್ವಾಮಿಗೂ ರೇವಣ್ಣ ಸ್ಥಿತಿಯೇ ಬರಲಿದೆ: ಕಾಂಗ್ರೆಸ್‌ ಶಾಸಕ ಉದಯ್‌

11-mandya

Protest: ಕೆರಗೋಡು ಹನುಮ ಧ್ವಜ ವಿವಾದ; ಜೆಡಿಎಸ್, ಭಜರಂಗದಳ, ವಿ.ಹಿಂ.ಪ. ಪ್ರತಿಭಟನೆ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.