ಸಕಲೇಶಪುರ ಪಟ್ಟಣಕ್ಕಿಲ್ಲ ಮೂಲ ಸೌಲಭ್ಯ


Team Udayavani, Nov 15, 2022, 3:39 PM IST

ಸಕಲೇಶಪುರ ಪಟ್ಟಣಕ್ಕಿಲ್ಲ ಮೂಲ ಸೌಲಭ್ಯ

ಸಕಲೇಶಪುರ: ಕಿರಿದಾದ ರಸ್ತೆಗಳು, ಶುದ್ಧ ಕುಡಿಯುವ ನೀರಿನ ಸಮಸ್ಯೆ, ಸರಿಯಾಗಿ ಬೆಳಗದ ಬೀದಿ ದೀಪ, ಕಸ ವಿಲೇವಾರಿ ಸಮಸ್ಯೆ, ಸಂಚಾರ ದಟ್ಟಣೆಯಿಂದ ಪಟ್ಟಣದ ನಾಗರಿಕರು ಹೈರಾಣಾಗಿದ್ದಾರೆ. ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿ-75 ಹಾದು ಹೋಗಿರುವ, ನೂರಾರು ಪ್ರವಾಸಿಗರು ಭೇಟಿ ನೀಡುವ ಪಟ್ಟಣ ನಿರೀಕ್ಷೆಯಂತೆ ಅಭಿವೃದ್ಧಿ ಕಂಡಿಲ್ಲ. ಸತತ ಮೂರು ಬಾರಿ ಶಾಸಕರಾಗಿರುವ ಎಚ್‌.ಕೆ.ಕುಮಾರಸ್ವಾಮಿ, ಪುರಸಭೆ ಆಡಳಿತ ಪಟ್ಟಣದ ಅಭಿವೃದ್ಧಿಗೆ ಗಂಭೀರ ಚಿಂತನೆ ನಡೆಸಬೇಕಿದೆ.

ಪಟ್ಟಣದಲ್ಲಿ ರಾಷ್ಟ್ರೀಯ ಹೆದ್ದಾರಿ ಕಿರಿದಾಗಿರುವ ಕಾರಣ ದಿನನಿತ್ಯ ಟ್ರಾಫಿಕ್‌ ಕಿರಿಕಿರಿ ಸಾಮಾನ್ಯವಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯರಸ್ತೆ ಅಗಲೀಕರಣ ಮಾಡ ಬೇಕೆಂಬ ಒತ್ತಾಯ ಕಳೆದ ಎರಡು ದಶಕಗಳಿಂದ ಕೇಳಿ ಬರುತ್ತಿದ್ದರೂ ಜನಪ್ರತಿನಿಧಿಗಳು, ಅಧಿಕಾರಿಗಳು ಗಮನ ಹರಿಸಿಲ್ಲ. ನಿತ್ಯ ಭಾರೀ ಗಾತ್ರದ ವಾಹನಗಳು, ಟ್ಯಾಂಕರ್‌ ಗಳು ಸೇರಿ 8000ಕ್ಕೂ ಹೆಚ್ಚು ವಾಹನಗಳು ಓಡಾಡುತ್ತವೆ. ಹೀಗಾಗಿ ರಸ್ತೆ ಬದಿ ವಾಹನ ನಿಲುಗಡೆ ನಿಷೇಧ ಹೇರಿದ್ದು, ವರ್ತಕರು, ವ್ಯಾಪಾರಿಗಳು ಕಂಗಾಲಾಗಿದ್ದಾರೆ.

ಮುಖ್ಯ ರಸ್ತೆಯ ಮಧ್ಯಭಾಗದಿಂದ 45 ಮೀಟರ್‌ ಹೊಸ ಕಟ್ಟಡಗಳನ್ನು ಕಟ್ಟಬೇಕೆಂಬ ನಿಯಮವಿರು ವು ದರಿಂದ ಯಾರು ಹೊಸ ಕಟ್ಟಡಗಳನ್ನು ಕಟ್ಟಲು ಮುಂದಾಗುತ್ತಿಲ್ಲ. ಇದರಿಂದ ಪಟ್ಟಣ ಹಳೆಯ ಪಟ್ಟಣ ದಂತೆ ಭಾಸವಾಗುತ್ತದೆ. ಇನ್ನು ಬೈಪಾಸ್‌ ರಸ್ತೆ ಕಾಮಗಾರಿ ಕುಂಟುತ್ತ ಸಾಗುತ್ತಿದೆ. ಬೈಪಾಸ್‌ ರಸ್ತೆ ಕಾಮಗಾರಿ ಪೂರ್ಣಗೊಳ್ಳಲು ಕನಿಷ್ಠ 2 ವರ್ಷ ಬೇಕಾಗುತ್ತದೆ. ಪಟ್ಟಣದ ಅಭಿವೃದ್ಧಿ ದೃಷ್ಟಿಯಿಂದ ವರ್ತಕರಿಗೆ ಪರಿಹಾರ ಕೊಟ್ಟು, ಮುಖ್ಯರಸ್ತೆ ಅಗಲೀಕರಣ ಮಾಡಬೇಕು. ಆದರೆ, ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆ ಎದ್ದುಕಾಣುತ್ತಿದೆ.

ಸ್ವಾಗತ ಕಮಾನು ಇಲ್ಲ: ತಾಲೂಕು ಕೇಂದ್ರಗಳಿಗೆ ಪ್ರವೇಶ ಮಾಡುವಾಗ ಬಹುತೇಕವಾಗಿ ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿಗಳಲ್ಲಿ ಸ್ವಾಗತ ಫ‌ಲಕವಿರುತ್ತದೆ. ಆದರೆ, ಸಕಲೇಶಪುರ ಪಟ್ಟಣಕ್ಕೆ ಸ್ವಾಗತ ಫ‌ಲಕ ಹಾಕಿಸಲು ಜನಪ್ರತಿನಿಧಿಗಳು, ಅಧಿಕಾರಿಗಳು ವಿಫ‌ಲರಾಗಿದ್ದಾರೆ. ಪ್ರತಿ ಪುರಸಭಾ ಸಾಮಾನ್ಯ ಸಭೆಯಲ್ಲಿ ಸ್ವಾಗತ ಕಮಾನಿನ ಕುರಿತು ಚರ್ಚೆ ಆಗುತ್ತದೆ. ಆದರೆ, ಜಾರಿ ಆಗುತ್ತಿಲ್ಲ.

ಬಗೆ ಹರಿಯದ ಕಸ ವಿಲೇವಾರಿ ಸಮಸ್ಯೆ: ಕಳೆದೊಂದು ದಶಕದಿಂದ ಪಟ್ಟಣದಲ್ಲಿ ಮನೆಗಳ ಸಂಖ್ಯೆ ಹೆಚ್ಚಾಗುತ್ತಿದೆ. ಹಾಗೆ ಕಸವಿಲೇವಾರಿ ಸಮಸ್ಯೆ ಗಂಭೀರವಾಗುತ್ತಿದೆ. ಶಾಶ್ವತ ಪರಿಹಾರ ಹುಡುಕಲು ಜನಪ್ರತಿನಿಧಿ ಗಳು ಹಾಗೂ ಅಧಿಕಾರಿಗಳು ವಿಫ‌ಲರಾಗಿರುವ ಕಾರಣ, ಪಟ್ಟಣದ ಜಾತ್ರಾ ಮೈದಾನದಲ್ಲೇ ಕಸ ವಿಲೇವಾರಿ ಮಾಡಲಾಗುತ್ತಿದೆ. ಇದರಿಂದ ಮೈದಾನ ದುರ್ನಾತ ಬೀರುತ್ತಿದೆ. ಕಳೆದ ವರ್ಷ ಕಸದ ರಾಶಿ ನಡುವೆ ಜಾತ್ರೆ ನಡೆಸಲಾಗಿತ್ತು.

ಶುದ್ಧ ಕುಡಿಯುವ ನೀರು ಮರೀಚಿಕೆ: ಎತ್ತಿನಹೊಳೆ ಯೋಜನೆಯಡಿ 12 ಕೋಟಿ ರೂ.ನಲ್ಲಿ ಶುದ್ಧ ಕುಡಿ ಯುವ ನೀರಿನ ಯೋಜನೆ ರೂಪಿಸಲಾಗಿದೆ ಎಂದು ಶಾಸಕರು ಹೇಳುತ್ತಿದ್ದಾರೆ. ಆದರೆ, ಇದುವರೆಗೆ ಈ ಯೋಜನೆ ಕಾರ್ಯಗತವಾಗಿಲ್ಲ. ಪಟ್ಟಣದ ಹೇಮಾವತಿ ನದಿ ನೀರನ್ನೇ ನೇರವಾಗಿ ಕುಡಿಯಬೇಕಾಗಿದೆ.

ಒಳಚರಂಡಿ ವ್ಯವಸ್ಥೆ ನಾಪತ್ತೆ: ಪಟ್ಟಣದಲ್ಲಿ ಸರಿಯಾದ ರೀತಿಯಲ್ಲಿ ಒಳಚರಂಡಿ ವ್ಯವಸ್ಥೆ ಇಲ್ಲದ ಕಾರಣ, ಹಲವು ಬಡಾವಣೆಗಳಲ್ಲಿ ಮಳೆ ನೀರು ಚರಂಡಿ ಮೇಲೆ ಉಕ್ಕಿ ಹರಿಯುತ್ತದೆ. ಹಲವು ಕಡೆ ಚರಂಡಿ ನೀರು ಹೇಮಾವತಿ ನದಿಗೆ ಹೋಗುತ್ತಿರುವುದು ನಾಗರಿಕರ ಆತಂಕಕ್ಕೆ ಕಾರಣವಾಗಿದೆ.

ಪಾರ್ಕಿಂಗ್‌, ಬೀದಿ ದೀಪಗಳ ಸಮಸ್ಯೆ: ಪಟ್ಟಣ ವ್ಯಾಪ್ತಿಯ ಹಳೇ ತಾಲೂಕು ಕಚೇರಿ ಆವರಣದಲ್ಲಿ ವಾಹ ನ ಗಳ ನಿಲುಗಡೆಗೆ ಅವಕಾಶ ನೀಡಲಾಗಿದೆ. ಆದರೆ, ಇಲ್ಲಿ ಜಾಗ ಸಾಕಾಗುತ್ತಿಲ್ಲ, ಮುಖ್ಯರಸ್ತೆ ಬದಿ ಯಲ್ಲಿ ವಾಹನಗಳ ನಿಲುಗಡೆಗೆ ನಿಷೇಧ ಇರುವುದರಿಂದ ವರ್ತಕರು ವ್ಯಾಪಾರವಿಲ್ಲದೆ ಕಂಗಾಲಾಗಿದ್ದಾರೆ. ಇನ್ನು ಗುಣಮಟ್ಟದ ಎಲ್‌ಇಡಿ ಬೀದಿ ದೀಪಗಳನ್ನು ಪಟ್ಟಣದ ಮುಖ್ಯ ರಸ್ತೆಯಲ್ಲಿ ಅಳವಡಿಸಬೇಕಿದೆ. ಅದರಲ್ಲೂ ತೇಜಸ್ವಿ ಚಿತ್ರಮಂದಿರದಿಂದ ಹೇಮಾವತಿ ಸೇತುವೆ ವರೆಗೆ ಬೀದಿ ದೀಪಗಳು ಸರಿಯಾಗಿ ಬೆಳಗದೇ ಸಂಪೂರ್ಣ ಕತ್ತಲಮಯವಾಗಿದೆ.

ಸರ್ಕಾರಿ ಆಸ್ಪತ್ರೆಯಲ್ಲಿ ನುರಿತ ವೈದ್ಯರಿಲ್ಲ: ತಾಲೂಕಿನ ಜನರಿಗೆ ಸರ್ಕಾರಿ ಕ್ರಾಫ‌ರ್ಡ್‌ ಆಸ್ಪತ್ರೆಯೇ ಆಧಾರವಾಗಿದ್ದು, ಕೆಲವು ರೋಗಗಳಿಗೆ ಮಾತ್ರ ಇಲ್ಲಿ ಚಿಕಿತ್ಸೆ ನೀಡಲಾಗು ತ್ತದೆ. ಹೃದಯಾಘಾತ ಸೇರಿ ಗಂಭೀರ ಕಾಯಿಲೆಗಳಿಗೆ ಹಾಸನ, ಮಂಗಳೂರಿಗೆ ಹೋಗಬೇಕಾಗಿದೆ. ಇಲ್ಲಿನ ಜನಪ್ರತಿನಿಧಿಗಳು ಆರೋಗ್ಯ ಕ್ಷೇತ್ರದ ಕಡೆಗೆ ಅಷ್ಟಾಗಿ ಗಮನ ಹರಿಸಿಲ್ಲ. ಅಲ್ಲದೆ, ನುರಿತ ವೈದ್ಯರ ನೇಮಕವೂ ಆಗಬೇಕಿದೆ.

ಕ್ರೀಡಾಪಟುಗಳಿಗೆ ಇಲ್ಲ ಸೌಕರ್ಯ: ಪಟ್ಟಣದಲ್ಲಿರುವ ಏಕೈಕ ಕ್ರೀಡಾ ಮೈದಾನ ಮೂಲ ಸೌಕರ್ಯಗಳಿಂದ ವಂಚಿತವಾಗಿದೆ. ಕ್ರೀಡಾಂಗಣದ ಅಭಿವೃದ್ಧಿಗೆ ಯುವಜನ ಕ್ರೀಡಾ ಇಲಾಖೆಯಿಂದ 24 ಲಕ್ಷ ರೂ. ಬಿಡುಗಡೆ ಆಗಿ ದ್ದರೂ, ಯಾವುದೇ ಕೆಲಸ ಆಗಿಲ್ಲ. ಇರುವ ಮೈದಾನ ಹಾಳು ಮಾಡಲಾಗಿದೆ. ಹೋಬಳಿ, ತಾಲೂಕು ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಕಲ್ಲು ತುಳಿದುಕೊಂಡೇ ಕ್ರೀಡೆಗಳಲ್ಲಿ ಭಾಗವಹಿಸಬೇಕು. ಒಳಾಂಗಣ ಕ್ರೀಡಾಂಗಣ, ಈಜುಕೊಳ ನಿರ್ಮಾಣದ ಭರವಸೆ ನೀಡಿದ್ದ ಶಾಸಕರು, ಇದುವರೆಗೂ ಕಾರ್ಯಗತವಾಗಿಲ್ಲ.

ಪಟ್ಟಣಕ್ಕಿಲ್ಲ ಉದ್ಯಾನ: ಸಣ್ಣ ಪುಟ್ಟ ಪಟ್ಟಣಗಳಲ್ಲೂ ಉದ್ಯಾನ ಇರುತ್ತದೆ. ಆದರೆ, ಸಕಲೇಶಪುರ ತಾಲೂಕು ಕೇಂದ್ರದಲ್ಲಿ ಕನಿಷ್ಠ ಮಕ್ಕಳಿಗೆ ಆಟವಾಡಲು ಪ್ರತ್ಯೇಕ ಸ್ಥಳ ಇಲ್ಲ. ಇನ್ನೂ ಉದ್ಯಾನದ ಕಥೆ ಕೇಳುವುದೇ ಬೇಡ.

ಸೌಕರ್ಯವಿಲ್ಲದ ಹಿಂದೂ ರುದ್ರಭೂಮಿ: ಪಟ್ಟಣದಲ್ಲಿ 9 ಎಕರೆ ಹಿಂದೂಗಳ ರುದ್ರಭೂಮಿ ಇದ್ದು, ಮೂಲ ಸೌಲಭ್ಯದಿಂದ ವಂಚಿತವಾಗಿದೆ. ಮಳೆಗಾಲದಲ್ಲಿ ಶವ ಸಂಸ್ಕಾರ ಮಾಡಲು ಪರದಾಡಬೇಕಾಗಿದೆ. ಈ ಬಗ್ಗೆ ಪುರಸಭೆ ಕ್ರಮಕೈಗೊಳ್ಳಬೇಕು.

ಅಗಲೀಕರಣವಾಗದ ತೇಜಸ್ವಿ ವೃತ್ತ: ರಾಷ್ಟ್ರೀಯ ಹೆದ್ದಾರಿ -75, ಸಕಲೇಶಪುರ-ಬೇಲೂರು ರಾಜ್ಯ ಹೆದ್ದಾರಿ ಸೇರುವ ತೇಜಸ್ವಿ ವೃತ್ತ ಕಿರಿದಾಗಿದ್ದು, ಅಪಘಾತಗಳು ಸರ್ವೆ ಸಾಮಾನ್ಯವಾಗಿದೆ. ವೃತ್ತ ಅಗಲೀಕರಣ ಮಾಡುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳು ಪ್ರತಿಭಟಿಸಿದ್ದರೂ ಶಾಸಕರಾಗಲಿ, ಪುರಸಭೆ ಆಗಲಿ ಯಾವುದೇ ಕ್ರಮ ಕೈಗೊಂಡಿಲ್ಲ. ಗುಂಡಿ ಬಿದ್ದು ವಾಹನ ಸಂಚಾರಕ್ಕೆ ತೊಂದರೆ ಆಗಿರುವ ಹೇಮಾವತಿ ನದಿ ಸೇತುವೆ ಮೇಲಿನ ರಸ್ತೆ ದುರಸ್ತಿ ಮಾಡಿಲ್ಲ. ಸೇತುವೆ ಪಕ್ಕದಲ್ಲಿರುವ ಪಾದಚಾರಿ ಸೇತುವೆಯೂ ಅಭಿವೃದ್ಧಿಪಡಿಸಿಲ್ಲ. ಒಟ್ಟಾರೆಯಾಗಿ ಮೂರು ಬಾರಿ ಸಕಲೇಶಪುರದಲ್ಲಿ ಶಾಸಕರಾಗಿ ಎಚ್‌.ಕೆ.ಕುಮಾರಸ್ವಾಮಿ ಹಾಗೂ ಪುರಸಭಾ ಆಡಳಿತ ಪಟ್ಟಣ ಅಭಿವೃದ್ಧಿಗೆ ಸಂಪೂರ್ಣ ಕಾರಣಗಳನ್ನೇ ಹೇಳಿಕೊಂಡು ಪಟ್ಟಣದ ಅಭಿವೃದ್ಧಿಗೆ ಮುಂದಾಗದ ಕಾರಣ, ಸಾರ್ವಜನಿಕರ ವಲಯದಿಂದ ವ್ಯಾಪಕ ಆಕ್ರೋಶ ಕೇಳಿ ಬರುತ್ತಿದೆ. ಇದರಿಂದಾಗಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಟ್ಟಣ ವ್ಯಾಪ್ತಿಯಲ್ಲಿ ಮತದಾರರು ಜೆಡಿಎಸ್‌ ಬಿಟ್ಟು ಬೇರೆ ಪಕ್ಷಗಳತ್ತ ಮುಖ ಮಾಡುವ ಸಾಧ್ಯತೆಯಿದೆ.

ಸತತ ಮೂರು ಬಾರಿ ಗೆಲುವು ಸಾಧಿಸಿದ ಶಾಸಕ ಎಚ್‌.ಕೆ. ಕುಮಾರಸ್ವಾಮಿ ಸಕಲೇಶಪುರ ಪಟ್ಟಣದ ಅಭಿವೃದ್ಧಿ ಮಾಡಲು ಮುಂದಾಗದ ಕಾರಣ, ನಾಗರಿಕರು ಮೂಲ ಸೌಲಭ್ಯದಿಂದ ವಂಚಿತರಾಗಬೇಕಿದೆ. ಇದು ಬೇಸರದ ಸಂಗತಿ. -ಸುಬ್ರಹ್ಮಣ್ಯ, ಕಾಫಿ ಮೆಣಸು ವರ್ತಕರು

ಟಾಪ್ ನ್ಯೂಸ್

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.