ರಾಜ್ಯದಲ್ಲಿ 667 ಮಂದಿಗೆ ಒಬ್ಬ ಪೊಲೀಸ್‌ ; ಪೊಲೀಸ್‌ ಇಲಾಖೆಯಲ್ಲಿ ಸಿಬಂದಿ ಕೊರತೆ


Team Udayavani, Nov 16, 2022, 7:20 AM IST

ರಾಜ್ಯದಲ್ಲಿ 667 ಮಂದಿಗೆ ಒಬ್ಬ ಪೊಲೀಸ್‌ ; ಪೊಲೀಸ್‌ ಇಲಾಖೆಯಲ್ಲಿ ಸಿಬಂದಿ ಕೊರತೆ

ಬೆಂಗಳೂರು: ರಾಜ್ಯ ಪೊಲೀಸ್‌ ಇಲಾಖೆಯಲ್ಲಿ 15,099 ಹುದ್ದೆಗಳು ಖಾಲಿ ಇದ್ದು, 667 ನಾಗರಿಕರಿಗೆ ಒಬ್ಬರಂತೆ ಪೊಲೀಸ್‌ ಇದ್ದಾರೆ.ರಾಜ್ಯದ 6.61 ಕೋಟಿ ಜನ ಸಂಖ್ಯೆಗೆ ಕೇವಲ 1,12,429 ಪೊಲೀಸ್‌ ಹುದ್ದೆಗಳು ಮಂಜೂರಾಗಿದ್ದು, ಈ ಪೈಕಿ 97,330 ಸಿಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಜನಸಂಖ್ಯೆಗೆ ಹೋಲಿಸಿದರೆ ಪೊಲೀಸರ ಸಂಖ್ಯೆ ತೀರಾ ಕಡಿಮೆಯಿದೆ. ಪರಿಣಾಮವಾಗಿ ಅಪರಾಧ ಪ್ರಕರಣಗಳ ಪ್ರಮಾಣ ವರ್ಷದಿಂದ ವರ್ಷಕ್ಕೆ ಶೇ. 5ರಿಂದ 10ರಷ್ಟು ಏರಿಕೆಯಾಗುತ್ತಿದೆ.

ಮಂಜೂರಾದ ಹುದ್ದೆಗಳಿಗೂ ಕರ್ತವ್ಯದಲ್ಲಿರುವ ಪೊಲೀಸರ ಸಂಖ್ಯೆಗೂ ಅಜಗಜಾಂತರವಿದೆ. ಸರಕಾರದ ನೇಮಕಾತಿ ಪ್ರಕ್ರಿಯೆ ವಿಳಂಬವಾಗುತ್ತಿದೆ. ರಾಷ್ಟ್ರೀಯ ಮಾನದಂಡದ ಪ್ರಕಾರ ದೇಶದ 1 ಲಕ್ಷ ಜನರಿಗೆ 198 ಪೊಲೀಸರು ಇರಬೇಕು; ಆದರೆ ರಾಜ್ಯದಲ್ಲಿ ಇಷ್ಟು ಜನಸಂಖ್ಯೆಗೆ 168 ಪೊಲೀಸರಿದ್ದಾರೆ. 86,702 ಪುರುಷ ಪೊಲೀಸ್‌ ಸಿಬಂದಿಯಿದ್ದರೆ, 10,628 ಮಹಿಳಾ ಸಿಬಂದಿ ಇದ್ದಾರೆ.

ಐಪಿಎಸ್‌ ಹುದ್ದೆಗಳೂ ಖಾಲಿ
ಐಜಿಪಿ, ಎಡಿಜಿಪಿ, ಎಸ್‌ಪಿ ಸೇರಿ ಐಪಿಎಸ್‌ ಮಟ್ಟದ 38 ಹುದ್ದೆಗಳು ಖಾಲಿ ಇವೆ. ಹಲವು ವರ್ಷಗಳಿಂದ ಖಾಲಿಯಿರುವ 10,449 ಕಾನ್‌ಸ್ಟೆಬಲ್‌, 1,100 ಪಿಎಸ್‌ಐ ಹುದ್ದೆ ಭರ್ತಿ ಮಾಡುವತ್ತ ಸರಕಾರ ಗಮನಹರಿಸಿಲ್ಲ. ಕಾನೂನು ಸುವ್ಯವಸ್ಥೆ ವಿಭಾಗದಲ್ಲಿ 1,254 ಇನ್‌ಸ್ಪೆಕ್ಟರ್‌ಗಳು ಕಾರ್ಯ ನಿರ್ವಹಿಸುತ್ತಿದ್ದರೆ, 23 ಹುದ್ದೆ ಖಾಲಿ ಇದೆ. ಡಿಟೆಕ್ಟಿವ್‌ ಹಾಗೂ ಎಸ್‌ಡಿಆರ್‌ಆರ್‌ನಲ್ಲಿ ಮಂಜೂರಾಗಿರುವ 48 ಇನ್‌ಸ್ಪೆಕ್ಟರ್‌ ಹುದ್ದೆಗಳಿಗೆ ನೇಮಕಾತಿಯೇ ನಡೆಸಿಲ್ಲ. ಎಫ್ಪಿಬಿಯಲ್ಲಿ 30 ಇನ್‌ಸ್ಪೆಕ್ಟರ್‌ ನೇಮಕ ಮಾಡಬೇಕಿದೆ.

ತಳಹಂತದ ಸಿಬಂದಿ ಕೊರತೆ
ಅಪರಾಧ ಪ್ರಕರಣ ನಡೆದ ಕೂಡಲೇ ಸ್ಥಳಕ್ಕೆ ತೆರಳಿ ಪ್ರಕರಣದ ಸಂಪೂರ್ಣ ಮಾಹಿತಿ ಕಲೆ ಹಾಕುವುದು, ತನಿಖೆ ವೇಳೆ ಸಾಕ್ಷ್ಯ ಕಲೆ ಹಾಕು ವುದು, ಆರೋಪಿಗಳನ್ನು ಬಂಧಿಸುವುದು ಮತ್ತಿತರ ಮಹತ್ತರ ವಾದ ಜವಾಬ್ದಾರಿಗಳು ಕಾನ್‌ಸ್ಟೆಬಲ್‌ ಹಾಗೂ ಹೆಡ್‌ ಕಾನ್‌ಸ್ಟೆಬಲ್‌ಗ‌ಳ ಮೇಲಿರುತ್ತದೆ. ಇವರು ಕಲೆಹಾಕುವ ಮಾಹಿತಿ ಆಧರಿಸಿ ಸಬ್‌ಇನ್‌ಸ್ಪೆಕ್ಟರ್‌ ಗಳು ಸಂಪೂರ್ಣ ತನಿಖೆ ನಡೆಸಿ ಇನ್‌ಸ್ಪೆಕ್ಟರ್‌ ಅಥವಾ ಅದಕ್ಕಿಂತ ಮೇಲಿನ ಅಧಿಕಾರಿಗಳಿಗೆ ಪ್ರಕರಣದ ವರದಿ ಸಲ್ಲಿಸುತ್ತಾರೆ. ಕೆಳಹಂತದ ಸಿಬಂದಿ ಕೊರತೆಯಿಂದಾಗಿ ರಾಜ್ಯದಲ್ಲಿ ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕಲು ಸಾಧ್ಯವಾಗುತ್ತಿಲ್ಲ.

ಪೊಲೀಸ್‌ ಸಿಬಂದಿ ಕೊರತೆ ಹೋಗಲಾಡಿಸುವ ನಿಟ್ಟಿನಲ್ಲಿ ಖಾಲಿ ಇರುವ 3.5 ಸಾವಿರ ಎಪಿಸಿ ಹಾಗೂ 1,500 ಸಿಪಿಸಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಆದಷ್ಟು ಬೇಗ ಬಾಕಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು.
– ಡಾ| ಎಂ.ಎ. ಸಲೀಂ, ಎಡಿಜಿಪಿ (ಆಡಳಿತ)

-ಅವಿನಾಶ್‌ ಮೂಡಂಬಿಕಾನ

ಟಾಪ್ ನ್ಯೂಸ್

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.