20 ನೂತನ ಸ್ಟಾರ್ಟಪ್ ಉತ್ಪನ್ನಗಳ ಬಿಡುಗಡೆ
Team Udayavani, Nov 17, 2022, 10:04 PM IST
ಬೆಂಗಳೂರು: ಬಿಟಿಎಸ್ ಸಮಾವೇಶದ ಎರಡನೆಯ ದಿನವಾದ ಗುರುವಾರ ಐಟಿ ಮತ್ತು ಬಿಟಿ ಸಚಿವ ಡಾ| ಸಿ.ಎನ್.ಅಶ್ವತ್ಥನಾರಾಯಣ ಅವರು ಅಗ್ರಿಟೆಕ್, ಮೆಡ್ಟೆಕ್, ಎಡುಟೆಕ್ ಮುಂತಾದ ಕ್ಷೇತ್ರಗಳಿಗೆ ಸಂಬಂಧಿಸಿ ವಿವಿಧ ಸ್ಟಾರ್ಟಪ್ಗ್ಳು ಅಭಿವೃದ್ಧಿಪಡಿಸಿರುವ 20 ನೂತನ ಉತ್ಪನ್ನಗಳನ್ನು ಬಿಡುಗಡೆ ಮಾಡಿದರು.
ಈ ಸಂದರ್ಭ ಮಾತನಾಡಿದ ಅವರು, 2025ರ ಒಳಗೆ ಬೆಂಗಳೂರಿನಲ್ಲಿ 20 ಸಾವಿರ ನವೋದ್ಯಮಗಳನ್ನು ಹೊಂದುವ ಗುರಿ ಇಟ್ಟುಕೊಳ್ಳಲಾಗಿತ್ತು. ಆದರೆ ಈಗಾಗಲೇ ನಮ್ಮಲ್ಲಿ 22 ಸಾವಿರಕ್ಕೂ ಹೆಚ್ಚು ಸ್ಟಾರ್ಟಪ್ಗ್ಳಿವೆ. ಬೆಂಗಳೂರಿನಲ್ಲಿರುವ ವಿಜ್ಞಾನ ಮತ್ತು ತಂತ್ರಜ್ಞಾನ ಕಾರ್ಯ ಪರಿಸರವೇ ಇದಕ್ಕೆ ಕಾರಣವಾಗಿದೆ. ವೆಂಚರ್ ಕ್ಯಾಪಿಟಲ್ ಕ್ಷೇತ್ರದಲ್ಲಿ ನಮ್ಮ ನಗರವು ಇಡೀ ಜಗತ್ತಿನಲ್ಲೇ 5ನೇ ಸ್ಥಾನದಲ್ಲಿದೆ ಎಂದು ಹೇಳಿದರು.
ನೂತನ ಉತ್ಪನ್ನಗಳನ್ನು ಅಭಿವೃದ್ಧಿಪಡಿಸಿರುವ ಸ್ಟಾರ್ಟಪ್ಗ್ಳಲ್ಲಿ ಹೆಚ್ಚಿನವು ಸರಕಾರದ ನಾನಾ ಇನ್ಕುÂಬೇಷನ್ ಕೇಂದ್ರಗಳ ಮಾರ್ಗದರ್ಶನ ಮತ್ತು ನೆರವು ಪಡೆದುಕೊಂಡಿದ್ದವು. ಈ ನಿಟ್ಟಿನಲ್ಲಿ ನಮ್ಮ ಕೆ-ಟೆಕ್ ನಾವೀನ್ಯ ಹಬ್ಗಳು, ಉತ್ಕೃಷ್ಟತಾ ಕೇಂದ್ರಗಳು, ಟೆಕ್ನಾಲಜಿ ಬಿಜಿನೆಸ್ ಪರಿಪೋಷಣ ಕೇಂದ್ರಗಳು, ಸಿ-ಕ್ಯಾಂಪ್, ಭಾರತೀಯ ವಿಜ್ಞಾನ ಸಂಸ್ಥೆ, ನಾಸ್ಕಾಂ ಮತ್ತು ಐಎಎಂಎಐ ತರಹದ ಸಂಸ್ಥೆಗಳು ಮಹತ್ವದ ಪಾತ್ರ ವಹಿಸಿರುವುದು ಶ್ಲಾಘನೀಯ ಎಂದು ತಿಳಿಸಿದರು.
ಇಂದು ನೂತನ ಉತ್ಪನ್ನಗಳನ್ನು ಸಿದ್ಧಪಡಿಸಿರುವ 20 ನವೋದ್ಯಮಗಳ ಪೈಕಿ ಮೂರು ಕಂಪೆನಿಗಳನ್ನು ಮಹಿಳೆಯರೇ ಮುನ್ನಡೆಸುತ್ತಿರುವುದು ಶ್ಲಾಘನೀಯ ಸಂಗತಿ. ಬಿಡುಗಡೆಯಾಗಿರುವ ಉತ್ಪನ್ನಗಳಲ್ಲಿ ಕ್ಲೀನ್ಟೆಕ್, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್, ಐಓಟಿ, ಬ್ಲಾಕ್ಚೈನ್, ಸೈಬರ್ ಸೆಕ್ಯುರಿಟಿ, ವಿದ್ಯುತ್ ಚಾಲಿತ ವಾಹನ ಮತ್ತು ಇಎಸ್ಡಿಎಂ ವಲಯಗಳಿಗೆ ಸೇರಿದ ಉತ್ಪನ್ನಗಳಿವೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ
Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್
Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ
Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…
Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…
MUST WATCH
ಹೊಸ ಸೇರ್ಪಡೆ
Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು
Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ
Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್
Chikkodi:ಅಮಿತ್ ಶಾ ಸಮ್ಮುಖದಲ್ಲಿ ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆ
Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’